ಮಹತ್ವಪೂರ್ಣ ಮಾಸ ಮೊಹರಂ


Team Udayavani, Aug 9, 2022, 6:15 AM IST

ಮಹತ್ವಪೂರ್ಣ ಮಾಸ ಮೊಹರಂ

ಮೊಹರಂ ಎಂದರೆ ಸತ್ಯಕ್ಕಾಗಿ, ನ್ಯಾಯಕ್ಕಾಗಿ ನಿರಂಕುಶ ದಬ್ಟಾಳಿಕೆಯ ವಿರುದ್ಧ ಹೋರಾಡಿ ಪ್ರಾಣಾರ್ಪಣೆಗೈದ, ಹಝರತ್‌ ಇಮಾಂ ಹುಸೇನರನ್ನು ಸ್ಮರಿಸತಕ್ಕ ಜಾಗೃತಿಯ ದಿನ ಹಾಗೂ ಆ ಮಹಾನ್‌ ಚೇತನಕ್ಕೆ ಶ್ರದ್ಧಾಂಜಲಿ ಅರ್ಪಿಸತಕ್ಕ ಪುಣ್ಯದ ದಿನವೂ ಆಗಿದೆ.

ಹಿಜರೀ ಶಕ ಅರ್ವತ್ತೊಂದರ ಮೊಹರಂ ತಿಂಗಳ ಹತ್ತರಂದು ಇರಾಕ್‌ ದೇಶದ ಯುಪ್ರಟಿಸ್‌ ನದಿ ತೀರದ ಕರ್ಬಲಾ ಮೈದಾನದಲ್ಲಿ ಯಝೀದನ ಅಸಂಖ್ಯಾಕ ಸೈನಿಕರನ್ನು, ಹಝರತ್‌ ಇಮಾಂ ಹುಸೇನರು, ಕೇವಲ ತನ್ನ ಎಪ್ಪತ್ತೆರಡು ಮಂದಿ ಅನುಯಾಯಿಗಳಿಂದ ಎದುರಿಸಿದರು. ಇದು ಹಝರತ್‌ ಇಮಾಂ ಹುಸೇನರು, ಅನ್ಯಾಯದ ವಿರುದ್ಧ ನಡೆಸಿದ ದೊಡ್ಡ ಹೋರಾಟವಾಗಿತ್ತು. ಈ ಕದನದಲ್ಲಿ ಸೋಲು ತನ್ನ ಪಾಲಿಗೆ ಖಚಿತವೆಂದು ಭಾವಿಸಿದ್ದರೂ ಅದು ಸತ್ಯ, ನ್ಯಾಯ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಸಿದ ಅಪೂರ್ವ ಕದನವಾಗಿತ್ತು. ಹಝರತ್‌ ಇಮಾಂ ಹುಸೇನರು ಕರ್ಬಲಾ ರಣಾಂಗಣದಲ್ಲಿ ವೀರಾ ವೇಶದಿಂದ ಹೋರಾಡಿ, ಮೊಹರಂ ಹತ್ತರಂದು ಹುತಾತ್ಮ ರಾದರು. ಮೊಹರಂ ಹತ್ತು ನಿರಂಕುಶ ಪ್ರಭುತ್ವಕ್ಕೆ ಕೊಡಲಿ ಏಟನ್ನಿತ್ತ ಚಾರಿತ್ರಿಕ ದಿನವೂ, ಪ್ರಜಾಸತ್ತೆಯ ಅಭೂತಪೂರ್ವ ವಿಜಯದ ದಿನವೂ ಆಗಿದೆ. ಜತೆಗೆ ಸರ್ವಾಧಿಕಾರಿ ಆಡಳಿತದ ವಿರುದ್ಧ, ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಅದ್ಭುತ ಕ್ಷಣಗಳನ್ನು ನಮ್ಮ ಮುಂದೆ ಅನಾವರಣಗೊಳಿಸುತ್ತದೆ. ಒಟ್ಟಿನಲ್ಲಿ ಮೊಹರಂನ ಇತಿಹಾಸವು ಸ್ವಾತಂತ್ರ್ಯ ಸಮಾನತೆಯ ಪ್ರೇಮಿಗಳಿಗೆ ಸ್ಫೂರ್ತಿ ದಾಯಕವಾಗಿದೆ.

ಹಝರತ್‌ ಇಮಾಂ ಹುಸೇನರು, ಸತ್ಯ, ನ್ಯಾಯ, ಸ್ವಾಭಿಮಾನ, ಧೈರ್ಯ, ಸ್ಥೈರ್ಯ ಮತ್ತು ಪ್ರಾಮಾಣಿಕತೆಯನ್ನು ತನ್ನ ಬದುಕಿನುದ್ದಕ್ಕೂ ಮೈಗೂಡಿಸಿ ಕೊಂಡಿದ್ದರು. ಸ್ವಾಭಿಮಾನದ ಪ್ರತೀಕ ವಾಗಿದ್ದ ಅವರ ಬದುಕಿನ ಆ ಅದ್ಭುತ ಕ್ಷಣಗಳನ್ನು ನಮ್ಮೆಲ್ಲರ ನಿತ್ಯದ ಬದುಕಿ ನಲ್ಲಿ ರೂಢಿಸಿಕೊಂಡಾಗ ಬದುಕು ಸಾರ್ಥಕ ವಾಗಬಲ್ಲದು. ಬದುಕಿನಲ್ಲಿ ಆತ್ಮಸಂತೃಪ್ತಿ ದೊರೆಯಬಲ್ಲದು. ಇಂದು ಸಮಾಜದ ವಿಶ್ವಾಸವನ್ನು ಗಳಿಸುವ ಏಕೈಕ ದಾರಿಯೇ ಸ್ವಾಭಿಮಾನ, ಪ್ರಾಮಾಣಿಕತೆ, ಸತ್ಯ, ಧೈರ್ಯ, ಸ್ಥೈರ್ಯ ಮತ್ತು ನ್ಯಾಯ ಇವೆಲ್ಲವೂ ನೈತಿಕ ಸಮಾಜದ ಅಡಿಪಾಯಗಳಾಗಿವೆ.
ಮೊಹರಂ ಮುಖ್ಯವಾಗಿ ಮನು ಕುಲಕ್ಕೆ ಬೋಧಿಸುವ ಸ್ವಾಭಿಮಾನ, ಪ್ರಾಮಾಣಿಕತೆ, ಸತ್ಯ, ಧೈರ್ಯ ಮತ್ತು ನ್ಯಾಯವನ್ನು ಬೆಂಬಲಿಸಿ, ನಾವಿಂದು ಬದುಕಿನಲ್ಲಿ ಮುಂದೆ ಸಾಗಬೇಕಾಗಿದೆ. ಆಗ ಮಾತ್ರ ನಮ್ಮ ಸಮಾಜ ಹಾಗೂ ನಾಡು ಶಾಂತಿ – ಸಮೃದ್ಧಿಯ ಬೀಡಾಗಿ, ಪ್ರೀತಿ-ವಿಶ್ವಾಸಗಳ ಆಗರವಾಗಿ ಮೆರೆಯಬಲ್ಲುದು.

ಸತ್ಯ, ನ್ಯಾಯ, ಸ್ವಾಭಿಮಾನ ಮತ್ತು ಇಸ್ಲಾಮಿನ ಉನ್ನತ ಮೌಲ್ಯಗಳ ಸ್ಥಾಪನೆ ಗಾಗಿ ಹಝರತ್‌ ಇಮಾಂ ಹುಸೇನರು, ತಮ್ಮ ವೀರಾವೇಶದ ಹೋರಾಟದ ಮೂಲಕ ಅಮರ ಜ್ಯೋತಿಯೊಂದನ್ನು ಹೊತ್ತಿಸಿ ಹೋದರು. ಅವರು ಹುತಾತ್ಮರಾಗಿ ಸಾವಿರದ ನಾಲ್ಕುನೂರು ವರ್ಷ ಗಳು ಸಂದರೂ, ಆ ಜ್ಯೋತಿಯು ಇನ್ನೂ ನಂದದೇ ಅಮರವಾಗಿಯೇ ಉಳಿದಿದೆ. ಅವರ ಆದರ್ಶ ಜೀವನ ಮತ್ತು ಸ್ವಾಭಿಮಾನದ ಪ್ರತಿಷ್ಠೆಯು ಇಂದು ಮಾನವನ ಸಾಮಾಜಿಕ ಉನ್ನತಿಯ ಪ್ರತಿಯೊಂದು ಹಂತದಲ್ಲೂ ಮಾರ್ಗದರ್ಶನವನ್ನು ನೀಡಬಲ್ಲುದು. ಹಝರತ್‌ ಇಮಾಂ ಹುಸೇನರು ತಮ್ಮ ಬದುಕಿ ನುದ್ದಕ್ಕೂ ತೋರಿದ ಅಪೂರ್ವ ತ್ಯಾಗ ಹಾಗೂ ಸ್ಫೂರ್ತಿಯು ಮಾನವನ ಬದುಕಿಗೆ ಇಂದು ಅಗತ್ಯ ವಾಗಿದೆ. ಸತ್ಯ, ನ್ಯಾಯ, ಸ್ವಾಭಿಮಾನಕ್ಕಾಗಿ ನಡೆಸುವ ನಿರಂತರ ಪರಿಶ್ರಮವು ಮಾನವ ಜನಾಂಗವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸಲು ಸಹಕಾರಿಯಾಗಬಲ್ಲದು. ಸತ್ಯ ಹಾಗೂ ನ್ಯಾಯವನ್ನು ಬೆಂಬಲಿಸಿ, ಅಸತ್ಯ ಹಾಗೂ ಅನ್ಯಾಯವನ್ನು ವಿರೋಧಿಸಿ ಪ್ರಾಮಾಣಿಕವಾಗಿ ಜೀವಿ ಸುವುದೇ ಜೀವನದ ಗುರಿ. ಸಾಮಾಜಿಕ ಹಿತಾಸಕ್ತಿಗಾಗಿ ಮಾಡುವ ತ್ಯಾಗವೂ ಜೀವನದಲ್ಲಿ ಸುಭಿಕ್ಷೆ, ನೆಮ್ಮದಿ ಹಾಗೂ ಆತ್ಮಸಂತೃಪ್ತಿಯನ್ನೂ ನೀಡಬಲ್ಲುದು.

ಮೊಹರಂ ತನ್ನ ವಿಶಾಲ ಅರ್ಥದಲ್ಲಿ ಸತ್ಯ, ನ್ಯಾಯ ಮತ್ತು ಸ್ವಾತಂತ್ರ್ಯ ಪ್ರೇಮದ ಉದಾತ್ತ ಆದರ್ಶಗಳನ್ನೆಲ್ಲ ಮನು ಕುಲಕ್ಕೆ ಸಾರುತ್ತದೆ. ಪ್ರಜಾಸತ್ತೆಯ ಅಭೂತ ಪೂರ್ವ ವಿಜಯದ ದಿನವೂ ಆಗಿ, ಇಸ್ಲಾಮಿನ ಕ್ಯಾಲೆಂಡರಿನಲ್ಲಿ ಮೊಹರಂ ವರ್ಷದ ಪ್ರಥಮ ತಿಂಗಳಾಗಿ ಪರಿ ಗಣಿಸಲ್ಪಟ್ಟಿದೆ.

ಸತ್ಯ, ನ್ಯಾಯ ಮತ್ತು ಧರ್ಮದ ಉದಾತ್ತ ಆದರ್ಶಗಳನ್ನು ಬದುಕಿನಲ್ಲಿ ರೂಢಿಸಿ ಕೊಂಡಾಗ ಬದುಕು ಸಾರ್ಥಕ ವಾಗುತ್ತದೆ, ಅರ್ಥಪೂರ್ಣವಾಗುತ್ತದೆ.

-ಕೆ.ಪಿ. ಅಬ್ದುಲ್‌ ಖಾದರ್‌ ಕುತ್ತೆತ್ತೂರು

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.