ಬನ್ನಿ ಕೈ ತೊಳೆದುಕೊಳ್ಳೋಣ…


Team Udayavani, Mar 29, 2020, 5:30 AM IST

ಬನ್ನಿ ಕೈ ತೊಳೆದುಕೊಳ್ಳೋಣ…

ಕೋವಿಡ್ 19 ವೈರಸ್‌ನಿಂದ ದುರಂತದ ಸರಮಾಲೆಯೇ ಘಟಿಸುತ್ತಿರುವುದನ್ನು ನೋಡುತ್ತಿದ್ದೇವೆ. ಈ ಬಗ್ಗೆ ಸರಕಾರ ಹಾಗೂ ವೈದ್ಯರು ಸಮರೋಪಾದಿಯಲ್ಲಿ ಕಾರ್ಯ ಮಾಡುತ್ತಿದ್ದಾರೆ. ವೈರಸ್‌ ತಡೆಗೆ ಕೈ ಶುಚಿತ್ವವೂ ಕೂಡ ಬಹುಮುಖ್ಯ.

ಕೈ ಸುರಕ್ಷತೆ ಹಾಗೂ ಕೈ ತೊಳೆಯುವುದರಿಂದ ಆಗುವ ವೈದ್ಯಕೀಯ ಅನುಕೂಲಗಳನ್ನು ಮೊದಲು ಜಗತ್ತಿಗೆ ತಿಳಿಸಿದವರು 1847ರ ಹೊತ್ತಿಗೆ ಹಂಗೇರಿಯ ವೈದ್ಯರಾಗಿದ್ದ ಇಗ್ನಾಝ್ ಸೆಮ್ಮೆಲ…. ಇವರು ವಿಯೆನ್ನಾದ ಜನರಲ್‌ ಆಸ್ವತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡಿದವರು. ಆ ಕಾಲದಲ್ಲಿಯೇ ಅವರು ವೈಜ್ಞಾನಿಕವಾಗಿ ಕೈ ತೊಳೆದುಕೊಳ್ಳುವ ಬಗ್ಗೆ ಜನರಿಗೆ ಮನವರಿಕೆ ಮಾಡಿ ಜಾಗೃತಿ ಉಂಟುಮಾಡಿ¨ªಾರೆ.

ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಕೈ ಕಾಲು ತೊಳೆಯುವ ಪರಿಪಾಠ ಸಾಮಾನ್ಯವಾಗಿತ್ತು. ಶುಚಿತ್ವದ ಕಲ್ಪನೆ ಬಹಳ ಕಾಲದಿಂದಲೂ ನಮ್ಮಲ್ಲಿ ರೂಢಿಯಲ್ಲಿತ್ತು. ಮನೆಗಳನ್ನು ಪ್ರವೇಶಿಸುವಾಗ ಸಾಮಾನ್ಯವಾಗಿ ಕೈ ಕಾಲು ತೊಳೆದುಕೊಂಡು ಹೋಗುವುದು ನಮ್ಮಲ್ಲಿ ಸಾಮಾನ್ಯ ವಿಚಾರ. ಮಕ್ಕಳು ಮನೆಯಲ್ಲಿ ಆಹಾರ ಸ್ವೀಕರಿಸಲು ತೊಡಗಿದರೆ ಕೈ ತೊಳೆದು ತಿನ್ನಿ ಅನ್ನುವುದು ಮಾಮೂಲು. ಅತಿಥಿಗಳು ಬಂದಾಗ ಕೈ ಕಾಲು ತೊಳೆಯಲು ನೀರು ಕೊಡುವುದು ಈಗಲೂ ನಡೆಯುತ್ತಿರುವ ಪದ್ಧತಿ. ಇನ್ನು ಧಾರ್ಮಿಕ ಕಾರ್ಯಗಳಲ್ಲಿ ಸ್ನಾನ ಮಾಡಿ ಶುಚಿಯಾಗಿ ಇರುವುದು ನಮ್ಮ ಪರಂಪರೆಯೇ ಆಗಿದೆ. ಇದು ಶುಚಿತ್ವದ ಮೊದಲ ಪಾಠವೆಂದು ಹೇಳ ಬಹುದು. ಇದು ಭಾರತೀಯ ಸಂಸ್ಕೃತಿಯಲ್ಲಿ ಸಹಸ್ರಾರು ವರ್ಷಗಳಿಂದ ಬಂದ ಪದ್ಧತಿಯೇ ಆಗಿದೆ. ಇನ್ನು ಮಡಿ, ಮುಸುರೆ ಎಂಬ ಹೆಸರಿನಲ್ಲಿ ನಮ್ಮ ಕೈ ಶುಚಿತ್ವವನ್ನು ಯಾವಾಗಲೂ ಕಾಪಾಡಿಕೊಂಡು ಬಂದಿರುವುದು ಭಾರತದ ಭವ್ಯ ಸಂಸ್ಕೃತಿಯನ್ನು ಎತ್ತಿಹಿಡಿಯುತ್ತದೆ.

ಕೈ ತೊಳೆಯದೆ ಆಹಾರ ಸ್ವೀಕರಿಸುವುದರಿಂದ ಅನೇಕ ವೈರಸ್‌ ಹಾಗೂ ಬ್ಯಾಕ್ಟೀರಿಯಾಗಳು ನಮಗೆ ಗೊತ್ತಿಲ್ಲದಂತೆ ಬಾಯಿಯ ಮೂಲಕ ಹೊಟ್ಟೆಗೆ ಸೇರುವ ಪ್ರಕ್ರಿಯೆ ನಡೆಯುತ್ತಿರುತ್ತದೆ. ಇತ್ತೀಚೆಗಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿವರ್ಷ ಸುಮಾರು 3.5 ಮಿಲಿಯನ್‌ ಮಕ್ಕಳು ಸಾಯುತ್ತಿ¨ªಾರೆ. ಡಯೇರಿಯ ಹಾಗೂ ನ್ಯೂಮೇನಿಯದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸ್ವೀಕಾರ ಮಾಡುವುದರಿಂದ ಬರುತ್ತದೆ. ಈಗ ಕೋವಿಡ್ 19 ವೈರಸ್‌ ಕೂಡ ಹೊಸದಾಗಿ ಸೇರ್ಪಡೆಯಾಗಿದೆ. ಸಾವಿರಾರು ಜನರನ್ನು ಇದೀಗ ಬಲಿ ಪಡೆಯುತ್ತಿದೆ.
ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವಸಂಸ್ಥೆ 2008ರ ಅಕ್ಟೋಬರ್‌ 15ರಂದು ಸಭೆ ಸೇರಿ ಮಹತ್ವದ ನಿರ್ಧಾರಕ್ಕೆ ಬಂದಿತು. ಅಕ್ಟೋಬರ್‌ 15ನ್ನು ಅಧಿಕೃತವಾಗಿ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಲಾಯಿತು. ಆಗ ಸುಮಾರು 70 ದೇಶಗಳು ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ಆ ವರ್ಷದಿಂದಲೇ ಕೈ ಶುಚಿತ್ವದ ಬಗ್ಗೆ ಕಾರ್ಯಕ್ರಮ ಹಾಗೂ ಮಾಹಿತಿ ನೀಡಲು ಆರಂಭಿಸಿದವು. ಈಗ ಬಹುತೇಕ ರಾಷ್ಟ್ರಗಳಲ್ಲಿ ಪ್ರತಿ ವರ್ಷ ಅಕ್ಟೋಬರ್‌ 15ರಂದು ವಿಶ್ವ ಕೈ ತೊಳೆಯುವ ದಿನಾಚರಣೆ ಮಾಡಲಾಗುತ್ತಿದೆ. ಭಾರತದ ಅನೇಕ ಶಾಲೆಗಳಲ್ಲಿ , ಆಸ್ಪತ್ರೆಗಳಲ್ಲಿ ಅನೇಕ ಕಾರ್ಯಕ್ರಗಳನ್ನು ಮಾಡಲಾಗುತ್ತಿದೆ.

ಅಡುಗೆ ಮಾಡುವ ಮೊದಲು ಹಾಗೂ ಅನಂತರ, ಆಹಾರ ಸ್ವೀಕರಿಸುವ ಮೊದಲು ಹಾಗೂ ಅನಂತರ, ಪ್ರಾಣಿಗಳನ್ನು ಮುಟ್ಟಿದ ಆನಂತರ, ಕಸಗಳನ್ನು ಮುಟ್ಟಿದಾಗ, ಕಾರ್ಖಾನೆ ಇತ್ಯಾದಿಗಳಲ್ಲಿ ಕೆಲಸ ಮಾಡಿದ ಆನಂತರ ಇದಕ್ಕಿಂತಲೂ ಹೆಚ್ಚಾಗಿ ಶೌಚ ಹಾಗೂ ಮೂತ್ರ ವಿಸರ್ಜನೆ ಮಾಡುವ ಮೊದಲು ಹಾಗೂ ಅನಂತರ ಕಡ್ಡಾಯವಾಗಿ ಸೋಪು ಬಳಸಿ ಕೈ ತೊಳೆದುಕೊಳ್ಳಬೇಕು. ವರದಿಯೊಂದರ ಪ್ರಕಾರ ಶೇ. 15 ಪುರುಷರು, ಶೇ. 7 ಮಹಿಳೆಯರು ಶೌಚಾಲಯ ಬಳಸಿದ ಅನಂತರ ಸೋಪ್‌ ಬಳಸಿ ಕೈ ತೊಳೆದುಕೊಳ್ಳುವುದಿಲ್ಲ ಎಂದು ಹೇಳಿದೆ. ಎಲ್ಲರೂ ಕಡ್ಡಾಯವಾಗಿ ಸೋಪ್‌ ಬಳಸಿ ಕೈ ತೊಳೆದು ಆರೋಗ್ಯ ಕಾಪಾಡಿಕೊಳ್ಳಬೇಕು. ವಿಶ್ವ ಆರೋಗ್ಯ ಸಂಸ್ಥೆಯು ವೈಜ್ಞಾನಿಕವಾಗಿ ಕೈ ತೊಳೆದುಕೊಳ್ಳುವ ವಿವಿಧ ಹಂತಗಳನ್ನು ತಿಳಿಸಿದೆ. ವೈದ್ಯ ಲೋಕವು ಇದನ್ನೇ ಒಪ್ಪಿ ನಡೆಯುತ್ತಿದೆ. ಇದರ ಬಗ್ಗೆ ಮಾಹಿತಿ ನೀಡುವ ಕಾರ್ಯ ಆಗುತ್ತಲೇ ಇದೆ.

ಕೈತೊಳೆಯುವ ಸರಿಯಾದ ವಿಧಾನ
-ಮೊದಲ ಹಂತದಲ್ಲಿ ಮೊದಲಿಗೆ ಎರಡೂ ಕೈಗಳನ್ನೂ ಸುಮಾರು ಅರ್ಧ ಮೊಣಕೈ ವರೆಗೂ ನೀರನ್ನು ತೋಯಿಸಿಕೊಂಡು ಸೋಪು ಅಥವಾ ಸೋಪಿನ ದ್ರಾವಣವನ್ನು ಹಾಕಿಕೊಂಡು ಎರಡೂ ಹಸ್ತಗಳಿಂದ ಚೆನ್ನಾಗಿ ಉಜ್ಜಿ ನೊರೆ ಬರುವಂತೆ ಮಾಡಬೇಕು.
-ಎರಡನೆಯ ಹಂತದಲ್ಲಿ ಬಲ ಹಸ್ತದ ಮುಂಭಾಗದಿಂದ ಎಡ ಹಸ್ತದ ಹಿಂಭಾಗಕ್ಕೆ , ಎಡ ಹಸ್ತ ಮುಂಭಾಗದಿಂದ ಬಳ ಹಸ್ತದ ಹಿಂಭಾಗಕ್ಕೆ ನೊರೆ ಹಚ್ಚಬೇಕು. ಹಾಗೆಯೇ ಬೆರಳುಗಳನ್ನು ಕೆಳಗಿನ ಹಸ್ತದ ಬೆರಳುಗಳ ನಡುವೆ ಓಡಾಡಿಸಿ ಸಂದುಗಳಲ್ಲಿಯೂ ನೊರೆ ತುಂಬಿಕೊಳ್ಳುವ ಹಾಗೆ ಮಾಡಬೇಕು.
-ಮೂರನೆಯ ಹಂತದಲ್ಲಿ ಎರಡೂ ಹಸ್ತಗಳನ್ನು ಒಂದಕ್ಕೊಂದು ತಾಗಿಸಿ ಬೆರಳುಗಳನ್ನು ಒಂದರ ಒಳಗೊಂದು ಬರುವಂತೆ ಸ್ವಲ್ಪ ಒತ್ತಡದಿಂದ ಉಜ್ಜಿಕೊಳ್ಳಬೇಕು.
-ನಾಲ್ಕನೆಯ ಹಂತದಲ್ಲಿ ಎರಡೂ ಹಸ್ತದ ಬೆರಳುಗಳನ್ನು ಕೊಕ್ಕೆಯಂತೆ ಅರ್ಧ ಮಡಚಿ ಒಂದಕ್ಕೊಂದು ಸಿಕ್ಕಿಸಿರುವಂತೆ ಎರಡೂ ಹಸ್ತಗಳನ್ನು ಅಡ್ಡಲಾಗಿ ಉಜ್ಜಿಕೊಳ್ಳಬೇಕು.
-ಐದನೆಯ ಹಂತದಲ್ಲಿ ಎಡ ಹೆಬ್ಬರಳುಗಳನ್ನು ಬಲಗೈಯ ಉಳಿದ ನಾಲ್ಕೂ ಬೆರಳುಗಳು ಸುತ್ತುವರಿಯುವಂತೆ ಹಿಡಿದು ಎಡಮುಖ ಹಾಗೂ ಬಲಮುಖವಾಗಿ ತಿರುಗಿಸಬೇಕು.
-ಆರನೆಯ ಹಂತದಲ್ಲಿ ಐದು ಬೆರಳುಗಳ ತುದಿ ಒಂದೆಡೆ ಬರುವಂತೆ ಮುಚ್ಚಿ ಈ ತುದಿಗಳಿಂದ ಎಡ ಹಸ್ತದ ನಡುಭಾಗದಲ್ಲಿ ಸ್ವಲ್ಪವೇ ಒತ್ತಡದಿಂದ ವೃತ್ತಾಕಾರದಲ್ಲಿ ತಿರುಗಿಸಬೇಕು. ಹಾಗೆಯೇ ಬಲ ಹಸ್ತಕ್ಕೆ ಅನ್ವಯಿಸಿ ಕೊಳ್ಳಬೇಕು. ಎರಡೂ ಕೈಗಳ ಮಣಿ ಕಟ್ಟುಗಳನ್ನು ಉಜ್ಜಿಕೊಳ್ಳಬೇಕು.ಕೊನೆಯದಾಗಿ ಎರಡೂ ಕೈಗಳಿಗೆ ನೀರನ್ನು ಹಾಕಿ ತೊಳೆದುಕೊಳ್ಳಬೇಕು.
ಈ ರೀತಿ ಮಾಡುವುದರಿಂದ ಕೈಯಲ್ಲಿನ  ಭಾಗಗಳಿಗೂ ನೀರು ಹಾಗೂ ಸೋಪು ಹೋಗಿ ಕೈ ಶುದ್ಧವಾಗುತ್ತದೆ. ಕೊಳೆ, ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳು ಇಲ್ಲದಾಗುತ್ತವೆ.
ಪ್ರಸ್ತುತ ಕೊರೊನಾ ವೈರಸ್‌ ಕೂಡ ಒಬ್ಬರ ಕೈಯಿಂದ ಮತ್ತೂಬ್ಬರ ಕೈಗೆ ಸರಾಗವಾಗಿ ಹೋಗುತ್ತದೆ. ಆದ್ದರಿಂದ ಇನ್ನೊಬ್ಬರ ಕೈ ಕುಲುಕಲು ಹೋಗಬಾರದು. ಹಾಗೆಯೇ ಕೈ ತೊಳೆಯದೆ ಆಹಾರ ಸ್ವೀಕಾರ ಮಾಡುವುದರಿಂದ ವೈರಸ್‌ ಬರುತ್ತಿದೆ. ಇದಕ್ಕಾಗಿ ಕೈಯನ್ನು ಸೋಪಿನಿಂದ ತೊಳೆಯೋಣ. ಕೊರೊನಾ ವೈರಸ್‌ ಬರದಂತೆ ಜಾಗ್ರತೆ ವಹಿಸಿರಿ. ಬನ್ನಿ ಕೈ ತೊಳೆದುಕೊಳ್ಳೋಣ.

-ಡಾ| ಪ್ರಸನ್ನಕುಮಾರ ಐತಾಳ್‌, ಉಜಿರೆ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.