ಔಪಚಾರಿಕ ಉದ್ಯೋಗದ ಬೆಳವಣಿಗೆ ಸಾಮಾಜಿಕ ನ್ಯಾಯಕ್ಕೆ ಪೂರಕ


Team Udayavani, Feb 20, 2022, 6:05 AM IST

ಔಪಚಾರಿಕ ಉದ್ಯೋಗದ ಬೆಳವಣಿಗೆ ಸಾಮಾಜಿಕ ನ್ಯಾಯಕ್ಕೆ ಪೂರಕ

ಜನತೆಯ ಶಾಂತಿಯುತ ಮತ್ತು ಸಮೃದ್ಧ ಸಹ ಬಾಳ್ವೆಗೆ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ. ಸಾಮಾಜಿಕ ಅಸಮಾನತೆಯನ್ನು ತೊಡೆದುಹಾಕುವ ಪ್ರಯತ್ನಗಳಿಗೆ ಉತ್ತೇಜನ ನೀಡಿ, ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಆಶಯದಿಂದ ವಿಶ್ವಸಂಸ್ಥೆಯು 2009 ರಲ್ಲಿ ಪ್ರತೀ ವರ್ಷ ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸುವ ನಿರ್ಧಾರವನ್ನು ಕೈಗೊಂಡಿತು. ಉದ್ಯೋಗ, ಸಾಮಾಜಿಕ ರಕ್ಷಣೆ, ಸಾಮಾಜಿಕ ಸಂವಾದ ಮತ್ತು ಮೂಲಭೂತ ತಣ್ತೀಗಳು ಹಾಗೂ ಕೆಲಸದಲ್ಲಿ ಹಕ್ಕುಗಳ ಮೂಲಕ ಎಲ್ಲರಿಗೂ ನ್ಯಾಯಯುತ ಫ‌ಲಿತಾಂಶಗಳನ್ನು ಈ ಆಚರಣೆ ಖಾತರಿಪಡಿಸುತ್ತದೆ.

ಆರ್ಥಿಕ ಬಡತನ ಹಾಗೂ ಸಾಮಾಜಿಕ ಅಸಮಾನತೆ ಎಲ್ಲಿಯೇ ಇರಲಿ ಅದು ಅಭಿವೃದ್ದಿಗೆ ಮಾರಕ ಎಂಬ ಸತ್ಯದ ಅರಿವಿನ ಫ‌ಲವೇ ಈ ದಿನಾಚರಣೆ. ಪ್ರತೀ ಸಮಾಜದಲ್ಲಿಯೂ ಏಕತೆ, ಸಾಮರಸ್ಯ, ಸೌಹಾರ್ದತೆ, ಮಾನವ ಹಕ್ಕುಗಳ ನ್ಯಾಯವಿದ್ದರೆ ಅಭಿವೃದ್ಧಿ ಸುಲಭ ಸಾಧ್ಯ. ಇದರಿಂದ ದೇಶ ಮಾತ್ರವಲ್ಲದೆ ವಿಶ್ವವೇ ಪ್ರಗತಿಪಥದಲ್ಲಿರುತ್ತದೆ ಎಂಬುದು ವಿಶ್ವಸಂಸ್ಥೆಯ ಅಭಿಪ್ರಾಯ. ಈ ದಿನವು ಆದಾಯದ ಸಮಾನ ಹಂಚಿಕೆಯನ್ನು ಉತ್ತೇಜಿಸಲು ಮತ್ತು ಎಲ್ಲರಿಗೂ ಸಮಾನತೆ ಮತ್ತು ಈ ಮೂಲಕ ಸಂಪನ್ಮೂಲಗಳಿಗೆ ಹೆಚ್ಚಿನ ಪ್ರವೇಶವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ವಿಶ್ವ ಸಾಮಾಜಿಕ ನ್ಯಾಯ ದಿನವು ತಾರತಮ್ಯ, ಬಡತನ, ಲಿಂಗ ಸಮಾನತೆ ಮತ್ತು ಎಲ್ಲರಿಗೂ ನ್ಯಾಯ ಪ್ರವೇಶದಂತಹ ಸಮಸ್ಯೆಗಳನ್ನು ನಿಭಾಯಿಸುವ ಪ್ರಯತ್ನಗಳನ್ನು ಪ್ರೋತ್ಸಾಹಿಸುವ ಅಗತ್ಯವನ್ನು ಗುರುತಿಸುತ್ತದೆ. ಕುಟುಂಬದ ಆಸ್ತಿಯಂತೆ ಉದ್ಯೋಗ, ಶಿಕ್ಷಣ, ಆರ್ಥಿಕ, ರಾಜಕೀಯ ಅವಕಾಶಗಳು ಜಾತಿ-ಮತ ಭೇದಗಳಿಲ್ಲದೆ ದೇಶದ ಪ್ರಜೆಗಳಿಗೆ ಸಮಾನವಾಗಿ ಹಂಚಿಕೆಯಾಗಬೇಕು. ಅವಕಾಶವಂಚಿತರನ್ನು, ಅಂಚಿಗೆ ತಳ್ಳಲ್ಪಟ್ಟವರನ್ನು ಸಮಾನತೆ ಗಾಗಿ ಮೇಲೆ ತ್ತಲು ವ್ಯವಸ್ಥಿತ ಪ್ರಯತ್ನಗಳಾಗಬೇಕು. ಜಾಗತಿಕ ಒಗ್ಗಟ್ಟಿನ ಶಕ್ತಿ ಯನ್ನು ಎತ್ತಿ ಹಿಡಿಯುವುದೇ ಈ ದಿನದ ಮೂಲ ಧ್ಯೇಯವಾಗಿದೆ.

ಸಾಮಾಜಿಕ ಅನ್ಯಾಯದ ಕಲ್ಪನೆ: ಇತ್ತೀಚಿನ ವರ್ಷ ಗಳಲ್ಲಿ ಸಾಮಾಜಿಕ ಅನ್ಯಾಯದ ಕಲ್ಪನೆಯನ್ನು ಐದು ವಿಭಿನ್ನ ಘಟಕಗಳಾಗಿ ವರ್ಗೀಕರಿಸಲಾಗಿದೆ. ಮಾನ ವನ ಘನತೆ, ಸಾಮಾನ್ಯ ಒಳಿತಿನ ಪ್ರಾಮುಖ್ಯ, ಪರಸ್ಪರ ಹಕ್ಕುಗಳು ಮತ್ತು ಜವಾಬ್ದಾರಿಗಳು, ಕಾರ್ಮಿಕರ ಘನತೆ ಮತ್ತು ಕಾರ್ಮಿಕರ ಹಕ್ಕುಗಳು ಹಾಗೂ ಕೊನೆಯದಾಗಿ ಬಡವರು ಮತ್ತು ದುರ್ಬಲರಿಗೆ ಮೂಲಭೂತ ಆಯ್ಕೆಗಳು.

ನಾಲ್ಕು ತಣ್ತೀಗಳು: ಸಾಮಾಜಿಕ ನ್ಯಾಯ ಎಂಬ ಪದವನ್ನು ಮೊದಲು ಆರ್ಥಿಕ ಸಂಪನ್ಮೂಲಗಳಿಗೆ ಮಾತ್ರ ಅನ್ವಯಿಸಲಾಗಿತ್ತು. ಆದರೆ ಇಂದು ಇದು ಮಾನವ ಹಕ್ಕುಗಳೊಂದಿಗೆ ಹೊಂದಿ ಕೊಂಡಿದೆ. ಸಂಪನ್ಮೂಲಗಳ ವಿತರಣೆ, ಜನರನ್ನು ಹೇಗೆ ನಡೆಸಿಕೊಳ್ಳಲಾಗುತ್ತದೆ ಹಾಗೂ ಸೇವೆಗಳು ಮತ್ತು ಅವಕಾಶಗಳಿಗೆ ಪ್ರವೇಶ ಇವೆಲ್ಲವೂ ಸಾಮಾಜಿಕ ನ್ಯಾಯದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನ್ಯಾಯ, ಪ್ರವೇಶಾಧಿಕಾರ, ಭಾಗವಹಿಸುವಿಕೆ ಮತ್ತು ಹಕ್ಕುಗಳು ಸಾಮಾಜಿಕ ನ್ಯಾಯದ ನಾಲ್ಕು ಪರಸ್ಪರ ಸಂಬಂಧಿತ ತಣ್ತೀಗಳಾಗಿವೆ.

1. ಪ್ರವೇಶಾಧಿಕಾರ: ಜನರ ಬದುಕನ್ನು ಸಹ್ಯವಾಗಲು ಸೇವೆಗಳು ಮತ್ತು ಸಂಪನ್ಮೂಲಗಳನ್ನು ನೀಡಬೇಕು. ಇವುಗಳಲ್ಲಿ ಶಿಕ್ಷಣ, ಆರೋಗ್ಯ ರಕ್ಷಣೆ, ವಸತಿ ಮತ್ತು ಆಹಾರ ಸೇರಿವೆ. ಆದಾಗ್ಯೂ ಅನೇಕ ಸಮಾಜಗಳಲ್ಲಿ ಅಸಮಾನ ಪ್ರವೇಶವಿದೆ. ಇದಕ್ಕೆ ಶಿಕ್ಷಣ ಒಂದು ಪ್ರಮುಖ ಉದಾಹರಣೆಯಾಗಿದೆ. ಒಂದು ನಿರ್ದಿಷ್ಟ ವರ್ಗದ ಮಕ್ಕಳಿಗೆ ಮಾತ್ರ ಉತ್ತಮ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾದರೆ ಕಡಿಮೆ-ವೇತನದ ಉದ್ಯೋಗದಲ್ಲಿರುವವರ ಮಕ್ಕಳು ಉತ್ತಮ ಶಿಕ್ಷಣ ಸೌಲಭ್ಯದಿಂದ ಸಹಜವಾಗಿ ವಂಚಿತರಾಗುತ್ತಾರೆ. ಇದರ ಪರಿಣಾಮ ಈ ಮಕ್ಕಳು ಬೆಳೆಯಲು ಮತ್ತು ಕೆಲವೊಂದು ಉದ್ಯೋಗ ವಲಯಗಳನ್ನು ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಪ್ರತಿಯೊಬ್ಬರೂ ಸಮಾನ ಪ್ರವೇಶಾಧಿಕಾರ ವನ್ನು ಹೊಂದಿದಾಗ ಮಾತ್ರ ಸಮಾಜದ ಆರೋಗ್ಯ ಪೂರ್ಣ ಅಭಿವೃದ್ಧಿ ಸಾಧ್ಯ. 2. ನ್ಯಾಯ: ಸಾಮಾ ಜಿಕ ನ್ಯಾಯವು ಸಮಾನತೆಯ ಬಗ್ಗೆ ಮಾತ್ರ ಕಾಳಜಿ ವಹಿಸಿದಾಕ್ಷಣ ಅದು ನ್ಯಾಯಯುತ ಸಮಾಜಕ್ಕೆ ಕಾರಣವಾಗುವುದಿಲ್ಲ. ಹೆಚ್ಚು ಸಹಾಯದ ಅಗತ್ಯವಿ ರುವ ವ್ಯಕ್ತಿಗೆ ಅನುಕೂಲ ವಾಗುವಂತೆ ವ್ಯವಸ್ಥೆಯ ಒದಗಣೆ ಮುಖ್ಯವಾಗುತ್ತದೆ. 3. ಭಾಗವಹಿಸುವಿಕೆ: ಪ್ರತಿಯೊಬ್ಬರೂ ತಮ್ಮ ಕಾಳಜಿಯನ್ನು ವ್ಯಕ್ತಪಡಿ ಸಲು ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆ ಪ್ರಕ್ರಿ ಯೆಯಲ್ಲಿ ಪಾಲ್ಗೊಳ್ಳಲು ಸಮಾಜ ಅವಕಾಶ ನೀಡ ಬೇಕು. 4. ಮಾನವ ಹಕ್ಕುಗಳು: ಸಮಾಜವು ನ್ಯಾಯಯುತವಾಗಿರಲು, ಅದು ಪ್ರತಿಯೊಬ್ಬರ ನಾಗರಿಕ, ರಾಜಕೀಯ, ಆರ್ಥಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು.

ಅನೌಪಚಾರಿಕ ಉದ್ಯೋಗದ ಸವಾಲು: ಇತ್ತೀಚಿನ ದಶಕಗಳಲ್ಲಿ ಜಾಗತೀಕರಣ, ಡಿಜಿಟಲ್‌ ಆರ್ಥಿಕತೆ, ಔದ್ಯೋಗೀಕರಣ, ಹೊಸದಾಗಿ ಅವತರಿಸುತ್ತಿರುವ ಉದ್ಯಮಗಳು ಸಹಜವಾಗಿ ಹೊಸ ಅವಕಾಶ ಹಾಗೂ ಆಯಾಮವನ್ನು ಸೃಷ್ಟಿಸಿ ಸಂಚಲನ ಮೂಡಿಸಿದೆಯಾದರೂ ಎಲ್ಲರನ್ನು ಒಳಗೊಳ್ಳುವಿಕೆ ಹಾಗೂ ಸಾಮಾಜಿಕ ನ್ಯಾಯ ಒದಗಿಸಿ ಸುಸ್ಥಿರ ಬೆಳವಣಿಗೆಯನ್ನು ಸಾಕ್ಷಾತ್ಕಾರ ಗೊಳಿಸುವಲ್ಲಿ ಮಂದಗತಿಯನ್ನು ಕಾಣಬಹು ದಾಗಿದೆ. ಔದ್ಯೋಗೀಕರಣದ ಬೆಳವಣಿಗೆಗೆ ತಂತ್ರ ಜ್ಞಾನ ಮತ್ತೂಂದು ಆಯಾಮವನ್ನೇ ನೀಡಿದೆ. ವಿಶ್ವದ ಒಟ್ಟು ಉದ್ಯೋಗಿಗಳ ಸಂಖ್ಯೆಯಲ್ಲಿ ಶೇ. 60 ಕ್ಕಿಂತ ಹೆಚ್ಚು, ಅಂದರೆ 2 ಬಿಲಿಯನ್‌ ಮಂದಿ ಅನೌಪಚಾರಿಕ ಆರ್ಥಿಕತೆಯಲ್ಲಿ ತಮ್ಮ ಜೀವನೋ ಪಾಯವನ್ನು ಕಂಡುಕೊಳ್ಳುತ್ತಾರೆ. ಅನೌಪಚಾರಿಕ ಕೆಲಸಗಾರರು ಸಾಮಾನ್ಯವಾಗಿ ಯಾವುದೇ ರೀತಿಯ ಸಾಮಾಜಿಕ ರಕ್ಷಣೆ ಅಥವಾ ಉದ್ಯೋಗ ಸಂಬಂಧಿತ ಅನುಕೂಲತೆಗಳ ಕೊರತೆಯಿಂದಾಗಿ, ಔಪಚಾರಿಕ ಕೆಲಸಗಾರರಿಗೆ ಹೋಲಿಸಿದರೆ ಹೆಚ್ಚು ದುರ್ಬಲರಾಗಿರುತ್ತಾರೆ. ಔಪಚಾರಿಕ ಆರ್ಥಿಕತೆ ಯಲ್ಲಿ ಅವಕಾಶಗಳ ಕೊರತೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅನೌಪಚಾರಿಕ ಕ್ಷೇತ್ರವನ್ನು ಪ್ರವೇಶಿಸುತ್ತಾರೆ.

ಉದ್ಯಮ ಮತ್ತು ಮಾನವ ಅಭಿವೃದ್ಧಿ ಸ್ನೇಹಿ ಪರಿಸರ ನಮ್ಮದಾಗಲಿ: ಉದ್ಯಮದ ವಿಸ್ತರಣೆ ಮತ್ತು ಪ್ರಗತಿಗೆ ಪೂರಕವಾಗಬಲ್ಲ ಔಪಚಾರಿಕ ಉದ್ಯೋಗ ಉದ್ಯಮಸ್ನೇಹಿ ವಾತಾವರಣವನ್ನೂ ಸೃಷ್ಟಿಸಬಲ್ಲುದು. ಅಲ್ಪಾವಧಿಯಲ್ಲಿ ಅನೌಪಚಾರಿಕ ಉದ್ಯೋಗ, ಉದ್ಯಮವಲಯದಲ್ಲಿ ಬಹಳ ಸರಳ ಮತ್ತು ಲಾಭದಾಯಕ ಎಂದೆನಿಸಿದರೂ ದೀರ್ಘಾವಧಿಯ ಬೆಳವಣಿಗೆಗೆ ಮಾರಕ ಎಂಬ ಸತ್ಯವನ್ನು ಅರಿತುಕೊಳ್ಳಬೇಕಾಗಿದೆ.
ಸಾಮಾಜಿಕ ಸಮಾನತೆ, ಆರ್ಥಿಕತೆಯ ಸ್ಥಿರತೆ ಮತ್ತು ಸುಸ್ಥಿರ ಅಭಿವೃದ್ದಿಗೆ ಪೂರಕವಾದ ಔಪ ಚಾರಿಕ ಉದ್ಯೋಗದ ಪ್ರಮಾಣದ ಹೆಚ್ಚಳಕ್ಕೆ ಅನು ಕೂಲಕರವಾದ ಮಾನವ ಅಭಿವೃದ್ಧಿ ಸ್ನೇಹಿ ಪರಿಸರದ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿದೆ.

ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಉದ್ಯೋಗ, ಸಾಮಾಜಿಕ ಭದ್ರತೆ, ಲಿಂಗ ಸಮಾನತೆ ಮತ್ತು ಸಾಮಾಜಿಕ ಸಮಾನತೆಯ ಎಲ್ಲ ಹಕ್ಕುಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸುವುದು ಒಂದು ಬಹುಮುಖ್ಯ ಸವಾಲಾಗಿ ಉಳಿದಿದೆ. ಔಪಚಾರಿಕ ಆರ್ಥಿಕತೆಗೆ ಪರಿವರ್ತನೆಯನ್ನು ಉತ್ತೇಜಿಸುವ ಮೂಲಕ ಬಡತನ ಮತ್ತು ಅಸಮಾನತೆಯನ್ನು ಕಡಿಮೆ ಮಾಡಲು ಸಾಧ್ಯ. ಅನೌಪಚಾರಿಕದಿಂದ ಔಪಚಾರಿಕ ಉದ್ಯೋಗಕ್ಕೆ ಪರಿವರ್ತನೆ ಹೊಂದಲು ಅನುಕೂಲವಾಗುವಂತೆ ಅಗತ್ಯ ವಾತಾವರಣವನ್ನು ಸೃಷ್ಟಿಸಬೇಕಾಗಿದೆ.

-ಡಾ| ಎ.ಜಯ ಕುಮಾರ ಶೆಟ್ಟಿ, ಉಜಿರೆ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.