Israel-Hamas ಘರ್ಷಣೆ: ದ್ವಿ ರಾಷ್ಟ್ರ ನೀತಿಯೊಂದೇ ಪರಿಹಾರ?: ಏನಿದು ನೀತಿ?

ಗಾಜಾ ಪಟ್ಟಿಯಿಂದ ಒಕ್ಕಲೆಬ್ಬಿಸುವುದಕ್ಕೆ ವಿರೋಧ

Team Udayavani, Oct 25, 2023, 6:40 AM IST

ISREL

ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ಸಂಘರ್ಷ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ದಾಳಿ ಮುಂದುವರಿಸಿದ್ದು, ಪರಿಸ್ಥಿತಿ ತೀರಾ ಭಯಾನಕವಾಗುತ್ತಿದೆ. ಇದರ ನಡುವೆಯೇ, ಅರಬ್‌ ದೇಶಗಳು ಸೇರಿ ಕೆಲವೊಂದು ದೇಶಗಳು ದ್ವಿ ರಾಷ್ಟ್ರ ನಿಯಮವನ್ನು ಮತ್ತೆ ಪ್ರಸ್ತಾವಿಸಿದ್ದು, ಇದನ್ನು ಜಾರಿಗೆ ತಂದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂಬುದು ಇವರ ಆಶಯ.

ಏನಿದು ದ್ವಿ ರಾಷ್ಟ್ರ ನೀತಿ?
ಯಹೂದಿಗಳಿಗೆ ಇಸ್ರೇಲ್‌ ಮತ್ತು ಪ್ಯಾಲೆಸ್ತೀನಿಯರಿಗೆ ಪ್ಯಾಲೆಸ್ತೀನ್‌ ರಾಷ್ಟ್ರ ನಿರ್ಮಾಣ ಮಾಡುವುದು ಇದರ ಉದ್ದೇಶ. 1978ರಲ್ಲಿ ಕ್ಯಾಂಪ್‌ ಡೇವಿಡ್‌ ಒಪ್ಪಂದದಲ್ಲಿ ಇದು ಪ್ರಸ್ತಾವಿತವಾಗಿತ್ತು. ಈ ಒಪ್ಪಂದಕ್ಕೆ ಈಜಿಪ್ಟ್ ಮತ್ತು ಇಸ್ರೇಲ್‌ ಸಹಿ ಮಾಡಿದ್ದವು. ಆಗ ಪ್ಯಾಲೆಸ್ತೀನ್‌ ಲಿಬರೇಶನ್‌ ಆರ್ಗನೈಸೇಶನ್‌ ಈ ಒಪ್ಪಂದಕ್ಕೆ ಒಪ್ಪಿಗೆ ನೀಡಿತ್ತು. 1993ರಿಂದ 1995ರ ವರೆಗೆ ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ದೇಶಗಳನ್ನು ಪ್ರತ್ಯೇಕವಾಗಿಯೇ ಗುರುತಿಸಲಾಗಿತ್ತು. ಆದರೆ ಹಮಾಸ್‌ ಉಗ್ರರು ಈ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಈ ಸಂದರ್ಭದಲ್ಲಿ ಇಸ್ರೇಲ್‌ನವರೇ ಪ್ಯಾಲೆಸ್ತೀನ್‌ಗೆ ಭದ್ರತೆ ನೀಡುವ ಕುರಿತಂತೆಯೂ ಪ್ರಸ್ತಾವಿತವಾಗಿತ್ತು.

ಮತ್ತೆ ಮುನ್ನೆಲೆಗೆ
ಈ ಬಾರಿ ಹಮಾಸ್‌ ಉಗ್ರರು, ಇಸ್ರೇಲ್‌ ಮೇಲೆ ದಿಢೀರ್‌ ಆಗಿ ದಾಳಿ ಮಾಡಿ ಅಪಾರ ಸಾವು ನೋವಿಗೆ ಕಾರಣವಾಗಿದ್ದರಿಂದ ಪರಿಸ್ಥಿತಿ ತೀರಾ ವಿಕೋಪಕ್ಕೆ ಹೋಗಿದೆ. ಈ ಸಂಘರ್ಷವನ್ನು ಅಂತ್ಯವಾಡಲು ಅರಬ್‌ ದೇಶಗಳು ಸೇರಿದಂತೆ ನೆರೆ ಹೊರೆಯ ದೇಶಗಳು ಪ್ರಯತ್ನಿಸುತ್ತಿವೆ.

ಕೈರೋ ಶಾಂತಿ ಶೃಂಗ
ಅರಬ್‌ ದೇಶಗಳು ಮತ್ತು ಐರೋಪ್ಯ ದೇಶಗಳು ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಲು ಸರ್ವ ಪ್ರಯತ್ನ ಮಾಡುತ್ತಿವೆ. ಹೀಗಾಗಿ ಈಜಿಪ್ಟ್ನ ಕೈರೋದಲ್ಲಿ ಮೊದಲ ಶಾಂತಿ ಶೃಂಗ ಸಭೆ ನಡೆದಿದೆ. ಇದರಲ್ಲಿ ಅರಬ್‌ ದೇಶಗಳ ರಾಜಮನೆತನಗಳ ನಾಯಕರು, ಮಧ್ಯ ಪ್ರಾಚ್ಯ, ಯೂರೋಪ್‌, ಏಷ್ಯಾ, ಕೆನಡಾ ಮತ್ತು ಬ್ರೆಜಿಲ್‌ನ ಪ್ರತಿನಿಧಿಗಳು ಭಾಗಿಯಾಗಿದ್ದರು. ಆದರೆ ಅಮೆರಿಕ ಮತ್ತು ಇಸ್ರೇಲ್‌ಗೆ ಆಹ್ವಾನ ಇರಲಿಲ್ಲ.

ಗಾಜಾ ಪಟ್ಟಿಯಿಂದ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಈ ಶೃಂಗಸಭೆಯಲ್ಲಿ ಪ್ರಮುಖವಾಗಿ ಯುದ್ಧ ಮತ್ತು ಗಾಜಾ ಪಟ್ಟಿಯಲ್ಲಿನ ಸಮಸ್ಯೆ ಬಗ್ಗೆ ಚರ್ಚೆಯಾಗಿದೆ. ಗಾಜಾ ಪಟ್ಟಿಯಿಂದ ಜನರನ್ನು ಒಕ್ಕೆಲೆಬ್ಬಿಸುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಪ್ಯಾಲೆಸ್ತೀನ್‌ ಜನರ ಜೀವವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜೋರ್ಡಾನ್‌ ಹೇಳಿದೆ. ಇದೇ ಶೃಂಗದಲ್ಲಿ ಭಾಗಿಯಾಗಿದ್ದ ಭಾರತವೂ, ದ್ವಿರಾಷ್ಟ್ರ ನೀತಿಗೆ ಬೆಂಬಲ ವ್ಯಕ್ತಪಡಿಸುವುದಾಗಿ ಹೇಳಿದೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.