ನನ್ನ ಹೋರಾಟ ವೈಯಕ್ತಿಕವಲ್ಲ


Team Udayavani, Apr 20, 2019, 6:00 AM IST

22

ಮಧ್ಯಪ್ರದೇಶ ರಾಜಧಾನಿ ಭೋಪಾಲ್‌ನಿಂದ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್‌ ವಿರುದ್ಧ ಸ್ಪರ್ಧೆಗೆ ಇಳಿದಿದ್ದಾರೆ. ಬಹು ಚರ್ಚಿತ ಮತ್ತು ವಿವಾದಾತ್ಮಕ ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಅವರ ವಿರುದ್ಧ ಆರೋಪವಿದೆ. ಒಂಭತ್ತು ವರ್ಷ ಕಾಲ ಕಾರಾಗೃಹದಲ್ಲಿದ್ದ ಅವರಿಗೆ 2017ರಲ್ಲಿ ಜಾಮೀನು ನೀಡಲಾಯಿತು. “ಹಿಂದೂ ಭಯೋತ್ಪಾದನೆ’ ಎಂಬ ಹಣೆಪಟ್ಟಿ ತೊಡೆದು ಹಾಕಲು ಇದು ತಕ್ಕ ಸಮಯ, ಅಧಿಕಾರದಲ್ಲಿ ಉಳಿಯಲು ಕಾಂಗ್ರೆಸ್‌ ಹೊಸ ಪದ ಸೃಷ್ಟಿಸಿತ್ತು ಎಂದಿದ್ದಾರೆ.

ಯಾವ ವಿಚಾರಗಳನ್ನು ಚುನಾವಣೆಯಲ್ಲಿ ಪ್ರಸ್ತಾಪ ಮಾಡಲಿದ್ದೀರಿ?
ಹೊಸ ವಿಚಾರಗಳು ಏನೂ ಇಲ್ಲ. ಕಾಂಗ್ರೆಸ್‌ ಸಮಯದಿಂದ ಸಮಯಕ್ಕೆ ಏನು ಪ್ರಸ್ತಾಪ ಮಾಡಿತ್ತೋ ಅದರ ವಿರುದ್ಧ ಹೋರಾಟ ನಡೆಯಲಿದೆ. ಕೇಸರಿ ಮತ್ತು ಹಿಂದೂ ಭಯೋತ್ಪಾದನೆ ಎಂದು ಕಾಂಗ್ರೆಸ್‌ ತಂತ್ರಪೂರ್ವಕವಾಗಿ ಪ್ರಚಾರ ಮಾಡಿಕೊಂಡು ಬರುತ್ತಿದ್ದುದಕ್ಕೆ ಉತ್ತರ ನೀಡಲು ಇದು ಸಮಯವಾಗಿದೆ. ಸುಳ್ಳು ಆರೋಪಗಳನ್ನು ದಾಖಲಿಸಿ, ಜನರನ್ನು ಭಯೋತ್ಪಾದಕರು ಎಂದು ಬಿಂಬಿಸಿ ಹೇಗೆ ಕಾರಾಗೃಹಕ್ಕೆ ತಳ್ಳಲಾಗುತ್ತದೆ, ಯಾವ ರೀತಿಯಲ್ಲಿ ಕಾಂಗ್ರೆಸ್‌ ಅಧಿಕಾರ ದುರುಪಯೋಗ ಮಾಡುತ್ತದೆ, ನಿಯಮಗಳನ್ನು ಉಲ್ಲಂ ಸುತ್ತದೆ ಎನ್ನುವ ವಿಚಾರದ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಿದ್ದೇನೆ. ಸನಾತನ ಧರ್ಮ ಮತ್ತು ಕೇಸರಿ ಬಣ್ಣಕ್ಕೆ ಭಯೋತ್ಪಾದನೆಯ ನಂಟು ಇದೆ ಎಂದು ಕಾಂಗ್ರೆಸ್‌ ಯಾವ ರೀತಿ ಹೇಳಿಕೊಂಡು ಬಂದಿತ್ತು ಎನ್ನುವುದನ್ನು ಬಯಲಿಗೆ ಎಳೆಯಲಿದ್ದೇನೆ. ಕಾಂಗ್ರೆಸ್‌ ಅವಧಿಯಲ್ಲಿಯೇ ಹಿಂದೂ ಅಥವಾ ಕೇಸರಿ ಭಯೋತ್ಪಾದನೆ ಎಂಬ ಹೊಸ ಪದ ಸೃಷ್ಟಿಸ ಲಾಯಿತು. ರಾಜಕೀಯ ಲಾಭ ಪಡೆದು ಕೊಂಡು ಅಧಿಕಾರದಲ್ಲಿ ಉಳಿದುಕೊಳ್ಳಲು ಅದನ್ನು ಬಳಸಲಾಯಿತು.

ಗುರುವಾರದಿಂದ ಈಚೆಗೆ ಹಾಲಿ ಚುನಾವಣೆಯಲ್ಲಿ ಅಭಿವೃದ್ಧಿಯ ವಿಚಾರ ಮಾತ್ರ ಪ್ರಸ್ತಾಪವಾಗದು ಎಂದು ಹೇಳಿದ್ದಿರಿ. ಅದು ಸರಿಯೇ?
ಪ್ರಚಾರದ ಸಂದರ್ಭದಲ್ಲಿ ಅಭಿವೃದ್ಧಿ ಕಾಮ ಗಾರಿಗಳು ಪ್ರಧಾನ ವಿಚಾರ ಹೌದಾದರೂ, ಅದು ನಮ್ಮ ಗಡಿಗಳು ಭದ್ರವಾಗಿ ಇರುವಾಗ ಸರಿಯಾಗಿರುತ್ತದೆ. ದುರದೃಷ್ಟದ ವಿಚಾರ ವೆಂದರೆ ನಮ್ಮ ಸೇನೆಯ ವಿರುದ್ಧವಾಗಿಯೇ ಪ್ರಶ್ನೆಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್‌ ನಾಯಕರು ನಮ್ಮ ದೇಶ ಸುರಕ್ಷಿತವಾಗಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಈ ಹೇಳಿಕೆಯೇ ನಮ್ಮ ಶತ್ರು ರಾಷ್ಟ್ರಗಳಿಗೆ ವರದಾನವಾಗುತ್ತಿದೆ.

ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ನೀವು ಇನ್ನೂ ಆರೋಪ ಎದುರಿಸುತ್ತಿದ್ದೀರಿ. ಇದರ ಹೊರತಾಗಿಯೂ ಬಿಜೆಪಿ ನಿಮ್ಮನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಆಯ್ಕೆ ಮಾಡಿದೆಯಲ್ಲ?
ನಾನು ಭಯೋತ್ಪಾದಕಿಯಲ್ಲ. ಕಾಂಗ್ರೆಸ್‌ನ ಪಾಪಕೃತ್ಯಗಳಿಗೆ ಬಲಿಯಾಗಿರುವುದಕ್ಕೆ ನಾನೇ ಜೀವಂತ ಸಾಕ್ಷಿ. ನನ್ನ ವಿರುದ್ಧ ಹೊರಿಸಲಾಗಿರುವ ಆರೋಪಗಳ ವಿರುದ್ಧ ನನಗೆ ಕ್ಲೀನ್‌ಚಿಟ್‌ ಸಿಕ್ಕಿದೆ. ಯುಪಿಎ ಅವಧಿಯಲ್ಲಿ ರಚಿಸಲಾಗಿದ್ದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ವೇ ನನ್ನ ವಿರುದ್ಧ ಮಾಡಲಾಗಿರುವ ಆರೋಪಗಳು ಸರಿಯಾದ್ದಲ್ಲ ಎಂದು ಹೇಳಿದೆ. ಅಕ್ರಮವಾಗಿ ಜೈಲಿಗೆ ಹಾಕಿ, ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ನೀಡಿದ್ದರು. ಅವರು ಸಂವಿಧಾನವನ್ನು, ಕಾನೂನನ್ನು ದುರುಪಯೋಗಮಾಡಿದ್ದಾರೆ. ಈಗ ಅದೆಲ್ಲದಕ್ಕೆ ಉತ್ತರ ನೀಡುವ ಸಮಯ ಬಂದಿದೆ. ಹೀಗಾಗಿಯೇ, ಕಾಂಗ್ರೆಸ್‌ಗೆ ಸಹಿಸಲು ಸಾಧ್ಯವಾಗುತ್ತಿಲ್ಲ.

ಹಾಗಿದ್ದರೆ ಹಿಂದುತ್ವ ವಿಚಾರ ಪ್ರಧಾನವಾಗಿ ಪ್ರಸ್ತಾಪವಾಗಲಿದೆ…
ಹಿಂದುತ್ವ ಎಂದರೆ ನಮ್ಮ ಜೀವನ ಕ್ರಮ ಮತ್ತು ನಂಬಿಕೆ. ಅದನ್ನು ಜೀವನದಿಂದ ಪ್ರತ್ಯೇಕ ಮಾಡಲು ಸಾಧ್ಯವೇ ಇಲ್ಲ. ಕೇಸರಿ ಬಣ್ಣ ಎನ್ನು ವುದು ಶಾಂತಿ ಮತ್ತು ಭಾರತೀಯ ಸಂಸ್ಕೃ ತಿಯ ಪ್ರತೀಕ. ಅದು ದೇಶದ ತ್ರಿವರ್ಣ ಧ್ವಜ ದಲ್ಲಿಯೂ ಕೂಡ ಇದೆ. ಅದನ್ನು ಭಯೋ ತ್ಪಾದನೆಯ ಜತೆಗೆ ಜೋಡಿಸಿದಾಗ ನಿಜವಾ ಗಿಯೂ ಮನಸ್ಸಿಗೆ ಘಾಸಿಯಾಗುತ್ತದೆ.

ಅಂದ ಹಾಗೆ ನಿಮ್ಮ ಆರೋಗ್ಯ ಹೇಗಿದೆ?
ನಾನು ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ. ತನಿಖೆಯ ವೇಳೆ ಪೊಲೀಸರು ನೀಡಿದ ಹಿಂಸೆಯಿಂದಾಗಿ ಬೆನ್ನುಹುರಿಯ ಮೇಲೆ ಗಾಯಗಳಾಗಿವೆ. ಮಹಿಳೆ ಎನ್ನುವುದನ್ನೂ ಗಮನಿಸದೆ ಪೊಲೀಸರು ನನಗೆ ಹಿಂಸೆ ನೀಡಿದ್ದಾರೆ. ಅವರು ನನ್ನನ್ನು ಕೊಲ್ಲಲು ಬಯಸಿದ್ದರೂ, ಉಳಿದುಕೊಂಡೆ. ಈ ಅಂಶಗಳನ್ನು ಜನರ ಮುಂದೆ ಇಡಲಿದ್ದೇನೆ.

ಆರೋಗ್ಯದ ಕಾರಣಕ್ಕಾಗಿ ನಿಮಗೆ ಜಾಮೀನು ನೀಡಲಾಗಿದೆ. ಈಗ ಚುನಾವಣೆಗೆ ಸ್ಪರ್ಧೆ ಮಾಡಿರುವುದರಿಂದ ಅದನ್ನು ರದ್ದು ಮಾಡಬೇಕೆಂದು ಒತ್ತಾಯವಿದೆ. ಅದಕ್ಕೇನು ಹೇಳುತ್ತೀರಿ?
ಯಾವತ್ತೂ ನಾನು ಕಾರಾಗೃಹದಲ್ಲಿ ಇರಬೇಕು ಎಂದು ಬಯಸುವವರ ಸಂಚಿನ ನುಡಿಗಳಿವು. ನನ್ನ ವಿರುದ್ಧ ಏನು ಆರೋಪಗಳನ್ನು ಮಾಡಿದ್ದಾರೋ, ಅದನ್ನು ಸಾಬೀತುಪಡಿಸಲು ಸಾಧ್ಯ ವಾಗಲಿಲ್ಲ. ಹೀಗಾಗಿ ಇಂಥ ಮಾತುಗಳು ಬಂದಿವೆ. ನಾನು ರಾಜಕೀಯಕ್ಕೆ ಸೇರಿದ್ದರಿಂದ ಸಂಚು ರೂಪಿಸಿದವರಿಗೆ ಭಯ ಉಂಟಾಗಿದೆ. ಹೀಗಾಗಿ, ನನಗೆ ನೀಡಲಾಗಿ ರುವ ಜಾಮೀನು ರದ್ದುಮಾಡಬೇಕು ಎಂದು ಬಯಸುತ್ತಿದ್ದಾರೆ ಅಷ್ಟೇ.

ಇಂಥ ಹೋರಾಟ ನಡೆಸಲು ಹತ್ತು ವರ್ಷಗಳಿಂದ ಕಾಯುತ್ತಿದ್ದೀರಿ ಎಂದು ಹೇಳಿದ್ದೀರಿ. ಮಾಲೇಗಾಂವ್‌ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರ ವಿರುದ್ಧ ವೈಯಕ್ತಿಕ ಹೋರಾಟವೇ?
ಇದು ವೈಯಕ್ತಿಕ ಹೋರಾಟವಲ್ಲ. ದೇಶಕ್ಕಾಗಿ ನನ್ನ ಜೀವನವನ್ನು ಮುಡಿಪಾಗಿ ಇರಿಸಿದ್ದೇನೆ. ರಾಷ್ಟ್ರೀಯವಾದಿಗಳು ಯಾವತ್ತೂ ವೈಯಕ್ತಿಕ ಹೋರಾಟ ಮಾಡುವುದಿಲ್ಲ. ಸಂಚುಕೋರರ ಕೈಯಲ್ಲಿ ಹತ್ತು ವರ್ಷಗಳ ಕಾಲ ನೋವು ಅನುಭವಿಸಿದ್ದೇನೆ. ಈ ಹೋರಾಟ ಏನಿದ್ದರೂ ಪ್ರತಿಯೊಬ್ಬ ಮಹಿಳೆಗಾಗಿ ಮತ್ತು ಸಮುದಾಯದಲ್ಲಿ ಕಾನೂನನ್ನು ಉಲ್ಲಂ ಸುವವರ ವಿರುದ್ಧ ನಡೆಸಲಿದ್ದೇನೆ.

(ಸಂದರ್ಶನ ಕೃಪೆ: ದ ಟೈಮ್ಸ್‌ ಆಫ್ ಇಂಡಿಯಾ, ದ ಹಿಂದುಸ್ತಾನ್‌ ಟೈಮ್ಸ್‌)

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.