ನಮ್ಮೆಲ್ಲರ ಜೀವನ ಪೆನ್ಸಿಲ್‌ನಂತಿರಲಿ


Team Udayavani, Jul 17, 2022, 6:20 AM IST

ನಮ್ಮೆಲ್ಲರ ಜೀವನ ಪೆನ್ಸಿಲ್‌ನಂತಿರಲಿ

ನಾವೆಲ್ಲರೂ ಬಾಲ್ಯದಲ್ಲಿಯೇ ಅಕ್ಷರಾಭ್ಯಾಸದ ಸಂದರ್ಭದಲ್ಲಿ ಬಳಸಿದ ಪೆನ್ಸಿಲ್‌ನಿಂದ ಮನುಷ್ಯ ನಾಲ್ಕು ಪಾಠಗಳನ್ನು ಕಲಿಯಬೇಕಿದೆ. ಅಕ್ಷರಗಳನ್ನು ಸುಂದರವಾಗಿ ಬರೆಯುವ ಪೆನ್ಸಿಲ್‌ ವಿಭಿನ್ನ ವಿಚಾರಗಳನ್ನು ದಾಖಲಿಸಿ ಇಡಬಲ್ಲುದು. ಅದ್ಭುತವಾದ ಕಥೆ, ಕವನ, ಒಳ್ಳೆಯ ಮತ್ತು ಕೆಟ್ಟ ವಿಚಾರಗಳನ್ನು ಬರೆಯುವ ಮೂಲಕ ಹಾಗೂ ಬರೆದ ಅಕ್ಷರಗಳಿಂದ ವ್ಯಕ್ತಿ-ವ್ಯಕ್ತಿಗಳಲ್ಲಿ ಪ್ರೀತಿ ಹುಟ್ಟಿಸುವ ಅಥವಾ ದ್ವೇಷವನ್ನು ಬಿತ್ತುವ ಗುಣ ಪೆನ್ಸಿಲ್‌ಗೆ ಇದೆ. ಆದರೆ ಪೆನ್ಸಿಲ್‌ಗೆ ಬರೆಯುವ ಕೈಗಳ ಸಹಕಾರ ಇಲ್ಲದಿದ್ದರೆ ಕೇವಲ ಪೆನ್ಸಿಲ್‌ ಒಂದೇ ಏನನ್ನೂ ಬರೆಯಲು ಅಥವಾ ಮಾಡಲು ಸಾಧ್ಯವಿಲ್ಲ. ಪೆನ್ಸಿಲ್‌ನಿಂದ ಬರೆಯುತ್ತಾ ಹೋದಂತೆ ಅದರ ಮೊನಚನ್ನು ಮತ್ತು ಬರೆಯುವ ಗುಣವನ್ನು ಕಳೆದುಕೊಳ್ಳುತ್ತದೆ. ಆಗ ಪೆನ್ಸಿಲ್‌ನ ತುದಿಯನ್ನು ಕೆತ್ತಿ ಮತ್ತೂಮ್ಮೆ ಮೊನಚು ಮಾಡಿದಾಗ ಮತ್ತೆ ತೀಕ್ಷ್ಣವಾಗಿ ಬರೆಯಲು ಪ್ರಾರಂಭಿಸುತ್ತದೆ. ಮನುಷ್ಯನ ಬದುಕಿನಲ್ಲಿ ಎದುರಾಗುವ ಕಷ್ಟಗಳು ಪೆನ್ಸಿಲ್‌ನ್ನು ಕೆತ್ತುವಂತಹ ಕೆಲಸಕ್ಕೆ ಸಮಾನವಾದದ್ದು. ಮೊನಚು ಮಾಡುವಾಗ ನೋವಾಗುವುದು ಸಹಜ. ಆದರೆ ಆ ಮೊನಚು ಮಾಡುವ (ಕೆತ್ತುವ) ಕಷ್ಟವು ಕಳೆದ ಮರುಕ್ಷಣ ಮತ್ತೆ ಮನುಷ್ಯ ಚುರುಕಾಗುತ್ತಾನೆ ಎನ್ನುವುದನ್ನು ಅರಿತು ಬದುಕಿನ ಕಷ್ಟ-ಕಾರ್ಪಣ್ಯಗಳು ತಾತ್ಕಾಲಿಕವೆಂದು ತಿಳಿದು ಮುಂದೆ ದೃಢವಾದ ಹೆಜ್ಜೆಯೊಂದಿಗೆ ಸಾಗಬೇಕು.

ಪೆನ್ಸಿಲ್‌ನಿಂದ ಬರೆದಿರುವುದು ತಪ್ಪಾದರೆ ಆ ತಪ್ಪನ್ನು ರಬ್ಬರ್‌ನಿಂದ ಒರೆಸಿ ಮತ್ತೆ ತಿದ್ದಿ ಬರೆಯಬಹುದು. ನಮ್ಮ ಬದುಕಿನಲ್ಲಿ ನಡೆದಿರುವ ಯಾವುದೇ ವಿಚಾರವನ್ನು ಒರೆಸಲು ಅಥವಾ ತಿದ್ದಲು ಪ್ರತೀ ಬಾರಿಯೂ ಕೆಟ್ಟ ಘಟನೆಗಳೇ ಆಗಬೇಕು ಎಂದಿಲ್ಲ. ನಮ್ಮ ಜೀವನದಲ್ಲಿ ತಪ್ಪುಗಳು ಘಟಿಸಿದಾಗ ತಪ್ಪುಗಳನ್ನು ಸಮರ್ಥಿಸಿಕೊಳ್ಳದೇ ನಿರ್ದಾ ಕ್ಷಿಣ್ಯದಿಂದ ಅವುಗಳನ್ನು ಬದುಕಿನಿಂದ ಒರೆಸಿಬಿಡಬೇಕು ಮತ್ತು ತಪ್ಪುಗಳನ್ನು ತಿದ್ದಿಕೊಂಡು ಬದುಕಬೇಕು. ಅದೇ ರೀತಿ ಪೆನ್ಸಿಲ್‌ನ ಮೇಲ್ಮೆ„ಯ ಹಿಡಿಕೆ ಎಷ್ಟೇ ಸುಂದರವಾಗಿ ಮತ್ತು ಆಕರ್ಷಕವಾಗಿ ಇದ್ದರೂ ಅದರ ಒಳಗೆ ಇರುವ ಸೀಸದ ಕಡ್ಡಿ ಗುಣಮಟ್ಟದಿಂದ ಕೂಡಿರದಿದ್ದರೆ ಅದಕ್ಕೆ ಯಾವುದೇ ಬೆಲೆಯೂ ಇರುವುದಿಲ್ಲ. ಮನುಷ್ಯನ ಜೀವನವೂ ಇದೇ ರೀತಿಯಾಗಿದ್ದು, ವ್ಯಕ್ತಿ ನೋಡಲು ಎಷ್ಟೇ ಆಕರ್ಷಕ, ಸುಂದರ ರೂಪ, ಎತ್ತರ ಮತ್ತು ದಪ್ಪಗಿದ್ದು, ಧನಿಕನಾಗಿದ್ದರೂ ಆತನಲ್ಲಿ ಒಳ್ಳೆಯ ಗುಣಗಳೇ ಇಲ್ಲದಿದ್ದರೆ, ವ್ಯಕ್ತಿತ್ವವಿಲ್ಲದಿದ್ದರೆ ಆ ವ್ಯಕ್ತಿಗೆ ಯಾವ ಬೆಲೆಯೂ ಇರುವುದಿಲ್ಲ.

ಪೆನ್ಸಿಲ್‌ನಲ್ಲಿ ಯಾವುದೇ ವಿಷಯವನ್ನು ಬರೆದರೂ ಅದನ್ನು ಅಕ್ಷರಗಳ ರೂಪದಲ್ಲಿ ಶಾಶ್ವತವಾಗಿ ಉಳಿಸಿ ತಾನು ನಿಧಾನವಾಗಿ ಮುಗಿದು ಹೋಗುತ್ತದೆ. ಪೆನ್ಸಿಲ್‌ ಕೆಟ್ಟ ವಿಚಾರಗಳನ್ನು, ಒಳ್ಳೆಯ ವಿಚಾರಗಳನ್ನೂ ಬರೆದು ಗುರುತಾಗಿ ಇಡುತ್ತದೆ. ಅದೇ ರೀತಿ ಜೀವನ ಎನ್ನುವ ಕಾಗದದಲ್ಲಿ ಯಾವುದೇ ವಿಚಾರವನ್ನು ಬರೆಯುವ ಮೊದಲು ಬಹಳಷ್ಟು ಜಾಗೃತರಾಗಿದ್ದು, ಸಾಧ್ಯವಾದಷ್ಟು ಉತ್ತಮ ವಿಚಾರಗಳನ್ನೇ ಬರೆಯಲು ಪ್ರಯತ್ನಿಸಬೇಕು. ಬರೆದುದು ತಪ್ಪಾಗುವ ಮತ್ತು ಅಳಿಸಿ ತಿದ್ದುವ ಮೊದಲೇ ಸಾಕಷ್ಟು ಯೋಚಿಸಿ ಬರೆಯಬೇಕು. ತಪ್ಪಾಗಿ ಬರೆದುಬಿಟ್ಟರೆ ಅದರ ಗುರುತು ಶಾಶ್ವತವಾಗಿ ಉಳಿದುಬಿಡುತ್ತದೆ.

ಆದ್ದರಿಂದ ನಾವೆಲ್ಲರೂ ಜೀವನದಲ್ಲಿ ಪೆನ್ಸಿಲ್‌ನಲ್ಲಿರುವ ಗುಣವನ್ನು ಅಳವಡಿಸಿಕೊಂಡಾಗ ಉತ್ತಮ ವ್ಯಕ್ತಿಗಳಾಗಿ ಸಮಾಜದಲ್ಲಿ ಮತ್ತು ವ್ಯವಸ್ಥೆಯಲ್ಲಿ ಗುರುತಿಸಿಕೊಳ್ಳುತ್ತೇವೆ. ಮನುಷ್ಯನ ವ್ಯಕ್ತಿತ್ವವು ಇದೇ ರೀತಿ ಪೆನ್ಸಿಲ್‌ನಂತೆ ಆಗಬೇಕು. ಸಮಾಜ ಸೇವೆಯಲ್ಲಿ ವ್ಯಕ್ತಿಯು ಪೆನ್ಸಿಲ್‌ನಂತೆ ನಿಧಾನವಾಗಿ ಕಳೆದುಹೋದರೂ ಆ ವ್ಯಕ್ತಿಯು ತಾನು ಮಾಡಿದ ಉತ್ತಮ ಕೆಲಸಗಳು ಮತ್ತು ಆತ ಕಾಗದದಲ್ಲಿ ಬರೆದಿಟ್ಟ ಒಳ್ಳೆಯ ವಿಚಾರಗಳು ಮತ್ತು ಅಕ್ಷರಗಳು ಪ್ರಪಂಚದಲ್ಲಿ ಶಾಶ್ವತವಾಗಿ ಉಳಿಯುವ ರೀತಿಯ ಸಾಧನೆಯನ್ನು ನಾವೆಲ್ಲರೂ ಮಾಡಬೇಕು.

ಈ ಜಗತ್ತಿನಲ್ಲಿ ಎಲ್ಲವೂ ನನ್ನೊಬ್ಬ ನಿಂದಲೇ ಎನ್ನುವುದನ್ನು ಮರೆತು ಇತರರ ಸಹಕಾರದೊಂದಿಗೆ ಕಾಲ ಕಾಲಕ್ಕೆ ತನ್ನನ್ನು ತಾನು ಮೊನಚು ಮಾಡಿ ಕೊಂಡು, ತಿದ್ದಿಕೊಂಡು ಹೆಚ್ಚಿನ ಜ್ಞಾನ ಮತ್ತು ಕೌಶಲವನ್ನು ಗಳಿಸಿಕೊಂಡು ಮೌಲ್ಯಯುತವಾಗಿ ಬದುಕುವುದನ್ನು ಕಲಿಯಬೇಕು.

- ಸಂತೋಷ್‌ ರಾವ್‌ ಪೆರ್ಮುಡ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.