ದೀಪಾವಳಿ ವಿಶ್ವದೆಲ್ಲೆಡೆ ಬೆಳಕಿನ ಹಬ್ಬದ ಸಡಗರ


Team Udayavani, Nov 4, 2021, 6:54 AM IST

ದೀಪಾವಳಿ ವಿಶ್ವದೆಲ್ಲೆಡೆ ಬೆಳಕಿನ ಹಬ್ಬದ ಸಡಗರ

ದೀಪಾವಳಿ ಎಂದರೆ ಅದೊಂದು ಸಡಗರ, ಸಂಭ್ರಮದ ಹಬ್ಬ. ಕತ್ತಲೆಯೋಡಿಸಿ, ಬೆಳಕನು ತರುವ ಹಬ್ಬ. ಭಾರತದಲ್ಲಿ ಈ ಹಬ್ಬಕ್ಕೆ ಎಲ್ಲಿಲ್ಲದ ಮಹತ್ವ. ವಿಶೇಷವೆಂದರೆ, ಈ ಹಬ್ಬವನ್ನು ಕೇವಲ ಭಾರತದಲ್ಲಿಯಷ್ಟೇ ಅಲ್ಲ, ಬೇರೆ ಬೇರೆ ದೇಶಗಳಲ್ಲೂ ಅದ್ಧೂರಿಯಾಗಿಯೇ ಆಚರಿಸುತ್ತಾರೆ. ಅಮೆರಿಕದಲ್ಲಿ ದೀಪಾವಳಿ ದಿನದಂದು ರಜೆ ಕೊಡಬೇಕು ಎಂದು ಡೆಮಾಕ್ರೆಟ್‌ ಕಾಂಗ್ರೆಸ್‌ ಸದಸ್ಯೆಯೊಬ್ಬರು ಮಸೂದೆಯೊಂದನ್ನು ಮಂಡಿಸಲೂ ಹೊರಟಿದ್ದಾರೆ. ಹಾಗೆಯೇ, ಪ್ರತೀ ವರ್ಷವೂ ಅಮೆರಿಕದ ಶ್ವೇತಭವನವೂ ಸೇರಿ ಬೇರೆ ಬೇರೆ ಕಡೆಗಳಲ್ಲಿ ದೀಪಾವಳಿ ಹಬ್ಬ ಆಚರಣೆ ಮಾಡುವುದು ರೂಢಿ ಇದೆ.

ಹಾಗಾದರೆ ಬೇರೆ ಯಾವ ಯಾವ ದೇಶಗಳಲ್ಲಿ ದೀಪಾವಳಿಯನ್ನು ಹೇಗೆ ಆಚರಿಸುತ್ತಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಇಂಡೋನೇಶಿಯಾ
ಇಂಡೋನೇಷ್ಯಾದಲ್ಲಿ ಭಾರತೀಯರ ಸಂಖ್ಯೆ ಕಡಿಮೆ. ಆದರೂ ಬಾಲಿ ದ್ವೀಪದಲ್ಲಿ ಮಾತ್ರ ಬಹಳಷ್ಟು ಸಂಖ್ಯೆಯಲ್ಲಿ ಭಾರತೀಯರಿದ್ದಾರೆ. ಬಾಲಿಯೂ ಸೇರಿದಂತೆ ಉಳಿದೆಡೆ ಇರುವ ಭಾರತೀಯ ಸಮುದಾಯಗಳು ದೀಪಾವಳಿ ವೇಳೆ ದೀಪಗಳನ್ನು ಹಚ್ಚಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ.

ಫಿಜಿ
ಫಿಜಿ ದೇಶದಲ್ಲಿ ದೀಪಾವಳಿಯಂದು ಸಾರ್ವಜನಿಕ ರಜೆ ಇದೆ. ಇದಕ್ಕೆ ಕಾರಣ ಈ ದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಹಿಂದೂಗಳಿರುವುದು. ಭಾರತದಲ್ಲಿ ಯಾವ ರೀತಿಯಲ್ಲಿ ಬೆಳಕಿನ ಹಬ್ಬವನ್ನು ಆಚರಿಸುತ್ತಾರೋ ಅದೇ ರೀತಿಯಲ್ಲಿ ಇಲ್ಲಿಯೂ ಸಡಗರ ಸಂಭ್ರಮದಿಂದ ಮತ್ತು ಎಲ್ಲ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ದೀಪಾವಳಿ ಆಚರಿಸುತ್ತಾರೆ.

ಮಾರಿಷಸ್‌
ಇದು ವಿವಿಧ ಸಮುದಾಯಗಳಿರುವ ಪುಟ್ಟ ದೇಶವಾಗಿದೆ. ಹಿಂದೂಗಳ ಜತೆಗೆ ಇತರ ಸಮುದಾಯದವರು ಸೇರಿ ಹಬ್ಬ ಆಚರಣೆ ಮಾಡುವುದು ವಾಡಿಕೆ. ಹಾಗೆಯೇ, ಈ ಹಬ್ಬದಂದು ಇಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.

ಮಲೇಷ್ಯಾ
ಮಲೇಷ್ಯಾದಲ್ಲಿ ದೀಪಾವಳಿಯನ್ನು ಹರಿ ದೀಪಾವಳಿ ಎಂದೇ ಕರೆಯಲಾಗುತ್ತದೆ. ಹರಿ ದೀಪಾವಳಿ ಎಂದರೆ, ಹಸುರು ದೀಪಾವಳಿ ಎಂದರ್ಥ. ಇಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಹಸುರು ದೀಪಾವಳಿಯಾಗಿ ಆಚರಿಸಲಾಗುತ್ತದೆ. ಇಲ್ಲಿ ದೊಡ್ಡ ದೊಡ್ಡ ದೀಪಗಳು, ಲ್ಯಾಂಪ್‌ಗಳನ್ನು ಹಚ್ಚಿ ಪಕ್ಕಾ ಬೆಳಕಿನ ಹಬ್ಬವಾಗಿ ಆಚರಿಸಲಾಗುತ್ತದೆ.

ನೇಪಾಲ
ಹಿಂದೂಗಳೇ ಹೆಚ್ಚಾಗಿರುವ ನೇಪಾಲದಲ್ಲೂ ಸಡಗರ ಸಂಭ್ರಮದಿಂದ ದೀಪಾವಳಿ ಆಚರಿಸಲಾಗುತ್ತದೆ. ಇಲ್ಲೂ ಐದು ದಿನಗಳ ಕಾಲ ಈ ಹಬ್ಬ ನಡೆಯುತ್ತದೆ. ಜನ ಕೇವಲ ದೇವರಷ್ಟೇ ಅಲ್ಲ, ಪ್ರಾಣಿಗಳನ್ನೂ ಪೂಜೆ ಮಾಡುವುದು ಇಲ್ಲಿನ ವಾಡಿಕೆ. ಪ್ರತೀ ವರ್ಷವೂ ಐದು ದಿನಗಳಲ್ಲಿ, ಎರಡನೇ ದಿನ ನಾಯಿಗಳ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನ ಬೆಳಗ್ಗೆಯೇ ನಾಯಿಗಳಿಗೆ ಪೂಜೆ ಮಾಡಲಾಗುತ್ತದೆ.

ಸಿಂಗಾಪುರ
ಸಿಂಗಾಪುರದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ಇರುವ ಕಾರಣದಿಂದಾಗಿ ಸಡಗರದಿಂದ ಆಚರಿಸಲಾಗುತ್ತದೆ. ಅದರಲ್ಲೂ ಇಲ್ಲಿನ ಲಿಟಲ್‌ ಇಂಡಿಯಾ ಪ್ರದೇಶದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ.

ಶ್ರೀಲಂಕಾ
ಶ್ರೀಲಂಕಾದ ಪ್ರಮುಖ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ಇಲ್ಲಿ ಭಾರತದಂತೆಯೇ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ. ಹೆಚ್ಚಾಗಿ ಹಿಂದೂ ತಮಿಳಿಗರು ಈ ಹಬ್ಬ ಆಚರಣೆ ಮಾಡುತ್ತಾರೆ. ಇಲ್ಲಿಯೂ ದೀಪಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬ ಮಾಡಲಾಗುತ್ತದೆ.

ಅಮೆರಿಕ
ಅಮೆರಿಕದಲ್ಲಿಯೂ ಭಾರತೀಯರು ಹೆಚ್ಚಾಗಿರುವುದರಿಂದ ಈ ಹಬ್ಬವನ್ನು ಸಂಭ್ರಮದಿಂದಲೇ ಆಚರಿಸಲಾಗುತ್ತದೆ. ಪ್ರತೀ ವರ್ಷ ಭಾರತದಲ್ಲಿ ದೀಪಾವಳಿ ಆಚರಣೆ ಮಾಡುವ ಮೊದಲೇ ಅಮೆರಿಕದಲ್ಲಿ ದೀಪಾವಳಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಮಂಡ್ಯ ಮೂಲದ ಅಮೆ ರಿಕದ ಚೀಫ್ ಸರ್ಜನ್‌ ಜನರಲ್‌ ಡಾ| ವಿವೇಕ್‌ ಮೂರ್ತಿ ಅವರು ಭಾಗಿಯಾಗಿದ್ದರು. ಅಲ್ಲದೆ ಅಮೆರಿಕ ಅಧ್ಯಕ್ಷರೂ ಶ್ವೇತಭವನದಲ್ಲೇ ಈ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.