ಡಾ| ಅನಂತಮತಿಯ ಸಚ್ಛತಾ ಜಾಗೃತಿ


Team Udayavani, Mar 8, 2021, 5:03 PM IST

ಡಾ| ಅನಂತಮತಿಯ ಸಚ್ಛತಾ ಜಾಗೃತಿ

ಬನಹಟ್ಟಿ: ರಬಕವಿ ಪಟ್ಟಣದ ಡಾ| ಅನಂತಮತಿ ಎಂಡೊಳ್ಳಿ ವೃತ್ತಿಯಲ್ಲಿ ವೈದ್ಯರಾದರೂ, ಪ್ರವೃತ್ತಿಯಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಗುರುತಿಸಿಕೊಂಡಿದ್ದಾರೆ.

ರಬಕವಿ, ಬನಹಟ್ಟಿ, ರಾಮಪುರ, ಹೊಸೂರ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಸ್ವತ್ಛತೆ ಕೈಗೊಳ್ಳುವುದರ ಜತೆಗೆ ಸಾರ್ವಜನಿಕರಲ್ಲಿ ಸ್ವತ್ಛತೆಯ ಜಾಗೃತಿ ಮೂಡಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಮಹತ್ವಕಾಂಕ್ಷಿ ಯೋಜನೆ ಸ್ವಚ್ಛ ಭಾರತ ಅಭಿಯಾನ ಕೈಗೊಂಡು ಜನರಲ್ಲಿ ಸ್ವಚ್ಛತೆಯ ಅರಿವು, ಜಾಗೃತಿ, ತಿಳಿವಳಿಕೆ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಗಣೇಶವಾಡಿಯವರಾದ ಡಾ|ಅನಂತಮತಿ, ವಿವಾಹ ಬಳಿಕ ರಬಕವಿಗೆ ಬಂದಿದ್ದಾರೆ.ಬಾಲ್ಯದಲ್ಲಿ ಗಾಂಧಿಧೀಜಿಯವರ ಪಾಠಗಳಿಂದ ಪ್ರಭಾವಿತರಾಗಿ ಶಾಲಾ ಕೊಠಡಿ, ಆವರಣ ಮತ್ತು ತಮ್ಮ ಮನೆ ಸುತ್ತಲಿನ ಪರಿಸರ ಸ್ವತ್ಛವಾಗಿಡುತ್ತಿದ್ದರು. ಸದ್ಯ ರಬಕವಿ ಬನಹಟ್ಟಿ ಹಾಗೂ ಸುತ್ತಲಿನ ಪ್ರದೇಶವನ್ನು ತಮ್ಮ ಕಾರ್ಯ ಕ್ಷೇತ್ರವನ್ನಾಗಿಸಿ ಕೊಂಡಿದ್ದಾರೆ. ಶಾಲಾ ಕಾಲೇಜುಗಳ ಆವರಣ, ಬಸ್‌ ನಿಲ್ದಾಣಗಳು, ದೇವಸ್ಥಾನಗಳು, ಹರಿಜನ ಕೇರಿಗಳು, ಗಲ್ಲಿಗಳು, ಪ್ರಮುಖ ರಸ್ತೆ, ಕೃಷ್ಣಾ ನದಿ ತೀರವನ್ನು ಸ್ವಚ್ಛಗೊಳಿಸಿದ್ದಾರೆ.

ಇದುವರೆಗೆ ಅಂದಾಜು 100ಕ್ಕಿಂತ ಹೆಚ್ಚು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಇವರೊಂದಿಗೆ ರಬಕವಿಯ ಪಾರ್ವತಿ ಸಾಬೋಜಿ, ಅನಸೂಯಾ ವಜ್ರಮಟ್ಟಿ, ಸುಮಾ ಸಾಬೋಜಿ, ಭಾರತಿ ಸೋಳಂಕಿ ಮತ್ತು ವಿಜಯಲಕ್ಷ್ಮೀ ಡೊಮನಾಳ ಕೂಡಾ ಸಹಕಾರ ನೀಡುತ್ತಿದ್ದಾರೆ. ಕೆಲ ಸಂದರ್ಭಗಳಲ್ಲಿ ನಗರಸಭೆಪೌರಕಾರ್ಮಿಕರ, ವಿದ್ಯಾರ್ಥಿನಿಯರ ಮತ್ತು ಸ್ಥಳೀಯರ ಸಹಕಾರ ಪಡೆಯುತ್ತಾರೆ. ಸ್ವಚ್ಛತಾ ಅಭಿಯಾನ ಕುರಿತು ಬೀದಿ ನಾಟಕ ಪ್ರದರ್ಶನ ಕೂಡಾ ಮಾಡಿದ್ದಾರೆ.

ಡಾ| ಅನಂತಮತಿ ಅವರ ಕಾರ್ಯ ಗಮನಿಸಿ ರಬಕವಿ-ಬನಹಟ್ಟಿ ತಾಲೂಕು ಆಡಳಿತ ಗಣರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

 

ಯೋಗ-ಪ್ರಾಣಾಯಾಮ ಪಾಠ ಮಾಡುವ ಡಾ| ಭಾರತಿ ಲೋಹಾರ್‌ :

ಲೋಕಾಪುರ: ಪಟ್ಟಣದ ಡಾ| ಭಾರತಿ ಸೋಮಶೇಖರ ಲೋಹಾರ ಒಂದೂವರೆ ದಶಕದಿಂದ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಯೋಗ, ಪ್ರಾಣಾಯಾಮ, ಧ್ಯಾನ ಮತ್ತು ಸುಖ ಜೀವನದ ಕಲೆಗಳು ಹೀಗೆ ಹಲವಾರು ತರಬೇತಿ ನೀಡುತ್ತಾ ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ.

ಹೈದ್ರಾಬಾದ್‌, ಗದಗ, ಧಾರವಾಡ, ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ವಿವಿಧ ತರಬೇತಿ ನೀಡುತ್ತಿದ್ದಾರೆ. ಯೋಗ ಶಿಕ್ಷಣದ ಮೂಲಕ ಭಾರತೀಯ ಸಂಸ್ಕೃತಿಯನ್ನು ಉಳಿಸುವ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡುವ ಗುರುಕುಲ ನಿರ್ಮಾಣ ಮಾಡಿದ್ದಾರೆ. ಯೋಗ ತರಬೇತಿ ಪಡೆದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಡಾ| ಭಾರತಿ ಪಟ್ಟಣದ ಬಾಲಾಜಿ ಶಿಕ್ಷಣ ಸಂಸ್ಥೆ ರಾಯಲ್‌ ಪ್ಯಾಲೆಸ್‌ ಇಂಟರ್‌ನ್ಯಾಷನಲ್‌ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಯಲ್ಲಿ ಮುಖ್ಯ ಗುರುಮಾತೆಯಾಗಿ ಸೇವೆ ಸಲ್ಲಿಸುತ್ತಿದ್ದು, ಯೋಗಬ್ರಹ್ಮ ಋಷಿ ಪ್ರಭಾಕರ ಗುರೂಜಿ ಶಿಷ್ಯರಲ್ಲಿ ಒಬ್ಬರು.

ಶಿಕ್ಷಣ ಸೇವಾ ರತ್ನ ಹಾಗೂ ರಾಷ್ಟ್ರ ಮಟ್ಟದ ಶ್ರೇಷ್ಠ ಶಿಕ್ಷಣ ತಜ್ಞೆ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.