ಬಾಕಿ ಕೊಡಿ; ವಿದ್ಯುತ್‌ ಖರೀದಿಸಿ: ಕರ್ನಾಟಕ ಸೇರಿ 13 ರಾಜ್ಯಗಳಿಗೆ ತಡೆ

ಮೊದಲ ಬಾರಿಗೆ ಇಂಥ ಕ್ರಮ

Team Udayavani, Aug 20, 2022, 7:40 AM IST

ಬಾಕಿ ಕೊಡಿ; ವಿದ್ಯುತ್‌ ಖರೀದಿಸಿ: ಕರ್ನಾಟಕ ಸೇರಿ 13 ರಾಜ್ಯಗಳಿಗೆ ತಡೆ

“ಬಾಕಿ ಪಾವತಿ ಮಾಡುವವರೆಗೆ ವಿದ್ಯುತ್‌ ಖರೀದಿ ಮತ್ತು ವಿತರಣೆ ಮಾಡಬೇಡಿ’ ಎಂದು ಕರ್ನಾಟಕ ಸೇರಿದಂತೆ 13 ರಾಜ್ಯಗಳಿಗೆ ಕೇಂದ್ರ ಸರ್ಕಾರ ಫ‌ರ್ಮಾನು ಹೊರಡಿಸಿದೆ. ಖಾಸಗಿ ವಿದ್ಯುತ್‌ ಉತ್ಪಾದಕರಿಗೆ ಒಟ್ಟು 5,085 ಕೋಟಿ ರೂ. ಮೊತ್ತವನ್ನು ಈ ರಾಜ್ಯಗಳು ನೀಡಲು ಬಾಕಿ ಇವೆ. ದಕ್ಷಿಣ ಭಾರತದಿಂದ ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣ ಸೇರಿಕೊಂಡಿವೆ. ಇದರಿಂದ ವಿದ್ಯುತ್‌ ಪೂರೈಕೆ ಮತ್ತು ಸರಬರಾಜಿನ ಮೇಲೆ, ಗ್ರಾಹಕರ ಮೇಲೆ ಉಂಟಾಗುವ ಪರಿಣಾಮಗಳೇನು ನೋಡೋಣ.

ಏನಿದು ಬೆಳವಣಿಗೆ?
ರಾಜ್ಯ ಸರ್ಕಾರಗಳ ವ್ಯಾಪ್ತಿಯಲ್ಲಿರುವ ಎಸ್ಕಾಂಗಳು ಮತ್ತು ವಿತರಣಾ ಸಂಸ್ಥೆಗಳು ಖಾಸಗಿ ವಿದ್ಯುತ್‌ ಉತ್ಪಾದಕರಿಂದ ತುರ್ತು ಸಂದರ್ಭದಲ್ಲಿ ವಿದ್ಯುತ್‌ ಖರೀದಿ ಮಾಡುತ್ತವೆ. ಸದರಿ ಪ್ರಕರಣದಲ್ಲಿ ಕರ್ನಾಟಕ ಸೇರಿ 13 ರಾಜ್ಯಗಳು ಖಾಸಗಿ ವಿದ್ಯುತ್‌ ಉತ್ಪಾದಕ ಕಂಪನಿಗಳಿಗೆ ಬಾಕಿ ಉಳಿಸಿಕೊಂಡಿವೆ. ಗುರುವಾರ ಮಧ್ಯರಾತ್ರಿಯಿಂದ ಅನ್ವಯವಾಗುವಂತೆ 13 ರಾಜ್ಯಗಳು ವಿದ್ಯುತ್‌ ಖರೀದಿ ಮತ್ತು ವಿತರಣೆ ಮಾಡದಂತೆ ತಾಕೀತು ಮಾಡಲಾಗಿದೆ.

ಇಂಥ ನಿರ್ಧಾರ ಯಾರದ್ದು ಮತ್ತು ಏನಾಗಲಿದೆ?
ಕೇಂದ್ರ ವಿದ್ಯುತ್‌ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್‌ ವ್ಯವಸ್ಥೆ ನಿರ್ವಹಣಾ ಸಂಸ್ಥೆ (ಪೋಸ್ಕೋ Power System Operation Corporation) ರಾಜ್ಯಗಳ ಮೇಲೆ ತಡೆ ಹೇರಿದೆ. ವಿದ್ಯುತ್‌ (ವಿಳಂಬವಾಗಿ ಸರ್ಚಾರ್ಜ್‌ ಮತ್ತು ಸಂಬಂಧಿತ ವಿಚಾರಗಳ ಪಾವತಿ) ನಿಯಮ 2022ರ ಅನ್ವಯ ರಾಜ್ಯಗಳಿಗೆ ಖರೀದಿ ತಡೆ ಹೇರಲಾಗಿದೆ. ಜೂನ್‌ನಲ್ಲಿಯೇ ಈ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿತ್ತು. ಈ ಕ್ರಮದಿಂದ ಕೆಲ ಪ್ರದೇಶದಲ್ಲಿ ಅಲ್ಪಾವಧಿಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮೊದಲ ಬಾರಿಗೆ ರಾಜ್ಯಗಳ ಮೇಲೆ ಇಂಥ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯ ಮತ್ತು ಅವುಗಳ ಬಾಕಿ (ಕೋಟಿ ರೂ.ಗಳಲ್ಲಿ)
ತೆಲಂಗಾಣ 1,381, ತಮಿಳುನಾಡು 926, ರಾಜಸ್ಥಾನ 501, ಜಮ್ಮು ಮತ್ತು ಕಾಶ್ಮೀರ 435, ಆಂಧ್ರಪ್ರದೇಶ 413, ಕರ್ನಾಟಕ 355, ಮಹಾರಾಷ್ಟ್ರ 382, ಮಧ್ಯಪ್ರದೇಶ 229, ಜಾರ್ಖಂಡ್‌ 215, ಬಿಹಾರ 174, ಮಣಿಪುರ 30, ಛತ್ತೀಸ್‌ಗಡ 27.5, ಮಿಜೋರಾಂ 17. ತೆಲಂಗಾಣ ಸರ್ಕಾರದ ಪ್ರಕಾರ ಬಾಕಿ ಮೊತ್ತ ಇಲ್ಲ ಮತ್ತು ಎಲ್ಲವನ್ನೂ ಪಾವತಿ ಮಾಡಲಾಗಿದೆ. ಆಂಧ್ರಪ್ರದೇಶ ಕೂಡ ಇದೇ ಮಾತುಗಳನ್ನಾಡಿದೆ.

ಬಾಕಿ ಪಾವತಿಸದಿದ್ದರೆ ಏನಾಗಲಿದೆ?
ಪ್ರತಿ ತಿಂಗಳು ಸರ್ಕಾರಗಳು ಬಾಕಿ ಮೊತ್ತ ಪಾವತಿ ಮಾಡದೇ ಇದ್ದರೆ ಶೇ.0.5 ಸರ್ಚಾರ್ಜ್‌ ಸೇರ್ಪಡೆಯಾಗುತ್ತದೆ. ಮೂಲ ದರದಿಂದ ವಿಳಂಬವಾಗಿ ಪಾವತಿ ಶುಲ್ಕ ಶೇ.3ನ್ನು ಮೀರುವುದಿಲ್ಲ ಎಂಬ ಷರತ್ತೂ ಇದೆ. ಜತೆಗೆ ಅಲ್ಪಾವಧಿಗೆ ರಾಜ್ಯಗಳ ಎಸ್ಕಾಂಗಳು ಮತ್ತು ವಿತರಣಾ ಕಂಪನಿಗಳು ಅಲ್ಪಾವಧಿಗೆ ವಿದ್ಯುತ್‌ ಖರೀದಿಸುವುದರಿಂದ ತಡೆಯನ್ನೂ ಹೇರಲಾಗುತ್ತದೆ.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Budget 2024; paperless tax system soon

Budget 2024; ಶೀಘ್ರ ಕಾಗದ ರಹಿತ ತೆರಿಗೆ ವ್ಯವಸ್ಥೆ

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.