ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ಉದ್ಯಮಿಗಳು ತಿಂಗಳಿಗೊಮ್ಮೆ ಏಕಕಾಲಕ್ಕೆ ದೊಡ್ಡ ಮೊತ್ತದ ಹಣವನ್ನು ಪಾವತಿಸಲು ಸಾಧ್ಯವಾಗುತ್ತದೆ.

Team Udayavani, Jul 29, 2021, 10:10 AM IST

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ಬ್ಯಾಂಕ್‌ಗಳು ಕೆಲಸ ಮಾಡುವ ಅವಧಿಯಲ್ಲಿ ಮಾತ್ರ ಕಾರ್ಯ ನಿರ್ವಹಿ ಸುವ ರಾಷ್ಟ್ರೀಯ ಸ್ವಯಂ ಚಾಲಿತ ಕ್ಲಿಯ ರಿಂಗ್‌ ಹೌಸ್‌ (ಎನ್‌ಎಸಿಎಚ್‌) ಸೇವೆಯು ಆಗಸ್ಟ್‌ 1ರಿಂದ ವಾರದ ಎಲ್ಲ ದಿನಗಳಲ್ಲೂ ಗ್ರಾಹಕರಿಗೆ ಲಭಿಸಲಿದೆ.

ಏನು ಬದಲಾವಣೆ:

ಆರ್‌ಬಿಐಯು ಎನ್‌ಎಸಿಎಚ್‌ನ ನಿಯಮಗಳನ್ನು ಬದಲಾಯಿಸಿದ್ದು, ಇದು ಮುಂದಿನ ತಿಂಗಳಿನಿಂದ ಜಾರಿಯಾಗಲಿದೆ. ಇದರಿಂದ ವಾರಾಂತ್ಯ ಮತ್ತು ರಜಾದಿನಗಳಲ್ಲೂ ಸಂಬಳ, ಪಿಂಚಣಿಯ ಪಾವತಿ ಪ್ರಕ್ರಿಯೆಗಳನ್ನು ನಡೆಸಲು ಸಾಧ್ಯವಾಗಲಿದೆ. ತಿಂಗಳ ಆರಂಭಿಕ ದಿನಗಳು ಅಥವಾ ಸಾರ್ವಜನಿಕ ರಜೆಯ ದಿನಗಳು ವಾರಾಂತ್ಯದಲ್ಲಿ ಬಂದಾಗ ವೇತನ, ಪಿಂಚಣಿ, ಇಎಂಐ ಪಾವತಿಗೆ ಸರಕಾರಿ ಇಲಾಖೆಗಳು, ಕಂಪೆನಿಗಳು ಮತ್ತು ಜನರು ಮುಂದಿನ ಕೆಲಸದ ದಿನದವರೆಗೆ ಕಾಯಬೇಕಾಗುತ್ತದೆ. ಆದರೆ ಸರಕಾರದ ಈ ನಿರ್ಧಾರದಿಂದಾಗಿ ಆಗಸ್ಟ್‌ 1ರಿಂದ ವಾರಾಂತ್ಯದಲ್ಲೂ ನಿಮ್ಮ ಖಾತೆಗೆ ಸಂಬಳ ಪಾವತಿಯಾಗಿರುವ ಸಂದೇಶ ನಿಮ್ಮ ಮೊಬೈಲ್‌ಗೆ ಬರಲಿದೆ.

ಜೂನ್‌ ತಿಂಗಳಲ್ಲಿ ನಡೆದ ಆರ್‌ಬಿಐನ ಕ್ರೆಡಿಟ್‌ ನೀತಿ ಪರಿಶೀಲನೆಯ ಸಂದರ್ಭದಲ್ಲಿ ಸೋಮವಾರದಿಂದ ಶುಕ್ರವಾರದ ವರೆಗೆ ಬ್ಯಾಂಕ್‌ಗಳು ತೆರೆದಿರುವಾಗ ಮಾತ್ರ ಲಭ್ಯವಿರುವ ಎನ್‌ಸಿಎಚ್‌ ಸೇವೆಯನ್ನು ಗ್ರಾಹಕರ ಅನುಕೂಲಕ್ಕಾಗಿ ವಾರದ ಎಲ್ಲ ದಿನಗಳಿಗೂ ವಿಸ್ತರಿಸುವುದಾಗಿ ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಘೋಷಿಸಿದ್ದರು.

ಎನ್‌ಎಸಿಎಚ್‌ ಎಂದರೇನು? :

ರಾಷ್ಟ್ರೀಯ ಸ್ವಯಂ ಚಾಲಿತ ಕ್ಲಿಯ ರಿಂಗ್‌ ಹೌಸ್‌ ಬೃಹತ್‌ ಪಾವತಿ ವ್ಯವಸ್ಥೆ ಯಾಗಿದ್ದು ಇದನ್ನು ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಶನ್‌ ಆಫ್ ಇಂಡಿಯಾ (ಎನ್‌ಪಿಸಿಐ) ನಿರ್ವಹಿಸು ತ್ತಿದೆ. ಬ್ಯಾಂಕ್‌, ಹಣಕಾಸು, ಕಾರ್ಪೊ ರೇಟ್‌ ಸಂಸ್ಥೆಗಳು ಮತ್ತು ಸರಕಾರದ ಹಣ ಕಾಸು ವ್ಯವಹಾರಕ್ಕೆ ಇದು ಅನುಕೂಲಕರ ವಾಗಿದೆ. ಇದೊಂದು ಕೇಂದ್ರೀಕೃತ ವ್ಯವಸ್ಥೆ ಯಾಗಿದ್ದು, ದೇಶಾದ್ಯಂತ ಇರುವ ಹಣಕಾಸು ಸಂಸ್ಥೆಗಳನ್ನು ಇದು ಒಂದು ಚೌಕಟ್ಟಿನಡಿ ಸೇರಿಸುತ್ತದೆ.

ಪ್ರಾರಂಭವಾಗಿದ್ದು ಯಾವಾಗ?: 

2016 ಮೇ 1ರಂದು ಜಾರಿಯಾದ ಎಲೆಕ್ಟ್ರಾನಿಕ್‌ ಕ್ಲಿಯರಿಂಗ್‌ ಸೇವೆಯೊಂದಿಗೆ ಬ್ಯಾಂಕ್‌ ಖಾತೆಯಿಂದ ಸ್ವಯಂ ಡೆಬಿಟ್‌ ಸೂಚನೆಯನ್ನು ನೀಡಲು ಎನ್‌ಎಸಿಎಚ್‌ ಬಳಸಲಾಯಿತು. ಆಧಾರ್‌ ಐಡಿಗಳನ್ನು ಬಳಸಿಕೊಂಡು ಎನ್‌ಎಸಿಎಚ್‌ ಪಾವತಿ ವ್ಯವಹಾರವನ್ನು ನಡೆಸಲಾಗುತ್ತಿದೆ.

ಯಾರಿಗೆ ಅನುಕೂಲ? :

ಇದು ಲಾಭಾಂಶ, ಬಡ್ಡಿ, ಸಂಬಳ, ಪಿಂಚಣಿ ಪಾವತಿಯಿಂದ ಹಿಡಿದು ಸಾಲ ವರ್ಗಾವಣೆವರೆಗೂ ಅನುಕೂಲಕರ. ಸಬ್ಸಿಡಿ, ಲಾಭಾಂಶ, ಬಡ್ಡಿ, ಸಂಬಳ, ಪಿಂಚಣಿ, ವಿದ್ಯುತ್‌, ಅಡುಗೆ ಅನಿಲ, ದೂರವಾಣಿ, ನೀರು, ಇಎಂಐ, ಮ್ಯೂಚುವಲ್‌ ಫ‌ಂಡ್‌ಗಳಲ್ಲಿನ ಹೂಡಿಕೆ ಮತ್ತು ವಿಮಾ ಕಂತುಗಳ ಸಹಿತ ವಿವಿಧ ಹಣಕಾಸು ವ್ಯವಹಾರಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ಯಾ ನಡೆಸಲು ಸಾಧ್ಯ.

ಎನ್‌ಎಸಿಎಚ್‌ ಸರಕಾರದ ವಿವಿಧ ಯೋಜನೆಗಳ ಲಾನುಭವಿ ಗಳ ಖಾತೆಗೆ ನೇರ ನಗದು ವರ್ಗಾ ವಣೆಗೆ ಜನಪ್ರಿಯ ವಿಧಾನವಾಗಿ ಹೊಹೊ ಮ್ಮಿದೆ. ಇದರಿಂದ ಕೋವಿಡ್‌- 19 ಸಾಂಕ್ರಾಮಿಕ ಸಮಯದಲ್ಲಿ  ಸರಕಾರದ ಸಬ್ಸಿಡಿಗಳನ್ನು ಸಮಯೋಚಿತವಾಗಿ ಮತ್ತು ಪಾರದರ್ಶಕವಾಗಿ ವರ್ಗಾ ಯಿಸಲು ಸಾಧ್ಯವಾಯಿತು ಎಂದು ಆರ್‌ಬಿಐ ತಿಳಿಸಿದೆ.

ಏನು ಲಾಭ?  :

ಎನ್‌ಎಸಿಎಚ್‌ನಿಂದಾಗಿ ಬ್ಯಾಂಕ್‌ಗಳು, ಗ್ರಾಹಕರು, ಉದ್ಯಮಿಗಳು ತಿಂಗಳಿಗೊಮ್ಮೆ ಏಕಕಾಲಕ್ಕೆ ದೊಡ್ಡ ಮೊತ್ತದ ಹಣವನ್ನು ಪಾವತಿಸಲು ಸಾಧ್ಯವಾಗುತ್ತದೆ. ಮಾನವ ಶ್ರಮವಿಲ್ಲದೆ ನಡೆಯುವ ಕಾರ್ಯವಾದ್ದರಿಂದ ವ್ಯವಹಾರ ನಡೆಸುವುದು ಸುಲಭ.

ಡಿಜಿಟಲ್‌ನಲ್ಲಿ ಸಂಪೂರ್ಣ ಮಾಹಿತಿ ಸಿಗುವುದರಿಂದ ಪಾವತಿಗೆ ಸಂಬಂಧಿಸಿ ಯಾವುದೇ ದಾಖಲೆಗಳನ್ನು ಇಟ್ಟುಕೊಳ್ಳಬೇಕಾಗಿಲ್ಲ. ಚೆಕ್‌ ಕ್ಲಿಯರೆನ್ಸ್‌ನ ಆವಶ್ಯಕತೆ ಇರುವುದಿಲ್ಲ.ಪಾವತಿ ಪ್ರಕ್ರಿಯೆಗಳು ಶೀಘ್ರದಲ್ಲಿ ನಡೆಯುವುದರಿಂದ ಸಮಯ ವ್ಯರ್ಥವಾಗುವುದಿಲ್ಲ ಮಾತ್ರವಲ್ಲದೆ ಸಮಯಕ್ಕೆ ಸರಿಯಾಗಿ ಪಾವತಿ ಪ್ರಕ್ರಿಯೆಗಳು ನಡೆಯುತ್ತವೆ.

 

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.