Mahalaya Amavasya 2023: ಹಿಂದಿನ ತಲೆಮಾರುಗಳಿಗೆ ಕೃತಜ್ಞತೆ 


Team Udayavani, Oct 14, 2023, 10:49 AM IST

tdy-7

ಮಹಾಲಯ ಅಮಾವಾಸ್ಯೆಯು ದಸರೆಯ ಪ್ರಾರಂಭದ ದಿನವಾಗಿದೆ. ಈ ದಿನವು ನಮ್ಮ ಜೀವನ ಸುಗಮವಾಗಿ ನಡೆಯಲು ಅನುಕೂಲ ಮಾಡಿಕೊಟ್ಟ ಹಿಂದಿನ ಎಲ್ಲ ತಲೆಮಾರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಲು ಮೀಸಲಾದ ವಿಶೇಷ ದಿನವಾಗಿದೆ.

ಈ ಭೂಮಿಯ ಮೇಲೆ ಮನುಷ್ಯರು ಮತ್ತು ಅವರ ಪೂರ್ವಜರು ಸುಮಾರು 20 ದಶ ಲಕ್ಷ ವರ್ಷಗಳಿಂದ ಜೀವಿಸಿದ್ದಾರೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಇದು ಬಹಳ ದೀರ್ಘ‌ ಸಮಯ. ನಮಗಿಂತ ಈ ಹಿಂದೆ ಈ ಭೂಮಿಯ ಮೇಲೆ ಜೀವಿಸಿದ ಈ ಎಲ್ಲ ನೂರಾರು ಸಾವಿರಾರು ತಲೆಮಾರುಗಳು ನಮಗೆ ಒಂದಲ್ಲ ಒಂದು ಕೊಡುಗೆಯನ್ನು ನೀಡಿದ್ದಾರೆ. ನಾವು ಮಾತನಾಡುವ ಭಾಷೆ, ನಾವು ಕುಳಿತುಕೊಳ್ಳುವ ರೀತಿ, ನಮ್ಮ ವಸ್ತ್ರಗಳು, ನಮ್ಮ ಕಟ್ಟಡಗಳು – ನಮಗೆ ಇಂದು ಗೊತ್ತಿರುವ ಬಹುತೇಕ ಸಂಗತಿಗಳು ನಮ್ಮ ಹಿಂದಿನ ತಲೆಮಾರುಗಳಿಂದ ಬಂದಿವೆ.

ಈ ಭೂಮಿಯ ಮೇಲೆ ಪ್ರಾಣಿಗಳು ಮಾತ್ರ ಇದ್ದಾಗ, ಬದುಕುವುದು, ತಿನ್ನುವುದು, ನಿದ್ರಿಸುವುದು, ಸಂತಾನೋತ್ಪತ್ತಿ ಮಾಡುವುದು ಮತ್ತು ಒಂದು ದಿನ ಸಾಯುವುದೇ ಜೀವನ ಪ್ರಕ್ರಿಯೆ ಆಗಿತ್ತು. ಅನಂತರ ನಿಧಾನವಾಗಿ, ಬದುಕುಳಿಯು­ವುದನ್ನು ಮಾತ್ರ ತಿಳಿದಿದ್ದ ಈ ಪ್ರಾಣಿಯು ವಿಕಾಸಗೊಳ್ಳಲು ಆರಂಭಿಸಿತು. ಅಡ್ಡವಾಗಿ ನಡೆದಾಡುತ್ತಿದ್ದ ಅದು ನೇರವಾಗಿ ನಿಂತುಕೊಳ್ಳಲು ಕಲಿಯಿತು; ಮೆದುಳು ಬೆಳೆಯಲು ಪ್ರಾರಂಭಿಸಿತು ಮತ್ತು ಕೆಲಸಗಳನ್ನು ಮಾಡುವ ಸಾಮರ್ಥ್ಯ ಇದ್ದಕ್ಕಿದ್ದಂತೆಯೇ ವೃದ್ಧಿಸತೊಡಗಿತು. ಮನುಷ್ಯರ ವಿಶಿಷ್ಟತೆ­ಯೇ­ನೆಂದರೆ ನಾವು ಉಪಕರಣಗಳನ್ನು ಬಳಸಬಲ್ಲೆವು. ಉಪಕರಣ­ಗಳನ್ನು ಬಳಸುವ ನಮ್ಮ ಈ ಸರಳ ಸಾಮರ್ಥ್ಯ­ದಿಂದ, ನಾವು ತಂತ್ರಜ್ಞಾನಗಳನ್ನು ಸೃಷ್ಟಿಸಿ, ವೃದ್ಧಿಸಿಕೊಂಡಿ­ದ್ದೇವೆ. ವಾನರವೊಂದು ಕೇವಲ ತನ್ನ ಕೈಗಳನ್ನು ಉಪಯೋಗಿಸುವ ಬದಲಾಗಿ, ಮತ್ತೂಂದು ಪ್ರಾಣಿಯ ತೊಡೆಯ ಮೂಳೆಯನ್ನು ಎತ್ತಿ­ಕೊಂಡು ಹೋರಾಡಲು ಪ್ರಾರಂಭಿಸಿದ ದಿನ; ತನ್ನ ಜೀವನವನ್ನು ಸಾಗಿಸಲು ತನ್ನ ಶರೀರವನ್ನು ಉಪಯೋಗಿಸುವ ಬದಲಾಗಿ, ಉಪಕರಣ­ಗಳನ್ನು ಬಳಸಲು ಬೇಕಾದ ಬುದ್ಧಿಶಕ್ತಿ­ಯನ್ನು ಹೊಂದಿದಾಗ, ಒಂದು ರೀತಿಯಲ್ಲಿ ಭೂಮಿಯ ಮೇಲೆ ಮನುಷ್ಯನ ಜೀವನ ಪ್ರಾರಂಭವಾಯಿತು.

ಅನಂತರ ಮನುಷ್ಯರು ತಾವು ಪ್ರಾಣಿಗಳಿಗಿಂತ ಉತ್ತಮ­ವಾಗಿ ಜೀವಿಸಬಹುದೆಂಬುದನ್ನು ತಿಳಿದು ತಮ್ಮ ಜೀವನವನ್ನು ರೂಪಿಸಿಕೊಳ್ಳತೊಡಗಿದರು. ಮನೆಗಳು, ಕಟ್ಟಡಗಳು ನಿರ್ಮಿಸಲ್ಪಟ್ಟವು, ಬಟ್ಟೆಗಳನ್ನು ತಯಾರಿಸಲಾಯಿತು ಮನುಷ್ಯರಿಂದ ಭೂಮಿಯ ಮೇಲೆ ಇನ್ನೂ ಅನೇಕ ಸಂಗತಿಗಳು ಸಂಭವಿಸಿದವು. ಬೆಂಕಿಯನ್ನು ಸೃಷ್ಟಿಸುವುದ­ರಿಂದ ಹಿಡಿದು ಚಕ್ರವನ್ನು ಕಂಡು ಹಿಡಿಯುವವರೆಗೆ ಮತ್ತು ಇನ್ನೂ ಅಸಂಖ್ಯ ಸಂಗತಿಗಳೂ ಸೇರಿ, ಈ ಬಳುವಳಿಯು ತಲೆಮಾರಿನಿಂದ ತಲೆಮಾರಿಗೆ ವರ್ಗಾವಣೆಯಾಗುತ್ತಾ ಬಂದಿದೆ. ಆ ಬಳುವಳಿಯೇ ಇಂದು ನಾವು ಏನಾಗಿದ್ದೇವೋ ಅದಕ್ಕೆ ಕಾರಣ. ಮನುಷ್ಯರು ಇದುವರೆಗೂ ಬಟ್ಟೆಯನ್ನೇ ಹಾಕಿಕೊಂಡಿಲ್ಲ ಎಂದುಕೊಳ್ಳೋಣ ಮತ್ತು ಒಂದು ಅಂಗಿಯನ್ನು ಹೊಲಿಯಬೇಕಾದ ಮೊದಲ ವ್ಯಕ್ತಿ ನೀವೇ ಎಂದುಕೊಳ್ಳಿ, ಅದೇನೂ ಅಷ್ಟು ಸುಲಭವಲ್ಲ; ಒಂದು ಅಂಗಿಯನ್ನು ಹೇಗೆ ಹೊಲಿಯಬೇಕೆನ್ನುವುದನ್ನು ಕಂಡುಕೊಳ್ಳಲು ಅನೇಕ ವರ್ಷಗಳು ಬೇಕಾಗುತ್ತದೆ.

ಪಿತೃಪಕ್ಷ: ಕೃತಜ್ಞತೆಗಳ ಅಭಿವ್ಯಕ್ತಿ

ಇಂದು ನಾವು ನಮಗೆ ಸಿಗುವ ಎಲ್ಲವನ್ನೂ ಸಾರಾ­ಸಗಟಾಗಿ ನಮ್ಮದೇ ಎಂದು ಭಾವಿಸಿಕೊಂಡಿದ್ದೇವೆ. ಆದರೆ ಹಿಂದಿನ ತಲೆಮಾರುಗಳಿಲ್ಲದೇ ಹೋದರೆ, ಮೊದಲನೆಯ­ದಾಗಿ ನಾವೇ ಇರುತ್ತಿರಲಿಲ್ಲ; ಎರಡನೆಯದಾಗಿ ಅವರ ಕೊಡುಗೆಯಿಲ್ಲದೇ ಇದ್ದಿದ್ದರೆ, ಈಗ ನಮ್ಮ ಬಳಿ ಇಷ್ಟೆಲ್ಲ ಇರುತ್ತಿರಲಿಲ್ಲ. ಹಾಗಾಗಿ ಅವೆಲ್ಲವನ್ನೂ ನಮ್ಮದೇ ಎಂದು ಭಾವಿಸದೇ, ಈ ದಿನ ನಾವು ಅವರೆಲ್ಲರಿಗೂ ನಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಅದನ್ನು ಮೃತರಾದ ತಂದೆ ತಾಯಿಗಳಿಗೆ ಮಾಡುವ ಧಾರ್ಮಿಕ ಕ್ರಿಯೆ ಎಂಬಂತೆ ಮಾಡಲಾಗುತ್ತಿದೆ; ಆದರೆ ವಾಸ್ತವವಾಗಿ ಅದು ಹಿಂದಿನ ತಲೆಮಾರುಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿದೆ.

ಈ ಸಮಯದಲ್ಲಿ, ಭಾರತೀಯ ಉಪಖಂಡದಲ್ಲಿ, ಹೊಸ ಬೆಳೆಗಳು ಫಲನೀಡಲು ಪ್ರಾರಂಭಿಸಿರುತ್ತವೆ. ಹಾಗಾಗಿ ಗೌರವ ಮತ್ತು ಕೃತಜ್ಞತೆಯ ಸೂಚಕವಾಗಿ ಮೊದಲ ಫಸಲನ್ನು ಪಿಂಡದ ರೂಪದಲ್ಲಿ ಪೂರ್ವಜರಿಗೆ ಸಲ್ಲಿಸಲಾಗುತ್ತದೆ. ಅನಂತರ ನವರಾತ್ರಿ, ವಿಜಯ ದಶಮಿ ಮತ್ತು ದೀಪಾವಳಿ ಮೊದಲಾದ ಇನ್ನಿತರ ಹಬ್ಬಗಳನ್ನು ಆಚರಿಸಿ ಸಂಭ್ರಮಿಸಲಾಗುತ್ತದೆ.

-ಸದ್ಗುರು

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.