ಕನ್ನಡ ಕಲಿ 5ನೇ ಹಂತದ ಶಿಬಿರಕ್ಕೆ ಚಾಲನೆ


Team Udayavani, May 18, 2021, 5:04 PM IST

desiswara-article

ಕನ್ನಡಿಗರು ಯುಕೆ ಸಂಸ್ಥೆಯು ಕನ್ನಡ ಕಲಿ ಅಭಿಯಾನದಲ್ಲಿ ನಿರಂತರತೆಯನ್ನು ಕಾಪಾಡಿಕೊಂಡು ಬರುತ್ತಿದೆ. ಈ ನಿರಂತರತೆ ಮುಂದುವರಿಯಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್‌. ನಾಗಾಭರಣ ಹೇಳಿದರು.

ಮೇ 1ರಂದು ನಡೆದ ಕನ್ನಡಿಗರು ಯುಕೆಯ 5ನೇ ಹಂತದ ಕನ್ನಡ ಕಲಿ ಆನ್‌ಲೈನ್‌ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಯಾವಾಗಲೂ ನಿಮ್ಮ ಜತೆ ಇರುತ್ತದೆ. ಸದ್ಯದಲ್ಲೇ ಆನ್‌ಲೈನ್‌ ಜಾಲ ಸಂಪರ್ಕ ಶಿಬಿರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಹಮ್ಮಿಕೊಳ್ಳಲಾಗುತ್ತದೆ ಎಂದು ನುಡಿದರು. ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ| ಗವಿ ಸಿದ್ದಯ್ಯ ಉಪಸ್ಥಿತರಿದ್ದರು.

ಕಳೆದ 12 ವರ್ಷಗಳಿಂದ ನಿರಂತರವಾಗಿ ಕನ್ನಡ ಕಲಿ ಅಭಿಯಾನವನ್ನು ಯುಕೆಯಾದ್ಯಂತ ನಡೆಸಿಕೊಂಡು ಬಂದಿರುವ ಕನ್ನಡಿಗರು ಯುಕೆ ಸಂಸ್ಥೆ, 2020 ಮಾರ್ಚ್‌ ತಿಂಗಳಿಂದ ಹೊಸದಾದ ಆಯಾಮದೊಂದಿಗೆ ಕಾಯಕಲ್ಪವನ್ನು ನೀಡುವ ನಿಟ್ಟಿನಲ್ಲಿ ಕನ್ನಡಿಗರಿಗೆ ಮತ್ತು ಅವರ ಕುಟುಂಬದ ಮಕ್ಕಳಿಗೆ ಕನ್ನಡವನ್ನು ಕಲಿಯಲು ಮತ್ತು ಶಿಕ್ಷಕ ಶಿಕ್ಷಕಿಯರಿಗೆ ಕನ್ನಡವನ್ನು ಕಲಿಸಲು ಇನ್ನಷ್ಟು ಸರಳವಾಗುವಂತೆ ಹಲವಾರು ಬದಲಾವಣೆಗಳೊಂದಿಗೆ ಈವರೆಗೆ ಒಟ್ಟು 4 ಹಂತಗಳ  ಆನ್‌ಲೈನ್‌ ತರಗತಿಗಳನ್ನು ಆರಂಭ ಮಾಡಿತ್ತು.

ಸುಮಾರು 300 ಕ್ಕೂ ಹೆಚ್ಚು ವಿವಿಧ ವಯೋಮಿತಿಯ ಆಸಕ್ತರು ತರಗತಿಗಳಿಗೆ ನೋಂದಾಯಿಸಿಕೊಂಡಿದ್ದು, ಬದಲಾವಣೆ ಮತ್ತು ಹೊಸ ಆಯಾಮದ ಪಠ್ಯಕ್ರಮಗಳೊಂದಿಗೆ  ಕಲಿಕೆ ಭರದಿಂದ ಸಾಗಿರುವಾಗಲೇ ಹಲವಾರು ಕೋರಿಕೆಗಳು ಇನ್ನುಳಿದ ಕಲಿಕಾ ಆಸಕ್ತರ ಕಡೆಯಿಂದ ಬರಲಾರಂಭಿಸಿದ್ದವು. ಈ ಹಿನ್ನೆಲೆಯಲ್ಲಿ ಈಗ ಕನ್ನಡಿಗರು ಯುಕೆ ತನ್ನ 5ನೇ ಹಂತದ ಕನ್ನಡ ಕಲಿ ಆನ್‌ಲೈನ್‌ ಶಿಬಿರಕ್ಕೆ ಚಾಲನೆ ನೀಡಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.