ಬರ್ಲಿನ್‌ ಕನ್ನಡ ಶಾಲೆ ಉದ್ಘಾಟನೆ


Team Udayavani, May 5, 2021, 7:47 PM IST

Opening of Berlin Kannada School

ಕನ್ನಡವನ್ನು ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕಾಣಿಸುವ ಮತ್ತು ಕೇಳಿಸುವ ಹಾಗೆ ಬೋಧನೆ ಮಾಡಿ. ನಿಮ್ಮ ಜತೆ ನಾವಿದ್ದೇವೆ ಎಂದು ಭರವಸೆ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಅವರು ಬರ್ಲಿನ್‌ ಕನ್ನಡ ಶಾಲೆಯನ್ನು ಎ. 18ರಂದು ವರ್ಚುವಲ್‌ನಲ್ಲಿ ಉದ್ಘಾಟಿಸಿ ಮಾತನಾಡಿದರು.”ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಕನ್ನಡವೇ ಸತ್ಯ ಕನ್ನಡವೇ ನಿತ್ಯ’ ಎಂಬ ಧ್ಯೇಯದೊಂದಿಗೆ ಬರ್ಲಿನ್‌ನಲ್ಲಿ ಕನ್ನಡ ಶಾಲೆಯು ಇಲ್ಲಿನ ಕನ್ನಡ ಬಳಗದ ನೇತೃತ್ವದಲ್ಲಿ ರಚನೆಯಾಗಿದೆ.

ನೋಂದಾಯಿತ ಸಂಘವಾಗಿರುವ ಬರ್ಲಿನ್‌ ನಗರ ಮತ್ತು ಸುತ್ತಮುತ್ತಲಿರುವ ಕನ್ನಡಿಗರನ್ನು ಒಂದೆಡೆ ಸೇರಿಸಿ ನಮ್ಮ ನಾಡಿನ ಸಾಂಸ್ಕೃತಿಕ ಮತ್ತು ಸಮಾಜಮುಖೀ ಕಾರ್ಯಕ್ರಮಗಳನ್ನು ಮಾಡುವ ಸಂಕಲ್ಪ ಹೊಂದಿದ್ದು, ಇಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಮಾತೃಭಾಷೆಯನ್ನು ಕಲಿಸಿ ಮುಂದಿನ ತಲೆಮಾರಿಗೆ ಕನ್ನಡವನ್ನು ತಲುಪಿಸುವ ಗುರಿಯೊಂದಿಗೆ ಕನ್ನಡ ಶಾಲೆಯನ್ನು ಪ್ರಾರಂಭಿಸಿದೆ. ಡಾ| ಕೆ. ಮುರಳೀಧರ್‌ ಅವರು ಶುಭಹಾರೈಸಿ, ಕನ್ನಡವನ್ನು ಹೇಗೆ ಮುಂದಿನ ಹಂತಕ್ಕೆ ತಲುಪಿಸಬಹುದು ಎಂಬ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕನ್ನಡ ಅಕಾಡೆಮಿಯ ಶಿವ ಗೌಡರ್‌ ಮತ್ತು ಅರುಣ್‌ ಸಂಪತ್‌ ಅವರು ಕನ್ನಡ ಅಕಾಡೆಮಿ ಕುರಿತು ಮಾಹಿತಿ ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷರು, ಕಾರ್ಯಕಾರಿ ತಂಡ, ಸದಸ್ಯರೊಂದಿಗೆ ಶಿಕ್ಷಕ ವೃಂದ, ಪೋಷಕರು ಹಾಜರಿದ್ದರು. ಎಲ್ಲರೂ ಬರ್ಲಿನ್‌ ಕನ್ನಡ ಶಾಲೆಯ ಯಶಸ್ಸಿಗಾಗಿ ಶುಭಹಾರೈಸಿದರು.ಕನ್ನಡೇತರರಿಗೂ ಅವಕಾಶಬರ್ಲಿನ್‌ ಕನ್ನಡ ಶಾಲೆಯು ಕನ್ನಡವನ್ನು ಮಕ್ಕಳಿಗೆ ಓದಲು, ಬರೆಯಲು, ಮಾತನಾಡಲು ಕಲಿಸುವುದರ ಜತೆಗೆ ಮಕ್ಕಳಿಗೆ ನಮ್ಮ ನಾಡು, ಜನ, ಜೀವನ ಶೈಲಿ, ಸಂಸ್ಕೃತಿ, ಪರಂಪರೆಯನ್ನು ಪರಿಚಯಿಸುವ ಉದ್ದೇಶವನ್ನು ಹೊಂದಿದೆ.

ಕನ್ನಡಿಗರಷ್ಟೇ ಅಲ್ಲದೇ ಕನ್ನಡೇತರರಿಗೂ ಬರ್ಲಿನ್‌ ಕನ್ನಡ ಶಾಲೆಯಲ್ಲಿ ಕನ್ನಡವನ್ನು ಕಲಿಯಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ವೈಜ್ಞಾನಿಕ ಮತ್ತು ಶ್ರೀಮಂತ ಭಾಷೆಯಾದ ಕನ್ನಡವನ್ನು ವಿಶ್ವದಾದ್ಯಂತ ಪಸರಿಸುವ ಗುರಿಯನ್ನು ಹೊಂದಿದ್ದೇವೆ .ಬರ್ಲಿನ್‌ ಕನ್ನಡ ಶಾಲೆಯಲ್ಲಿ ಸದ್ಯ ಇಬ್ಬರು ಸ್ವಯಂಸೇವಕ ಶಿಕ್ಷಕಿಯರಿಂದ ಕನ್ನಡ ಅಕಾಡೆಮಿಯ ಹೊರದೇಶದಲ್ಲಿರುವ ಕನ್ನಡ ಮಕ್ಕಳಿಗಾಗಿಯೇ ರಚಿಸಿರುವ ಕನ್ನಡ ಪಠ್ಯಕ್ರಮವನ್ನು ಅಳವಡಿಸಿಕೊಂಡು ಬೋಧನೆಯನ್ನು ಮಾಡಲಾಗುತ್ತಿದೆ.

ಪ್ರತಿ ರವಿವಾರ ತರಗತಿಗಳು ನಡೆಯಲಿದ್ದು, ಈಗಾಗಲೇ 11 ಕನ್ನಡ ಮಕ್ಕಳು ಮತ್ತು ಮೂರು ಮಂದಿ ಪ್ರೌಢ ಜರ್ಮನರು ನೋಂದಾಯಿತರಾಗಿ ಅತ್ಯಂತ ಉತ್ಸಾಹದಿಂದ ಕನ್ನಡ ಕಲಿಯುತ್ತಿದ್ದಾರೆ. ತರಗತಿಗಳನ್ನು ವಯಸ್ಸಿನ ಆಧಾರದ ಮೇಲೆ ವಿಭಾಗಿಸಲಾಗಿದೆ. ಪ್ರತಿ ತರಗತಿಯು ಒಂದು ಗಂಟೆ ಅವಧಿಗೆ ಸೀಮಿತವಾಗಿದ್ದು, ಪ್ರಾರ್ಥನೆಯೊಂದಿಗೆ ಆರಂಭವಾಗಿ ಕಲಿತ ಪದಗಳ ಪುನರ್ಮನನ ಹೊಸಪದಗಳ ಕಲಿಕೆ ಮತ್ತು ಕಲಿತ ಹೊಸಪದಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಪರಿಯನ್ನು ಹಲವಾರು ಚಟುವಟಿಕೆಗಳ ಮೂಲಕ ಹೇಳಿಕೊಡಲಾಗುತ್ತದೆ.

 ಡಾ| ಬೋಪಣ್ಣ ಮೊಣ್ಣಂಡ,ಕಾರ್ಯದರ್ಶಿ, ಬರ್ಲಿನ್‌ ಕನ್ನಡ ಬಳಗ

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.