ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ


Team Udayavani, Nov 30, 2021, 2:43 PM IST

Untitled-2

ಧರ್ಮಸ್ಥಳದ ಲಕ್ಷದೀಪೋತ್ಸವ ಅಂದರೆ ನಮ್ಮ ಮೈಯೆಲ್ಲಾ ಒಮ್ಮೆ ರೋಮಾಂಚನಗೊಳ್ಳುತ್ತದೆ. ಅಲ್ಲಿ ಬರುವ ಪಾದಯಾತ್ರಿಗಳು, ಅಂಗಡಿ, ದೀಪ, ಹೆಜ್ಜೆ ಹೆಜ್ಜೆಗೂ ಒಂದೊಂದೂತರಹದ ಬೆಳಕು, ದೇವರಿಗೆ ಮಾಡಿದ ಶೃಂಗಾರ, ದೇವರನ್ನು ಹೊತ್ತುಕೊಂಳ್ಳುವವರು, ಅರ್ಚಕರು, ಒಂದೊಂದು ದಿನವೂ ಒಂದೊಂದು ತರಹದ ಉತ್ಸವ. ಅಬ್ಬಾ! ಹೇಳುತ್ತಾ ಹೋದರೆ ಹಾಗೆ ಪಟ್ಟಿ ಬೆಳೆಯುತ್ತಲೇ  ಹೋಗುತ್ತದೆ. ಅದರಲ್ಲಿಯೂ ಲಕ್ಷ ದೀಪೋತ್ಸವಕ್ಕೆಂದು ದೂರ ದೂರದ ಊರಿನಿಂದ ಬರುವ ಪಾದಯಾತ್ರಿಗಳ ಪಾದಯಾತ್ರೆ ನೋಡುವುದೇ ಒಂದು ಖುಷಿ. ತಮ್ಮ ಕನಸು, ಸೇವೆ, ಆಸೆಗಳ ಈಡೇರಿಕೆಗಾಗಿ ದೇವರ ದರ್ಶನ ಪಡೆಯಲು ಯಾತ್ರಿಗಳು ಬಂದಿದ್ದಾರೆ.

ಅದರಲ್ಲಿಯೂ ಕೊರೋನಾ ಮಹಾಮಾರಿ ಬಂದ ಮೇಲಂತು ಯಾವುದೇ ಉತ್ಸವ, ಹಬ್ಬ, ಜಾತ್ರೆಗಳನ್ನೂ ಆಚರಿಸಲು ಅವಕಾಶವೇ ಇರಲಿಲ್ಲ. ಆದರೆ ಈ ಬಾರಿ ತಾವು ಕಳೆದುಕೊಂಡ ದಿನವನ್ನು ಪುನಃ ಪಡೆದುಕೊಳ್ಳಲು ಪಾದಯಾತ್ರಿಗಳ ಗುಂಪು ಗುಂಪೆ ಹರಿದು ಬಂದಿದೆ. ಅವರಲ್ಲಿ 12 ವರ್ಷದ ಬಾಲಕಾರಿನಿಂದ ಹಿಡಿದು 70 ವರ್ಷದ ಮುದುಕ, ಮುದುಕಿಯರನ್ನು ಕಾಣಬಹುದಾಗಿದೆ. ಎಲ್ಲಿ ನೋಡಿದರಲ್ಲಿ ಜನರ ಗುಂಪೆ ಎದ್ದು ಕಾಣುತ್ತಿದೆ. ಅಲ್ಲಲ್ಲಿ ಪಾದಯಾತ್ರಿಗಳಿಗೆ ಸೇವೆಸಲ್ಲಿಸಲು ಪಾನಕ, ಮಜ್ಜಿಗೆ, ನೀರಿನ ವ್ಯವಸ್ಥೆ ಮಾಡಲಾಗಿತ್ತು. ಜನರು ಮಂಜುನಾಥನ ಸ್ಮರಣೆಮಾಡುತ್ತಾ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೂ ಸಾಗಿದರು.

ಉಜಿರೆಯ ತುಂಬೆಲ್ಲ ಪಾದಯಾತ್ರಿಗಳ ಗುಂಪು  ಎಲ್ಲರನ್ನೂ ಸೆಳೆಯುವಂತೆ ಎದ್ದು ಕಾಣುತಿತ್ತು. ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಪಾದಯಾತ್ರಿಗಳು ದೇವರ ದರ್ಶನಕ್ಕಾಗಿ ಆಗಮಿಸಿದ್ದರು. ಸುಮಾರು 10 ಸಾವಿರಕ್ಕೂ ಹೆಚ್ಚಿನ ಪಾದಯಾತ್ರೆಯನ್ನು ಗಮನಿಸಬಹುದಾಗಿತ್ತು. ಈ ಪಾದಯಾತ್ರಿಗಳ ಮಧ್ಯದಲ್ಲಿ ಸ್ತಬ್ದ ಚಿತ್ರಣಗಳ ಪ್ರದರ್ಶನವು ಇತ್ತು.  ಚಂಡೆವಾದ್ಯ, ಭಜನೆ, ರೈತರ ಚಿತ್ರಣ ಹೀಗೆ ಹಲವಾರು ಅಂಶಗಳು ಜನರನ್ನು ಸೆಳೆಯುತ್ತಿದ್ದವು.

ಹೀಗೆ 9 ನೇ ವರ್ಷದ ಲಕ್ಸದೀಪೋತ್ಸವ ಪಾದಯಾತ್ರೆಯ ಮೂಲಕ ಆರಂಭವಾಯಿತು. ಇನ್ನೂ 5 ದಿನಗಳ ಕಾಲ ಧರ್ಮಸ್ಥಳ ದೀಪ, ಬಣ್ಣ ಬಣ್ಣದ ಬೆಳಕುಗಳಿಂದ ಬೆಳಗುವುದನು ನೋಡುವುದೇ ಒಂದು ಚಂದ.

-ಮಧುರಾ ಎಲ್ ಭಟ್ಟ

ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರ ಉಜಿರೆ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.