ಭಾರತದ ಪ್ರಪ್ರಥಮ ಮಹಿಳಾ ವೈದ್ಯೆ ಎಂಬ ಹೆಗ್ಗಳಿಕೆಯ “ಆನಂದಿ ಬಾಯಿ ಜೋಶಿ”
ಅನಾರೋಗ್ಯದಿಂದ ಮಗು ಸಾವನ್ನಪ್ಪಿತ್ತು. ಇದೇ ಅವರ ಜೀವನದ ಬಹು ಮುಖ್ಯ ಘಟ್ಟ. ಅಂದೇ ಆನಂದಿ ಅವರು ವೈದ್ಯೆ ಆಗುವ ಕನಸು ಕಂಡರು.
Team Udayavani, Jan 24, 2020, 12:41 PM IST
ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿಓದುಗರ ಆಯ್ದ ಲೇಖನ ಇಲ್ಲಿದೆ…ನಮ್ಮ ದೇಶದಲ್ಲಿ ಹಲವಾರು ಮಹಿಳೆಯರು ಆದರ್ಶಪ್ರಾಯರಾಗಿದ್ದು, ಆ ಸಾಲಿಗೆ ಆನಂದಿ ಬಾಯಿ ಜೋಶಿ ಕೂಡಾ ಒಬ್ಬರಾಗಿದ್ದಾರೆ.
ಈಕೆ ಭಾರತದ ಪ್ರಪ್ರಥಮ ಮಹಿಳಾ ವೈದ್ಯೆ.31 ಮಾರ್ಚ್ 1865ರಲ್ಲಿ ಪೂನಾದಲ್ಲಿ ಜನಿಸಿದ ಆನಂದಿ ಅವರ ಬಾಲ್ಯದ ಹೆಸರು ಯಮುನಾ ಎಂದಾಗಿತ್ತು. ಒಂಬತ್ತನೇ ವಯಸ್ಸಿಗೆ ವಿವಾಹವಾದರು ಸಹ, ಪತಿ ಗೋಪಾಲ್ ರಾವ್ ಅವರ ಪ್ರೋತ್ಸಾಹದಿಂದ ಶಿಕ್ಷಣ ಪಡೆಯುವಂತಾಯಿತು.
ಶಾಲೆಗೆ ಹೋಗಲು ನಿರ್ಬಂಧ ಇದ್ದ ಕಾರಣ, ಪತಿಯೇ ಆಕೆಗೆ ಅಕ್ಷರ ಕಲಿಸುತ್ತಿದ್ದರು. ತಪ್ಪುಗಳಿಗೆ ಕಠಿಣ ಶಿಕ್ಷೆ ನೀಡುತ್ತಿದ್ದರಂತೆ. ಮೊದಲು ಆಸಕ್ತಿ ಇಲ್ಲದಿದ್ದ ಆನಂದಿ ಬಾಯಿ ನಂತರ ಓದಲು ಆಸಕ್ತಿ ವಹಿಸಿದರು. ಹದಿನಾಲ್ಕನೇ ವಯಸ್ಸಿಗೆ ಮಗುವಿಗೆ ಜನ್ಮ ನೀಡಿದ್ದು, ಅನಾರೋಗ್ಯದಿಂದ ಮಗು ಸಾವನ್ನಪ್ಪಿತ್ತು. ಇದೇ ಅವರ ಜೀವನದ ಬಹು ಮುಖ್ಯ ಘಟ್ಟ. ಅಂದೇ ಆನಂದಿ ಅವರು ವೈದ್ಯೆ ಆಗುವ ಕನಸು ಕಂಡರು.
ಪತಿ ಗೋಪಾಲ್ ರಾವ್ ಅಮೆರಿಕ ಮಿಷನರಿಗಳಿಗೆ ಪತ್ರ ಬರೆದು ಸಹಾಯ ಕೋರಿದರು. ಆದರೆ ಮನೆಯಲ್ಲಿ ತೀವ್ರ ಆಕ್ರೋಶ ಇತ್ತು. ಎಲ್ಲ ನೋವು ನುಂಗಿ ಅಮೆರಿಕದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದರು. ಭಾರತಕ್ಕೆ ವಾಪಸ್ಸಾದ ಬಳಿಕ ಕೆಲಸ ಲಭಿಸಿತ್ತಾದರು, ಅನಾರೋಗ್ಯದಿಂದ ಬೇಗನೆ ನಿಲ್ಲಿಸಿದರು. ತಮ್ಮ 22 ನೇ ವಯಸ್ಸಲ್ಲೇ ಮರಣವನ್ನಪ್ಪಿದ ಆನಂದಿ ಅವರ ಕೊಡುಗೆ ಎಂದೆಂದಿಗೂ ಅವಿಸ್ಮರಣೀಯವಾಗಿದೆ.
*ತೇಜಸ್ವಿನಿ ಆರ್. ಕೆ
ಎಸ್ ಡಿ ಎಂ, ಉಜಿರೆ
2) ಅಲ್ಪಾಯುಷದಲ್ಲೇ ಅರಳಿ ಹೋದ ಯಮುನೆ ಉರ್ಫ್ ಆನಂದಿಬಾಯಿ
“ಹೆಣ್ಣು ಪಂಜರದ ಗಿಳಿಯಲ್ಲ , ದೇಶ ಬದಲಿಸೋ ಶಕ್ತಿ”. ಇತಿಹಾಸದುದ್ದಕ್ಕೂ ಹೆಣ್ತನದ ಸಬಲೀಕರಣಕ್ಕಾಗಿ ಸಮಾಜದ ಎದುರಿಗೆ ನಿಂತ ಸಾಧಕಿಯರು ಸಿಗುತ್ತಾರೆ. ಅಂತವರಲ್ಲಿ ತನ್ನ ಅಲ್ಪಾಯುಷದಲ್ಲೇ ಅರಳಿ ಹೋದ ಯಮುನೆ ಉರ್ಫ್ ಆನಂದಿಬಾಯಿಯ ಕಥೆ ಇದು.
ಮರಾಠಿ ಸಂಪ್ರದಾಯಿಕ ಬ್ರಾಹ್ಮಣ ಕುಟುಂಬದಿ ಜನಿಸಿದ ಯಮುನ. ಬಾಲ್ಯ ಕಳೆವ ಮುಂಚೆಯೇ ಕರಿಮಣಿಗೆ ಕೊರಳು ಕೊಟ್ಟವಳು, ತನ್ನ ಒಂಬತ್ತನೇ ವಯಸ್ಸಿನಲ್ಲೇ ತನಗಿಂತ ಮೂರು ಪಟ್ಟು ಹಿರಿಯ ವಿಧುರ ಗೋಪಾಲ್ ಜೋಷಿಯ ವಿವಾಹವಾದವಳು. ಅವರು ಪತ್ನಿಯನ್ನು ತಾನು ಓದಿಸುತ್ತೇನೆಂಬ ವಿಚಿತ್ರ ಷರತ್ತಿನ ಮೇಲೆ ವಿವಾಹವಾಗಿದ್ದರು. ವಿವಾಹದ ನಂತರ ಯಮುನ ಆನಂದಿಯಾದಳು. ಗೋಪಾಲ್ ರಾವ್ ಓದಿಸುವ ಹಠ ನೆತ್ತಿಗೇರಿತು. ಆನಂದಿಗೆ ಬೀಳುತ್ತಿದ್ದ ಏಟು ಮನೆಗೆಲಸ ಮಾಡದಿದ್ದಕ್ಕಲ್ಲ ಓದದಿದ್ದಕ್ಕೆ. ತನ್ನ ತುಂಟ ವಯಸ್ಸಿನಲ್ಲೇ ಗರ್ಭಿಣಿಯಾದಳು. ಹದಿನಾಲ್ಕನೇ ವಯಸ್ಸಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಳು ಆನಂದಿ. ಆದರೆ ಮಗು ಬದುಕಿದ್ದು ಕೇವಲ ಹತ್ತು ದಿನ. ಆ ಮೆದು ದೇಹ-ಮನಸು ಆಗಲೇ ಮಾಗಿ ಹೋಯಿತೇನೋ. ಸಾಂಪ್ರದಾಯಿಕ ಸಮಾಜದಲ್ಲಿ ಪುರುಷ ವೈದ್ಯರಿಗೆ ತೋರಿಸಲಾಗದೆ ಹೆಣ್ಣು ಮಗಳಾಗಿ ತಾನು ಅನುಭವಿಸಿದ್ದ ಕಷ್ಟ ಮನವರಿಕೆ ಆಗಿತ್ತು ಅವಳಿಗೂ. ಅವಳಲ್ಲೂ ಓದುವ ಛಲ ಚುರುಕಾಯಿತು, ವೈದ್ಯಳಾಗುವ ಪಣತೊಟ್ಟಳು. ಪತಿಯ ತನ್ನ ಹಠಕ್ಕೆ ಸಾಥ್ ಸಿಕ್ಕಿತ್ತು. ದೇಹ ಸಹಕರಿಸದಿದ್ದರೂ ಮನಸ್ಸು ಕಲ್ಲಾಗಿತ್ತು ಹೊರಟೆ ಬಿಟ್ಟಳು ಸಾಗರಗಳ ದಾಟಿ, ಗಂಡು ಸಮಾಜದ ಧೃತಿಗೆಡಿಸಿ ಕಿವಿ ಕಿವುಡಾಯಿತು ಮಾತುಗಳಿಗೆ, ತಿಳಿದಿದ್ದಳು ಅವಳು ಬದುಕಿನ ದಾರಿಯ.
ಈ ಎಲ್ಲದರ ನಡುವೆ ವಯಸ್ಸಿನಲ್ಲಿ ಚಿಕ್ಕವಳಾಗಿದ್ದ ಅನಂದಿ, ಬದುಕಿನಲ್ಲಿ ದೂಡ್ಡವಳಾಗಿ ಬೆಳೆದಿದ್ದಳು. ಕಷ್ಟಗಳನ್ನೇ ಕರಗಿಸುವ ಕಲ್ಲಾದಳು. ವಿದೇಶದಲ್ಲಿ ದೃಢವಾಗಿ ನಿಂತು ಡಿಗ್ರಿ ಹಾಗೂ ಎಂ.ಡಿ ಯನ್ನು ಪೂರೈಸಿದಳು. 1886ರಲ್ಲಿ ಭಾರತಕ್ಕೆ ಹಿಂತುರಿಗಿದಳು. ಅವಳಿಗೆ ಅಭೂತಪೂರ್ವವಾಗಿ ಸ್ವಾಗತ ಸಿಕ್ಕಿತು. ಈ ಖುಷಿ ಅರೆಗಳಿಗೆಯದ್ದಾಗಿತ್ತು ಚಳಿ ಹಾಗೂ ಆಹಾರಕ್ಕೆ ಒಗ್ಗದ ಅವಳ ದೇಹಕ್ಕೆ ಅದಾಗಲೇ ಟಿ.ಬಿ ತಗುಲಿತ್ತು. ಕಾಲಡಿ ಹೂತಿದ್ದ ಸಮಾಜದ ಹುಳುಗಳು ದುರ್ಬಲವಾಗುತ್ತಿದ್ದಂತೆ ಮೇಲೆದ್ದು ನಿಂತವು. ” ಬ್ರಾಹ್ಮಣ ಸಮೂದಾಯದವಳಾಗಿ ಸಾಗರ ದಾಟಿದ್ದಕ್ಕೆ ಸಿಕ್ಕಿದ ಶಾಪವೆಂಬ ಮಾತುಗಳು ಕೇಳಿಬಂದವು. ಪಂಡಿತರು ಯಾರು ಅವಳನ್ನು ಮುಟ್ಟಲು ಒಪ್ಪಲಿಲ್ಲ, “ಅವಳಿಗೆ ಸಿಕ್ಕಿದ ಫಲವೆಂದು” ಕೈ ತೊಳೆದುಕೊಂಡರು. ಕೊನೆಗೂ ತನ್ನ ಆಸೆಯಂತೆ ಸೇವೆ ಸಲ್ಲಿಸಲಾಗದೆ 1887ರಲ್ಲಿ ಕೊನೆ ಉಸಿರೆಳೆದಳು ಅನಂದಿ.
ಇಂದು ಹಲವು ಅನಂದಿಗಳು ಭಾರತ ಆರೋಗ್ಯ ವ್ಯವಸ್ಥೆಯನ್ನು ನಡೆಸಿಕೊಂಡು ಹೋಗುತ್ತಿದ್ದಾರೆ . ಅಂದು ಕಿಚ್ಚು ಹಚ್ಚಿದ ಆನಂದಿ ಎಂದಿಗೂ ಮಹಿಳೆಯರಿಗೆ ದಾರಿದೀಪದಂತೆ.
– ನಿಧೀಶ ಕೆ ಶೆಟ್ಟಿಗಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?
Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…
Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ
Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ
Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ