ನರೇಶ್‌ ಪಟೇಲ್‌  ಹೊಸ ಪಾಟೀದಾರ್‌ ನಾಯಕ


Team Udayavani, May 28, 2022, 6:15 AM IST

ನರೇಶ್‌ ಪಟೇಲ್‌  ಹೊಸ ಪಾಟೀದಾರ್‌ ನಾಯಕ

ಕಳೆದ ಬಾರಿಯ ಗುಜರಾತ್‌ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಆ ರಾಜ್ಯಾದ್ಯಂತ ಹೆಚ್ಚಾಗಿ ಕೇಳಿಬರುತ್ತಿದ್ದುದು ಒಂದೇ ಹೆಸರು. ಅದು ಹಾರ್ದಿಕ್‌ ಪಟೇಲ್‌. ಪಟೇಲ್‌ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂಬ ಬೇಡಿಕೆಯನ್ನಿಟ್ಟುಕೊಂಡು ರಾಜ್ಯಾವ್ಯಾಪಿ ಪಟೇಲ್‌ ಸಮುದಾಯವನ್ನು ಒಗ್ಗೂಡಿಸಿದ ಕೀರ್ತಿಯೂ ಹಾರ್ದಿಕ್‌ ಪಟೇಲ್‌ಗೇ ಸಲ್ಲುತ್ತದೆ. ತೀರಾ ಚಿಕ್ಕ ಹುಡುಗನಂತಿದ್ದ ಹಾರ್ದಿಕ್‌, ರಾಜ್ಯದಲ್ಲಿ ಮಾಡಿದ್ದ ಮೋಡಿ ಅಷ್ಟಿಷ್ಟಲ್ಲ, ಈ ಯುವಕನ ಸಾಮರ್ಥ್ಯ ಅರಿತ ಕಾಂಗ್ರೆಸ್‌, ಈತನನ್ನು ತನ್ನೊಳಗೆ ಸೇರಿಸಿಕೊಂಡು ಹಿಂದಿನ ವಿಧಾನಸಭೆ ಚುನಾವಣೆಗೆ ಹೋಗಿತ್ತು. ಹಾಗೆಯೇ ಬಿಜೆಪಿಯ ಭದ್ರಕೋಟೆಯನ್ನೇ ಒಂದು ಲೆಕ್ಕಾಚಾರದಲ್ಲಿ ಅಲುಗಾಡಿಸಿಬಿಟ್ಟಿತ್ತು.

ಆದರೆ ಈಗ ಕಾಲ ಬದಲಾಗಿದೆ. ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ವಿರುದ್ಧ ಮುನಿಸಿಕೊಂಡು ಪಕ್ಷ ಬಿಟ್ಟು ಬಿಜೆಪಿಯತ್ತ ಹೋಗಲು ಸಿದ್ಧರಾಗುತ್ತಿದ್ದಾರೆ. ಇದೇ ಹೊತ್ತಿಗೆ ಕೇಳಿಬರುತ್ತಿರುವ ಮತ್ತೂಂದು ಹೆಸರು ನರೇಶ್‌ ಪಟೇಲ್‌.

ಹೌದು, ಮೃದು ಮಾತಿನ, ಎಲ್ಲರಿಗೂ ಬೇಕಾದ, ಪಟೇಲ್‌ ಸಮುದಾಯದ ಉಪಜಾತಿಯಾದ ಲೇವಾಕ್ಕೆ ಸೇರಿದವರು. ಅಷ್ಟೇ ಅಲ್ಲ, ಪ್ರಬಲ ಸೌರಾಷ್ಟ್ರ ಭಾಗಕ್ಕೂ ಸೇರಿದವರು. ಅಷ್ಟೇ ಅಲ್ಲ, ಇಡೀ ಲೇವಾ ಸಮುದಾಯ ಅವರ ಬೆನ್ನಿಗೆ ನಿಂತಿದೆ ಎಂದರೂ ತಪ್ಪಾಗಲಾರದು. ಇದಕ್ಕೆ ಕಾರಣಗಳೂ ಇವೆ. 56 ವರ್ಷ ವಯಸ್ಸಿನ ನರೇಶ್‌ ಪಟೇಲ್‌, ಸೌರಾಷ್ಟ್ರ ಭಾಗದ ಪ್ರಸಿದ್ಧ ಉದ್ಯಮಿ. ಹಾಗೆಯೇ ದಾನ, ಧರ್ಮದಲ್ಲಿ ಎತ್ತಿದ ಕೈ. ಇವರ ಪ್ರಭಾವ ಗುಜರಾತ್‌ನ 182 ಕ್ಷೇತ್ರಗಳ ಪೈಕಿ 48ರಲ್ಲಿ ಇದೆ. ಜತೆಗೆ, ಶ್ರೀ ಖೋಡಾಲ್ದಾಮ್‌ ಟ್ರಸ್ಟ್‌ನ ಅಧ್ಯಕ್ಷರು. ಈ ಟ್ರಸ್ಟ್‌ ಖೋಡಿಯಾರ್‌ ದೇವಸ್ಥಾನದ ನಿರ್ವಹಣೆ ಮಾಡುತ್ತದೆ. ಜತೆಗೆ, ಪಟೇಲ್‌ ಬ್ರಾಸ್‌ವರ್ಕ್‌(ಪಿಬಿಡಬ್ಲ್ಯು)ನ ನಿರ್ದೇಶಕರಾಗಿದ್ದು, ಇದನ್ನು ನರೇಶ್‌ ಪಟೇಲ್‌ ತಂದೆ 1948ರಲ್ಲಿ ಸ್ಥಾಪಿಸಿದ್ದರು.

ಇದು ಆಟೋಮೊಬೈಲ್‌ನಿಂದ ಹಿಡಿದು ವಿಮಾನಗಳಿಗೆ ಬೇಕಾದ ವಸ್ತುಗಳನ್ನು ತಯಾರು ಮಾಡುತ್ತದೆ.  2013ರಲ್ಲಿ ನರೇಶ್‌ ಪಟೇಲ್‌ ಸರ್ಕಾರ್‌ ಪಟೇಲ್‌ ಸಾಂಸ್ಕೃತಿಕ ಪ್ರತಿಷ್ಠಾನವನ್ನು ಸ್ಥಾಪಿಸಿದ್ದು, ಈ ಮೂಲಕ ಸರಕಾರಿ ಉದ್ಯೋಗ ಸೇರುವವರಿಗೆ ಉಚಿತವಾಗಿ ತರಬೇತಿ ನೀಡುತ್ತಿದೆ. ಜತೆಗೆ ಖೋಡಾಲ್ದಾಮ್‌ ಸಮಾಧಾನ ಪಂಚ್‌ ಎಂಬುದನ್ನು ರಚಿಸಿ, ಇದರ ಮೂಲಕ ವಿವಾದಗಳನ್ನು ಬಗೆಹರಿಸುತ್ತಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಸ್ವಯಂ ಸೇವಕರಾಗಿದ್ದಾರೆ.

ಈ ಎಲ್ಲ ಕಾರ್ಯಗಳನ್ನು ಮಾಡುತ್ತಿರುವುದರಿಂದ ಲೇವಾ ಸಮುದಾಯದ ಯುವಕರು ಸೇರಿ ಎಲ್ಲರೂ ಇವರ ಬೆನ್ನಿಗೆ ನಿಂತಿದ್ದಾರೆ ಎಂಬ ವಿಶ್ಲೇಷಣೆಗಳಿವೆ. ಈಗ ನರೇಶ್‌ ಅವರ ಮೇಲೆ ಕಾಂಗ್ರೆಸ್‌ ಕಣ್ಣು  ಹಾಕಿದೆ. ಮೂಲಗಳು ಹೇಳಿರುವಂತೆ ಈಗಾಗಲೇ ಒಂದೆರಡು ಬಾರಿ ಕಾಂಗ್ರೆಸ್‌ ಹೈಕಮಾಂಡ್‌ ಜತೆಗೆ ಮಾತುಕತೆಯೂ ನಡೆದಿದೆ. ಆದರೆ ನರೇಶ್‌ ಪಟೇಲ್‌ ಅವರು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.