ಮೌಲ್ಯಗಳಿಗೆ ಬದ್ಧರಾಗಿ ಬದುಕುವುದೂ ಒಂದು ಸಾಧನೆ


Team Udayavani, Nov 24, 2022, 6:15 AM IST

ಮೌಲ್ಯಗಳಿಗೆ ಬದ್ಧರಾಗಿ ಬದುಕುವುದೂ ಒಂದು ಸಾಧನೆ

ಸರಕಾರವು ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿದೆ. ಇಂದು ಸರಕಾರವೇ ಹುಡುಕಿ ಪ್ರಶಸ್ತಿಯನ್ನು ನೀಡುತ್ತಿದೆ. ಹಾಗಾಗಿ ಅರ್ಜಿ ಸಲ್ಲಿಸದವರಿಗೂ ಪ್ರಶಸ್ತಿ ಒಲಿಯುತ್ತಿದೆ. ಯಾವುದೋ ಹಳ್ಳಿಯ ಮೂಲೆಯಲ್ಲಿ ಕುಳಿತು ಪ್ರಶಸ್ತಿಯ ಬಗ್ಗೆ ಒಂದಿಷ್ಟೂ ನಿರೀಕ್ಷೆಯಲ್ಲಿಲ್ಲದ ಮಂದಿಗೆ ಪ್ರಶಸ್ತಿಯು ಒಲಿದು ಬಂದಾಗ ಅವರಿಗಾಗುವ ಆನಂದ ಊಹಿಸಲೂ ಅಸಾಧ್ಯ. ಈ ಗೌರವಗಳ ಮೂಲಕ ವಿವಿಧ ಕ್ಷೇತ್ರಗಳು ಶ್ರೀಮಂತವಾಗುವು ದರೊಂದಿಗೆ ಸಾಂಸ್ಕೃತಿಕವಾಗಿಯೂ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ.

ಆದರೆ ಇಂದು ಸಮಾಜದ ಮುಂದಿರುವ ದೊಡ್ಡ ಸವಾಲು ನೈತಿಕ ಮೌಲ್ಯಗಳ ಕುಸಿತ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಅಪರಾಧದ ಸುದ್ದಿಗಳು ಸಮಾಜದ ನಿದ್ರೆ ಕೆಡಿಸುತ್ತಿವೆ. ಇಂಥ ಅಪರಾಧಗಳನ್ನು ಮಟ್ಟಹಾಕಲು ಎಲ್ಲ ಪ್ರಯತ್ನಗಳನ್ನೂ ಸರಕಾರ ಹಾಗೂ ಸಂಬಂಧಿಸಿದ ಇಲಾಖೆಗಳು ಮಾಡುತ್ತಿವೆ. ಇಲಾಖೆಗಳ ಈ ಪ್ರಯತ್ನಗಳ ನಡುವೆ ಅಪರಾಧಗಳನ್ನು ಕಡಿಮೆ ಮಾಡುವ ಮನೋ ಭಾವವನ್ನು ಸಮಾಜದಲ್ಲಿ ಮೂಡಿಸಲು ಸಾಧ್ಯವೇ? ಉತ್ತಮ ಶಿಕ್ಷಣ ಮತ್ತು ಸಂಸ್ಕಾರಗಳ ಮೂಲಕ ಈ ಪ್ರಯತ್ನ ಗಳನ್ನು ಒಂದು ಹಂತದಲ್ಲಿ ಮಾಡಬಹುದು. ಇದರೊಂದಿಗೆ ತಮ್ಮ ಬದುಕಿನಲ್ಲಿ ಈ ಮೌಲ್ಯಗಳನ್ನು ಅಳವಡಿಸಿಕೊಂಡು ಬಂದವರನ್ನು ಗುರುತಿಸಿ ಗೌರವಿಸುವುದರ ಮೂಲಕವೂ ಈ ನಿಟ್ಟಿನಲ್ಲಿ ಚಿಕ್ಕ ಪ್ರಯತ್ನ ಮಾಡಬಹುದಲ್ಲವೇ?
ಮೌಲ್ಯಗಳು ಕುಸಿಯುತ್ತಿವೆ ಎಂಬ ಕೂಗಿನ ನಡುವೆಯೂ ಕೆಲವು ಮಂದಿ ಈ ಮೌಲ್ಯಗಳಿಗೆ ಬದ್ಧರಾಗಿ ಬದುಕುತ್ತಿದ್ದಾರೆ. ಆದರೆ ಅವರು ಯಾರ ಕಣ್ಣಿಗೂ ಬೀಳುವುದಿಲ್ಲ. ಪ್ರಚಾರ, ಸಮ್ಮಾನಗಳ ಬಯಕೆ ಅವರಿಗಿಲ್ಲ. ತಮ್ಮ ನಡತೆಯ ಮೂಲಕ ಊರಿನ ಜನರ ಪ್ರಶಂಸೆಗೂ ಪಾತ್ರರಾಗುತ್ತಿದ್ದಾರೆ.

ಊರವರ ದೃಷ್ಟಿಯಲ್ಲಿ ಇಂಥ ಕೆಲವರು ಹರಿಶ್ಚಂದ್ರ, ಧರ್ಮರಾಯ, ಬಂಗಾರದ ಮನುಷ್ಯ ಇತ್ಯಾದಿ. ಅವರಿಗೆ ಆ ಊರಿನಲ್ಲಿ ಅದೇ ಹೆಸರು. ಯಾರ ಹತ್ತಿರವೂ ನಿಷ್ಠುರವಿಲ್ಲ. ಅವರ ಕೆಲಸದಲ್ಲಿ ತೃಪ್ತರು. ಒಂದೇ ಒಂದು ಪ್ರಕರಣವೂ ಇವರ ವಿರುದ್ಧ ದಾಖಲಾಗಿರುವುದಿಲ್ಲ. ಅಷ್ಟು ಪರಿಶುದ್ಧ ವ್ಯಕ್ತಿತ್ವ. ಅವರು ಓದಿರಬಹುದು ಅಥವಾ ಓದದಿರಬಹುದು. ಬಡವರಿರಬಹುದು ಅಥವಾ ಶ್ರೀಮಂತರಿರಬಹುದು. ವರ್ಷಕ್ಕೊಮ್ಮೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವಂತೆ ಮೌಲ್ಯಾಧಾರಿತ ಜೀವನ ಕ್ಷೇತ್ರದಲ್ಲಿ ಇಂಥವರನ್ನೂ ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಬೇಕು. ನೈತಿಕ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿ ಆದರ್ಶ ಬದುಕನ್ನು ಸಾಗಿಸಿದ್ದೇ ಇವರ ದೊಡ್ಡ ಸಾಧನೆ. ಮೊದಲು ಪ್ರತೀ ಗ್ರಾಮ ಮಟ್ಟದಲ್ಲಿ ಇಂಥವರನ್ನು ಗುರು ತಿಸುವ ಕೆಲಸವಾಗಬೇಕು. ಹೀಗೆ ಗ್ರಾಮೀಣ ಮಟ್ಟದಲ್ಲಿ ಆಯ್ಕೆಯಾದವರನ್ನು ಜಿಲ್ಲಾ ಮಟ್ಟದಲ್ಲಿ ಗಣ್ಯರ ಸಮ್ಮುಖ ದಲ್ಲಿ ಪ್ರಶಸ್ತಿಯನ್ನಿತ್ತು ಗೌರವಿಸಬೇಕು.

ಪ್ರಶಸ್ತಿ ಯಾರಿಗೇ ಒಲಿಯಲಿ. ಅದಕ್ಕಾಗಿ ಸ್ಪರ್ಧೆ ನಡೆದೇ ನಡೆಯುತ್ತದೆ. ಇದು ಸಹಜವೂ ಹೌದು. ನೈತಿಕ ಮೌಲ್ಯಗಳ ವಿಚಾರದಲ್ಲೂ ಇದೇ ವಿಧದ ಸ್ಪರ್ಧೆ ನಡೆದರೆ ಮೌಲ್ಯಗಳು ವೃದ್ಧಿಸಬಹುದಲ್ಲವೇ? ಎಂಥ ಕಠಿನ ಸಂದರ್ಭದಲ್ಲೂ ನೈತಿಕ ಮೌಲ್ಯಗಳನ್ನು ಬಲಿ ಕೊಡದ ಸಾಧಕರಿಗೆ ಈ ಪ್ರಶಸ್ತಿ ಸಂತೋಷದ ಸಂಗತಿಯಾಗುವುದಿಲ್ಲವೇ? ಇಂಥವರನ್ನು ಗುರುತಿಸಿ ಗೌರವಿಸುವುದು ಸಮಾಜದಲ್ಲಿ ಇತರರಿಗೂ ಪ್ರೇರಣೆಯಾಗಬಹುದಲ್ಲವೇ?

– ಡಾ| ಶ್ರೀಕಾಂತ್‌ ಸಿದ್ದಾಪುರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.