ಹೃದಯ ಶ್ರೀಮಂತಿಕೆ : ಪತ್ನಿಯ ಆಭರಣ ಮಾರಾಟ ಮಾಡಿ ಉಚಿತ ಆಕ್ಸಿಜನ್ ನೀಡುತ್ತಿರುವ ವ್ಯಕ್ತಿ
Team Udayavani, May 1, 2021, 8:09 AM IST
ಮುಂಬೈ : ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಆಕ್ಸಿಜನ್ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದೆ. ದಿನೇ ದಿನೇ ಅದೆಷ್ಟೋ ಜನ ಆಕ್ಸಿಜನ್ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ. ಆಸ್ಪತ್ರೆಗಳು ಕೂಡ ಆಕ್ಸಿಜನ್ ಕೊರತೆಯನ್ನು ಹೆದರಿಸುತ್ತಿವೆ. ಇಂತಹ ಸಂದರ್ಭದಲ್ಲಿ ಮುಂಬೈನ ಒಬ್ಬ ವ್ಯಕ್ತಿ ತನ್ನ ಹೆಂಡತಿಯ ಚಿನ್ನಾಭರಣಗಳನ್ನೇ ಮಾರಾಟ ಮಾಡಿ ಉಚಿತವಾಗಿ ಆಕ್ಸಿಜನ್ ವಿತರಣೆ ಮಾಡುತ್ತಿದ್ದಾರೆ.
ಹೌದು ಮುಂಬೈನ ಪ್ಯಾಸ್ಕಲ್ ಸಲ್ಧಾನಾ ಎಂಬುವವರು ಆಕ್ಸಿಜನ್ ಅವಶ್ಯಕತೆ ಇರುವವರಿಗೆ ಉಚಿತವಾಗಿ ಆಮ್ಲಜನಕವನ್ನು ನೀಡುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಪತ್ನಿ ಕಳೆದ ಐದು ವರ್ಷಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರಿಗೆ ಡಯಾಲಿಸಿಸ್ ಇದೆ. ಈ ಕಾರಣದಿಂದ ನಮ್ಮ ಮನೆಯಲ್ಲಿ ಯಾವಾಗಲೂ ಆಕ್ಸಿಜನ್ ಸಿಲಿಂಡರ್ ಗಳು ಇರುತ್ತವೆ ಎಂದಿದ್ದಾರೆ.
ಒಮ್ಮೆ ನಮ್ಮ ಪ್ರದೇಶದ ಕಾಲೇಜಿನ ಪ್ರಾಂಶುಪಾಲರು ಕರೆ ಮಾಡಿ ನನ್ನ ಪತಿಗೆ ಆಕ್ಸಿಜನ್ ಅವಶ್ಯಕತೆ ಇದೆ ಎಂದಾಗ ಅವರಿಗೆ ನಾನು ತಕ್ಷಣ ಪೂರೈಕೆ ಮಾಡಿದೆ ಎಂದು ಪ್ಯಾಸ್ಕಲ್ ಸಲ್ಧಾನಾ ತಿಳಿಸಿದ್ದಾರೆ.
ಉಚಿತ ಆಕ್ಸಿಜನ್ ನೀಡಲು ಪ್ಯಾಸ್ಕಲ್ ಸಲ್ಧಾನಾ ಪತ್ನಿ ಒತ್ತಾಯ ಮಾಡಿದ್ದಾರಂತೆ. ಅಲ್ಲದೆ ಆಭರಣಗಳನ್ನು ಮಾರಾಟ ಮಾಡಿ ಆಮ್ಲಜನಕವನ್ನು ಪೂರೈಕೆ ಮಾಡಿ ಎಂದೂ ಹೇಳಿದ್ದರಂತೆ. ಇದೇ ಕಾರಣಕ್ಕೆ ಚಿನ್ನವನ್ನು ಮಾರಿ ಅದರಿಂದ ಬಂದ 80,000 ರೂ. ನಲ್ಲಿ ಉಚಿತವಾಗಿ ಆಮ್ಲಜನಕ ನೀಡುತ್ತಿದ್ದೇವೆ ಎಂದು ಪ್ಯಾಸ್ಕಲ್ ಸಲ್ಧಾನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ