ಜಿಎಸ್‌ಟಿ : ಸತತ 5 ತಿಂಗಳುಗಳಲ್ಲಿ ಲಕ್ಷ ಕೋ. ರೂ. ಗೂ ಹೆಚ್ಚು ಸಂಗ್ರಹ


Team Udayavani, Mar 26, 2021, 6:45 AM IST

ಜಿಎಸ್‌ಟಿ : ಸತತ 5 ತಿಂಗಳುಗಳಲ್ಲಿ ಲಕ್ಷ ಕೋ. ರೂ. ಗೂ ಹೆಚ್ಚು ಸಂಗ್ರಹ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಈ ತಿಂಗಳು ಹೊಸ ದಾಖಲೆಯನ್ನು ಸ್ಥಾಪಿಸುವ ನಿರೀಕ್ಷೆ ಇದೆ. ಪ್ರಸಕ್ತ ಮಾರ್ಚ್‌ ತಿಂಗಳಿನಲ್ಲಿ ಜಿಎಸ್‌ಟಿ ಸಂಗ್ರಹವು 1.25 ಲಕ್ಷ ಕೋ. ರೂ.ಗಳಿಂದ 1.30 ಲಕ್ಷ ಕೋ. ರೂ. ತಲುಪುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಯಾವ ವರ್ಷ ಎಷ್ಟೆಷ್ಟು? :

ದೇಶದಲ್ಲಿ 2017ರ ಜುಲೈ ತಿಂಗಳಿನಲ್ಲಿ ಜಿಎಸ್‌ಟಿ ಜಾರಿಗೆ ಬಂದಿತ್ತು. 2017ರ ಜುಲೈ ಮತ್ತು 2018ರ ಮಾರ್ಚ್‌ ನಡುವೆ ಒಟ್ಟು 7.40 ಲಕ್ಷ ಕೋ. ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. 2018ರ ಎಪ್ರಿಲ್‌ ಮತ್ತು 2019ರ ಮಾರ್ಚ್‌ ನಡುವೆ 11.77 ಲಕ್ಷ ಕೋ. ರೂ. ಸಂಗ್ರಹವಾದರೆ, 2019ರ ಎಪ್ರಿಲ್‌ನಿಂದ 2020ರ ಮಾರ್ಚ್‌ ನಡುವೆ 12.22 ಲಕ್ಷ ಕೋ. ರೂ. ಸಂಗ್ರಹವಾಗಿತ್ತು. 2020ರ ಎಪ್ರಿಲ್‌ನಿಂದ 2021ರ ಫೆಬ್ರವರಿ ನಡುವೆ 10.22 ಲಕ್ಷ ಕೋ. ರೂ. ಸಂಗ್ರಹವಾಗಿದೆ.

1 ಲಕ್ಷ ಕೋ. ರೂ. ಗಳಿಗೂ ಹೆಚ್ಚು ಸಂಗ್ರಹ :

ಜಿಎಸ್‌ಟಿ ಸಂಗ್ರಹವು ಕಳೆದ 5 ತಿಂಗಳುಗಳಿಂದ ನಿರಂತರವಾಗಿ 1 ಲಕ್ಷ ಕೋ. ರೂ.ಗಳಿಗಿಂತ ಹೆಚ್ಚು ಸಂಗ್ರಹವಾಗುತ್ತಿದೆ. 2021ರ ಜನವರಿಯಲ್ಲಿ ಅತೀ ಹೆಚ್ಚು ಅಂದರೆ 1,19,847 ಕೋ. ರೂ. ಸಂಗ್ರಹವಾಗಿದೆ.

ಏನು ಕಾರಣ? :

ಕಳೆದ 6 ತಿಂಗಳುಗಳಲ್ಲಿ ಅಂದರೆ ಕೋವಿಡ್ ಸಮಯದಲ್ಲಿ ಜಿಎಸ್‌ಟಿ ತಂಡ ಮತ್ತು ಹಣಕಾಸು ಸಚಿವಾಲಯವು ಬೃಹತ್‌ ಪ್ರಮಾಣದಲ್ಲಿ ಜಿಎಸ್‌ಟಿ ಕಳ್ಳತನವನ್ನು ತಡೆಗಟ್ಟಿದೆ. ಇದು ಜಿಎಸ್‌ಟಿ ಸಂಗ್ರಹದಲ್ಲಿ ಗಮನಾರ್ಹ ಏರಿಕೆಯಾಗಲು ಪ್ರಮುಖ ಕಾರಣವಾಗಿದೆ. ಕಳೆದ 6 ತಿಂಗಳುಗಳಲ್ಲಿ ದೇಶಾದ್ಯಂತ ಜಿಎಸ್‌ಟಿಗೆ ಸಂಬಂಧಿಸಿದಂತೆ ಹಲವು ದಾಳಿಗಳು ನಡೆದಿವೆ. ಈ ವೇಳೆ ನಕಲಿ ಕಂಪೆನಿಗಳು ಮತ್ತು ಬಿಲ್‌ಗ‌ಳನ್ನು ಪತ್ತೆ ಹಚ್ಚಲಾಗಿದೆ. ಇಂತಹ ವಂಚನೆಗಳನ್ನು ತಡೆಯಲು ತನ್ನ ಐಟಿ ವ್ಯವಸ್ಥೆಯನ್ನು ಬಲಪಡಿಸಿದ್ದು, ಈ ತಂಡ ಪ್ರತೀ ರಾಜ್ಯದ ಬೃಹತ್‌ ಕಂಪೆನಿಗಳ ಮೇಲೆ ನಿಗಾ ಇಡುವ ಜತೆಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.

5 ತಿಂಗಳಲ್ಲಿ ಸತತ 1 ಲ.ಕೋ.ರೂ. :

ಜಿಎಸ್‌ಟಿ ಸಂಗ್ರಹವು ಸತತ 5 ತಿಂಗಳು 1 ಲಕ್ಷ ಕೋಟಿಗಿಂತ ಹೆಚ್ಚಿರುವುದು ಇದೇ ಮೊದಲಾಗಿದೆ. ಅತೀ ಹೆಚ್ಚು ಸಂಗ್ರಹ ಈ ವರ್ಷದ ಜನವರಿಯಲ್ಲಿ ಆಗಿತ್ತು. ಜಿಎಸ್‌ಟಿ ಸಂಗ್ರಹವು ಅಕ್ಟೋಬರ್‌ನಲ್ಲಿ 1.05 ಲಕ್ಷ ಕೋಟಿ ರೂ., ನವೆಂಬರ್‌ನಲ್ಲಿ 1.04 ಲಕ್ಷ ಕೋ. ರೂ., ಡಿಸೆಂಬರ್‌ನಲ್ಲಿ 1.15 ಲಕ್ಷ ಕೋ. ರೂ., ಜನವರಿಯಲ್ಲಿ 1.19ಲಕ್ಷ ಕೋ. ರೂ. ಮತ್ತು ಫೆಬ್ರವರಿಯಲ್ಲಿ 1.13 ಲಕ್ಷ ಕೋ. ರೂ. ಆಗಿತ್ತು.

ಫೆಬ್ರವರಿಯಲ್ಲಿ ಪ್ರತೀ ದಿನ 4,035 ಕೋ. ರೂ. :

ಫೆಬ್ರವರಿ ತಿಂಗಳ ಅಂಕಿ-ಅಂಶವನ್ನು ತೆಗೆದುಕೊಂಡರೆ ಪ್ರತೀ ದಿನ ಸರಾಸರಿ 4,035 ಕೋ. ರೂ. ಸಂಗ್ರಹವಾಗಿದೆ. ಆದರೆ ಫೆಬ್ರವರಿಯಲ್ಲಿ 28 ದಿನಗಳಷ್ಟೇ ಇರುವುದರಿಂದ  ಈ ಆಧಾರದ ಮೇಲೆ ನಾವು 31 ದಿನಗಳನ್ನು ಲೆಕ್ಕಹಾಕಿದರೆ ಮಾರ್ಚ್‌ನಲ್ಲಿ ಈ ಸಂಖ್ಯೆ 1.25 ಲಕ್ಷ ಕೋ.ರೂ.ಗಳಾಗಲಿವೆ ಎಂದು ಅಂದಾಜಸಿಲಾಗಿದೆ. ಆದರೆ ಈ ಮೊತ್ತಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಜಿಎಸ್‌ಟಿ ಸಂಗ್ರಹವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.