ಸರ್ವಪಕ್ಷ ಸಭೆಯ ಮೂಲಕ ಜಿ20 ಅಧ್ಯಕ್ಷತೆಗೆ ಶುಭಾರಂಭ


Team Udayavani, Dec 5, 2022, 6:10 AM IST

ಸರ್ವಪಕ್ಷ ಸಭೆಯ ಮೂಲಕ ಜಿ20 ಅಧ್ಯಕ್ಷತೆಗೆ ಶುಭಾರಂಭ

ಜಿ20 ದೇಶಗಳ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿರುವ ಭಾರತ ಮುಂದಿನ ವರ್ಷ ಸೆಪ್ಟಂಬರ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಕಾರ್ಯ ಸೂಚಿಯ ರೂಪಣೆಗಾಗಿ ಕೇಂದ್ರ ಸರಕಾರ ಸೋಮವಾರದಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಜಿ20 ಅಧ್ಯಕ್ಷತೆಯಂತಹ ಮಹತ್ತರ ಹೊಣೆಗಾರಿಕೆಯನ್ನು ನಿಭಾಯಿಸುವ ಸಂದರ್ಭದಲ್ಲಿ ದೇಶದಲ್ಲಿನ ಬಹುತೇಕ ಪ್ರಮುಖ ಪಕ್ಷಗಳ ನಾಯಕರನ್ನು ಕರೆದು ಸಮಾಲೋಚನೆ ನಡೆಸಿ ಕಾರ್ಯಸೂಚಿಯನ್ನು ಸಿದ್ಧಪಡಿಸಲು ಮುಂದಾಗಿರುವ ಕೇಂದ್ರ ಸರಕಾರದ ಈ ನಿರ್ಧಾರ ನಿಜಕ್ಕೂ ಶ್ಲಾಘನೀಯ.

ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಉಪಸ್ಥಿತ ರಿರಲಿದ್ದು, ವಿವಿಧ ಪಕ್ಷಗಳ ನಾಯಕರು ನೀಡಲಿರುವ ಸಲಹೆ ಸೂಚನೆಗಳನ್ನು ಆಲಿಸಲಿರುವರು. ಇವೆಲ್ಲವನ್ನೂ ಕ್ರೋಡೀಕರಿಸಿ ಜಿ20 ಶೃಂಗಸಭೆಯ ಕಾರ್ಯಸೂಚಿಯನ್ನು ಅಂತಿಮಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ.

ಭಾರತದ ಅಧ್ಯಕ್ಷತೆಯ ಅವಧಿಯೂ ಜಾಗತಿಕ ಸಮುದಾಯ ಎದು ರಿಸುತ್ತಿರುವ ಸವಾಲು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಜತೆ ಯಲ್ಲಿ ಎಲ್ಲ ರಾಷ್ಟ್ರಗಳೂ ಪ್ರಗತಿ ಪಥದಲ್ಲಿ ಮುನ್ನಡೆಯಲು ಪ್ರೇರಣಾ ದಾಯಿಯಾಗಲಿದೆ ಎಂದು ಅಮೆರಿಕ, ಬ್ರಿಟನ್‌, ಫ್ರಾನ್ಸ್‌ ಆದಿಯಾಗಿ ವಿಶ್ವದ ಬಹುತೇಕ ರಾಷ್ಟ್ರಗಳು ದೃಢ ವಿಶ್ವಾಸವನ್ನು ವ್ಯಕ್ತಪಡಿಸಿವೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ಸಶಕ್ತ ಮತ್ತು ಸಮೃದ್ಧ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಡೀ ಜಗತ್ತು ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ಎದು ರಿಸುತ್ತಿರುವಾಗ ಭಾರತ ಆರ್ಥಿಕವಾಗಿ ವಿಶ್ವದಲ್ಲಿಯೇ ಮುಂಚೂಣಿ ಯಲ್ಲಿದೆ. ಇಂಥ ಸುಸಂದರ್ಭದಲ್ಲಿಯೇ ಭಾರತ ಜಿ20 ರಾಷ್ಟ್ರಗಳ ಅಧ್ಯಕ್ಷತೆ ವಹಿಸಿರುವುದರಿಂದ ಸಹಜವಾಗಿಯೇ ಜಾಗತಿಕ ಸಮುದಾಯ ಭಾರತ ದತ್ತ ಆಶಾವಾದದ ದೃಷ್ಟಿಯನ್ನು ಹರಿಸಿದೆ.

ಈ ನಡುವೆ ಜಿ20 ರಾಷ್ಟ್ರಗಳ ಶೆರ್ಪಾಗಳ ಮೊದಲ ಸಭೆ ಉದಯ ಪುರದಲ್ಲಿ ನಡೆಯುತ್ತಿದೆ. ಜಿ20 ದೇಶಗಳ ನಾಯಕರ ವೈಯಕ್ತಿಕ ಪ್ರತಿನಿಧಿಗಳಾಗಿರುವ ಶೆರ್ಪಾಗಳು ಜಿ20 ಶೃಂಗಸಭೆಗೂ ಮುನ್ನ ಅಧ್ಯಕ್ಷತೆ ವಹಿಸಿರುವ ದೇಶದಲ್ಲಿ ಹಲವಾರು ಸುತ್ತಿನ ಸಮಾಲೋಚನೆಗಳನ್ನು ನಡೆಸಿ ಪರಸ್ಪರ ಬಾಂಧವ್ಯ ವೃದ್ಧಿಗೆ ಪೂರಕವಾದ ನಿರ್ಧಾರಗಳನ್ನು ಕೈಗೊಳ್ಳುವುದರ ಜತೆಯಲ್ಲಿ ಶೃಂಗಸಭೆಯ ಕಾರ್ಯಸೂಚಿಗೆ ಅಂತಿಮ ರೂಪುರೇಷೆ ನೀಡಲಿದ್ದಾರೆ. ಇದೇ ವೇಳೆ ದೇಶಕ್ಕೆ ಭೇಟಿ ನೀಡಲಿರುವ ಜಿ20 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳಿಗೆ ದೇಶದ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಪರಿಚಯಿಸಲು ಸರಕಾರ ತೀರ್ಮಾನಿಸಿದೆ. ಇದು ಪ್ರವಾಸೋದ್ಯಮದ ಪ್ರಗತಿಗೆ ಪೂರಕವಾಗಲಿದೆಯಲ್ಲದೆ ಇನ್ನಷ್ಟು ಅಭಿ ವೃದ್ಧಿ ಸಾಧ್ಯತೆಗಳ ಬಗೆಗೆ ವಿದೇಶಿ ನಾಯಕರೊಂದಿಗೆ ವಿಚಾರವಿಮರ್ಶೆ ನಡೆಸಲು ಅವಕಾಶ ಕಲ್ಪಿಸಿಕೊಡಲಿದೆ.

“ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬ ಧ್ಯೇಯವಾಕ್ಯದೊಂದಿಗೆ ಭಾರತ ತನ್ನ ಜಿ20 ಅಧ್ಯಕ್ಷತೆಯನ್ನು ನಿರ್ವ ಹಿಸಲಿದ್ದು ತನ್ಮೂಲಕ ಇಡೀ ವಿಶ್ವವನ್ನು ಒಂದು ಕುಟುಂಬದಂತೆ ಕಾಣುವ ಸದಾಶಯವನ್ನು ಪ್ರಚುರಪಡಿಸಲು ಮುಂದಾಗಿದೆ. ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಿ ಪ್ರತಿಪಾದಿಸಿದಂತೆ ಮಾನವ ಕೇಂದ್ರಿತ ಜಾಗತೀಕರಣದ ಹೊಸ ಮಾದರಿಯನ್ನು ಪರಿಚಯಿಸುವ ಸಂಕಲ್ಪವನ್ನು ಕಾರ್ಯರೂಪಕ್ಕೆ ತರಲು ಭಾರತ ಸಜ್ಜಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.