ಗೇರಿಗೆ ಬೆಂಬಲ ಬೆಲೆ ಘೋಷಿಸಬೇಕು


Team Udayavani, Mar 13, 2023, 6:35 AM IST

ಗೇರಿಗೆ ಬೆಂಬಲ ಬೆಲೆ ಘೋಷಿಸಬೇಕು

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಗೇರು ಕೃಷಿಯು ಒಂದು. ಹವಾಮಾನ ಬದ­ಲಾವಣೆ, ಕಳ್ಳಸಂತೆಯಲ್ಲಿ ವಿದೇಶಿ ಗೇರು ಬೀಜ ಆಮದು, ಕಾಡು ಪ್ರಾಣಿಗಳ ಹಾವಳಿ, ರೋಗ­ಬಾಧೆ­ಗ­ಳಿಂದಾಗಿ ಇತ್ತೀಚೆಗಿನ ದಿನಗಳಲ್ಲಿ ಗೇರು ಬೆಳೆ ಸೊರಗು­ತ್ತಿದೆ. ವರ್ಷದಿಂದ ವರ್ಷಕ್ಕೆ ಇಳುವರಿಯು ಕುಸಿಯುತ್ತಿದೆ. ಗೇರು ಬೆಲೆಯೂ ಕಳೆದ ಬಾರಿ­ಗಿಂತ ಈ ಬಾರಿ ಕಡಿಮೆಯಿದೆ. ಈ ಸಮಯದಲ್ಲಿ ಸರಕಾರವೇ ಗೇರು ಬೆಳೆ­ಗಾರರ ಹಿತ ಕಾಯುವ ಕೆಲಸವನ್ನು ಮಾಡಬೇಕಾ­ಗಿದೆ.

ದೇಶದಲ್ಲಿರುವ ಗೇರು ಸಂಸ್ಕರಣಾ ಘಟಕಗಳಿಗೆ ವಾರ್ಷಿಕವಾಗಿ 16-17 ಲಕ್ಷ ಟನ್‌ ಕಚ್ಚಾ ಗೇರು ಬೀಜದ ಅಗತ್ಯವಿದೆ. ಆದರೆ ಸ್ಥಳೀಯವಾಗಿ 5-6 ಲಕ್ಷ ಟನ್‌ಗಿಂತಲೂ ಕಡಿಮೆ ಗೇರು ಬೀಜ ಸಿಗುತ್ತಿದೆ. ಅಂದರೆ 2-3 ತಿಂಗಳಿಗಾಗುವಷ್ಟು ಮಾತ್ರ ಸಿಗು­ತ್ತಿದೆ. ಸುಮಾರು 10 ಲಕ್ಷ ಟನ್‌ ಕೊರತೆಯಾಗುತ್ತಿದ್ದು, ಅದಕ್ಕಾಗಿ ಆಫ್ರಿಕಾ, ವಿಯೆಟ್ನಾಂ, ಬ್ರೆಜಿಲ್‌ನಂತಹ ದೇಶಗ­ಳಿಂದ ಕಚ್ಚಾ ಬೀಜ ಆಮದು ಅನಿವಾರ್ಯ­ವಾಗಿದೆ. ಅದಕ್ಕಾಗಿ ಮುಖ್ಯವಾಗಿ ಸರಕಾರವು ಗೇರು ಅಭಿವೃದ್ಧಿ ನಿಗಮದ ಮೂಲಕ ಗೇರು ಬೆಳೆ ಪ್ರದೇಶಗಳನ್ನು ಹೆಚ್ಚಿಸಲು ಯೋಜನೆ ಹಾಕಿಕೊಳ್ಳ­ಬೇಕು. ಆಗ ಮಾತ್ರ ಸ್ಥಳೀಯ ಗೇರು ಬೀಜ ಪ್ರಮಾಣ ಹೆಚ್ಚಾಗಬಹುದು.

ಗೇರು ಸಂಸ್ಕರಣಾ ಘಟಕಗಳಂತೆಯೇ ಗೇರು ಬೆಳೆಯುವ ಬೆಳೆಗಾರರನ್ನು ಉತ್ತೇಜಿ­ಸುವ ಕಾರ್ಯವನ್ನು ಸರಕಾರ ಮಾಡಬೇಕಿದೆ. ಉಳಿದ ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹಿ­ಸಿದಂತೆ ಗೇರು ಬೆಳೆಗೂ ಪ್ರೋತ್ಸಾಹ ಅಗತ್ಯವಿದೆ.

ಗೇರು ಬೆಳೆಗಾರರ ಹಕ್ಕೊತ್ತಾಯಗಳು ಹೀಗಿವೆ:
ವರ್ಷದಿಂದ ವರ್ಷಕ್ಕೆ ಗೇರು ಬೀಜಕ್ಕೆ ಬೆಲೆ ಕುಸಿಯುತ್ತಿರುವುದರಿಂದ ಸರಕಾರವು ಅಡಿಕೆ ಮಾದರಿಯಲ್ಲಿ ಕ್ಯಾಂಪ್ಕೋ ರೀತಿಯಲ್ಲಿ ಕನಿಷ್ಠ 1 ಕೆಜಿಗೆ 150 ರೂ. ಬೆಂಬಲ ಬೆಲೆಯಲ್ಲಿ ಖರೀದಿ ವ್ಯವಸ್ಥೆಯನ್ನು ಆರಂಭಿಸಬೇಕು.

ದೇಶಕ್ಕೆ ಭಾರೀ ಪ್ರಮಾಣದಲ್ಲಿ ವಿದೇಶದಿಂದ ಗೇರು ಬೀಜವನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ಅದಕ್ಕೆ ಅಡಿಕೆ ಮಾದರಿಯಲ್ಲಿ ವಿದೇಶಿ ಕಚ್ಚಾ ಗೇರು ಬೀಜಕ್ಕೆ ಆಮದು ಸುಂಕವನ್ನು ಹೆಚ್ಚಿಸಬೇಕು, ವಿದೇಶಿ ಕಳಪೆ ಗುಣಮಟ್ಟದ ಗೇರು ಬೀಜ ಆಮದನ್ನು ಸಹ ತಡೆಯಬೇಕು.

ಎಲ್ಲ ಕೃಷಿ, ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆಯಿದ್ದರೂ, ಗೇರು ಬೆಳೆಗೆ ಮಾತ್ರ ಬೆಳೆ ವಿಮೆಯಿಲ್ಲ. ದೇಶದ 13 ರಾಜ್ಯಗಳ ಪೈಕಿ ಕರ್ನಾಟಕ, ಗೋವಾ ಹೊರತುಪಡಿಸಿ ಬೇರೆಲ್ಲ ರಾಜ್ಯಗಳಲ್ಲಿ ಗೇರು ಬೆಳೆ ವಿಮೆ ವ್ಯಾಪ್ತಿಗೆ ಸೇರಿದೆ. ಗೇರು ಕೃಷಿಯೂ ರೋಗಬಾಧೆ, ಪ್ರತಿಕೂಲ ಹವಾಮಾನ, ಮುಳ್ಳುಹಂದಿ, ಸಿಂಗಲಿಕದಂತಹ ಕಾಡು ಪ್ರಾಣಿಗಳ ಹಾವಳಿಗೆ ತುತ್ತಾಗುತ್ತಿರುವುದರಿಂದ ಬೆಳೆ ವಿಮೆ ವ್ಯಾಪ್ತಿಗೆ ತರಬೇಕು.

ರಾಜ್ಯದ ಅಬಕಾರಿ ನೀತಿಯನ್ನು ರೈತ ಸ್ನೇಹಿಯಾಗಿಸಿ, ಗೇರು ಹಣ್ಣು, ಅನಾನಸು ಸೇರಿದಂತೆ ವಿವಿಧ ಸೀಸನಲ್‌ ಹಣ್ಣುಗಳನ್ನು ವೈನ್‌ ಆಗಿಸಲು ಅನುಮತಿ ನೀಡಿದರೆ, ಗೋವಾದಂತೆ ಗೇರು ಕೃಷಿಯ ಮೌಲ್ಯವರ್ಧನೆ­ಯಾಗ­ಲಿದೆ. ಈಗಾಗಲೇ ಗೇರು ಹಣ್ಣು ಆರೋಗ್ಯವರ್ಧಕವೂ ಆಗಿದೆ ಎನ್ನುವುದು ಸಂಶೋಧನೆ­ಯಲ್ಲೂ ಸಾಬೀತಾಗಿದೆ. ಆಗ ಗೇರು ಬೀಜ ಮಾತ್ರವಲ್ಲದೆ, ಹಣ್ಣಿಗೆ ಬೇಡಿಕೆ ಸೃಷ್ಟಿಯಾಗಲಿದೆ.

– ಚಂದ್ರಶೇಖರ ಉಡುಪ ಕೆಂಚನೂರು, ನಿರ್ದೇಶಕರು, ಅಖೀಲ ಭಾರತ ಗೇರು ಬೆಳೆಗಾರರ ಸಂಘ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.