ಪಟಾಕಿಯ ಜೊತೆ ನೆನಪುಗಳನ್ನು ಮೆಲುಕು ಹಾಕುವ ದೀಪಾವಳಿ


Team Udayavani, Nov 5, 2021, 1:40 PM IST

ಪಟಾಕಿಯ ಜೊತೆ ನೆನಪುಗಳನ್ನು ಮೆಲುಕು ಹಾಕುವ ದೀಪಾವಳಿ

ದೀಪಾವಳಿ ಎಂದಾಕ್ಷಣ ನೆನಪಾಗುವುದೇ ಪಟಾಕಿಗಳು. ಇತರ ಯಾವುದೇ ಕಾರ್ಯಕ್ರಮಗಳಿಗಿಂತ ಪಟಾಕಿ ಸಿಡಿಸುವ ವಿಷಯವೇ ಅತಿ ಹೆಚ್ಚು ಖುಷಿ ಕೊಡುತ್ತದೆ.

ಮುಂಜಾನೆ ಬೇಗ ಎದ್ದು ಅಜ್ಜಿಯಿಂದ ಎಣ್ಣೆ ಹಚ್ಚಿಸಿಕೊಂಡು ಮತ್ತೆ ಕೆಲವು ಸಮಯ ಪಟಾಕಿ ಬಿಡುವ ಸಂಭ್ರಮ ಅಷ್ಟಿಷ್ಟಲ್ಲ. ಬಣ್ಣ ಬಣ್ಣದ, ವಿಧವಿಧದ ಪಟಾಕಿಗಳಿಲ್ಲದೆ ದೀಪಾವಳಿ ಪೂರ್ಣಗೊಳ್ಳುವುದಿಲ್ಲ. ಬಾಲ್ಯದ ದಿನಗಳಿಂದಲೂ ನಾನು ನನ್ನ ತಮ್ಮ ದೀಪಾವಳಿ ಹಬ್ಬಕ್ಕೆ ಕಾತರಿಸುತ್ತಿದ್ದೆವು. ಒಂದು ವಾರದ ಮೊದಲೇ ಹಣತೆಗಳನ್ನು ಜೋಡಿಸಿ, ಗೂಡುದೀಪಗಳನ್ನು ಸಿದ್ಧಪಡಿಸುತ್ತಿದ್ದೆವು.

ದೀಪಾವಳಿಯ ಪ್ರಮುಖ ಆಕರ್ಷಣೆಯೇ ಪಟಾಕಿ. ನೆರೆಮನೆಯವರೆಲ್ಲ ಸೇರಿ ವಠಾರದಲ್ಲಿ ಅದ್ದೂರಿಯಾಗಿ ದೀಪಾವಳಿ ಆಚರಿಸಿ ಪಟಾಕಿ ಸಿಡಿಸಿ ಮರುದಿನ ಪಟಾಕಿ ಕಸವನ್ನು ಒಟ್ಟು ಮಾಡುವುದು ಇನ್ನೊಂದು ಖುಷಿ.

ಅದೊಂದು ವರ್ಷ ಅಪ್ಪ ‘ಪಟಾಕಿ ರಹಿತ ದೀಪಾವಳಿ’ ಆಚರಿಸುವುದೆಂದು ನಿರ್ಧರಿಸಿದರು. ಎಣ್ಣೆ ಸ್ನಾನ ಮಾಡಿ ಹೊಸಬಟ್ಟೆ ತೊಟ್ಟು ದೇವರ ಹಾಗು ಹಿರಿಯರ ಆಶೀರ್ವಾದ ಪಡೆದು ಸರಳ ದೀಪಾವಳಿ ಮಾಡುವುದೆಂದು ಹೇಳಿದರು. ವರ್ಷ ಪೂರ್ತಿ ಪಟಾಕಿಗಳಿಗೆ ಕಾಯುತ್ತಿದ್ದ ನಮಗೆ ಶೀತ ಹಿಡಿದ ಪಟಾಕಿಗಳು ಉರಿಸಿದ ಹಾಗಾಯಿತು. ಪಟಾಕಿ ಹೊಡೆಯುವ ಸಂದರ್ಭದಲ್ಲೇ ಜಡಿ ಮಳೆ ಸುರಿದಂತಾಯಿತು. ಇಬ್ಬರೂ ಮೋರೆ ಸಪ್ಪೆ ಮಾಡಿಕೊಂಡು ಕುಳಿತೆವು. ಹಬ್ಬಕ್ಕೆ ಎಲ್ಲ ತಯಾರಿ ಆದರೂ ನಾವು ತಯಾರಿರಲಿಲ್ಲ. ದಿನವಿಡೀ ನಮ್ಮನ್ನು ಸಪ್ಪೆ ಮೋರೆಯಲ್ಲಿ ನೋಡಿ ಅಪ್ಪ ಕೊನೆಗೂ ಪಟಾಕಿ ಅಂಗಡಿಗೆ ಕರೆದುಕೊಂಡು ಹೋದರು. ನಮಗೆ ಬೇಕಾದಷ್ಟು ಪಟಾಕಿಗಳನ್ನು ಚೀಲದಲ್ಲಿ ತುಂಬಿ ನೆಲಚಕ್ರದಂತೆ ಕುಣಿದಾಡಲು ಆರಂಭಿಸಿದೆವು. ಆ ವರ್ಷದ ದೀಪಾವಳಿ ಮರೆಯಲಾಗದ ಸವಿನೆನಪು. ಪ್ರತಿ ವರ್ಷವೂ ದೀಪಾವಳಿ ಬಂದಾಗ ಈ ನೆನಪುಗಳನ್ನು ಮೆಲುಕು ಹಾಕುತ್ತೇವೆ.

ವೈಷ್ಣವೀ ಜೆ.ರಾವ್

ಅಂಬಿಕಾ ಕಾಲೇಜು, ಬಪ್ಪಳಿಗೆ, ಪುತ್ತೂರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.