ಸಿಸೇರಿಯನ್ ಪ್ರಕರಣ ಶೇ.300 ರಷ್ಟು ಹೆಚ್ಚಳ
Team Udayavani, Jan 2, 2020, 6:00 AM IST
ನೈಸರ್ಗಿಕ ಹೆರಿಗೆಗಿಂತ ಶಸ್ತ್ರಚಿಕಿತ್ಸೆ (ಸಿಸೇರಿಯನ್) ಮೂಲಕ ಮಾಡುವ ಹೆರಿಗೆ ಪ್ರಮಾಣ ದೇಶದಲ್ಲಿ ಹೆಚ್ಚಾಗುತ್ತಿದ್ದು, ಕಳೆದೊಂದು ದಶಕದಲ್ಲಿ ತೀವ್ರ ಏರಿಕೆ ಕಂಡಿದೆ. ಈ ಕುರಿತ ವಿಶ್ವ ಆರೋಗ್ಯ ಸಂಸ್ಥೆ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಇದಕ್ಕೆ ಕಾರಣವೇನು? ಯಾಕೆ ಹೀಗೆ? ಮೊದಲಾದಗಳ ಕುರಿತ ವಿವರ ಇಲ್ಲಿದೆ.
ಶೇ.300ರಷ್ಟು ಹೆಚ್ಚಳ
ಕಳೆದ ದಶಕದಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ನಡೆಯುವ ಸಿಸೇರಿಯನ್ ಹೆರಿಗೆ ಪ್ರಮಾಣ ದಲ್ಲಿ ಶೇ.300ರಷ್ಟು ಏರಿಕೆಯಾಗಿದೆ.
ಶೇ.400ರಷ್ಟು ಹೆಚ್ಚಳ
ದೇಶದ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುವ ಸಿಸೇರಿಯನ್ ಹೆರಿಗೆಗಳ ಪ್ರಮಾಣದಲ್ಲಿ ಶೇ.400ರಷ್ಟು ಏರಿಕೆಯಾಗಿದೆ.
ಶೇ.14ರಷ್ಟು
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿಯ ಪ್ರಕಾರ, 2018-19ರಲ್ಲಿ ಸರಕಾರಿ ಆಸ್ಪತ್ರೆ ಗಳಲ್ಲಿ ಶೇ.14ಕ್ಕಿಂತಲೂ ಹೆಚ್ಚು ಹೆರಿಗೆ ಗಳು ಸಿಸೇರಿಯನ್ ಮೂಲಕ ನಡೆದಿದ್ದು, 1.3ಕೋಟಿ ಹೆರಿಗೆಗಳ ಪೈಕಿ 19 ಲಕ್ಷ ಹೆರಿಗೆಗಳು ಸಿಸೇರಿಯನ್ ಮೂಲಕ ನಡೆದಿವೆ.
ಶೇ.33 ರಷ್ಟು
ಖಾಸಗಿ ಆಸ್ಪತ್ರೆಗಳಲ್ಲಿ ಶೇ.33.80 ಕ್ಕಿಂತಲೂ ಹೆಚ್ಚು ಹೆರಿಗೆಗಳು ಸಿಸೇರಿಯನ್ ಮೂಲಕ ನಡೆದಿದ್ದು, 20.5 ಲಕ್ಷ ಹೆರಿಗೆಗಳಾಗಿವೆ.
ರಾಜ್ಯಕ್ಕೆ 3ನೇ ಸ್ಥಾನ
2017-18ನೇ ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 1,42,641 ಹೆರಿಗೆಗಳು ಸಿಸೇರಿಯನ್ ಮೂಲಕ ಆಗಿದೆ. 2008-09 ರಲ್ಲಿ 20,762 ಹೆರಿಗೆಗಳಾಗಿತ್ತು.
2018-19ರಲ್ಲಿ 1.37 ಲಕ್ಷ
2018-19ರಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ 1.37 ಲಕ್ಷ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1.4 ಲಕ್ಷ ಸಿಸೇರಿಯನ್ ಆಗಿದೆ.
12,960 ಸಿಸೇರಿಯನ್
ದ.ಕ. ಜಿಲ್ಲೆಯಲ್ಲಿ 2018- 19ನೇ ಸಾಲಿನಲ್ಲಿ ಆದ ಒಟ್ಟು 35,972 ಹೆರಿಗೆಗಳ ಪೈಕಿ 12,960 ಸಿಸೇರಿಯನ್ ಆಗಿದೆ.
ಹೆಚ್ಚಳಕ್ಕೆ ಕಾರಣವೇನು ?
ಬಹುತೇಕ ಮಂದಿ ಸಹಜ ಹೆರಿಗೆಯನ್ನೇ ಇಷ್ಟಪಡುತ್ತಾರೆ. ಆದರೆ ಅಧಿಕ ಅಪಾಯ, ಅಧಿಕ ರಕ್ತದೊತ್ತಡ, ಹೆರಿಗೆ ಸಂದರ್ಭ, ಇತರ ಅನಾರೋಗ್ಯದ ಕಾರಣಗಳಿಂದಾಗಿ ತಾಯಿ, ಮಗುವಿನ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಶಸ್ತ್ರ ಚಿಕಿತ್ಸೆ ಮಾಡಬೇಕಾಗುತ್ತದೆ.
ದಾಟಿದ ಮಿತಿ
ದೇಶದಲ್ಲಿ ಸಿಸೇರಿಯನ್ ಮೂಲಕ ಆಗುವ ಹೆರಿಗೆ ಪ್ರಮಾಣಗಳು ಹೆಚ್ಚುತ್ತಿದ್ದು, ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಯ ಮಿತಿಯನ್ನು ಶೇ.15 ದಾಟಿದೆ ಎಂದು ಅಧ್ಯಯನವು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ
ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…
Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು