ಗಾಂಧಿ ಉಳಿದಿದ್ದ ಮನೆಯ ಹೆಸರು ಇಡೀ ವಾರ್ಡ್‌ಗೆ !


Team Udayavani, Aug 14, 2021, 7:30 AM IST

ಗಾಂಧಿ ಉಳಿದಿದ್ದ ಮನೆಯ ಹೆಸರು ಇಡೀ ವಾರ್ಡ್‌ಗೆ !

ಕುಂದಾಪುರ ಪುರಸಭೆಯ 23 ವಾರ್ಡ್‌ಗಳ ಪೈಕಿ ಶಾಂತಿ ನಿಕೇತನ ಸಹ ಒಂದು. ಶಾಸ್ತ್ರಿ ವೃತ್ತದಿಂದ ಸರ್ವಿಸ್‌ ರಸ್ತೆಯಲ್ಲಿ ಸಾಗುವಾಗ ಶಾಂತಿನಿ ಕೇತನ ಎಂಬ ಕಬ್ಬಿಣದ ಸ್ವಾಗತ ಕಮಾನು ಸಿಗುತ್ತದೆ. ಅದರ ಬುಡದಲ್ಲೇ “ಶಾಂತಿ ನಿಕೇತನ ಗಾಂಧಿ ನೆಹರೂ ನಿಲಯ 1934, 1937′ ಎಂದಿದೆ.

ಈ ದ್ವಾರ ಪ್ರವೇಶಿಸಿ ಸ್ವಲ್ಪ ದೂರ ಸಾಗಿದಾಗ ಇದ್ದ ಶಾಂತಿನಿಕೇತನ ಎಂಬ ಮನೆ ಯಲ್ಲಿ ಗಾಂಧಿ ತಂಗಿದ್ದರು. ಹಾಗಾಗಿ ಇಡೀ ವಾರ್ಡ್‌ಗೆ ಶಾಂತಿನಿಕೇತನ ಎಂದು ಕರೆಯಲಾಯಿತು. ಜವಾಹರ ಲಾಲ್‌ ನೆಹರೂ ಹಾಗೂ ಇಂದಿರಾ ಗಾಂಧಿ ಇದೇ ಮನೆಯಲ್ಲಿ ಉಳಿದಿದ್ದರಂತೆ. 1934ರ ಫೆ. 22ರಂದು ತಮಿಳುನಾಡು ಪ್ರವಾಸ ಮುಗಿಸಿ ರೈಲಿನಲ್ಲಿ ಮೈಸೂ ರು ತಲುಪಿ ಕೊಡ ಗಿಗೆ ಬಂದರು. ಅಲ್ಲಿಂದ ಕಾರಿನಲ್ಲಿ ದಕ್ಷಿಣ ಕನ್ನಡಕ್ಕೆ ಆಗಮಿಸಿದ್ದರು. ದಾರಿ ಯುದ್ದಕ್ಕೂ ವಿವಿಧೆಡೆ ನಿಧಿ ಸಂಗ್ರಹ, ಸಭೆಗಳಲ್ಲಿ ಪಾಲ್ಗೊಂಡು ಜನರನ್ನು ಚಳವಳಿಗೆ ಹುರಿದುಂಬಿಸಿ ದರು. ಮೂಲ್ಕಿ, ಪಡುಬಿದ್ರಿ, ಕಾಪು, ಉದ್ಯಾವರ, ಕಟಪಾಡಿ, ಉಡುಪಿ,  ಕೋಟ ಮಾರ್ಗವಾಗಿ ಫೆ. 25 ರಾತ್ರಿ 8ಕ್ಕೆ ಕುಂದಾಪುರ ತಲುಪಿದ್ದರು.  ದೊಂದಿ ಬೆಳಕಿನಲ್ಲೇ ಹಿರಿಯ ಸಾಹು ಕಾರ್‌ ಮಂಜಯ್ಯ ಶೇರಿಗಾರ್‌ ಅಧ್ಯಕ್ಷತೆಯ ಸಭೆಯಲ್ಲಿ  ಅಸ್ಪೃಶ್ಯತೆ ವಿರುದ್ಧ ಬಗ್ಗೆ ಭಾಷಣ ಮಾಡಿದ್ದರು.

ಬಳಿಕ ತಮಗೆ ಬಂದ ಉಡುಗೊರೆಗಳನ್ನು ಹರಾಜು ಹಾಕಿ 400 ರೂ.ಗಳನ್ನು ಬಿಹಾರದ ಅತಿವೃಷ್ಟಿ ಪರಿಹಾರ ನಿಧಿಗೆ ಸಂಗ್ರಹಿಸಿದ್ದರು. ರಾತ್ರಿ ನಾರಾಯಣ ಕಾಮತ್‌ರ ಶಾಂತಿ ನಿಕೇತನದಲ್ಲಿ ಉಳಿದು, ಫೆ.26ರಂದು ಮುಂಜಾನೆ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು. ಬಳಿಕ ಇಡೀ ದಿನ ಮೌನವ್ರತ ಆಚರಿಸಿದ್ದರು. ಮರು ದಿನ ಗಂಗೊಳ್ಳಿಗೆ ತೆರಳಿ “ದಯಾವತಿ’ ಎಂಬಉಗಿ ಹಡಗಿ (ಸ್ಟೀಮರ್‌) ನಲ್ಲಿ ಕಾರವಾರಕ್ಕೆ ಹೋದರು.

ಉಭಯಜಿಲ್ಲೆಗಳ ಭೇಟಿ ಸಮಯದಲ್ಲಿ ನದಿಗಳನ್ನು ದಾಟಲು ಹಲವು ದೋಣಿಗಳನ್ನು ಇಟ್ಟು ಹಲಗೆಗಳಿಂದ “ಜಂಗಲ್‌’ ನಿರ್ಮಿಸಲಾಗುತ್ತಿತ್ತು. ಇದರಲ್ಲಿ ಗಾಂಧಿ ಬಳಗ ಹಾಗೂ ಅವರು ಪ್ರಯಾಣಿಸುತ್ತಿದ್ದ ಕಾರು ನದಿಯನ್ನು ದಾಟುತ್ತಿತ್ತು.

ಶಾಂತಿ ನಿಕೇತನದಲ್ಲಿ ನಾರಾಯಣ ಕಾಮತರ ಪುತ್ರ ಗೋಪಾಲಕೃಷ್ಣ ಕಾಮತ್‌ ವಾಸವಿದ್ದರು. 1960ರಲ್ಲಿ ಗಾಂಧೀಜಿ ನೆನಪಿನಲ್ಲಿ ಸ್ವಾಗತ ಕಮಾನು ರಚಿಸಿ ರಸ್ತೆಗೆ ಶಾಂತಿನಿಕೇತನ ಎಂಬ ಹೆಸರು ಇಡಲಾಯಿತು. ಅನೇಕ ವರ್ಷಗಳ ಕಾಲ ಗಾಂಧಿ ತಂಗಿದ್ದ ಮನೆಯಿತ್ತು. ಕೆಲವು ವರ್ಷಗಳ ಹಿಂದೆ ಈ ಜಾಗವನ್ನು ಸುರೇಶ್‌ ಬೆಟ್ಟಿನ್‌ ಅವರು ಖರೀದಿಸಿದ್ದಾರೆ. ಈಗ ಹಳೆಯ ಮನೆಯೂ ಇಲ್ಲ. ಒಂದು ಸಣ್ಣ ಕುರುಹಷ್ಟೇ ಇದೆ. ಹೆಸರು ಶಾಶ್ವತ ವಾಗಿದೆ.

ಕಾರ್ನಾಡಿನ ಪಂಚಾಯತ್‌ ಮೈದಾನ :

ಸ್ವಾತಂತ್ರ್ಯಕ್ಕಿಂತ ಸುಮಾರು 150 ವರ್ಷಗಳ ಹಿಂದೆ ಮೂಲ್ಕಿ ಕರಾ ವಳಿಯ ಪ್ರಮುಖ ಕೇಂದ್ರ.  ಬಪ್ಪನಾಡು ಶಂಭು ಶೆಟ್ಟಿ, ಮಾಜಿ ಶಾಸಕ ಡಾ| ಸಂಜೀವನಾಥ ಐಕಳ, ಉಪ್ಪಿಕಳ ರಾಮರಾವ್‌, ಕೋಟೆಕೇರಿ ಸಂಜೀವ ಕಾಮತ್‌ ಮತ್ತಿತರರು ಸ್ವಾತಂತ್ರ್ಯ ಚವಳಿಯಲ್ಲಿ ಜೈಲುವಾಸ ಅನುಭವಿಸಿದ್ದ ಪ್ರಮುಖರು. ಸಮಾಜ ಸೇವಕ ಮೂಲ್ಕಿ ರಾಮಕೃಷ್ಣ ಪೂಂಜ ಅವರ ನಾಯಕತ್ವದಲ್ಲಿ ಡಾ| ರಾಯಪ್ಪ ಕಾಮತ್‌, ಬಂಗ್ಗೆ ಸೀತಾರಾಮ ಕಾಮತ್‌ ಮತ್ತು ಬೋಳ ನಾರಾಯಣ ರಾವ್‌ ಮತ್ತು ಬಪ್ಪನಾಡು ಭೋಜ ರಾವ್‌ ಮುಂತಾದ ಹಲವು ನಾಯಕರು ಹೋರಾಟಕ್ಕೆ ಧುಮುಕಿದರು.

ಇಂಥ ಊರಿಗೆ ಆಗಮಿಸಿದ ಗಾಂಧೀಜಿ, ಕಾರ್ನಾಡಿನ ಮೈದಾನದಲ್ಲಿ  ಜನರನ್ನು ಉದ್ದೇಶಿಸಿ ಮಾತನಾಡಿದರು. ಆದೇ ಮೈದಾನ ಇಂದು ಗಾಂಧಿ ಮೈದಾನ ಎಂದೇ ಪ್ರಸಿದ್ಧವಾಯಿತು. ಮೂಲ್ಕಿಯ ರಾಮಕೃಷ್ಣ ಪೂಂಜರ ಮನೆಯಲ್ಲಿ ಗಾಂಧೀಜಿ 2 ದಿನ ತಂಗಿದ್ದರು. ಪೂಂಜರ ಮೂಲಕ ಸ್ಥಳೀಯರು ಚಳವಳಿಗೆ ನಗ-ನಗದು ದೇಣಿಗೆಯನ್ನು ಅರ್ಪಿಸಿದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.