ಸ್ವಾತಂತ್ರ್ಯ ಮತ್ತು ಸಮಾನತೆಯ ಹೋರಾಟವನ್ನು ಸಾರುವ ಮೊಹರಂ


Team Udayavani, Sep 21, 2018, 5:42 AM IST

bottom.jpg

ಮೊಹರಂ ಮುಖ್ಯವಾಗಿ ಸತ್ಯಕ್ಕಾಗಿ, ನ್ಯಾಯಕ್ಕಾಗಿ ನಿರಂಕುಶ ದಬ್ಟಾಳಿಕೆಯ ವಿರುದ್ಧ, ಧೀರತೆಯಿಂದ ಹೋರಾಡಿ, ಆತ್ಮಾರ್ಪಣೆ ಗೈದ ಹಝರತ್‌ ಇಮಾಂ ಹುಸೇನರನ್ನು ಸ್ಮರಿಸುವ ಜಾಗೃತಿಯ ದಿನವೂ, ಆ ಮಹಾನ್‌ ಚೇತನಕ್ಕೆ ಶ್ರದ್ಧಾಂಜಲಿಯನ್ನರ್ಪಿಸುವ ಪುಣ್ಯದ ದಿನವೂ ಆಗಿದೆ. 

ಇಸ್ಲಾಮಿನ ನಾಲ್ಕನೇ ಖಲೀಫ‌ರಾಗಿದ್ದ ಹಝರತ್‌ ಅಲಿ ಅವರು ಖೀಲಾಫ‌ತನ್ನು ನಿರ್ವಹಿಸಿದ ಅನಂತರ, ಐದನೇ ಖಲೀಫ‌ರಾಗಿ ಅಮೀರ್‌ ಮುಅವಿಯಾರವರು ಆಯ್ಕೆಯಾದರು. ಅಮೀರ್‌ ಮುಅವಿಯಾರವರು ಮರಣಿಸಿದ 
ಬಳಿಕ ನಾಯಕತ್ವದ ಯಾವ ಅರ್ಹತೆಯೂ ಇಲ್ಲದ ಅವರ ಪುತ್ರ ದುಷ್ಟ ಯಝೀದನು ಸರ್ವಾಧಿಕಾರಿಯಾದನು. ಆದರೆ ಹಝರತ್‌ ಅಲಿಯವರ ಸುಪುತ್ರ, ಇಮಾಂ ಹುಸೇನರಿಗೆ ಕೂಫಾದ ನಾಯಕತ್ವ ದೊರೆಯಬೇಕಿತ್ತು. ಹಝರತ್‌ ಇಮಾಂ ಹುಸೇನರು ಮಾತ್ರ ಆಧ್ಯಾತ್ಮಿಕ ವಿಚಾರಗಳಲ್ಲಿಯೇ ತಲ್ಲೀನರಾಗಿ ಕಾಲ ಕಳೆಯುತ್ತಿದ್ದರು. ಅಧಿಕಾರದ ಲಾಲಸೆ ಅವರಿಗೆ ಎಳ್ಳಷ್ಟೂ ಇಷ್ಟವಿರಲಿಲ್ಲ. ಆದರೆ ಇಸ್ಲಾಮೀ ದೇಶದ ಆಡಳಿತ ಸೂತ್ರವನ್ನು ಕೈಗೆತ್ತಿಕೊಂಡ ದುಷ್ಟ ಯಝೀದನು ಅಧಿಕಾರ ದಾಹದಿಂದ ಧರ್ಮ, ನ್ಯಾಯ, ನೀಡಿ ಇವುಗಳನ್ನೆಲ್ಲಾ ಮರೆತು ತನ್ನ ಇಚ್ಛಾನುಸಾರವಾಗಿ, ಇಸ್ಲಾಮಿನ ಉನ್ನತ ಮೌಲ್ಯಗಳ ವಿರುದ್ಧವಾಗಿಯೇ ರಾಜ್ಯಭಾರವನ್ನು ನಿರ್ವಹಿಸುತ್ತಿದ್ದನು. 

ಅಧಿಕಾರ ಗದ್ದುಗೆಯನ್ನೇರಿದ ದುಷ್ಟ ಯಝೀದನ ದುರಾಡಳಿತದಿಂದ ಪ್ರಜೆಗಳು ಕಂಗೆಟ್ಟರು. ಕೂಫಾದ ಜನರ ಒತ್ತಾಯಕ್ಕೆ ಮಣಿದು ಹಝರತ್‌ ಇಮಾಂ ಹುಸೇನರು ತನ್ನ ತಾತರು ರೂಪಿಸಿದ ರಾಜಕೀಯ ಸ್ಥಿರತೆಯ ಪುನರುತ್ಥಾನಕ್ಕಾಗಿ ದುಷ್ಟ ಯಝೀದನ ವಿರುದ್ಧ ಹೋರಾಡಬೇಕಾದುದು ಅಂದು ಅನಿವಾರ್ಯವಾಗಿತ್ತು.
ಹಿಜರೀ ಶಕ ಅರುವತ್ತೂಂದರ ಮೊಹರಂ ತಿಂಗಳ ಹತ್ತರಂದು ಇರಾಕ್‌ ದೇಶದ ಯುಪ್ರಟಿಸ್‌ ನದೀ ತೀರದ ಕರ್ಬಲಾ ಮೈದಾನದಲ್ಲಿ ಯುಝೀದನ ಅಸಂಖ್ಯಾತ ಸೈನಿಕರನ್ನು ಹಝರತ್‌ ಇಮಾಂ ಹುಸೇನರು ಕೇವಲ ತನ್ನ ಎಪ್ಪತ್ತೆರಡು ಮಂದಿ ಅನುಯಾಯಿಗಳ ಜತೆಗೆ ಎದುರಿಸಿದರು. ಇದು ಹಝರತ್‌ ಇಮಾಂ ಹುಸೇನರು ಅನ್ಯಾಯದ ವಿರುದ್ಧ ನಡೆಸಿದ ಭೀಕರ ಹೋರಾಟವಾಗಿತ್ತು. ಈ ಕದನದಲ್ಲಿ ಸೋಲು ತನ್ನ ಪಾಲಿಗೆ ಖಚಿತವೆಂದು ಇಮಾಂ ಹುಸೇನರು ಭಾವಿಸಿದ್ದರೂ ಅದು ಸತ್ಯ, ನ್ಯಾಯ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಸಿದ ಅಪೂರ್ವ ಕದನವಾಗಿತ್ತು. ಹಝರತ್‌ ಇಮಾಂ ಹುಸೇನರು ಕರ್ಬಲಾ ರಣಾಂಗಣದಲ್ಲಿ, ವೀರಾವೇಶದಿಂದ ಹೋರಾಡಿ ಮೊಹರಂ ಹತ್ತರಂದು ಹುತಾತ್ಮರಾದರು.

ಹಝರತ್‌ ಇಮಾಂ ಹುಸೇನರು ಇಸ್ಲಾಮಿನ ಉನ್ನತ ಮೌಲ್ಯಗಳ ಸಂಸ್ಥಾಪನೆಗಾಗಿ ವೀರಾವೇಶದ ಹೋರಾಟದ ಮೂಲಕ ಅಮರ ಜ್ಯೋತಿಯೊಂದನ್ನು ಹೊತ್ತಿಸಿ ಹೋದರು. ಅವರು ಹುತಾತ್ಮರಾಗಿ ಇಂದು ಸಾವಿರದ ನಾನ್ನೂರು ವರ್ಷಗಳು ಸಂದರೂ ಆ ಜ್ಯೋತಿಯು ಇನ್ನೂ ನಂದದೇ ಅಮರವಾಗಿಯೇ ಉಳಿದಿದೆ. 

ಪ್ರವಾದಿ ಇಬ್ರಾಹಿಮರು ಇರಾಕ್‌ ದೇಶದ ಆಗಿನ ರಾಜನಾಗಿದ್ದ ದುಷ್ಟ ನಮೂದನ ನಿರಂಕುಶ ಪ್ರಭುತ್ವಕ್ಕೆ ಮಣಿಯದಿರಲು ಅವರನ್ನು ಉರಿಯುವ ಅಗ್ನಿ ಕುಂಡಕ್ಕೆ ದೂಡಿ ಕೊಲ್ಲಲು ಯತ್ನಿಸಿರುವುದೂ ಮೊಹರಂ ಹತ್ತರಂದು. ಆದರೆ ಪ್ರವಾದಿ ಇಬ್ರಾಹಿಮರು ಮಾತ್ರ ಪವಾಡ ಸದೃಶರಾಗಿ ಈ ಅನಾಹುತದಿಂದ ಪಾರಾಗಿ ಮನುಕುಲಕ್ಕೆ ಸತ್ಯ ಮತ್ತು ನ್ಯಾಯವನ್ನು ಲೀಲಾಜಾಲವಾಗಿ ತೋರಿಸಿಕೊಟ್ಟ ಮಹತ್ವದ ದಿನವೂ ಮೊಹರಂ ಹತ್ತರಂದೇ ಆಗಿದೆ. ಪ್ರವಾದಿ ಮೂಸಾರವರ ಬೋಧನೆಗಳನ್ನು ಧಿಕ್ಕರಿಸಿ ನಡೆದ ಸರ್ವಾಧಿಕಾರಿ ಫಿರ್‌ಔನನು ನೈಲ್‌ ನದಿಯಲ್ಲಿ ಮುಳುಗಿ ನಾಶವಾದ ದಿನವೂ ಮೊಹರಂ ಹತ್ತರಂದೇ ಆಗಿದೆ. ಒಟ್ಟಿನಲ್ಲಿ ಇತಿಹಾಸದುದ್ದಕ್ಕೂ ವಿಪತ್ತುಗಳು, ವಿನಾಶಗಳು ಮತ್ತು ಅನುಗ್ರಹಗಳು ಘಟಿಸಿ ಹೋದ ದಿನ ಮೊಹರಂ ಹತ್ತು. ಇದು ನಿರಂಕುಶ ಪ್ರಭುತ್ವಕ್ಕೆ, ಕೊಡಲಿ ಏಟನ್ನಿತ್ತ ಚಾರಿತ್ರಿಕ ದಿನವೂ, ಪ್ರಜಾಸತ್ತೆಯ ಅಭೂತಪೂರ್ವ ವಿಜಯದ ದಿನವೂ ಆಗಿದೆ. ಮೊಹರಂ ಹತ್ತು ಸರ್ವಾಧಿಕಾರಿ ಆಡಳಿತದ ವಿರುದ್ಧ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಅದ್ಭುತ ರಮ್ಯ ಕ್ಷಣ
ಗಳನ್ನು ನಮ್ಮ ಮುಂದೆ ಅನಾವರಣಗೊಳಿಸುತ್ತದೆ. ಒಟ್ಟಿನಲ್ಲಿ ಮೊಹರಂನ ಇತಿಹಾಸವು ಸ್ವಾತಂತ್ರ್ಯ ಹಾಗೂ ಸಮಾನತೆಯ ಪ್ರೇಮಿಗಳಿಗೆ ಸ್ಫೂರ್ತಿದಾಯಕವಾಗಿದೆ. 

ಹಝರತ್‌ ಇಮಾಂ ಹುಸೇನರು ತನ್ನ ಬದುಕಿನುದ್ದಕ್ಕೂ ತೋರಿದ ಅಪೂರ್ವ ತ್ಯಾಗದ ಸ್ಫೂರ್ತಿಯು, ಮಾನವ ಬದುಕಿಗೆ ಇಂದು ಅಗತ್ಯವಾಗಿದೆ. ಸತ್ಯ ಹಾಗೂ ನ್ಯಾಯವನ್ನು ಬೆಂಬಲಿಸಿ, ಅಸತ್ಯ ಹಾಗೂ ಅನ್ಯಾಯವನ್ನು ವಿರೋಧಿಸಿ, ಸಮಾಜದಲ್ಲಿ ಪ್ರಾಮಾಣಿಕವಾಗಿ ಜೀವಿಸುವುದೇ ಬದುಕಿನ ಗುರಿ. ಸಾಮಾಜಿಕ ಹಿತಾಸಕ್ತಿಗಾಗಿ ಮಾಡುವ ತ್ಯಾಗವು, ಮನುಷ್ಯನಿಗೆ ಜೀವನದಲ್ಲಿ, ಸುಭಿಕ್ಷೆಯನ್ನೂ ನೆಮ್ಮದಿಯನ್ನೂ, ಆತ್ಮಸಂತೃಪ್ತಿಯನ್ನೂ ನೀಡಬಲ್ಲದು. 
ಮೊಹರಂ ತನ್ನ ವಿಶಾಲ ಅರ್ಥದಲ್ಲಿ ಸತ್ಯ, ನ್ಯಾಯ ಮತ್ತು ಸ್ವಾತಂತ್ರ್ಯ ಪ್ರೇಮದ ಉನ್ನತ ಆದರ್ಶಗಳನ್ನು ಮನುಕುಲಕ್ಕೆ ಸಾರುತ್ತದೆ. ಸತ್ಯ, ನ್ಯಾಯ ಮತ್ತು ಧರ್ಮದ ಉದಾತ್ತ ಆದರ್ಶಗಳನ್ನು ನಾವು ನಿತ್ಯದ ಬದುಕಿನಲ್ಲಿ ರೂಢಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಮತ್ತು ಅರ್ಥಪೂರ್ಣವಾಗುತ್ತದೆ. ಹಝರತ್‌ ಇಮಾಂ ಹುಸೇನರು ಸ್ವಾಭಿಮಾನವನ್ನೂ, ಉನ್ನತ ಆದರ್ಶಗಳನ್ನೂ ಬದುಕಿನಲ್ಲಿ ರೂಢಿಸಿಕೊಂಡಿದ್ದರು. ಆ ಆದರ್ಶಗಳಿಗಾಗಿಯೇ ಅವರು ಜೀವಿಸಿದರು, ಹೋರಾಡಿದರು ಮತ್ತು ಕರ್ಬಲಾ ರಣಾಂಗಣದಲ್ಲಿ ಹುತಾತ್ಮರಾಗಿ ವೀರ ಮರಣವನ್ನಪ್ಪಿದರು. ಹಝರತ್‌ ಇಮಾಂ ಹುಸೇನರ ಆದರ್ಶ ಜೀವನ ಮತ್ತು ಸ್ವಾಭಿಮಾನದ ಪ್ರತಿಷ್ಠೆಯು ಮಾನವ ಜೀವನಕ್ಕೆ ಸದಾ ಮಾರ್ಗದರ್ಶನ ನೀಡಬಲ್ಲದು.

* ಕೆ.ಪಿ. ಅಬ್ದುಲ್‌ ಖಾದರ್‌, ಕುತ್ತೆತ್ತೂರು

ಟಾಪ್ ನ್ಯೂಸ್

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.