ನಳನಳಿಸಲಿದೆ ಕರ್ತವ್ಯಪಥ; ಇದರ ವಿಶೇಷ ಏನು? ಈ ಕುರಿತ ಒಂದು ನೋಟ ಇಲ್ಲಿದೆ.


Team Udayavani, Sep 7, 2022, 6:35 AM IST

ನಳನಳಿಸಲಿದೆ ಕರ್ತವ್ಯಪಥ; ಇದರ ವಿಶೇಷ ಏನು? ಈ ಕುರಿತ ಒಂದು ನೋಟ ಇಲ್ಲಿದೆ.

ಕೇಂದ್ರದ ನರೇಂದ್ರ ಮೋದಿ ಸರಕಾರದ ಅತ್ಯಂತ ನಿರೀಕ್ಷೆಯ ಸೆಂಟ್ರಲ್‌ ವಿಸ್ತಾ ಯೋಜನೆಯ ಒಂದು ಭಾಗ ಗುರುವಾರ ಉದ್ಘಾಟನೆಗೊಳ್ಳಲಿದೆ. ರಾಜಪಥ ಮಾರ್ಗವು ಕರ್ತವ್ಯ ಪಥವಾಗಿ ಬದಲಾಗಲಿದೆ. 101 ಎಕ್ರೆ ಜಾಗದಲ್ಲಿ ಹುಲ್ಲುಹಾಸು ಅಭಿವೃದ್ಧಿಯಾಗಿದೆ. ಕೆಂಪು ಬಣ್ಣದ ಗ್ರಾನೈಟ್‌ನಿಂದ 16.5 ಕಿ.ಮೀ. ನಡಿಗೆ ಪಥವನ್ನೂ ನಿರ್ಮಿಸಲಾಗಿದೆ. ಹಾಗಾದರೆ ಗುರುವಾರ ಉದ್ಘಾಟನೆಗೊಳ್ಳಲಿರುವುದು ಏನು? ಇದರ ವಿಶೇಷ ಏನು? ಈ ಕುರಿತ ಒಂದು ನೋಟ ಇಲ್ಲಿದೆ.

ನಾಳೆ ಪ್ರಧಾನಿಯಿಂದ ಉದ್ಘಾಟನೆ
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನವೀಕರಿಸಲಾದ “ಕರ್ತವ್ಯ ಪಥ’ (ಸೆಂಟ್ರಲ್‌ ವಿಸ್ತಾ ಅವೆನ್ಯೂ) ದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಪ್ರಧಾನಮಂತ್ರಿಗಳ ನೂತನ ಕಚೇರಿ ಸೇರಿದಂತೆ ಪ್ರಧಾನಿ ಕಾರ್ಯಾಲಯಗಳನ್ನು ಒಳಗೊಂಡಿರುವ “ಕರ್ತವ್ಯ ಪಥ’ ವನ್ನು ಇದೇ ಗುರುವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿ ದ್ದಾರೆ. “ಕರ್ತವ್ಯ ಪಥ’ದ ಸುತ್ತಮುತ್ತಲಿನ ಉದ್ಯಾನಗಳು ಹಚ್ಚಹಸುರಿನಿಂದ ಕಂಗೊಳಿಸುತ್ತಿವೆ. 101 ಎಕ್ರೆ ಜಾಗದಲ್ಲಿ ಹುಲ್ಲುಹಾಸು ಅಭಿವೃದ್ಧಿಪಡಿಸಲಾಗಿದೆ. ಈ ಆವರಣದಲ್ಲಿ ಒಟ್ಟು 4,087 ಮರಗಳು ಇವೆ. ಸುತ್ತಲಿನ ತೋಟಗಳಲ್ಲಿ ಗಿಡಗಳು ಮತ್ತು ಹುಲ್ಲನ್ನು ಬೆಳಸಲಾಗಿದೆ. ಹೊಸದಿಲ್ಲಿಯ ವಿಜಯ್‌ ಚೌಕ್‌ನಿಂದ ಇಂಡಿಯಾ ಗೇಟ್‌ವರೆಗಿನ ನವೀಕರಿಸಲಾದ ಮಾರ್ಗದಲ್ಲಿ ಪಥಿಕರಿಗೆ ಅನುಕೂಲವಾಗುವಂತೆ ನಾಲ್ಕು ಸುರಂಗ ಮಾರ್ಗಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ಕಾಲುವೆಗಳಿಗೆ ಅಡ್ಡಲಾಗಿ 16 ಶಾಶ್ವತ ಸೇತುವೆಗಳನ್ನು ನಿರ್ಮಿಸಲಾಗಿದೆ.

300 ಸಿಸಿ ಟಿವಿಗಳ ಅಳವಡಿಕೆ
ಇಡೀ ಆವರಣದಲ್ಲಿ 422 ಕೆಂಪು ಗ್ರಾನೈಟ್‌ನ ಆಸನಗಳನ್ನು ನಿರ್ಮಿ ಸಲಾಗಿದೆ. 300 ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. 1,117 ಕಾರುಗಳು ಮತ್ತು 35 ಬಸ್‌ಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾ ಗಿದೆ. 50 ಮಂದಿ ಭದ್ರತ ಸಿಬಂದಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿ ಸಲಿದ್ದಾರೆ. ಸುಮಾರು 1.1 ಲಕ್ಷ ಚದರ ಅಡಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಪಡಿಸಲಾದ ಮಾರ್ಗ ಹಾಗೂ ಸುತ್ತಮುತ್ತಲಿನ ಉದ್ಯಾನಗಳಲ್ಲಿ 422 ಕೆಂಪು ಗ್ರಾನೈಟ್‌ನ ಆಸನಗಳನ್ನು ನಿರ್ಮಿಸಲಾಗಿದೆ.

ನೇತಾಜಿ ಪ್ರತಿಮೆ ಅನಾವರಣ
ಸೆಂಟ್ರಲ್‌ ವಿಸ್ತಾ ಅವೆನ್ಯೂ ಉದ್ಘಾಟಿಸಲಿರುವ ಪ್ರಧಾನಿಯವರು ಅದರ ಭಾಗವಾಗಿ ಸುಭಾಷ್‌ ಚಂದ್ರ ಬೋಸ್‌ ಅವರ ಪ್ರತಿಮೆಯನ್ನೂ ಅನಾವರಣ ಗೊಳಿಸಲಿದ್ದಾರೆ. ವಿಶೇಷವೆಂದರೆ 28 ಅಡಿ ಉದ್ದದ ಈ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕೆತ್ತನೆ ಮಾಡಿದ್ದಾರೆ. ದೊಡ್ಡ ಕಪ್ಪು ಗ್ರಾನೈಟ್‌ ಒಂದರಲ್ಲಿ ಈ ಪ್ರತಿಮೆ ಕೆತ್ತನೆ ಮಾಡಲಾಗಿದೆ. ಕಳೆದ ಎರಡು ತಿಂಗಳುಗಳಿಂದ ದಿಲ್ಲಿಯಲ್ಲೇ ಇರುವ ಅರುಣ್‌ ಅವರು ನೇತಾಜಿ ಅವರ ಪ್ರತಿಮೆಗೆ ರೂಪ ಕೊಟ್ಟಿ ದ್ದಾರೆ. ಅರುಣ್‌ ಅವರು ಈ ಹಿಂದೆ ಕೇದಾರನಾಥದಲ್ಲಿ 12 ಅಡಿ ಉದ್ದದ ಶಂಕರಾಚಾರ್ಯ ಪ್ರತಿಮೆಯನ್ನೂ ನಿರ್ಮಿಸಿಕೊಟ್ಟು ಹೆಸರಾಗಿದ್ದರು.

ಎಲ್ಲಿಂದ ಎಲ್ಲಿಯವರೆಗೆ?
ವಿಜಯ್‌ ಚೌಕ್‌ನಿಂದ ಇಂಡಿಯಾ ಗೇಟ್‌ವರೆಗೆ ಮಾರ್ಗ ನವೀಕರಣ

16.5 ಕಿ.ಮೀ. ನಡಿಗೆ ಪಥ ನಿರ್ಮಾಣ
ಕರ್ತವ್ಯ ಪಥ ಮತ್ತು ಸುತ್ತಲೂ ಕೆಂಪು ಬಣ್ಣದ ಗ್ರಾನೈಟ್‌ನಿಂದ 16.5 ಕಿ.ಮೀ. ನಡಿಗೆ ಪಥ ನಿರ್ಮಿಸಲಾಗಿದೆ. ಮಾರ್ಗದುದ್ದಕ್ಕೆ ಹಾಗೂ ಉದ್ಯಾನವನಗಳಲ್ಲಿ 900ಕ್ಕೂ ಹೆಚ್ಚು ಬೀದಿ ದೀಪಗಳನ್ನು ಅಳವಡಿಸಲಾಗಿದೆ. 650 ಆಧುನಿಕ ನಾಮಫ‌ಲಕಗಳನ್ನು ಅಳವಡಿಸಲಾಗಿದೆ. 150 ಕಸದಬುಟ್ಟಿಗಳನ್ನು ಅಳವಡಿಸಲಾಗಿದೆ.

74 ಐತಿಹಾಸಿಕ ಕಂಬಗಳು ಮೇಲ್ದರ್ಜೆಗೆ
ಕರ್ಜವ್ಯ ಪಥದ ಉದ್ದಕ್ಕೂ 74 ಐತಿಹಾಸಿಕ ಕಂಬಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಮಾರ್ಗದುದ್ದಕ್ಕೂ ಇದ್ದ 1 ಸಾವಿರಕ್ಕೂ ಹೆಚ್ಚು ಕಾಂಕ್ರೀಟ್‌ ಬೋಲಾರ್ಡ್‌ಗಳನ್ನು ಬಿಳಿ ಮರಳುಗಲ್ಲಿನ ಬೋಲಾರ್ಡ್‌ಗಳಾಗಿ ಬದಲಾಯಿಸಲಾಗಿದೆ. ಅಲ್ಲದೆ ಈ ಹಿಂದೆ ಅಳವಡಿಸಿದ್ದ ಸರಪಳಿಯನ್ನು ತೆಗೆದುಹಾಕಿ ನೂತನ ಸರಪಳಿ ಅಳವಡಿಸಲಾಗಿದೆ.

20 ತಿಂಗಳು ಬಂದ್‌
ಈ ಯೋಜನೆಗಾಗಿ ಸೆಂಟ್ರಲ್‌ ವಿಸ್ತಾ ಅವೆನ್ಯೂವನ್ನು 20 ತಿಂಗಳುಗಳ ಕಾಲ ಬಂದ್‌ ಮಾಡಲಾಗಿತ್ತು. ಈಗ ರೆಡ್‌ಗ್ರಾನೈಟ್‌ ಒಳಗೊಂಡ ನಡಿಗೆಪಥವನ್ನು ನಿರ್ಮಿಸಲಾಗಿದೆ. ಕಣ್ತುಂಬ ಹಸುರು, ಕಾರಂಜಿಗಳು ಈ ಪ್ರದೇಶದ ಅಂದವನ್ನು ಹೆಚ್ಚಿಸಿವೆ. ವಿಜಯಚೌಕದಿಂದ ಇಂಡಿಯಾ ಗೇಟ್‌ವರೆಗೆ ಸಂಪೂರ್ಣವಾಗಿ ಮರು ಅಭಿವೃದ್ಧಿಪಡಿಸಲಾಗಿದೆ.

ಎಲ್ಲ ರಾಜ್ಯಗಳ ಆಹಾರ ಮಳಿಗೆ
ಸೆಂಟ್ರಲ್‌ ವಿಸ್ತಾ ಅವೆನ್ಯೂವನ್ನು ಉದ್ಘಾಟಿಸಿದ ಮೇಲೆ ಇಲ್ಲಿ ಎಲ್ಲ ರಾಜ್ಯಗಳ ಒಂದೊಂದು ಆಹಾರ ಮಳಿಗೆಗಳನ್ನು ಸ್ಥಾಪಿಸಲಾಗುತ್ತದೆ. ವೆಂಡಿಂಗ್‌ ಝೋನ್‌ ಅನ್ನು ಪ್ರತ್ಯೇಕವಾಗಿ ಗುರುತಿಸಲಾಗಿದೆ. ಆದರೆ ಇಲ್ಲಿ ಆಹಾರ ಖರೀದಿಸಿದವರು ಅಲ್ಲೇ ತಿನ್ನಬೇಕು. ಯಾವುದೇ ಕಾರಣಕ್ಕೂ ಹಸುರು ಹುಲ್ಲುಹಾಸಿನ ಮೇಲಕ್ಕೆ ತೆಗೆದುಕೊಂಡು ಹೋಗಬಾರದು. ಸೆ.9ರಿಂದಲೇ 40 ವೆಂಡರ್‌ಗಳು, ಐದು ವೆಂಡಿಂಗ್‌ ಝೋನ್‌ಗಳಲ್ಲೂ ಮಾರಾಟ ಆರಂಭಿಸಬಹುದು.

ನಿರ್ಬಂಧಗಳು ಇವೆ
ಈ ಮೊದಲು ಪ್ರವಾಸಿಗರು ಎಲ್ಲಿ ಬೇಕಾದರೂ ಎಗ್ಗಿಲ್ಲದೆ ಓಡಾಡಬಹುದಿತ್ತು. ಆದರೆ ಇನ್ನು ಮುಂದೆ ಸೆಂಟ್ರಲ್‌ ವಿಸ್ತಾ ಅವೆನ್ಯೂನಲ್ಲಿ ಓಡಾಡುವ ಮುನ್ನ ಎಚ್ಚರಿಕೆಯಿಂದ ಇರುವುದು ಒಳಿತು. ಯಾವುದೇ ಗಾರ್ಡನ್‌ ಏರಿಯಾಗಳಲ್ಲಿ ಓಡಾಡುವಂತಿಲ್ಲ. ಅಲ್ಲದೆ ಎರಡು ಕಾಲುವೆಗಳಲ್ಲಿ ಬೋಟಿಂಗ್‌ ವ್ಯವಸ್ಥೆ ಇದೆ- ಒಂದು ಕೃಷಿ ಭವನದ ಹಿಂಭಾಗ, ಮತ್ತೂಂದು ವಿಜ್ಞಾನ ಭವನದ ಬಳಿ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.