Kannada Rajyotsava: ಕನ್ನಡ ನಮ್ಮೊಳಗೆ ಅಂತರ್ಗತವಾದಾಗಲೇ ನಿಜವಾದ ರಾಜ್ಯೋತ್ಸವ


Team Udayavani, Nov 1, 2023, 10:00 AM IST

Kannada Rajyotsava: ಕನ್ನಡ ನಮ್ಮೊಳಗೆ ಅಂತರ್ಗತವಾದಾಗಲೇ ನಿಜವಾದ ರಾಜ್ಯೋತ್ಸವ

ಕನ್ನಡ ಅಂದ್ರೆ ಮೊದಲು ನನಗೆ ನೆನಪಾಗುವುದು ನಮ್ಮೂರು. ಕರ್ನಾಟಕ ಅಂದ್ರೆ ಮೊದಲು ನೆನಪಾಗೋದು ಮೈಸೂರು ಮಹಾರಾಜರು. ವಿದ್ಯಾರ್ಥಿ ಜೀವನದಿಂದ ವೃತ್ತಿ ಜೀವನದ ಇಲ್ಲಿಯವರೆಗೂ ಕನ್ನಡವೇ ನನ್ನ ನಿತ್ಯದ ಉಸಿರು. ನನ್ನ ಜೀವನದಲ್ಲಿ ಮಾತುಕತೆ, ಕೃತಿ, ಕಾರ್ಯ ಎಲ್ಲವೂ ಕನ್ನಡದಲ್ಲೇ ನಡೆಯತ್ತಿರುವುದರಿಂದ, ಅದರ ಮೇಲೇ ನಿಂತಿರುವುದರಿಂದ ಕನ್ನಡವನ್ನಾಗಲಿ ಅಥವಾ ಕರ್ನಾಟಕವನ್ನಾಗಲಿ ನನ್ನ ಜೀವನದಿಂದ ಹೊರಗೆ ಕಲ್ಪಿಸಿಕೊಳ್ಳುವೂ ಕೂಡ ಅಸಾಧ್ಯ.

ಇಂದು ಕನ್ನಡ ಮತ್ತು ಕರ್ನಾಟಕದ ಅಸ್ವಿತ್ವಕ್ಕೆ ಅದರದ್ದೇ ಆದ ಸವಾಲುಗಳಿವೆ. ನಮ್ಮ ದೈನಂದಿನ ಬದುಕು ದಿನದಿಂದ ದಿನಕ್ಕೆ ಕಂಗ್ಲಿಷ್‌ ಮಯವಾಗುತ್ತಿದ್ದು, ಇದರಿಂದ ಮುಂದಿನ ಪೀಳಿಗೆಯನ್ನು ಹೇಗೆ ಪಾರು ಮಾಡಬೇಕು ಎಂಬುದೇ ನಮ್ಮ ಮುಂದಿರುವ ದೊಡ್ಡ ಪ್ರಶ್ನೆ.

ಸ್ವತಂತ್ರ್ಯ ಭಾರತದ ಈ ಎಪ್ಪತ್ತೈದು ವರ್ಷಗಳಲ್ಲಿ ಯಾವುದೇ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಕನ್ನಡ ಪ್ರಾದೇಶಿಕ ಭಾಷೆಯನ್ನು ಉಳಿಸುವ, ಬೆಳೆಸುವ ಗಂಭೀರ ಪ್ರಯತ್ನ ಮಾಡಿಲ್ಲ. ವಿದ್ಯಾಭ್ಯಾಸದಲ್ಲಿ ಕನ್ನಡವನ್ನು ಕಡೆಗಣಿಸುವ ಕೆಲಸ ಎಲ್ಲ ಸರ್ಕಾರಗಳು ಮಾಡಿವೆ. ಸರ್ಕಾರಿ ನೌಕರಿಯಲ್ಲೂ ಕನ್ನಡದ ಕಡೆಗಣನೆಯಾಗುತ್ತಿದೆ. ಅನ್ನ, ಅಕ್ಷರ, ಆರೋಗ್ಯ ಎಲ್ಲೂ ಕನ್ನಡಕ್ಕೆ ನೆಲೆ ಇಲ್ಲದಂತಾಗಿದೆ. ಅದರ ಪರಿಣಾಮವನ್ನು ಇಂದು ನಾವೆಲ್ಲರೂ ಎದುರಿಸುತ್ತಿದ್ದೇವೆ. ಕನ್ನಡ ಮತ್ತು ಕರ್ನಾಟಕದ ವಿಷಯದಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ನಾಯಕರ ನಡೆಗಿಂತ, ಸಾಂಸ್ಕೃತಿಕ ಹೆಜ್ಜೆಗಳನ್ನು ಇಡಬೇಕಾದ ಅವಶ್ಯಕತೆ ಹೆಚ್ಚಾಗಿದೆ.

ಕನ್ನಡವನ್ನು ವಿಭಜಿಸುವುದಕ್ಕಿಂತ ಕೂಡಿಸುವ ಕೆಲಸ ತುರ್ತಾಗಿ ಆಗಬೇಕಿದೆ. ಕನ್ನಡಕ್ಕೆ ಗೌರವ ಮತ್ತು ಗರ್ವ ಎರಡೂ ಸಿಕ್ಕಾಗ ಮಾತ್ರ ಕನ್ನಡದ ಬಗ್ಗೆ ಸಹಜವಾಗಿಯೇ ಆತ್ಮಾಭಿಮಾನ ಜಾಗೃತವಾಗುತ್ತದೆ. ರಾಜಕೀಯ ನಾಯಕರ ಬಾಯಿ ಮಾತಿನ ಆಶ್ವಾಸನೆ ಮತ್ತು ಭರವಸೆಗಳನ್ನು ಬದಿಗಿಟ್ಟು, ನಿಜವಾಗಿಯೂ ಆಂತರ್ಯದಲ್ಲಿ ಕನ್ನಡ ವ್ಯಕ್ತಿ ಮತ್ತು ವ್ಯಕ್ತಿತ್ವಗಳು ಕನ್ನಡದ ಕೈಂಕರ್ಯಕ್ಕೆ ಮುಂದಾಗಬೇಕು, ನೈಜ ಅಭಿಮಾನದ ಕನ್ನಡ ಕಾರ್ಯಕರ್ತರ ಪಡೆ ಸಿದ್ಧವಾಗಬೇಕು. ಹಾಗಾದಾಗ ಮಾತ್ರ ನಿಜವಾಗಿಯೂ ಕರ್ನಾಟಕದಲ್ಲಿ ಕನ್ನಡ ಅಂತರ್ಗತವಾಗುತ್ತದೆ.

-ಟಿ. ಎಸ್‌. ನಾಗಾಭರಣ, ಹಿರಿಯ ಚಿತ್ರ ನಿರ್ದೇಶಕ ಮತ್ತು ರಂಗಕರ್ಮಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.