ಸೂರ್ಯ ಸಿಡಿಯುತ್ತಿದ್ದಾನೆ!


Team Udayavani, Feb 14, 2023, 6:05 AM IST

ಸೂರ್ಯ ಸಿಡಿಯುತ್ತಿದ್ದಾನೆ!

ವಿಜ್ಞಾನಿಗಳ ಊಹೆಗೂ ಮೀರಿ ಈಗ ಕೆಲವು ದಿನಗಳಿಂದ ಸೂರ್ಯ ಸಿಡಿಯುತ್ತಿದ್ದಾನೆ. ಫೆ. 7ರಿಂದ ಇದೀಗ ಎರಡು ಗಜಗಾತ್ರದ ಸೂರ್ಯಕಲೆಗಳನ್ನು ಗಮನಿಸಿ ಬೃಹತ್‌ ಸಿಡಿತಗಳನ್ನು ಊಹಿಸಿ ಮುಂಬರಬಹುದಾದ ಸಮಸ್ಯೆಗಳ ಬಗ್ಗೆ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

ಅತ್ಯಾಶ್ಚರ್ಯ, ಮೊನ್ನೆ ಕಂಡ ಸೂರ್ಯನ ಕಲೆ ಎಆರ್‌3213 ಫೆಬ್ರವರಿ 11 ಪುನಃ ಸಿಡಿದು ಸೌರ ಜ್ವಾಲೆಯನ್ನು ಬಿತ್ತರಿಸಿದೆ. ಕೊತಕೊತ ಕುದಿವ ಪ್ಲಾಸ್ಮಾದ ಸೂರ್ಯ ಉತ್ತರ ಧ್ರುವದ ಸಮೀಪ ಸಿಡಿಯುತ್ತಲೇ ಇದ್ದಾನೆ.

ಫೆಬ್ರವರಿ 9ರಂದು ಬೃಹತ್‌ ಸೂರ್ಯನ ಕಲೆ ಕಾಣಿಸಿಕೊಂಡ ಬೆನ್ನಲ್ಲೇ ಸೂರ್ಯ ಉತ್ತರ ಧ್ರುವ ಸಮೀಪ ಕಾಂತೀಯ ಸುಂಟರಗಾಳಿಯೊಂದಿಗೆ ಸಿಡಿಯುತ್ತಿರುವುದನ್ನು ನಾಸಾ ಗಮನಿಸಿದೆ. ಈ ಅಯಸ್ಕಾಂತೀಯ ಸುಳಿ ಇಡೀ ಧ್ರುವಕ್ಕೆ ಸುತ್ತಿದಂತೆ ಕಂಡ ವಿಜ್ಞಾನಿಗಳು ಸೂರ್ಯನ ಚಿಪ್ಪೇ ಸಿಡಿದಂತೆ ಎಂದು ವರ್ಣಿಸಿದ್ದಾರೆ.

ಈ ರೀತಿಯ ಕಾಂತೀಯ ನರ್ತನ ಸೂರ್ಯನಿದ ಹೊರನಡೆದಾಗ ವಿದ್ಯುತ್‌ ಕಂತೀಯ ಕಿರಣಗಳು ಚಿಮ್ಮುತ್ತವೆ. ಇವನ್ನು ಸೌರಮಾರುತಗಳು ಎನ್ನುವರು. ಭೂಮಿಯಲ್ಲಿದ್ದವರಿಗೆ ಇದು ಸೂರ್ಯಕಲೆಯಾಗಿ ಕಾಣಿಸುತ್ತದೆ.

ಕಾಂತೀಯ ಸುಳಿಯಲ್ಲಿ ವಿದ್ಯುತ್‌ ಕಾಂತೀಯ ಕಿರಣಗಳ ಪ್ರವಾಹದಲ್ಲಿ ರೇಡಿಯೋ ಅಲೆಗಳಿಂದ ಪ್ರಾರಂಭಿಸಿ ಶಕ್ತಿಯುತ ಗಾಮಾ ಅಲೆಗಳ ವರೆಗೆ ಎಲ್ಲವೂ ಇರಬಹುದು. ದಶದಿಶೆಗೆ ಚಿಮ್ಮುವ ಇವಕ್ಕೆ ಸನ್‌ ಫ್ಲೇರ್‌ ಸೂರ್ಯ ಮಾರುತ ಎನ್ನುವರು. ಇವುಗಳಲ್ಲಿ ಶಕ್ತಿಯುತ ಅತಿನೇರಳೆ ಹಾಗೂ ಎಕ್ಸ್ ಕಿರಣಗಳನ್ನು ಎಂ ಹಾಗೂ ಎಕ್ಸ್ ಸನ್‌ ಫ್ಲೇರ್‌ ಎನ್ನುವರು. ಎಮ್‌ ಸೂರ್ಯ ಮಾರುತಗಳಿಂದ ಭೂಮಿಯಲ್ಲಿ ಕೆಲ ಅವ್ಯವಸ್ಥೆಗಳು ನಡೆದರೆ ಎಕ್ಸ್ ಮಾರುತಗಳು ಗಂಡಾಂತರಕಾರಿ.

ಈ ಕೆಲವು ದಿನಗಳ ವಿದ್ಯಮಾನದಲ್ಲಿ ಎಂ ಕಿರಣಗಳು ಚೆಲ್ಲಿವೆ. ಹಾಗೆ ಎಕ್ಸ್ ಕಿರಣಗಳೂ ಬರಬಹುದೆಂದು ಅಂದಾಜಿಸಿದ್ದಾರೆ. ಇವುಗಳಿಂದ ಭೂಮಿಯ ಕೆಲ ಭಾಗಗಳಲ್ಲಿ ವಿದ್ಯುತ್‌ ನಲ್ಲಿ ವ್ಯತ್ಯಯ, ಗ್ಲೋಬಲ್‌ ಇಂಟರ್ನೆಟ್‌ಗಳ ಮೇಲೆ ರೇಡಿಯೊ ಅಲೆಗಳು ಸೇಲ್ಫೋನ್, ಮೊಬೈಲ್‌ ಸಿಗ್ನಲ್‌ಗ‌ಳ ಮೇಲೂ ಈ ಕೆಲ ದಿನ ಪರಿಣಾಮ ಬೀರಬಹುದೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಕಾಂತೀಯ ಕಿರಣಗಳ ಪ್ರವಾಹದ ಹಿಂದಿಂದ ಮೆರವಣಿಗೆಯೋಪಾದಿಯಲ್ಲಿ ಶಕ್ತಿಯುತಕಣಗಳ ಸಿಡಿತ ಸಂಭವಿಸುತ್ತದೆ. ಇವನ್ನು ಕೊರೋನಲ್‌ ಮಾಸ್‌ ಇಜೆಕ್ಸನ್‌ ಎನ್ನುವರು.
ಭೂಮಿಯ ಧ್ರುವ ಪ್ರದೇಶಗಳಲ್ಲಿ ಅತಿಯಾದ ಬಣ್ಣಬಣ್ಣದ ಧ್ರುವ ಪ್ರಭೆ ಯಥೇತ್ಛವಾಗಿ ಕಾಣಿಸಬಹುದು.

ಸುಮಾರು 11 ವರ್ಷಕ್ಕೊಮ್ಮೆ ಸೂರ್ಯ ಕಲೆಗಳ ಆವರ್ತನ ನಡೆಯುತ್ತಿದೆ. ಈಗ 25ನೇ ಆವರ್ತನ ಡಿಸೆಂಬರ್‌ 2019ರಿಂದ ಪ್ರಾರಂಭ. ಪ್ರತೀ 11 ವರ್ಷಗಳಲ್ಲಿ ಕೆಲ ವರ್ಷ ಅತೀ ಕಡಿಮೆ ಕಲೆಗಳು, ಕೆಲ ವರ್ಷ ಅತೀ ಹೆಚ್ಚು ಕಲೆಗಳನ್ನು ಗಮನಿಸುತ್ತಲೇ ಇದ್ದಾರೆ. ಈ ಸಾರಿಯ 25ನೇ ಆವರ್ತದಲ್ಲಿ 2023ರಿಂದ 2026ರ ವರೆಗೆ ಹೆಚ್ಚಿಗೆ ಸೌರಕಲೆಗಳನ್ನು ಕಾಣಬಹುದೆಂದು ಅಂದಾಜಿಸಿದ್ದರು. ಹಾಗೆಯೇ ಈಗ ನಡೆಯುತ್ತಿರುವ 25ನೇ ಸೈಕಲ್‌ ಹೆಚ್ಚೇನೂ ವಿಶೇಷವಿರುವುದಿಲ್ಲವೆಂದು ವಿಜ್ಞಾನಿಗಳು ಅಂದಾಜಿಸಿದ್ದರು. ಆದರೆ ಸೂರ್ಯ, ಈಗ ಅದೆಲ್ಲವನ್ನೂ ತಲೆಕೆಳಗೆ ಮಾಡಿಸಿ ಈ 25ನೇ ಸೈಕಲ್‌ ತುಂಬಾ ವಿಚಿತ್ರವೆಂಬಂತೆ ಸೂರ್ಯ ವಿಜ್ಞಾನಿಗಳನ್ನು ದಿಗ½$›ಮೆಗೊಳಿಸುತ್ತ ಸಿಡಿಯುತ್ತಿದ್ದಾನೆ.

ಸೂರ್ಯನ ಕಾಂತೀಯ ಧ್ರುವಗಳು ಭೂಮಿಯಂತೆ ಯಾವಾಗಲೂ ಒಂದೇಕಡೆ ಸ್ಥಿರವಲ್ಲ. 11 ವರ್ಷಕ್ಕೊಮ್ಮೆ ಕಾಂತೀಯ ಧ್ರುವಗಳು ಉತ್ತರದಿಂದ ದಕ್ಷಿಣಕ್ಕೆ ಪರಿವರ್ತನೆ ಗೊಳಗಾಗುತ್ತವೆ. ಇದಕ್ಕೆ ಸೂರ್ಯನ ಸಂಕೀರ್ಣ ಅಯಸ್ಕಾಂತೀಯ ವ್ಯವಸ್ಥೆಯೇ ಕಾರಣ. ಈಗ ನಡೆಯುತ್ತಿರುವ ಮಾಮೂಲಿನಂತಿರದ ವಿಚಿತ್ರ ಅಯಸ್ಕಾಂತೀಯ ರುದ್ರ ನರ್ತನಕ್ಕೆ ಕಾರಣ ತಿಳಿಯಬೇಕಿದೆಯಷ್ಟೇ. ಇದೊಂದು ಸೂರ್ಯನ ವಿಚಿತ್ರ ವಿಸ್ಮಯ.

– ಡಾ| ಎ.ಪಿ. ಭಟ್‌, ಉಡುಪಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.