ಚೀನಗೆ ಅಗ್ನಿ ಪರೀಕ್ಷೆ 


Team Udayavani, Oct 29, 2021, 6:20 AM IST

ಚೀನಗೆ ಅಗ್ನಿ ಪರೀಕ್ಷೆ 

ಕಳೆದ ಆಗಸ್ಟ್‌ನಲ್ಲಿ ನೆರೆಯ ಚೀನ ದೇಶ ಹೈಪರ್‌ಸಾನಿಕ್‌ ಕ್ಷಿಪಣಿಯೊಂದನ್ನು ಪರೀಕ್ಷೆ ನಡೆಸಿದೆ. ಇದನ್ನು ಭಾರತವನ್ನೇ ಗುರಿಯಾಗಿಸಿಕೊಂಡು ನಡೆಸಲಾಗಿದೆ ಎಂದು ರಕ್ಷಣ ವಲಯದ ತಜ್ಞರ ಅಭಿಪ್ರಾಯ. ಇದಕ್ಕೆ ಪ್ರತಿಯಾಗಿ ಭಾರತವೂ ಬುಧವಾರ ಅಗ್ನಿ (ಐಸಿಬಿಎಂ) –  5 ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ.

5,000 ಕಿ.ಮೀ. ವ್ಯಾಪ್ತಿ :

ಕಳೆದ ಮೂರು ವರ್ಷಗಳ ಹಿಂದೆಯೇ ಅಗ್ನಿ-5 ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷೆ ನಡೆಸಿತ್ತು. ಆದರೆ ಬುಧವಾರ ಅಗ್ನಿ-5ನ ಅಪ್‌ಡೇಟ್‌ ವರ್ಷನ್‌ ಆಗಿರುವ ಇಂಟರ್‌ಕಾಂಟಿನೆಂಟಲ್‌ ಬ್ಯಾಲೆಸ್ಟಿಕ್‌ ಮಿಸೈಲ್‌(ಐಸಿಬಿಎಂ) ಅನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ಇದು 5 ಸಾವಿರ ಕಿ.ಮೀ. ದೂರದ ವರೆಗೆ ಹೋಗಬಲ್ಲದು. ಹಾಗೆಯೇ ಅಣ್ವಸ್ತ್ರ ಸಿಡಿತಲೆಯನ್ನು ಹೊತ್ತು ಸಾಗುವ ಸಾಮರ್ಥ್ಯ ಹೊಂದಿದೆ.

ಅಗ್ನಿ-5ನ ಮಹತ್ವವೇನು? :

ಅಗ್ನಿ-5 ಕ್ಷಿಪಣಿ ನೆಲದಿಂದ ನೆಲಕ್ಕೆ ಚಿಮ್ಮುವ ಕ್ಷಿಪಣಿಯಾಗಿದೆ. ನಿರ್ದಿಷ್ಟವಾಗಿ 5,000 ಕಿ.ಮೀ. ದೂರದಲ್ಲಿರುವ ಟಾರ್ಗೆಟ್‌ಗೆ ಹೋಗಿ ಅಪ್ಪಳಿಸಲಿದೆ. 5,000 ಕಿ.ಮೀ. ಎಂದರೆ, ಇಡೀ ಚೀನ ದೇಶದ ಯಾವುದೇ ಭಾಗವನ್ನು ಅಗ್ನಿ-5 ತಲುಪಬಲ್ಲುದು. ಅದರಲ್ಲೂ ಐಸಿಬಿಎಂ 5,500 ಕಿ.ಮೀ. ದೂರದ ವರೆಗೂ ಸಾಗಬಲ್ಲುದು. ಹೀಗಾಗಿಯೇ ಇದು ಆಫ್ರಿಕಾ ಮತ್ತು ಯೂರೋಪ್‌ನ ಯಾವುದೇ ಭಾಗವನ್ನು ಬೇಕಾದರೂ ಮುಟ್ಟಬಲ್ಲುದು.

8,000 ಕಿ.ಮೀ. ದೂರಕ್ಕೆ? :

ಕೇಂದ್ರ ಸರಕಾರ ಹೇಳಿರುವ ಪ್ರಕಾರ, ಈ ಕ್ಷಿಪಣಿ 5,000 ಕಿ.ಮೀ. ದೂರಕ್ಕೆ ಸಾಗಬಲ್ಲುದು. ಆದರೆ ಕೆಲವು ವರದಿಗಳ ಪ್ರಕಾರ, ಈ ಕ್ಷಿಪಣಿಯು 8,000 ಕಿ.ಮೀ. ದೂರದ ಟಾರ್ಗೆಟ್‌ಗೂ ಅಪ್ಪಳಿಸಬಲ್ಲುದು. ಅಲ್ಲದೇ, 1,500 ಕೆ.ಜಿ. ಅಣ್ವಸ್ತ್ರ ಸಿಡಿತಲೆಯನ್ನೂ ಹೊತ್ತೂಯ್ಯಬಲ್ಲುದು.

ಭಾರತಕ್ಕೆ ಏಕೆ ಇದು ಮಹತ್ವದ್ದು? :

ಅಗ್ನಿ-5 ಕ್ಷಿಪಣಿ ಭಾರತದ ರಕ್ಷಣ ವ್ಯವಸ್ಥೆಗೆ ಅತ್ಯಗತ್ಯವಾಗಿ ಬೇಕಾಗಿರುವಂಥದ್ದು. ಇದನ್ನು ರಸ್ತೆ ಅಥವಾ ರೈಲು ಫ್ಲಾಟ್‌ಫಾರ್ಮ್ನಿಂದಲೂ ಲಾಂಚ್‌ ಮಾಡಬಹುದು. ಅಲ್ಲದೇ ಅತ್ಯಂತ ಶೀಘ್ರವಾಗಿ ಎಲ್ಲಿ ಬೇಕೋ ಅಲ್ಲಿಗೆ ತೆಗೆದುಕೊಂಡು ಹೋಗಿ ನಿಯೋಜನೆ ಮಾಡಬಹುದು. ಜತೆಗೆ ಐಸಿಬಿಎಂ ತಂತ್ರಜ್ಞಾನ ಅಳವಡಿಕೆಯಾಗಿರುವ ಕ್ಷಿಪಣಿ ಹೊಂದಿರುವ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಒಂದು ಎಂಬ ಹೆಗ್ಗಳಿಕೆಗೂ ಪಾತ್ರವಾದಂತಾಗಿದೆ. ಸದ್ಯ ಈ ತಂತ್ರಜ್ಞಾನದ ಕ್ಷಿಪಣಿಗಳು ಅಮೆರಿಕ, ರಷ್ಯಾ ಮತ್ತು ಚೀನದಲ್ಲಿ ಮಾತ್ರ ಇವೆ.

ಐಸಿಬಿಎಂ ಅಂದರೇನು? :

ಇಂಟರ್‌ಕಾಂಟಿನೆಂಟಲ್‌ ಬ್ಯಾಲೆಸ್ಟಿಕ್‌ ಮಿಸೈಲ್‌ನಲ್ಲಿ ಪ್ಯಾರಾಬೋಲಿಕ್‌ ಟ್ರೆಜೆಕ್ಟರಿ ವ್ಯವಸ್ಥೆ ಇದೆ. ಅಂದರೆ ಇದು ಅತ್ಯಂತ ವೇಗವಾಗಿ ಮೇಲಕ್ಕೆ ಹೋಗಿ ನಿಖರವಾದ ಸ್ಥಳದಲ್ಲೇ ಮೇಲಿನಿಂದ ಕೆಳಗೆ ಇಳಿಯು ತ್ತದೆ. ಅಂದರೆ ನಾವು ಚೆಂಡೊಂದನ್ನು ಎಸೆದಾಗ ಅದು ಮೇಲೆ ಹೋಗಿ, ಕೆಳಗೆ ಬಂದು ಬೀಳುವ ಹಾಗೆ. ಅಷ್ಟೇ ಅಲ್ಲ, ಇದರ ವೇಗವೂ ಹೆಚ್ಚಾಗಿರುತ್ತದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.