ಸೇನೆಗೆ ಆತ್ಮ ಬಲ


Team Udayavani, Jan 13, 2023, 6:10 AM IST

tdy-31

ಪರ್ವತ ಯುದ್ಧ ಇನ್ನು ಸುಲಭ : ಜ.10ರಂದು ರಕ್ಷಣ ಖರೀದಿ ಸಮಿತಿ ಹೊಸತಾಗಿ 4,276 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ ನೀಡಿತ್ತು. ಅವುಗಳ ಪೈಕಿ ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ರಕ್ಷಣ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಅಲ್ಪ ದೂರ ವ್ಯಾಪ್ತಿಯ ಕ್ಷಿಪಣಿ ರಕ್ಷಣ ವ್ಯವಸ್ಥೆ – ವೆರಿ ಶಾರ್ಟ್‌ ರೇಂಜ್‌ ಏರ್‌ಡಿಫೆನ್ಸ್‌ ಸಿಸ್ಟಮ್‌- ವಿಎಸ್‌ಎಚ್‌ಒಆರ್‌ಎಡಿ- ವಿಎಸ್‌ಹಾರ್ಡ್‌. ಭೂಸೇನೆ ಮತ್ತು ಭಾರತೀಯ ನೌಕಾದಳಕ್ಕೆ ಇದು ಲಭ್ಯವಾಗಲಿದೆ.

ಅಗತ್ಯತೆ ಏನು?:

ಚೀನ ಸೇನೆ ಪದೇ ಪದೆ ಗಡಿ ಅತಿಕ್ರಮ ನಡೆಸುತ್ತಿರುವುದು ಮತ್ತು ಪೂರ್ವ ಲಡಾಖ್‌ನಲ್ಲಿ ತಂಟೆ ಎಬ್ಬಿಸಿದ ಬಳಿಕ ಕೇಂದ್ರ ಸರಕಾರ ರಷ್ಯಾ ಬಳಿ ಇರುವ ಅದೇ ಮಾದರಿ ಕ್ಷಿಪಣಿ ವ್ಯವಸ್ಥೆ ಹೊಂದುವುದರ ಬಗ್ಗೆ ಮಾತುಕತೆ ನಡೆಸಿತ್ತು. ಅದರ ಒಟ್ಟು ಮೌಲ್ಯ 1.5 ಬಿಲಿಯನ್‌ ಡಾಲರ್‌. ವಿಎಸ್‌ಹಾರ್ಡ್‌ ಯೋಜನೆಯ ಅನ್ವಯ ಸದ್ಯ ಇರುವ ರಷ್ಯಾ ನಿರ್ಮಿತ ಇಗ್ಲಾ- ಎಂ(Igla-M ) ವ್ಯವಸ್ಥೆಯನ್ನು ಮೇಲ್ದರ್ಜೆಗೆ ಏರಿಸಲು ಮುಂದಾಗಿತ್ತು.  ದೇಶೀಯವಾಗಿಯೇ ಅದನ್ನು ಏಕೆ ಉತ್ಪಾದನೆ ಮಾಡಬಾರದು ಎಂಬ ಕಾರಣಕ್ಕಾಗಿ ರಷ್ಯಾದಿಂದ ಅದರ ಖರೀದಿ ಪ್ರಸ್ತಾವ ಕೈಬಿಟ್ಟು  ಭಾರತದಲ್ಲಿಯೇ ಉತ್ಪಾದನೆ ಎಂಬ ಧ್ಯೇಯವಾಕ್ಯದ ಅನ್ವಯ ವಿಎಸ್‌ಹಾರ್ಡ್‌ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.

ಅದರ ವಿಶೇಷವೇನು? :

ಲಡಾಖ್‌ನಂಥ ಪರ್ವತ ಶ್ರೇಣಿಗಳಲ್ಲಿ ಸದ್ಯ ಇರುವ ಕ್ಷಿಪಣಿ ವ್ಯವಸ್ಥೆಯನ್ನು ಹೊತ್ತುಕೊಂಡು ಹೋಗುವುದು ಯೋಧರಿಗೂ ಸವಾಲಿನ ಕೆಲಸವೇ. ವಿಎಸ್‌ಹಾರ್ಡ್‌ ವ್ಯವಸ್ಥೆಯಲ್ಲಿ ಕ್ಷಿಪಣಿಯನ್ನು ಯೋಧರಿಗೆ ಸುಲಭವಾಗಿ ಹೊತ್ತುಕೊಂಡು (ಮ್ಯಾನ್‌ ಪೋರ್ಟೆಬಲ್‌ ಏರ್‌ಡಿಫೆನ್ಸ್‌ ಸಿಸ್ಟಮ್‌- MANPAD)ಹೋಗಲು ಸಾಧ್ಯ. ಡಿಆರ್‌ಡಿಒ ಹೈದರಾಬಾದ್‌ನಲ್ಲಿ ಹೊಂದಿರುವ ರಿಸರ್ಚ್‌ ಸೆಂಟರ್‌ ಇಮಾರತ್‌ ಅದರ ಬಗ್ಗೆ ಅಧ್ಯಯನ, ಸಂಶೋಧನೆ ನಡೆಸಿತ್ತು. ಜತೆಗೆ ಅದನ್ನು ಉತ್ಪಾದಿಸುವ ನಿಟ್ಟಿನಲ್ಲಿ ದೇಶದ ಕೈಗಾರಿಕ ಸಂಸ್ಥೆಗಳ ಜತೆಗೆ ಸಹಭಾಗಿತ್ವ ಹೊಂದಲಿದೆ. 2022 ಸೆಪ್ಟಂಬರ್‌ನಲ್ಲಿ 2 ಬಾರಿ ಅದರ ಪರೀಕ್ಷೆಯೂ ನಡೆದಿತ್ತು.  ಈ ಕ್ಷಿಪಣಿ ಎರಡು ಹಂತದ ಮೋಟರ್‌ ವ್ಯವಸ್ಥೆಯಿಂದ ಕೂಡಿದೆ. ಜತೆಗೆ ಏಕೀಕೃತ ಏವಿಯಾನಿಕ್ಸ್‌, ಪ್ರತಿಕ್ರಿಯೆ ನಿಯಂತ್ರಣ ವ್ಯವಸ್ಥೆ (Reaction Control System) ಯನ್ನು ಒಳಗೊಂಡಿದೆ.

ಪಾಕಿಸ್ಥಾನ ಮತ್ತು ಚೀನ ನಮ್ಮ ದೇಶದ ರಕ್ಷಣ ವ್ಯವಸ್ಥೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ತಲೆನೋವು ತರುವ ರಾಷ್ಟ್ರಗಳೇ. ಬಾಂಧವ್ಯ ವೃದ್ಧಿಗಾಗಿ ಕೇಂದ್ರದಲ್ಲಿ ಇರುವ ಸರಕಾರಗಳು ಎಷ್ಟೇ ಸ್ನೇಹಹಸ್ತ ಚಾಚಿದ್ದರೂ ಅಂತಿಮವಾಗಿ ಆ ಎರಡು ರಾಷ್ಟ್ರಗಳು ಯಾವ ರೀತಿ ಪ್ರತಿಕ್ರಿಯೆ ನೀಡಿವೆ ಎನ್ನುವುದು ಬಹಿರಂಗ ಸತ್ಯ. ಅದರಲ್ಲೂ ವಿಶೇಷವಾಗಿ ಗಾಲ್ವಾನ್‌ ಗಲಾಟೆ, ಡೋಕ್ಲಾಂ ಕಿಡಿಗೇಡಿತನದ ಬಳಿಕ ಚೀನ ವಿರುದ್ಧ ಸರ್ವ ಸನ್ನದ್ಧತೆಯನ್ನು ಹೊಂದಿರುವುದು ಅನಿವಾರ್ಯವೇ ಆಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ರಕ್ಷಣ ಖರೀದಿ ಮಂಡಳಿ ಒಂದು ತಿಂಗಳಿಗಿಂತಲೂ ಕಡಿಮೆ ಅವಧಿಯಲ್ಲಿ 88,604 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಅನುಮತಿ ನೀಡಿದೆ. ಆಮದು ನಿರ್ಣಯಕ್ಕಿಂತ ದೇಶೀಯವಾಗಿ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಆದ್ಯತೆ ಕೊಡಲಾಗಿದೆ ಎನ್ನುವುದು ಗಮನಾರ್ಹ.

ಯಾವಾಗ ಲಭ್ಯ? :

ರಕ್ಷಣ ಸಚಿವಾಲಯದ ಸದ್ಯದ ನಿರೀಕ್ಷೆಯ ಪ್ರಕಾರ ಇನ್ನು ನಾಲ್ಕು ವರ್ಷಗಳ ಬಳಿಕ ಸೇನೆಗೆ ಲಭ್ಯ.

ಸಿಗಲಿದೆ ಹೆಲಿನಾ ಶಕ್ತಿ:

ಹೆಲಿಕಾಪ್ಟರ್‌ನಿಂದ ಶತ್ರು ರಾಷ್ಟ್ರಗಳ ಯುದ್ಧ ಟ್ಯಾಂಕ್‌ಗಳನ್ನು ಉಡಾಯಿಸಲು ಸಾಧ್ಯವಿರುವ “ಹೆಲಿನಾ’ ಕ್ಷಿಪಣಿ ಶಕ್ತಿ ಭೂಸೇನೆಗೆ ಸಿಗಲಿದೆ. ಇದರ ಜತೆಗೆ ಸುಧಾರಿತ ಹಗುರ ಹೆಲಿಕಾಪ್ಟರ್‌ (ಎಎಲ್‌ಎಚ್‌) ಕೂಡ ಲಭ್ಯವಾಗಲಿದೆ. ಏಳು ಕಿಮೀ ದೂರದಲ್ಲಿ ಇರುವ ಯುದ್ಧ ಟ್ಯಾಂಕ್‌ಗಳನ್ನು ಸಮರ್ಥವಾಗಿ ಉಡಾಯಿಸುವ ಸಾಮರ್ಥ್ಯವನ್ನು ಅದು ಹೊಂದಿದೆ. 2022 ಎ.11ರಂದು ಕೇಂದ್ರ ಸರಕಾರ ನೀಡಿದ್ದ ಮಾಹಿತಿ ಪ್ರಕಾರ ರಾಜಸ್ಥಾನದ ಪೋಖಾÅಣ್‌ನಲ್ಲಿ ಅದರ ಯಶಸ್ವಿ ಪರೀಕ್ಷೆಯೂ ನಡೆದಿತ್ತು. ಡಿಆರ್‌ಡಿಒ ಹೈದರಾಬಾದ್‌ ಅದರ ಬಗ್ಗೆ ಸಂಶೋಧನೆ ಕೈಗೆತ್ತಿಕೊಂಡು ಅದನ್ನು ಅಭಿವೃದ್ಧಿಪಡಿಸಿದೆ.

ಇನ್ನೊಂದು ಹೆಸರು ಧ್ರುವಾಸ್ತ್ರ:

“ಹೆಲಿನಾ’ಕ್ಕೆ ಧ್ರುವಾಸ್ತ್ರ ಎಂಬ ಮತ್ತೂಂದು ಹೆಸರೂ ಇದೆ. ಸರ್ವ ಋತು ಬಳಕೆಗೆ ಯೋಗ್ಯವಾಗಿದೆ ಮತ್ತು ರಾತ್ರಿ ಅಥವಾ ಹಗಲು ಎಂಬ ಭೇದವಿಲ್ಲದೆ ಯುದ್ಧ ಸಂದರ್ಭದಲ್ಲಿ ಪ್ರಯೋಗಿಸಲು ಸಾಧ್ಯ. ಭೂಸೇನೆ ಮತ್ತು ವಾಯುಸೇನೆಯ ಬಳಕೆಗಾಗಿ ಅಭಿವೃದ್ಧಿಗೊಳಿಸಲಾಗಿದೆ.

ಬ್ರಹ್ಮೋಸ್‌ ಮಿಸೈಲ್‌ ಲಾಂಚರ್‌:

ಭಾರತೀಯ ನೌಕಾಪಡೆಗಾಗಿ ಬ್ರಹ್ಮೋಸ್‌ ಕ್ಷಿಪಣಿ ಉಡಾಯಿಸುವ ವ್ಯವಸ್ಥೆ ಲಭ್ಯವಾಗಲಿದೆ. ಜತೆಗೆ ಶಸ್ತ್ರಾಸ್ತ್ರ ನಿಯಂತ್ರಣ ವ್ಯವಸ್ಥೆಯೂ ಸಿಗಲಿದೆ. 2010ರ ಎಪ್ರಿಲ್‌ನಲ್ಲಿ ಸೇವೆಗೆ ಲಭ್ಯವಾಗಿರುವ ಶಿವಾಲಿಕ್‌ ಯುದ್ಧ ನೌಕೆಗಳ ಉಪಯೋಗಕ್ಕಾಗಿ ಆ ಕ್ಷಿಪಣಿ ಹಾಗೂ ಶಸ್ತ್ರಾಸ್ತ್ರ ನಿಯಂತ್ರಣ ವ್ಯವಸ್ಥೆ  ಖರೀದಿಸಲಾಗಿದೆ.

ಇವೆಲ್ಲ ಯಾವಾಗ ಲಭ್ಯ?:

ಕೇಂದ್ರ ಸರಕಾರ ಅನುಮೋದನೆ ನೀಡಿದ್ದರೂ ಅದು ಸೇವೆಗೆ ಲಭ್ಯವಾಗಲು ಇನ್ನೂ ಆರು ವರ್ಷಗಳು ಬೇಕು.

ಒಂದು ತಿಂಗಳ ಅವಧಿಯಲ್ಲಿ 2ನೇ ಬಾರಿ :

2022 ಡಿ.26ರಂದು ಡಿಎಸಿ 84 ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡುವುದರ ಬಗ್ಗೆ ಅನುಮೋದನೆ ನೀಡಿತ್ತು. ಭೂಸೇನೆಯ ಆರು, ಭಾರತೀಯ ವಾಯುಪಡೆಯ ಆರು, ಭಾರತೀಯ ನೌಕಾದಳದ ಹತ್ತು, ಭಾರತೀಯ ಕರಾವಳಿ ರಕ್ಷಣ ದಳದ ಎರಡು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿತ್ತು.

ಏನಿದು ರಕ್ಷಣ ಖರೀದಿ ಸಮಿತಿ?:

ದೇಶದ ರಕ್ಷಣ ಪಡೆಗಳಿಗೆ ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡುವುದಿದ್ದರೆ ಈ ಸಮಿತಿಯೇ ನಿರ್ಧಾರ ಮಾಡುತ್ತದೆ. ಬಂಡವಾಳ ಹೂಡಿಕೆ, ಶಸ್ತ್ರಾಸ್ತ್ರ ಖರೀದಿ, ತಂತ್ರಜ್ಞಾನ ವರ್ಗಾವಣೆಗಳಿಗೆ ಸಂಬಂಧಿಸಿದ ನಿರ್ಣಯಗಳನ್ನು ಈ ಸಮಿತಿ- ಡಿಎಸಿ ಡಿಫೆನ್ಸ್‌  ಎಕ್ವಿಸಿಶನ್‌ ಕಮಿಟಿ ಅಥವಾ ರಕ್ಷಣ ಖರೀದಿ ಸಮಿತಿ ಮಾಡುತ್ತದೆ. ರಕ್ಷಣ ಸಚಿವರು ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ರಕ್ಷಣ ಖಾತೆ ಸಹಾಯಕ ಸಚಿವ, ಭೂಸೇನೆ, ನೌಕಾಪಡೆ, ಐಎಎಫ್ ಮುಖ್ಯಸ್ಥ, ರಕ್ಷಣ ಕಾರ್ಯದರ್ಶಿ, ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ರಕ್ಷಣ ಉತ್ಪಾದನೆ ವಿಭಾಗದ ಕಾರ್ಯದರ್ಶಿ, ಏಕೀಕೃತ ರಕ್ಷಣ ಪಡೆಗಳ ಪ್ರಧಾನ ಕಚೇರಿಯ (ಐಡಿಎಸ್‌) ಮುಖ್ಯಸ್ಥ, ಖರೀದಿ ವಿಭಾಗದ ಮಹಾನಿರ್ದೇಶಕ ಸದಸ್ಯರಾಗಿರುತ್ತಾರೆ. ಏಕೀಕೃತ ರಕ್ಷಣ ಪಡೆಗಳ ಉಪ ಮುಖ್ಯಸ್ಥರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಕಾರ್ಗಿಲ್‌ ಯುದ್ಧದ ಬಳಿಕ ರಕ್ಷಣ ಪಡೆಗಳ ಆಧುನೀಕರಣಕ್ಕೆ ಸಲಹೆ ಮಾಡಿದ್ದ ಸಮಿತಿಯ ಶಿಫಾರಸುಗಳಲ್ಲಿ ರಕ್ಷಣ ಖರೀದಿ ಸಮಿತಿ ರಚನೆಯೂ ಒಂದಾಗಿತ್ತು.

ಏನೇನು ಖರೀದಿ?:

ಭೂಸೇನೆಗಾಗಿ “ಫ್ಯೂಚರಿಸ್ಟಿಕ್‌ ಇನ್‌ಫ್ಯಾಂಟ್ರಿ ಕಾಂಬ್ಯಾಟ್‌ ವೆಹಿಕಲ್‌- ಎಫ್ಐಸಿವಿ’ ಖರೀದಿ. ವಿಶೇಷವಾಗಿ ಚೀನ ಜತೆಗೆ ಉಂಟಾಗಿರುವ ಗಡಿ ತಕರಾರು ನಿಭಾಯಿಸುವ ನಿಟ್ಟಿನಲ್ಲಿ ಅದು ನೆರವಾಗಲಿದೆ. ಇದು ಹೊಸ ಮಾದರಿಯ ಯುದ್ಧ ಟ್ಯಾಂಕ್‌ ಆಗಿರಲಿದ್ದು, ದೇಶೀಯವಾಗಿ ಟಾಟಾ ಗ್ರೂಪ್‌ ಉತ್ಪಾದಿಸಲಿದೆ. ಮೌಂಟಿಂಗ್‌ ಗನ್‌ ಸಿಸ್ಟಮ್‌ ಕೂಡ ಲಭ್ಯವಾಗಲಿದೆ.

ಐಎಎಫ್ಗಾಗಿ ಹೊಸ ಮತ್ತು ಆಧುನಿಕ ತಂತ್ರಜ್ಞಾನದಿಂದ ಒಡಗೂಡಿದ ಕ್ಷಿಪಣಿ ವ್ಯವಸ್ಥೆ, ದೂರ ಸ್ಥಳದಲ್ಲಿ ಉಡಾಯಿಸಬಹುದಾದ ನಿಯಂತ್ರಿತ ಬಾಂಬ್‌ ವ್ಯವಸ್ಥೆ, ಸುಧಾರಿತ ನಿಗಾ ಏರ್ಪಾಡುಗಳು.

ಭಾರತೀಯ ನೌಕಾಪಡೆಗಾಗಿ ಅತ್ಯಾಧುನಿಕ ಹಾರ್ಡ್‌ವೇರ್‌ ವ್ಯವಸ್ಥೆ. ಶತ್ರು ರಾಷ್ಟ್ರಗಳ ಹಡಗುಗಳನ್ನು ಧ್ವಂಸಗೊಳಿಸಲು ಬೇಕಾಗಿರುವ ಕ್ಷಿಪಣಿಗಳು, ಬಹೂಪಯೋಗಿ ಹಡಗುಗಳು, ಸ್ವಯಂಚಾಲಿತವಾಗಿ ಚಲಿಸುವ ಮತ್ತು ಒಂದು ಹಂತದ ಆಘಾತ ಸಹಿಸಿ ಕಡಲು ಸಂರಕ್ಷಣೆಗೆ ಬೇಕಾಗುವ ನಾವೆಗಳ ಖರೀದಿ.

ಸದಾಶಿವ ಕೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.