![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ರಷ್ಯಾ ಮೇಲೆ ಚಿನ್ನದ ಬಾಣ
Team Udayavani, Jun 27, 2022, 6:05 AM IST
![ರಷ್ಯಾ ಮೇಲೆ ಚಿನ್ನದ ಬಾಣ](https://www.udayavani.com/wp-content/uploads/2022/06/gold-7-620x347.jpg)
ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರಿಸಿರುವಂತೆಯೇ, ಜಿ7 ರಾಷ್ಟ್ರಗಳು ರಷ್ಯಾಗೆ ಮರ್ಮಾಘಾತ ನೀಡಲು ತಯಾರಿ ನಡೆಸಿವೆ. ಯಾವುದೇ ನಿರ್ಬಂಧಗಳಿಗೆ ಬಗ್ಗದ
ಪುತಿನ್ಗೆ ಪಾಠ ಕಲಿಸುವ ನಿಟ್ಟಿನಲ್ಲಿ ರಷ್ಯಾದ ಚಿನ್ನದ ಆಮದು ಮೇಲೆ ನಿರ್ಬಂಧ ಹೇರಲು ಜಿ7 ರಾಷ್ಟ್ರಗಳು ನಿರ್ಧರಿಸಿವೆ. ಮಂಗಳವಾರ ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ.
ಆದಾಯದ ಮೂಲ
ಇಂಧನದ ಬಳಿಕ ರಷ್ಯಾದ ಪ್ರಮುಖ ಆದಾ ಯದ ಮೂಲವೇ ಚಿನ್ನ. ಹಳದಿ ಲೋಹದ ರಫ್ತಿನಿಂದ ರಷ್ಯಾ ಪ್ರತೀ ವರ್ಷವೂ ಭಾರೀ ಪ್ರಮಾಣದ ಆದಾಯ ಗಳಿಸುತ್ತಿದೆ.
ಸಂಪತ್ತು ಚಿನ್ನದ ರೂಪಕ್ಕೆ ತಿರುಗಿತ್ತು
ಹಿಂದಿನಿಂದಲೂ ಹಳದಿ ಲೋಹವನ್ನು ಬಿಕ್ಕಟ್ಟಿನ ಸಂದರ್ಭದ “ಆಶ್ರಯ ಸರಕು’ ಎಂದೇ ಪರಿಗಣಿಸಲಾಗುತ್ತದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದಾಗ ಪಾಶ್ಚಿಮಾತ್ಯ ದೇಶಗಳು ಒಂದಾದ ಮೇಲೆ ಒಂದರಂತೆ ದಿಗ್ಬಂಧನವನ್ನು ಹೇರುತ್ತಾ ಬಂದವು. ಆಗ ರಷ್ಯಾದ ಶ್ರೀಮಂತರೆಲ್ಲ ತಮ್ಮಲ್ಲಿದ್ದ ಹಣವನ್ನು ಚಿನ್ನವಾಗಿ ಪರಿವರ್ತಿಸುವ ಮೂಲಕ ಸಂಪತ್ತನ್ನು ಮುಚ್ಚಿಟ್ಟಿದ್ದರು. ಈಗ ಚಿನ್ನದ ಆಮದಿನ ಮೇಲಿನ ನಿರ್ಬಂಧವು ಅವರಿಗೆ ದೊಡ್ಡ ಮಟ್ಟದ ಪೆಟ್ಟು ನೀಡಲಿದೆ.
ಈಗಾಗಲೇ ನಿರ್ಬಂಧದ ಬಿಸಿ?
ಈಗಾಗಲೇ ಪಾಶ್ಚಿಮಾತ್ಯ ದೇಶಗಳು ರಷ್ಯಾದ ಬ್ಯಾಂಕ್ಗಳು, ಇಂಧನ ಕಂಪೆನಿಗಳು, ವಿಮಾನಯಾನ ಕಂಪೆನಿ ಗಳು, ಹೈಟೆಕ್, ಗೃಹೋಪಯೋಗಿ ವಸ್ತುಗಳ ಮೇಲೆ ನಿರ್ಬಂಧ ಹೇರಿವೆ.
ಪರಿಣಾಮಗಳೇನು?
– ಚಿನ್ನದ ಆಮದು ನಿಷೇಧದಿಂದ ರಷ್ಯಾದ ಪ್ರಮುಖ ಆದಾಯದ ಮೂಲಕ್ಕೇ ಪೆಟ್ಟು ಬಿದ್ದಂತೆ
– ರಷ್ಯಾದ ಚಿನ್ನವು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಪ್ರವೇಶ ಪಡೆಯಲು ಸಾಧ್ಯವಾಗುವುದಿಲ್ಲ
– ಜಾಗತಿಕ ಆರ್ಥಿಕತೆಯಲ್ಲಿ ಮತ್ತೆ ರಷ್ಯಾ ಏಕಾಂಗಿಯಾಗಲಿದೆ
– ರಷ್ಯಾದ ಸಿರಿವಂತರು ದೊಡ್ಡಮಟ್ಟದ ನಷ್ಟ ಅನುಭವಿಸಲಿದ್ದಾರೆ
ಚಿನ್ನದ ಮೇಲಿನ ನಿಷೇಧದಿಂದ ರಷ್ಯಾದ ಕೋಟ್ಯಧಿಪತಿ ಉದ್ಯಮಿಗಳ ಮೇಲೆ ನೇರ ದಾಳಿ ನಡೆಸಿದಂತಾಗುತ್ತದೆ. ಪುತಿನ್ನ ಯುದ್ಧ ತಂತ್ರದ ಹೃದಯಕ್ಕೆ ಚೂರಿ ಇರಿದಂತಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…](https://www.udayavani.com/wp-content/uploads/2024/07/Kar1-150x109.jpg)
Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…
![Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್](https://www.udayavani.com/wp-content/uploads/2024/07/General2-150x109.jpg)
Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್
![Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ](https://www.udayavani.com/wp-content/uploads/2024/07/ponavaram-150x98.jpg)
Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ
![Budget 2024; paperless tax system soon](https://www.udayavani.com/wp-content/uploads/2024/07/nudg-150x83.jpg)
Budget 2024; ಶೀಘ್ರ ಕಾಗದ ರಹಿತ ತೆರಿಗೆ ವ್ಯವಸ್ಥೆ
![Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!](https://www.udayavani.com/wp-content/uploads/2024/07/envo-150x100.jpg)
Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.