ವಿದೇಶದಲ್ಲಿ ಶಿಕ್ಷಣ ಕುಗ್ಗದ ವಿದ್ಯಾರ್ಥಿಗಳ ಹುಮ್ಮಸ್ಸು


Team Udayavani, Sep 6, 2020, 6:00 AM IST

ವಿದೇಶದಲ್ಲಿ ಶಿಕ್ಷಣ ಕುಗ್ಗದ ವಿದ್ಯಾರ್ಥಿಗಳ ಹುಮ್ಮಸ್ಸು

ಸಾಂದರ್ಭಿಕ ಚಿತ್ರ

ಮಣಿಪಾಲ: ಕೋವಿಡ್‌ನಿಂದಾಗಿ ಶೈಕ್ಷಣಿಕ ವರ್ಷ ದಲ್ಲಿ ಗಮನಾರ್ಹ ಬದಲಾವಣೆಗಳು ಆಗಿರು ವುದು ಸುಳ್ಳಲ್ಲ. ಕೊರೊನಾ ತಂದೊಡ್ಡಿದ ಹತ್ತಾರು ತೊಡಕುಗಳ ನಡುವೆಯೂ ವಿದ್ಯಾರ್ಥಿಗಳಲ್ಲಿ ಕಲಿಯುವ ಹುಮ್ಮಸ್ಸೇನೂ ಕಡಿಮೆಯಾಗಿಲ್ಲ. ಹೊರ ದೇಶಕ್ಕೆ ತೆರಳಿ ವಿದ್ಯಾಭ್ಯಾಸ ಮಾಡಲು ಭಾರತೀಯ ವಿದ್ಯಾರ್ಥಿಗಳು ಸಿದ್ಧರಿದ್ದಾರೆ ಎಂದು ಅಧ್ಯಯನವೊಂದು ಹೇಳಿದೆ.

“ಎಡ್ವೊಯ…’ ಶಿಕ್ಷಣ ಸಲಹಾ ಸಂಸ್ಥೆಯು ಕೋವಿಡ್‌ ಸಾಂಕ್ರಾಮಿಕ ಪಿಡುಗಿನ ನಡುವೆಯೂ ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಅರ್ಜಿ ಹಾಕುತ್ತಿರುವ ವಿದ್ಯಾರ್ಥಿಗಳ ಆಸಕ್ತಿಯ ಬಗ್ಗೆ ತಿಳಿದುಕೊಳ್ಳಲು ಈ ಸಮೀಕ್ಷೆ ನಡೆಸಿತ್ತು.

ಕೆನಡಾ ನಂಬರ್‌ 1
ಅಧ್ಯಯನ ವರದಿ ಪ್ರಕಾರ ಸೆಪ್ಟಂಬರ್‌ 2020ರ ಅಂತ್ಯದ ವೇಳೆಗೆ ಶೇ.35ರಷ್ಟು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಕೆನಡಾಕ್ಕೆ ತೆರಳಲು ಬಯಸಿದ್ದಾರೆ. ಶೇ.33ರಷ್ಟು ವಿದ್ಯಾರ್ಥಿಗಳು ಐರ್ಲೆಂಡ್‌ಗೆ ಹೋಗುವ ಇರಾದೆ ವ್ಯಕ್ತಪಡಿಸಿದ್ದಾರೆ. ಎಡ್ವೊಯ… ಸಂಸ್ಥೆ ಯುಕೆ, ಯುಎಸ್‌, ಕೆನಡಾ ಮತ್ತು ಐರ್ಲೆಂಡ್‌ನ‌ಲ್ಲಿರುವ ಕಾಲೇಜು ಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸಿದ್ದ ಸುಮಾರು 4 ಸಾವಿರ ಭಾರತೀಯ ವಿದ್ಯಾರ್ಥಿಗಳನ್ನು ಈ ಸಮೀಕ್ಷೆಗೆ ಒಳಪಡಿಸಿತ್ತು.

ಅಮೆರಿಕದತ್ತ ಒಲವು
ಅಮೆರಿಕವನ್ನು ಉತ್ತಮ ಅಧ್ಯಯನ ಕ್ಷೇತ್ರವೆಂದು ಪರಿಗಣಿಸಲಾಗಿದೆ. 2021ರ ಜನವರಿ ವೇಳೆಗೆ ಹೆಚ್ಚಿನ ವಿದ್ಯಾರ್ಥಿಗಳು ಯುಎಸ್‌ಗೆ ತೆರಳುವ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ. ಇನ್ನು ಶೇ.43ರಷ್ಟು ವಿದ್ಯಾರ್ಥಿಗಳು ಯುಎಸ್‌ನಲ್ಲಿಯೇ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಆನ್‌ಲೈನ್‌ನತ್ತ ಹೆಜ್ಜೆ
ವಿಶ್ವಾದ್ಯಾಂತ ಶಿಕ್ಷಣ ಸಂಸ್ಥೆಗಳು, ಹಲವಾರು ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳು ಕೋವಿಡ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿವೆ. ಬದಲಾದ ಪರಿಸ್ಥಿತಿಗೆ ವಿದ್ಯಾರ್ಥಿಗಳು ಹೊಂದಿಕೊಂಡಿದ್ದು, ಸಮಸ್ಯೆಗಳ ನಡುವೆ ಆನ್‌ಲೈನ್‌ ಶಿಕ್ಷಣ ವಿಧಾನದ ಮೊರೆ ಹೋಗುತ್ತಿದ್ದಾರೆ. ಶೇ. 42ರಷ್ಟು ವಿದ್ಯಾರ್ಥಿಗಳು, ಯುಕೆ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಮಾಡುವ ಬಯಕೆ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ 7.33 ಲಕ್ಷ ವಿದೇಶಿ ವಿದ್ಯಾರ್ಥಿಗಳು
ಅಮೆರಿಕದಲ್ಲಿ 2019ರಲ್ಲಿ ಚೀನ ಮತ್ತು ಭಾರತದ ಶೇ.48 ರಷ್ಟು ವಿದ್ಯಾರ್ಥಿ ಗಳಿದ್ದರು ಎಂದು ವರದಿ ತಿಳಿಸಿದೆ. ವಲಸೆ ವಿದ್ಯಾರ್ಥಿಗಳ ಕುರಿತು ಅಮೆರಿಕ ವಲಸೆ ಮತ್ತು ಕಸ್ಟಮ್ಸ… ಜಾರಿ (ಐಸಿಇ)ಸಂಸ್ಥೆ ಈ ಬಗ್ಗೆ ವರದಿ ಸಿದ್ಧಪಡಿಸಿದ್ದು, ಶೇ. 48ರಷ್ಟು ಅಂದರೆ 7.33 ಲಕ್ಷ ವಿದ್ಯಾರ್ಥಿಗಳು ಅಮೆರಿಕದಲ್ಲಿ ಅಧ್ಯಯನ ನಡೆಸಿದ್ದಾರೆ. ಇವರಲ್ಲಿ ಚೀನದ 4.74 ಲಕ್ಷ ಮತ್ತು ಭಾರತದ 2.49 ಲಕ್ಷ ವಿದ್ಯಾರ್ಥಿಗಳಿ¨ªಾರೆ. 2018ರಲ್ಲಿ ಉಭಯ ದೇಶಗಳ ಶೇ.47ರಷ್ಟು ವಿದ್ಯಾರ್ಥಿಗಳಿದ್ದರು.

ಏಷ್ಯಾದಿಂದ ಹೆಚ್ಚು
ಏಷ್ಯಾದ ಕೆಲವು ರಾಷ್ಟ್ರಗಳಾದ ಕತಾರ್‌, ಸಿರಿಯಾ ಮತ್ತು ಯೆಮನ್‌ ರಾಷ್ಟ್ರಗಳು ಕೆಲವೇ ವಿದ್ಯಾರ್ಥಿಗಳನ್ನು ಅಮೆರಿಕಕ್ಕೆ ಕಳುಹಿಸಿವೆ. ಆದರೆ ಕಾಂಬೋಡಿಯಾ ಮತ್ತು ಕಿರ್ಗಿಸ್ಥಾನ ಹೆಚ್ಚು ವಿದ್ಯಾರ್ಥಿಗಳನ್ನು ಅಮೆರಿಕಕ್ಕೆ ಕಳುಹಿಸಿವೆ. ವಿದೇಶಿಯರಲ್ಲಿ 6.71ಲಕ್ಷ (ಶೇ.49) ವಿದ್ಯಾರ್ಥಿನಿಯರು, 4.42 ಲಕ್ಷ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಅಧ್ಯಯನದಲ್ಲಿ ತೊಡಗಿದ್ದರು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.