ಜನಸೇವೆಯೊಂದಿಗೆ ಕೊರೊನಾ  ಹರಡುವಿಕೆ ನಿಯಂತ್ರಿಸಿದ ದುಬೈ


Team Udayavani, Jun 5, 2021, 1:22 PM IST

Dubai controlled by the corona spread

ಕೊರೊನಾ ಪ್ರಾರಂಭವಾದ ಸಮಯ. ಚೀನ ದೇಶದ ಅನಂತರ ಅತೀ ಹೆಚ್ಚು ಸೋಂಕು ವೇಗವಾಗಿ ಹರಡುತ್ತಿದ್ದ ಒಂದು ಸ್ಥಳವಾಗಿತ್ತು ದುಬಾೖ ಕಾರಣ ಇಲ್ಲಿ 196 ದೇಶಗಳ ಜನರಿದ್ದಾರೆ, ಈ ದೇಶಗಳಿಂದ ನಿತ್ಯವೂ ಅನೇಕರು ಬಂದುಹೋಗುತ್ತಾರೆ. ಹೆಚ್ಚಾಗಿ ಚೀನಾದವರೇ ಇಲ್ಲಿ ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ. ಆ ಮೂಲಕ ಅಥವಾ ಇತರ ಮೂಲಗಳಿಂದ ಸೋಂಕು ದುಬೈಯಲ್ಲಿ ನಿರಂತರ ಹೆಚ್ಚಾಗುತ್ತಿತ್ತು.

ಸೋಂಕು ಹರಡಿದ ತತ್‌ಕ್ಷಣ ಇಲ್ಲಿನ ಆಡಳಿತಾಧಿಕಾರಿಗಳು ಲಾಕ್‌ಡೌನ್‌ ಮಾಡಿ ದ್ದಲ್ಲದೆ ಅತಿಯಾಗಿ ಸೋಂಕು ಹರಡಿದ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಿದರು. ಲಾಕ್‌ಡೌನ್‌ನಿಂದ ಜನರು ಸಂಕಷ್ಟಕ್ಕೆ ಸಿಲುಕ

ಬಾರದು ಎಂದು ಇಲ್ಲಿ ವಾಸಿಸುವ ಎಲ್ಲರಿಗೂ 100 ಮಿಲಿಯನ್‌ ಮೀಲ್‌ ಎಂಬ ಅಭಿಯಾನ ದೊಂದಿಗೆ ಮೂರು ಹೊತ್ತಿನ ಆಹಾರ ವಿತರಣೆ, ಆಸ್ಪತ್ರೆ ಚಿಕಿತ್ಸೆ ಮೊದಲಾದ ತುರ್ತು ಕಾರ್ಯಗಳನ್ನು ಪ್ರಾರಂಭಿಸಿದರು. ಇದಕ್ಕಾಗಿ ದುಬಾೖ ಹೆಲ್ತ್‌ ಅಥಾರಿಟಿ ಮತ್ತು ದುಬಾೖ ಪೊಲೀಸರಿಗೆ ಜವಾಬ್ದಾರಿ ನೀಡಲಾಯಿತು. ಆಹಾರ ವಿತರಣೆ ಮತ್ತು ಕೋವಿಡ್‌ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಕೆಲಸಗಳಿಗೆ ಸ್ವಯಂ ಸೇವಕರ ಅಗತ್ಯವಿತ್ತು. ಆಗ ಹೆಲ್ತ್‌ ಅಥಾರಿಟಿ ಮತ್ತು ದುಬೈ ಪೊಲೀಸರು ಇಲ್ಲಿನ ವಿವಿಧ ಸಂಘ ಸಂಸ್ಥೆಗಳಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದರು. ಇವರಿಗೆ ದುಬೈ ಹೆಮ್ಮೆಯ ಯುಎಇ ಕನ್ನಡಿಗರ ಸಂಘವೂ ಸಾಥ್‌ ನೀಡಿತು.

ಇದರಲ್ಲಿ ಭಾಗಿಯಾದ ಪ್ರತಿಯೊಂದು ಸಂಘಸಂಸ್ಥೆಗಳು ದುಬೈ ಸರಕಾರದ ಪ್ರಮುಖರ ಸೂಚನೆ ಮೇರೆಗೆ ಆಹಾರ, ಔಷಧ ವಿತರಿಸಲು, ಕೋವಿಡ್‌ ರೋಗಿಗಳನ್ನು ಆಸ್ಪತ್ರೆ, ಐಸೊಲೇಶನ್‌ ಕೇಂದ್ರಗಳಿಗೆ ಸಾಗಿ

ಸಲು ಮೊದಲಾದ ಕಾರ್ಯಗಳಿಗೆ ಉಪ ತಂಡಗಳನ್ನು ರಚಿಸಿ ಲಾಕ್‌ಡೌನ್‌ ವೇಳೆ ಹೆಚ್ಚಿನವರಿಗೆ ಸಹಾಯ ತಲುಪಿಸುವ ಕಾರ್ಯ ಮಾಡಿತು.  ಹಲವು ಖಾಸಗಿ ಹೊಟೇಲ್‌ಗ‌ಳನ್ನು  ಸರಕಾರ ಉಚಿತ ಕೋವಿಡ್‌ ಐಸೊ ಲೇಶನ್‌ ಸೆಂಟರ್‌ಗಳನ್ನಾಗಿ ಮಾಡಿತ್ತು ಮತ್ತು ಎಲ್ಲ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿತರಿಗೆ ಉಚಿತ ಚಿಕಿತ್ಸೆ ಒದಗಿಸ ಲಾಯಿತು. ಸೋಂಕಿತರಿಗೆ ಐಸೊಲೇಶನ್‌ ಮಾಡಲು ಸೂಚಿಸಿದಾಗ ಎಲ್ಲರೂ ಚಾಚೂ  ತಪ್ಪದೆ ಇದ್ದನ್ನು ಪಾಲಿಸಿದ್ದರು.

ಯೋಜನ ಪೂರಕವಾಗಿ ನಡೆದ ನಿಯಂತ್ರಣ ಕ್ರಮ ಮತ್ತು ಲಕ್ಷಾಂತರ ರೂ. ಗಳ ದಂಡಕ್ಕೆ ಹೆದರಿ ಹೆಚ್ಚಿನವರು ಮನೆಯಲ್ಲೇ ಉಳಿದುಕೊಂಡಿದ್ದರಿಂದ ಹಾಗೂ ಲಾಕ್‌ಡೌನ್‌ ಅನಂತರ ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮೊದಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದರಿಂದ ಇವತ್ತು ದುಬಾೖಯಲ್ಲಿ ಕೋವಿಡ್‌ ಹರಡುವಿಕೆ ಬಹಳ ಕಡಿಮೆಯಾಗಿದೆ.

ದುಬೈ ಹೆಮ್ಮೆಯ ಯುಎಇ ಕನ್ನಡಿಗರು ಸಂಘದ ಪ್ರಮುಖರು, ಉಪ ಸಮಿತಿ ಸದಸ್ಯರು ಸೇರಿ ದಾನಿಗಳ ನೆರವಿನಿಂದ ಸಂಕಷ್ಟದಲ್ಲಿದ್ದ ಕನ್ನಡಿಗರು ಸೇರಿ ಹಲವು ಭಾರತೀಯರು ಮತ್ತು ವಿದೇಶಿಯರಿಗೆ ಸಹಾಯ ಮಾಡಿದರು.  ಕಳೆದ ವರ್ಷ ಸಂಯುಕ್ತ ಅರಬ್‌ ಸಂಸ್ಥಾನದಲ್ಲಿ ಲಾಕ್‌ಡೌನ್‌ ವೇಳೆ 19 ಲಕ್ಷ ರೂ. ಗಳ ಆಹಾರ ಕಿಟ್‌ ವಿತರಿಸಿದ್ದಲ್ಲದೆ ಸಂಕಷ್ಟದಲ್ಲಿದ್ದವರಿಗೆ ತಾಯಿನಾಡು ಮರಳಲು ಉಚಿತ ವಿಮಾನ ಟಿಕೆಟ್‌, ಚಿಕಿತ್ಸೆ ಸೌಲಭ್ಯಗಳನ್ನು ಮಡಲಾಯಿತು. ಈ ವರ್ಷ ಕರ್ನಾಟಕದ ಬೆಂಗಳೂರು ಮೈಸೂರು ಮಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಬಡವರಿಗೆ ರೇಷನ್‌ ಕಿಟ್‌ ಮತ್ತು ಆಹಾರ ಪೊಟ್ಟಣ ವಿತರಿಸಲಾಯಿತು.

ಒಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮದೊಂದಿಗೆ ಜನಸೇವೆಗೆ ಆದ್ಯತೆ ನೀಡಿದ ದುಬೈ ರಾಜಕುಮಾರರಾದ ಶೇಕ್‌ ಖಲೀಫಾ ಬಿನ್‌ ಜಾಯೆದ್‌ ಮತ್ತು ಶೇಕ್‌ ಮೊಹಮ್ಮದ್‌ ಬಿನ್‌ ಮುಕು¤ಮ್‌ ಇವರ ನೇತೃತ್ವದಲ್ಲಿ ಇಲ್ಲಿನ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ, ಸಮಯಕ್ಕೆ ಸರಿಯಾಗಿ ಆಹಾರ ವ್ಯವಸ್ಥೆ ಸೌಲಭ್ಯ ಕಲ್ಪಿಸಿದ್ದು ಮಾತ್ರವಲ್ಲದೆ ದುಬಾರಿ ದಂಡದ ಪರಿಣಾಮವೇ ಕೊರೊನಾ ನಿಯಂತ್ರಣ ಸಾಧ್ಯವಾಯಿತು ಎಂದರೆ ತಪ್ಪಾಗಲಾರದು. ಅಲ್ಲದೇ ಕೋವಿಡ್‌ ವ್ಯಾಕ್ಸಿನ್‌ ಕಂಡುಹಿಡಿದ ಆರಂಭದಲ್ಲೇ ಮೊದಲ ಡೋಸ್‌ ಅನ್ನು ಶೇಕ್‌ ಮೊಹಮ್ಮದ್‌ ತೆಗೆದುಕೊಳ್ಳುವ ಮೂಲಕ ನಾಗರಿಕರಲ್ಲಿ ವ್ಯಾಕ್ಸಿನ್‌ ಪಡೆಯಲು ಧೈರ್ಯ ತುಂಬಿ ಮಾದರಿಯಾದರು.

ಸಿಕ್ಕಿದ್ದರಲ್ಲಿ ತೃಪ್ತಿ ಪಡಬೇಕಾದ ಕಾಲ

ದೇಶದ ಬಹುಪಾಲು ಜನರಿಗೆ ಅನಾರೋಗ್ಯ ಕಾಣಿಸಿಕೊಂಡಾಗ ಎಷ್ಟೇ ಮುಂದುವರಿದ ದೇಶಗಳೂ ಸರಿಯಾದ ವ್ಯವಸ್ಥೆ ಮಾಡುವುದು ಸಾಧ್ಯವಿಲ್ಲ. ಇದಕ್ಕೆ ಸರಕಾರ, ಆರೋಗ್ಯ ವ್ಯವಸ್ಥೆಯ ನಿರ್ಲಕ್ಷ್ಯ ಎಂದು ಹೇಳಲು ಸಾಧ್ಯವಿಲ್ಲ. ಕೋಟ್ಯಂತರ ಜನರಲ್ಲಿ ಎಷ್ಟು ಮಂದಿಗೆ ಏಕಕಾಲಕ್ಕೆ ಎಲ್ಲ ಸೌಲಭ್ಯ ತಲುಪಿಸಲು ಸಾಧ್ಯವಾಗುತ್ತದೆ? ಎಷ್ಟೋ ಬಾರಿ ಅದರಲ್ಲೂ ಮುಖ್ಯವಾಗಿ ಕೋವಿಡ್‌ ಸಂಕಷ್ಟದ ವೇಳೆ  ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುವಾಗ ಹಲವು ಜನರ ಸಂಕಷ್ಟಕ್ಕೆ ಸ್ಪಂದಿಸಲು ಸಾಧ್ಯವಾಗದೆ ನಿರಾಸೆ ಪಟ್ಟವರಲ್ಲಿ ನಾನೂ ಒಬ್ಬ. ಹೀಗಾಗಿ ಇಂಥ ಸಂದರ್ಭದಲ್ಲಿ ಜನರು ಆರೋಗ್ಯ ಸಂಸ್ಥೆ, ಸರಕಾರದ ಜತೆ ಕೈ ಜೋಡಿಸಿ ನಾಗರಿಕರಾಗಿ ತಮ್ಮ ಜವಾಬ್ದಾರಿಯನ್ನು ಅರಿತು ಹೋರಾಡಬೇಕು. ಸರಕಾರವೂ ಕೂಡ ಈ ವೇಳೆ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿ ಬಡವರಿಗೆ ಆಹಾರ, ಚಿಕಿತ್ಸೆ ನೀಡುವ ಕಡೆಗೆ ಹೆಚ್ಚಿನ ಗಮನಕೊಡಬೇಕು. ಮೊದಲಿಗೆ ದೇಶದ ಪ್ರಜೆಗಳಿಗೆ ಹಂಚಲು ಲಸಿಕೆಯ ವ್ಯವಸ್ಥೆ ಮಾಡಬೇಕು.

ಕೊರೊನಾ ಬಂದವರನ್ನು ಒಂಟಿ ಯಾಗಿಸಬೇಡಿ. ಸಾಮಾಜಿಕ ಅಂತರ ಕಾಯ್ದುಕೊಂಡು ವೈದ್ಯರು, ಸರಕಾರ ಸೂಚಿಸುವ ಮುನ್ನೆಚ್ಚರಿಕೆಗಳನ್ನು ಪಾಲಿಸಿ ಕೋವಿಡ್‌ ರೋಗಿಗಳ ಅಥವಾ ಸಾಮಾನ್ಯ ಜನರ ಸೇವೆ ಮಾಡಲು ಎಲ್ಲರೂ ಮುಂದೆ ಬರಬೇಕು. ಈಗಾಗಲೇ ಸಾಕಷ್ಟು ಮಂದಿ ಇದರಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಇದು ಭಾರತದಂಥ ದೇಶದಲ್ಲಿ ಸಾಲುವುದಿಲ್ಲ. ಹೀಗಾಗಿ ಇನ್ನಷ್ಟು ಮಂದಿ ಇದಕ್ಕೆ ಕೈ ಜೋಡಿಸಬೇಕಿದೆ. ಆಗ ಮಾತ್ರ ಕೊರೊನಾವನ್ನು ನಿಯಂತ್ರಿಸುವುದು ಖಂಡಿತ ಸಾಧ್ಯವಿದೆ.

 

ರಫೀಕಲಿ, ಕೊಡಗು, ದುಬೈ

 

 

 

 

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.