ಬೇಸರಾಗಿದೆ ಮಾತು ಭಾರವಾಗಿದೆ ಮೌನ

ಕಾವ್ಯಗಳ ಮೂಲಕ, ಅವರು ಸದಾ ನಮ್ಮ ಜೊತೆಗೇ ಇರುತ್ತಾರೆ...

Team Udayavani, May 4, 2020, 3:32 PM IST

ಬೇಸರಾಗಿದೆ ಮಾತು ಭಾರವಾಗಿದೆ ಮೌನ

ನಿತ್ಯೋತ್ಸವದ ಕವಿ ಎಂದೇ ಹೆಸರಾಗಿದ್ದವರು ಕೆ. ಎಸ್‌. ನಿಸಾರ್‌ ಅಹಮದ್‌. ಹೊಸಬಗೆಯ ಪದ ಮತ್ತು ಪದ್ಯಗಳ ಮೂಲಕ ಕಾವ್ಯಲೋಕಕ್ಕೆ ಹೊಸದೊಂದು ಬೆರಗನ್ನು, ಕೋಮಲತೆಯನ್ನು, ಕಾಂತಿಯನ್ನು ತಂದದ್ದು ಅವರ ಹೆಚ್ಚುಗಾರಿಕೆ. ಯಾವುದೇ ಕಾರ್ಯಕ್ರಮದಲ್ಲಿ ನಿಸಾರ್‌ ಅವರು ಇದ್ದರೆಂದರೆ, ಅದಕ್ಕೊಂದುಗಾಂಭೀರ್ಯ ಇರುತ್ತಿತ್ತು. ಶ್ರೇಷ್ಠ ಕವಿ, ಶ್ರೇಷ್ಠಅಧ್ಯಾಪಕ, ಶ್ರೇಷ್ಠ ವಾಗ್ಮಿ ಮತ್ತು ಶ್ರೇಷ್ಠ ಮನುಷ್ಯ- ಇದೆಲ್ಲವೂ ಆಗಿದ್ದ ಅವರು,ತಮ್ಮ ಬದುಕಿನ ಕುರಿತು ಹೇಳಿಕೊಂಡಿದ್ದ ಕೆಲವು ಪ್ರಸಂಗಗಳ ವಿವರ ಇಲ್ಲಿದೆ…

ಒಮ್ಮೆ ನಾನು ಗುರು (ಕೆ.ಎಸ್‌. ನಿಸಾರ್‌ ಅಹಮದ್‌)ಗಳನ್ನು ಸಂದರ್ಶನ ಮಾಡಿದಾಗ- ‘ ನೀವೀಗ ಇಳಿ ವಯಸ್ಸಿನಲ್ಲಿ ಇದ್ದೀರಿ. ಹೇಗನ್ನಿಸ್ತಾ ಇದೆ?’ ಅಂತೇನೋ ಕೇಳಿದ್ದೆ. ಆಗ ಅವರು,’ನಿಂಗೆ ಯಾರಯ್ಯ ಹೇಳಿದ್ದು, ನಂಗೆ ವಯಸ್ಸಾಯ್ತು ಅಂತ? ಐ ಆಮ್‌ ಆಲ್ವೇಸ್‌ ಯಂಗ್.’ ಅಂತ ಹೇಳಿದ್ದರು. ಹೀಗೆ, ಸದಾಕಾಲ ಲವಲವಿಕೆಯಿಂದ ಇದ್ದವರು ಅವರು. ನನ್ನ ಪಾಲಿಗೆ ನಿಸಾರ್‌ ಅಹಮದ್‌, ಮೆಚ್ಚಿನ ಕವಿ ಮಾತ್ರವಲ್ಲ, ಕಾವ್ಯ ರಚನೆಯ ಆದ್ಯ ಗುರುಗಳು. ಯಾಕಂದ್ರೆ, ಬಹಳ ಸಣ್ಣ ವಯಸ್ಸಿನಲ್ಲಿ ಅವರ ಪದ್ಯಗಳನ್ನು ಓದಿ ಪ್ರಭಾವಿತನಾದವನಲ್ಲಿ ನಾನೂ ಒಬ್ಬ. ದಾವಣಗೆರೆಯಲ್ಲಿ ಬಿ. ಎಸ್ಸಿ ಓದುವಾಗ, ಗ್ರಂಥಾಲಯದಲ್ಲಿ ಅವರ ‘ಮದುವೆ’ ಪದ್ಯ ಓದಿ, ಬಹಳ ಇಷ್ಟಪಟ್ಟಿದ್ದೆ. ಡಿಗ್ರಿ ಮುಗಿಸಿ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬಿ. ಎ ಪದವಿಗೆ ಸೇರಿದಾಗ, ಅವರು ಭೂವಿಜ್ಞಾನ ವಿಭಾಗದಲ್ಲಿ ಬೋಧಕರಾಗಿದ್ದರು. ಬಿ. ಎ ತರಗತಿಗಳಿಗೆ ‘ಜನರಲ್‌ ಸೈನ್ಸ್ ಪಾಠ ಮಾಡಲು ಬರುತ್ತಿದ್ದರು. ಆಗ ನಾನು ಅವರನ್ನು ಮುಖತಃ ಭೇಟಿ ಮಾಡಿದ್ದು.

‘ ಸಾರ್‌, ನಿಮ್ಮ ಕವಿತೆಗಳೆಂದರೆ ನಂಗೆ ಬಹಳ ಇಷ್ಟ. ನಾನೂ ಕೆಲವು ಕವನಗಳನ್ನು ಬರೆದಿದ್ದೇನೆ. ಓದಿ, ನೋಡ್ತೀರ?’ ಅಂತ ಕೇಳಿಕೊಂಡಾಗ ಅವರು ‘ಖಂಡಿತಾ ನೋಡ್ತೀನಿ ಕೊಡಯ್ಯಾ…’ ಅಂತ ಖುಷಿಯಿಂದ ಒಪ್ಪಿಕೊಂಡರು. ನಾನು ಎರಡ್ಮೂರು ಪದ್ಯಗಳನ್ನು ಅವರಿಗೆ ಕೊಟ್ಟಿದ್ದೆ. ಅವರು, ‘ಓದಿತೇìನೆ, ಎರಡು ದಿನ ಬಿಟ್ಟು ಬಾ’ ಅಂತ ಹೇಳಿದರು. ಆಮೇಲೆ ಹೋದಾಗ ನನ್ನ ಬೆನ್ನು ತಟ್ಟಿ, ‘ಚೆನ್ನಾಗಿ ಬರಿತೀಯ ಕಣಯ್ನಾ. ಹೀಗೇ ಮುಂದುವರಿಸು. ಈಗ ನೀನು ಇಂಗ್ಲಿಷ್‌ ಮೇರ್ಜ ನಲ್ಲಿ ಇದ್ದೀಯ ತಾನೇ? ಹಾಗಾದ್ರೆ, ಲಂಕೇಶ್‌ ಅವರ ಪರಿಚಯ ಮಾಡಿಕೋ…’ ಅಂತೆಲ್ಲ ಪ್ರೋತ್ಸಾಹ ನೀಡಿದ್ದರು. ಹೀಗೆ, ನನ್ನನ್ನು ‘ಕವಿ’ ಅಂತ ಮೊದಲುಗುರುತಿಸಿದ್ದು ಅವರೇ. ಈ ಪರಿಚಯ ಮುಂದೆ ಆತ್ಮೀಯತೆಯಾಗಿ ಬೆಳೆಯಿತು.

ನನ್ನ ಇಡೀ ಕುಟುಂಬಕ್ಕೆ ಅವರು ಆತ್ಮೀಯರು. ಚಿಂತಾಮಣಿಯಲ್ಲಿ ನಮ್ಮ ಮನೆಗೂ ಬಂದಿದ್ದರು. ಇನ್ನು, ನಿತ್ಯೋತ್ಸವ ಕ್ಯಾಸೆಟ್‌ ಬಂದಾಗ, ನಾವು ಮನೆ ಮಂದಿಯೆಲ್ಲ ಕುಳಿತು ಆ ಹಾಡುಗಳನ್ನು ಪದೇ ಪದೆ ಕೇಳಿ, ಆನಂದಿಸಿದ್ದೇವು. ನನ್ನ ಭಾವಗೀತೆಗಳಿಗೆ ಒಂದರ್ಥದಲ್ಲಿ ಅವರೇ ಪ್ರಭಾವ, ಪ್ರೇರಣೆ ಅಂದರೂ ತಪ್ಪಿಲ್ಲ.

ನಾನು ಬೆಂಗಳೂರಿಗೆ ಬಂದು ನೆಲೆಸಿದ್ದು ಕೂಡಾ, ಅವರ ಮನೆ ಇರುವ ಏರಿಯಾದಲ್ಲಿಯೇ. ಹಾಗಾಗಿ, ಆಗಾಗ ಭೇಟಿಯಾಗುತ್ತಿದ್ದೆವು. ಅವರು ತಮ್ಮ ಶಿಷ್ಯರ ಬಗ್ಗೆ ಮಾತನಾಡುವಾಗ ನನ್ನನ್ನು ಮತ್ತು ಎಚ್ಚೆಸ್ವಿಯನ್ನು ನೆನಪಿಸಿಕೊಳ್ಳದೇ ಇರುತ್ತಿರಲಿಲ್ಲ. ಅವರು ಅಮೆರಿಕಕ್ಕೆ ಹೋಗುವ ಮುಂಚೆ, ಹೋಗಿ ಬಂದ ಮೇಲೆ, ಅವರನ್ನು ಭೇಟಿ ಮಾಡಿದ್ದೆ. ಪತ್ನಿ ಮತ್ತು ಮಗ ತೀರಿಕೊಂಡ ಬಳಿಕ ಬಹಳ ಕುಗ್ಗಿದ್ದರು. ಇನ್ನು ನಿಸಾರ್‌ ಅಹಮದ್‌ ಅವರು ಕನ್ನಡ ಸಾಹಿತ್ಯಲೋಕಕ್ಕೆ ನೀಡಿದ ಕೊಡುಗೆಯನ್ನು ಪದಗಳಲ್ಲಿ ಹೇಗೆ ಕಟ್ಟಿ ಕೊಡುವುದು? ‘ನಿತ್ಯೋತ್ಸವ’ ಧ್ವನಿ ಸುರುಳಿಯ ಮೂಲಕ ಕನ್ನಡದಲ್ಲಿ ಭಾವಗೀತೆಗಳ ಹೊಸ ಟ್ರೆಂಡ್‌ ಸೃಷ್ಟಿಸಿದ ಕೀರ್ತಿ ಅವರಿಗೆ ಸಲ್ಲಬೇಕು. ‘ಕುರಿಗಳು ಸಾರ್‌ ಕುರಿಗಳು’ ಕವಿತೆ ನನ್ನ ಮೆಚ್ಚಿನದ್ದು. ಅವರ ಕವಿತೆಗಳಲ್ಲಿ ನಾನು ಗಮನಿಸಿದ್ದೇನೆಂದರೆ, ಜನಸಾಮಾನ್ಯರು ಆಡುವ ಭಾಷೆಯನ್ನೇ ಬಳಸಿ, ನವಿರು ಹಾಸ್ಯದ ಮೂಲಕ ಗಹನವಾದುದನ್ನು ಅವರು ಹೇಳಬಲ್ಲವರಾಗಿದ್ದರು.

ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಅವರು ಗಣನೀಯ ಸೇವೆ ಸಲ್ಲಿಸಿದ್ದಾರೆ. ಆ ಸಮಯದಲ್ಲಿ ಚಿಂತಾಮಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ‘ಪ್ರಸ್ತುತ ಸಾಹಿತ್ಯ’ ಎಂಬ ವಿಷಯದ ಕುರಿತು ಒಂದು ದಿನದ ಸಾಹಿತ್ಯ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಅದೊಂದು ಅಪರೂಪದ ಕಾರ್ಯಕ್ರಮ. ರಾಜ್ಯದ ಪ್ರಸಿದ್ಧ ಸಾಹಿತಿಗಳನ್ನೆಲ್ಲ ಬೆಂಗಳೂರಿನಿಂದ ಕರೆಸಿ, ಹಿರಿ-ಕಿರಿಯ ಸಾಹಿತಿಗಳನ್ನು ಒಂದೇ ವೇದಿಕೆಯಲ್ಲಿ ತಂದ ಕಾರ್ಯಕ್ರಮ ಅದು.

ಇಂಥ ಅದ್ಭುತ ಚೇತನ ನಮ್ಮನ್ನು ಆಗಲಿದೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ಈ ಸಂದರ್ಭದಲ್ಲಿ, ಅವರ ಅಭಿಮಾನಿಗಳಿಗೆ ಅಂತಿಮ ದರ್ಶನವೂ ಅಲಭ್ಯವಾಗಿರುವುದು ಬೇಸರದ ಸಂಗತಿ. ವೈಯಕ್ತಿಕವಾಗಿ ನನಗೆ ತೀರ್ಥರೂಪ ಸಮಾನರಾಗಿದ್ದ ಅವರು, ನವಿರು ಭಾವಗೀತೆಗಳ, ಗಂಭೀರ ಕಾವ್ಯಗಳ ಮೂಲಕ ಎಂದೆಂದಿಗೂ ಜೊತೆಗೇ ಇರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಹಾರೈಸುತ್ತೇನೆ.

 

ಬಿ.ಆರ್‌. ಲಕ್ಷ್ಮಣರಾವ್‌

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.