Gowri-Ganesha Chathurthi ಹಬ್ಬ ನಮಗೆ ಸಾತ್ವಿಕ ಆನಂದ ನೀಡುತ್ತದೆ


Team Udayavani, Sep 18, 2023, 2:36 PM IST

20–chowthi

ಗೌರಿ ಹಬ್ಬವನ್ನು ಭಾದ್ರಪದ ಮಾಸದ ಶುದ್ಧ ತೃತೀಯ ದಿನದಂದು, ಅಂದರೆ ಗಣೇಶ ಚತುರ್ಥಿಯ ಒಂದು ದಿನದ ಮೊದಲು ಆಚರಿಸಲಾಗುತ್ತದೆ.

ಗೌರಿ ಎಂದರೆ ತೇಜಸ್ಸಿನಿ, ಜ್ಞಾನಮಹಿ. ಹೆಣ್ಣುಮಕ್ಕಳಿಗೆ ವಿಶೇಷವಾಗಿ ಗೌರಿಮಾತೆಯ ಆದರ್ಶವನ್ನು ಹೇಳುವುದುಂಟು.  ಗೌರಿ  ಮಾತೆಯು, ಶಿವನನ್ನು ಒಲಿಸಿಕೊಳ್ಳಲು “ಪಂಚಾಗ್ನಿ” ಅಂತಹ ಘೋರ‌ ತಪಸ್ಸನ್ನು  ಆಚರಿಸಿದಳು. ಕಾಳಿದಾಸ ಹೇಳುವಂತೆ, ಮಹಾಋಷಿಗಳು ಆಕೆಯ ಬಳಿ ಬಂದು ಆಕೆ ಮಾಡುವ ತಪಸ್ಸನ್ನು ಕಲಿತುಹೋಗುತ್ತಿದ್ದರು.

ಈ ರೀತಿಯ ತಪಸ್ಸಿನಿಂದ ಶಿವನನ್ನು ಒಲಿಸಿಕೊಂಡ ಗೌರಿ ಶಿವನ ಪತ್ನಿಯಾದಳು. ತಾನು ರಾಜಕುಮಾರಿಯಾಗಿದ್ದರೂ, ತನ್ನ ಆಡಂಬರದ ಜೀವನವನ್ನೂ ಕಳಚಿ, ತನ್ನ ಪತಿಗೆ ಸಮಾನವಾದಳು. ಆಕೆ ಸಂದರ್ಭಕ್ಕೆ ತಕ್ಕಂತೆ ಮಾತೆಯಾಗಿ, ಪರಾಕ್ರಮಿಯಾಗಿ, ರಾಜರಾಜೇಶ್ವರಿಯಾಗಿ, ದುಷ್ಟಸಂಹಾರದ‌ ಸಂದರ್ಭದಲ್ಲಿ‌ ಕಾಳಿಯಾಗಿ, ದುರ್ಗೆಯಾಗಿ, ಚಾಮುಂಡೇಶ್ವರಿಯು‌ ಆಗಿದ್ದಾಳೆ.

ತನ್ನ ಮಕ್ಕಳ ಪಾಲಿಗೆ ಆಕೆಯ ಪ್ರೇಮ ವರ್ಣಿಸಲಾಗದು. ಈ ಹಬ್ಬವನ್ನು ವಿವಾಹಿತ  ಮಹಿಳೆಯರು ಸಂತೋಷದ ವೈವಾಹಿಕ ಜೀವನಕ್ಕಾಗಿ ತಾಯಿ ಗೌರಿಯನ್ನು ಪೂಜಿಸುತ್ತಾರೆ. ಗೌರಿ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡುತ್ತಾರೆ. ಉತ್ತರಪ್ರದೇಶ, ರಾಜಸ್ಥಾನದಲ್ಲಿ‌ ಇದನ್ನು ‘ಹರ್ತಾಲಿಕ ವ್ರತ’ ಎನ್ನುವರು. ಗೌರಿ ಹಬ್ಬದಲ್ಲಿ ಪಾರ್ವತಿಯ ಅವತಾರ. ಗೌರಿದೇವಿಯ ಸಲುವಾಗಿ ಭಕ್ತರು ಸ್ವರ್ಣಗೌರಿ ವ್ರತ ಆಚರಿಸುತ್ತಾರೆ.

ಗಣೇಶ‌ ಚತುರ್ಥಿಯು ಬಹು ನೀರಿಕ್ಷಿತ ಹಬ್ಬಗಳಲ್ಲಿ ಒಂದು. ಗಣೇಶ ಹಬ್ಬವನ್ನು ಭಾದ್ರಪದ ಮಾಸದ ಶುದ್ಧ ಚತುರ್ಥಿಯಂದು ಆಚರಿಸಲಾಗುತ್ತದೆ. ಈ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಅತ್ಯಂತ ಪ್ರಿಯವಾದ ಹಬ್ಬ.

ಈ ಹಬ್ಬವನ್ನು ಸ್ವಾತಂತ್ರ ಹೋರಾಟಗಾರ ಲೋಕಮಾನ್ಯ ತಿಲಕ ಅವರು ಬ್ರಿಟಿಷರ ವಿರುದ್ದ ದೇಶವನ್ನು ಒಗ್ಗೂಡಿಸುವ ಸಲುವಾಗಿ ಪ್ರಾರಂಭಿಸಿದರು. ಈ ದಿನದಂದೆ ತಂದೆ ಶಿವನಿಂದ ತುಂಡರಿಸಲ್ಪಟ್ಟ ಗಣೇಶನ ಮುಖದ ಜಾಗದಲ್ಲಿ ಆನೆಯ ಮುಖವನ್ನು ಸೇರಿಸಲಾಗಿ ಈ ಮೂಲಕ ಗಣೇಶನು ‘ಗಜಾನನ’ ಆದನು.

ಶಿವ ಮತ್ತು ಪಾರ್ವತಿಯ ಮಗನಾದ ಗಣೇಶನು ಅದೃಷ್ಟ, ಸಮೃದ್ಧಿ, ಬುದ್ದಿವಂತಿಕೆಯ ದೇವರು. ಚೌತಿಯಂದು ಭಕ್ತಾದಿಗಳು ತಮ್ಮ ಮನೆಗಳಲ್ಲಿ, ಊರುಗಳಲ್ಲಿ ಗಣಪನ ಮೂರ್ತಿ ಮಾಡಿ ಪೂಜಿಸುತ್ತಾರೆ.

ಕೆಲವು ಕಡೆಗಳಲ್ಲಿ 11 ದಿನಗಳ ಕಾಲ ಈ ಹಬ್ಬ ನಡೆಯುತ್ತದೆ. ಇದು ಪ್ರಾಣಪ್ರತಿಷ್ಟೆಯಿಂದ ಆರಂಭವಾಗಿ ವಿಸರ್ಜನೆ ಮಾಡುವ ಮೂಲಕ ಕೊನೆಗೊಳ್ಳುತ್ತದೆ. ವಿಸರ್ಜನೆಯಂದು ಗಣೇಶನು ತನ್ನ ಸ್ಥಳವಾದ ಕೈಲಾಸ ಪರ್ವತಕ್ಕೆ ಹಿಂತಿರುಗುತ್ತಾನೆ ಎಂದು ನಂಬಲಾಗಿದೆ.

ಹೀಗೆ ಗೌರಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ವಿಭಿನ್ನ ಪ್ರದೇಶಗಳಿಗೆ ತಕ್ಕಂತೆ ಆಚರಣೆ ಭಿನ್ನವಾಗುತ್ತದೆ.

-ಭಾಗ್ಯಶ್ರೀ

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.