ಕಾನೂನುಗಳಿದ್ದರೂ ಸಫಾಯಿ ಕರ್ಮಚಾರಿ ಪದ್ಧತಿ ಇನ್ನೂ ಜೀವಂತ

ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಭಾರತದ ಸ್ಥಿತಿಗತಿ ಅನಾವರಣ

Team Udayavani, Nov 24, 2019, 4:48 AM IST

mm-24

ಹಲವು ಕ್ಷೇತ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದ್ದರೂ, ಕೈಯಲ್ಲೇ ಶೌಚಗುಂಡಿ ಶುಚಿಗೊಳಿಸುವ ಅನಾಗರಿಕ ಪದ್ಧತಿಗೆ ಇನ್ನೂ ನಿಯಂತ್ರಣ ಹಾಕಲು ಸಾಧ್ಯವಾಗಿಲ್ಲ. ಕಾನೂನುಗಳಿದ್ದರೂ ಅದರ ಪರಿಣಾಮಕಾರಿ ಅನುಷ್ಠಾನವೂ ಆಗಿಲ್ಲ ಎಂಬುದನ್ನು ವಿಶ್ವ ಆರೋಗ್ಯ ಸಂಸ್ಥೆ ವರದಿ ಬೊಟ್ಟು ಮಾಡಿದೆ. ಆರೋಗ್ಯ, ಸುರಕ್ಷತೆ ಮತ್ತು ನೈರ್ಮಲ್ಯ ಕಾರ್ಮಿಕರ ಘನತೆ ಎಂಬ ಸಮೀಕ್ಷೆ ಹಲವು ವಿಚಾರಗಳನ್ನು ತೆರೆದಿಟ್ಟಿದೆ. ಹಾಗಾದರೆ ಅದರಲ್ಲೇನಿದೆ? ಮಾಹಿತಿ ಇಲ್ಲಿದೆ.

ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ, ವಾಟರ್‌ಏಡ್‌, ವಿಶ್ವಬ್ಯಾಂಕ್‌ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಜಂಟಿಯಾಗಿ ರಚಿಸಿರುವ ಈ ವರದಿಯಲ್ಲಿ, ಕಡಿಮೆ ಮತ್ತು ಮಧ್ಯಮ ಆದಾಯ ಹೊಂದಿರುವ ದೇಶಗಳಾದ ಭಾರತ, ಬಾಂಗ್ಲಾದೇಶ, ಬೊಲಿವಿಯಾ, ಬುರ್ಕಿನಾ ಫಾಸೊ, ಹೈಟಿ, ಕೀನ್ಯಾ, ಸೆನೆಗಲ್, ದಕ್ಷಿಣ ಆಫ್ರಿಕಾ ಮತ್ತು ಉಗಾಂಡಾ ದೇಶಗಳಲ್ಲಿ ಅತಿ ಹೆಚ್ಚು ಶೌಚಗುಂಡಿ ಶುಚಿಗೊಳಿಸುವ ಸಫಾಯಿ ಕರ್ಮಚಾರಿಗಳಿದ್ದಾರೆ ಎಂದು ಹೇಳಿದೆ.

ನಿಗದಿತ ವೇತನ ಇಲ್ಲ
ಈ ಕಾರ್ಮಿಕರಿಗೆ ನಿಗದಿತ ವೇತನ ಎಂಬುದು ಇರುವುದಿಲ್ಲ ಮತ್ತು ಹೆಚ್ಚಿನ ಸಂದರ್ಭದಲ್ಲಿ ಇವರು ಸುಲಿಗೆಗೆ ಬಲಿಯಾಗುತ್ತಾರೆ. ಇನ್ನೂ ಶೋಚನೀಯ ಸ್ಥಿತಿ ಎಂದರೆ ಕೆಲವು ಕಾರ್ಮಿಕರು ಆಹಾರ ಪದಾರ್ಥಗಳ ರೂಪದಲ್ಲಿ ಸಂಬಳ ಪಡೆಯುತ್ತಿದ್ದು, ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ವೇತನಗಳಲ್ಲಿ ತಾರತಮ್ಯ ಅನುಭವಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

1500 ಜನರ ಸಾವು
1993 ರಿಂದ ಇಲ್ಲಿಯವರೆಗೆ ದೇಶಾದ್ಯಂತ ಶೌಚಗುಂಡಿಯನ್ನು ಸ್ವತ್ಛಗೊಳಿಸುವ ವೇಳೆ ಸುಮಾರು 1500 ಜನರು ಸಾವನ್ನಪಿದ್ದು, 1993ರಿಂದ ಲೆಕ್ಕಹಾಕಿದರೆ ತಮಿಳುನಾಡಿನಲ್ಲಿ 206 ಕಾರ್ಮಿಕರು ಶೌಚಗುಂಡಿ ಶುಚಿಗೊಳಿಸುವ ವೇಳೆ ಮೃತಪಟ್ಟಿದ್ದಾರೆ.

4,32,000 ಸಾವು
ನೈರ್ಮಲ್ಯದ ಕೊರತೆಯಿಂದಾಗಿ ದೈಹಿಕ ಮತ್ತು ಮಾನಸಿಕ ಕಾಯಿಲೆಗೆ ಶೌಚಗುಂಡಿ ಕಾರ್ಮಿಕರು ತುತ್ತಾಗುತ್ತಿದ್ದು, ಅತಿಸಾರ ರೋಗದಿಂದ 4,32,000 ರಷ್ಟು ಜನರು ಸಾವನ್ನಪ್ಪಿದ್ದಾರೆ.

ಇದರೊಂದಿಗೆ ತಲೆನೋವು, ತಲೆತಿರುಗುವಿಕೆ, ಜ್ವರ, ಆಯಾಸ, ಆಸ್ತಮಾ, ಶ್ವಾಸಕೋಶ ಸಂಬಂಧಿ ಕಾಯಿಲೆ, ಕಾಲರಾ, ಟೈಫಾಯಿಡ್‌, ಹೆಪಟೈಟಿಸ್‌, ಚರ್ಮದ ಕಾಯಿಲೆ ಇತ್ಯಾದಿಗಳಿಗೆ ಇದು ದಾರಿ ಮಾಡಿಕೊಡುತ್ತಿದೆ. ಸಮರ್ಪಕ ಆರೋಗ್ಯ ಮತ್ತು ಸೂಕ್ತ ಸುರಕ್ಷತೆ ಸೌಲಭ್ಯ ದೊರಕದೇ ಕಾರ್ಮಿಕರು ಗಾಯ, ಸೋಂಕು ರೋಗಗಳಿಂದ ಬಳಲುತ್ತಿದ್ದಾರೆ. ಮಾನಸಿಕ ಆರೋಗ್ಯ ಸಮಸ್ಯೆಗಳಿಂದಲೂ ಸಾವಿಗೀಡಾ ಗುತ್ತಿದ್ದಾರೆ ಎಂದು ವರದಿ ಹೇಳಿದೆ.

50 ಸಾವಿರಕ್ಕೂ ಹೆಚ್ಚು ಮಂದಿ
ದೇಶಾದ್ಯಂತ 1993 ರಿಂದ 2019 ರ ಅವಧಿಯ ಪ್ರಕಾರ ಒಟ್ಟು 50,000 ಹೆಚ್ಚು ಶೌಚಗುಂಡಿ ಕಾರ್ಮಿಕರಿದ್ದಾರೆ.

7 ಸಾವಿರ ಹೆಚ್ಚಳ
2014 ರಿಂದ 2017 ರ ಅವಧಿಯಲ್ಲಿ ಶೌಚಗುಂಡಿ ಕಾರ್ಮಿಕರ ಪ್ರಮಾಣದಲ್ಲಿ ಸುಮಾರು 7 ಸಾವಿರದಷ್ಟು ಜನರ ಹೆಚ್ಚಳವಾಗಿದೆ.

ಈ ವರ್ಷ ಸತ್ತವರೆಷ್ಟು ?
ಕಳೆದ 9 ತಿಂಗಳಿಂದ 50 ಜನ ಕಾರ್ಮಿಕರು ಕಾರ್ಯ ನಿರತವಾಗಿರುವಾಗಲೇ ಸಾವಿಗೀಡಾಗಿದ್ದಾರೆ.
ಉತ್ತರ ಪ್ರದೇಶದಲ್ಲಿ ಹೆಚ್ಚು
2018 ರ ಅಂಕಿ ಅಂಶದ ಪ್ರಕಾರ ಸುಮಾರು 6,126 ಶೌಚಗುಂಡಿ ಕಾರ್ಮಿಕರಿದ್ದಾರೆ.

ರಾಜ್ಯದಲ್ಲಿ 1744 ಕಾರ್ಮಿಕರು
ರಾಜ್ಯದಲ್ಲಿ ಸುಮಾರು 1744 ಶೌಚಗುಂಡಿ ಸ್ವತ್ಛ ಕಾರ್ಮಿಕರಿದ್ದು, ಸದ್ಯ ನಮ್ಮ ರಾಜ್ಯ ಮೂರನೇ ಸ್ಥಾನದಲ್ಲಿದೆ.

ಈ ರಾಜ್ಯಗಳಲ್ಲಿ ಹೆಚ್ಚು
ರಾಷ್ಟ್ರೀಯ ಸಫಾರಿ ಕರ್ಮಾಚಾರಿ ಹಣಕಾಸು ಹಾಗೂ ಪ್ರಗತಿ ಸಹಕಾರಿ ಸಂಘದ ಅಂಕಿ-ಅಂಶಗಳ ಪ್ರಕಾರ ಈ ರಾಜ್ಯಗಳಲ್ಲಿ ಅತ್ಯಧಿಕ ಮಂದಿ ಕೆಲಸದವರಿದ್ದಾರೆ.
ಉತ್ತರ ಪ್ರದೇಶ 6,126
ಮಧ್ಯಪ್ರದೇಶ 5,269
ಕರ್ನಾಟಕ 1,744

ನೂತನ ಯೋಜನೆ
ಶೌಚಗುಂಡಿ ಸ್ವತ್ಛತೆಯ ಹೊಣೆಗಾರಿಕೆಯನ್ನು ನಗರಪಾಲಿಕೆಗಳಿಗೆ ವಹಿಸಿದ್ದು, ಈ ನಿಯಮ ಖಾಸಗಿ ಒಡೆತನದ ಸಂಸ್ಥೆಗಳಿಗೂ ಅನ್ವಯ. ಯಂತ್ರಗಳ ಮೂಲಕವೇ ಶೌಚಗುಂಡಿ ಸ್ವತ್ಛಗೊಳಿಸಬೇಕೆಂಬ ಕಾನೂನು ಮಾಡಿರುವ ಸರಕಾರ, ಅವುಗಳ ಖರೀದಿಗೆ ನಗರಪಾಲಿಕೆಗಳಿಗೆ ಸಾಲವನ್ನು ನೀಡುವುದಾಗಿ ತಿಳಿಸಿದೆ.

ದುರ್ಬಲ ಕಾನೂನು
ದುರ್ಬಲ ಕಾನೂನು ರಕ್ಷಣೆ ಮತ್ತು ಅಸ್ತಿತ್ವದಲ್ಲಿರುವ ನಿಯಮಗಳು ಪರಿಣಾಮಕಾರಿಯಾಗಿ ಜಾರಿಗೊಳ್ಳದೇ ಇರುವುದು ಇದಕ್ಕೆ ಪ್ರಮುಖ ಕಾರಣವಾಗಿದ್ದು, ಅಭಿವೃದ್ಧಿಶೀಲ ದೇಶಗಳು ಸೇರಿದಂತೆ ಪ್ರಪಂಚಾದ್ಯಂತ ಶೌಚಗುಂಡಿ ಕಾರ್ಮಿಕ ಪದ್ಧತಿ ಚಾಲ್ತಿ ಅಲ್ಲಿದೆ.

ಸಮಸ್ಯೆಗೆ ಕಾರಣಗಳೇನು?
· ಬಡತನ ಹಾಗೂ ನಿರ್ದಿಷ್ಟ ಜನಾಂಗದವರೇ ಈ ಕಾರ್ಯಗಳಲ್ಲಿ ತೊಡಗಬೇಕೆಂಬ ಪೂರ್ವಾಗ್ರಹ
· ಕಾರ್ಮಿಕರಿಗೆ ಸುರಕ್ಷಾ ಸಲಕರಣೆಗಳನ್ನು ನೀಡದಿರುವುದು.
· ಆಧುನಿಕ ಯಂತ್ರಗಳು ಲಭ್ಯವಿದ್ದರೂ ಅವುಗಳ ಬಳಕೆ ಇಲ್ಲ.
· ಕಾನೂನು ನಿಯಮವನ್ನು ಜಾರಿಗೆ ತರುವಲ್ಲಿ ವಿಫ‌ಲ .
· ಈ ಉದ್ಯೋಗದ ಕುರಿತು ಸರಿಯಾದ ಮಾಹಿತಿ ಇಲ್ಲ.

- ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.