ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’
Team Udayavani, Apr 19, 2021, 9:51 AM IST
ಮಣಿಪಾಲ: ‘ಬೋಳಂತೂರು ಕಾಟಿ’ ಕಂಬಳದ ಇತಿಹಾಸದಲ್ಲಿ ದೊಡ್ಡ ಸಾಧನೆ ಮಾಡಿದ ಕೋಣ. ಹಲವು ವರ್ಷಗಳ ಕಾಲ ಚಿಗರೆಯಂತೆ ಕಂಬಳದ ಕೆಸರು ನೀರಿನಲ್ಲಿ ಓಡಿದ ಕಾಟಿ, ಇಂದು ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿ ಅಸುನೀಗಿದೆ.
28 ವರ್ಷ ಪ್ರಾಯದ ಕಾಟಿ, ಕಳೆದ 20 ವರ್ಷಗಳಿಂದ ಬೋಳಂತೂರು ಮನೆಯಲ್ಲಿ ಇದ್ದಾತ. ಕಂಬಳ ಕ್ಷೇತ್ರದಲ್ಲಿ ದಿ.ಬೋಳಂತೂರು ಗಂಗಾಧರ ರೈಗಳ ಹೆಸರು ಹೇಗೋ, ಅದೇ ಪ್ರಸಿದ್ದಿ ಪಡೆದ ಕೋಣ ಈ ಕಾಟಿ.
ಬಾಲ್ಯದಲ್ಲಿ ಕಾಟಿಯನ್ನು ಪೋಷಿಸಿದವರು ಬಾರ್ಕೂರು ದೇವದಾಸ ಗಡಿಯಾರ್ ಅವರು. ನೇಗಿಲು ಕಿರಿಯ ವಿಭಾಗದಲ್ಲಿ ಕಂಬಳ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಕಾಟಿ, ಶಿರ್ವ ಕಂಬಳದಲ್ಲಿ ಮೊದಲ ಸಲ ಬಹುಮಾನ ಪಡೆದಿದ್ದ. ಅಂದು ಕಾಟಿಗೆ ಸಾರಥಿಯಾಗಿದ್ದು, ಶಿರ್ವ ವಿಶ್ವನಾಥ್ ಪ್ರಭು.
ಇದನ್ನೂ ಓದಿ: ಕಂಬಳ ಕರೆಗೆ ಇಳಿದ ಬಾಲಕಿ : ಆರನೇ ತರಗತಿ ವಿದ್ಯಾರ್ಥಿನಿ ಚೈತ್ರಾಳ ಚಿತ್ತ ಕಂಬಳದತ್ತ!
ಮುಂದೆ ಮೂರು ವರ್ಷ ಕಿರಿಯ ನೇಗಿಲು ವಿಭಾಗದಲ್ಲಿ ಕಾಟಿಯದ್ದೇ ಪಾರುಪತ್ಯ. ಆದರೆ ಕಾಟಿಗೆ ಜೋಡಿಯಾಗಿ ಓಡಲು ಸರಿಯಾದ ಕೋಣಗಳೇ ಸಿಗುತ್ತಿರಲಿಲ್ಲ. ಹಾಗಾಗಿ ಮೂರು ವರ್ಷದಲ್ಲಿ ನಾಲ್ಕು ಕೋಣಗಳ ಜೋಡಿಯಾಗಿ ಕಾಟಿ ಓಡಿದ್ದ. ಮುಂದೆ ಸೀನಿಯರ್ ವಿಭಾಗಕ್ಕೆ ಅರ್ಹತೆ ಪಡೆದ ಕಾಟಿಗೆ ಸರಿಯಾದ ಜೋಡಿಯ ಹುಡುಕಾಟದಲ್ಲಿದ್ದಾಗ ಬಾರ್ಕೂರು ಶಾಂತರಾಮ ಶೆಟ್ಟರು ಬಾರ್ಕೂರು ದೇವದಾಸ ಗಡಿಯಾರ್ ರೊಂದಿಗೆ ಕೈಜೋಡಿಸಿದ್ದರು. ಶಾಂತಾರಾಮ ಶೆಟ್ಟರ ‘ಮೋಡ’ ಕೋಣದ ಜೊತೆ ನೇಗಿಲು ಹಿರಿಯ ವಿಭಾಗದಲ್ಲಿ ಕಾಟಿಯ ಓಟ. ಅದರ ವೇಗ ಎಷ್ಟಿತ್ತೆಂದರೆ ಹಿರಿಯ ವಿಭಾಗಕ್ಕೆ ಅರ್ಹತೆ ಪಡೆದ ಮೊದಲ ವರ್ಷವೇ ‘ಚಾಂಪಿಯನ್ ಇಯರ್ ಆಫ್ ದಿ ಪುರಸ್ಕಾರ’
1998ರಲ್ಲಿ ಬೆಳುವಾಯಿ ಸದಾನಂದ ಶೆಟ್ಟಿಯವರು ಕಾಟಿಯನ್ನು ತಮ್ಮ ಬಳಗಕ್ಕೆ ಸೇರಿಸಿಕೊಂಡರು. ಅವರ ‘ಮಾತಿಬೆಟ್ಟು’ ಎಂಬ ಕೋಣದ ಜೊತೆ ಸೇರಿದ ಕಾಟಿ ಹಗ್ಗ ಹಿರಿಯ ವಿಭಾಗಕ್ಕೆ ಬಂದಿದ್ದ. ಅಲ್ಲೂ ಕಾಟಿಯ ಪರಾಕ್ರಮ ಮುಂದುವರಿದಿತ್ತು.
ಇದನ್ನೂ ಓದಿ: ಐಕಳ ಕಂಬಳ ಕರೆಯಲ್ಲಿ ಬೋಳದಗುತ್ತು ರಾಕೆಟ್ ಬೊಲ್ಲ- ಧೋನಿ ಕೋಣಗಳ ದಾಖಲೆ ಓಟ
2001ರಲ್ಲಿ ಬೋಳಂತೂರು ಗಂಗಾಧರ ರೈ ಅವರು ಕಾಟಿ- ಮಾತಿಬೆಟ್ಟು ಜೋಡಿಯನ್ನು ಖರೀದಿಸಿದರು. ಈದು ಪಡ್ಯಾರು ಅಶೋಕ್ ಜೈನರು ಈ ಕೋಣಗಳನ್ನು ಓಡಿಸುತ್ತಿದ್ದರು. ಬೋಳಂತೂರು ಬಳಗಕ್ಕೆ ಸೇರಿದ ಕಾಟಿ ಮುಂದೆ ಸತತ ಮೂರು ವರ್ಷ ಚಾಂಪಿಯನ್ ಆಫ್ ದಿ ಇಯರ್ ಪ್ರಶಸ್ತಿ ಪಡೆದಿದ್ದ. ಮುಂದೆ 2012ರವರೆಗೂ ಹಗ್ಗ ಹಿರಿಯ ವಿಭಾಗದಲ್ಲಿ ಪ್ರಶಸ್ತಿ ಬೇಟೆ ಮುಂದುವರಿಸಿದ ಕಾಟಿ, 2015ರಲ್ಲಿ ಕನೆಹಲಗೆ ವಿಭಾಗಕ್ಕೆ ಎಂಟ್ರಿ ಕೊಟ್ಟು ಅಲ್ಲೂ ಪ್ರಶಸ್ತಿ ಪಡೆದಿದ್ದ.
ಮೂರು ವರ್ಷದ ಹಿಂದೆ ಪುತ್ತೂರು ಕೋಟಿ- ಚೆನ್ನಯ ಕಂಬಳದ 25ನೇ ವರ್ಷಾಚರಣೆ ಸಂದರ್ಭದಲ್ಲಿ ಬೋಳಂತೂರು ಕಾಟಿಗೂ 25 ವರ್ಷ. ಆಗ ಕಾಟಿಗೆ ಅದ್ದೂರಿ ಸನ್ಮಾನ ಮಾಡಲಾಗಿತ್ತು.
ಕಳೆದ ಕೆಲವು ವರ್ಷಗಳಿಂದ ವಿಶ್ರಾಂತಿಯಲ್ಲಿದ್ದ ಬೋಳಂತೂರು ಕಾಟಿ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿತ್ತು. ಸೋಮವಾರ ಬೆಳಗ್ಗೆ ಅಸುನೀಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ
ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…
Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು