ಕುಟುಂಬ ರಾಜಕಾರಣ ಧಿಕ್ಕರಿಸಿದ ಮಂಡ್ಯದ ಜನ


Team Udayavani, May 25, 2019, 5:00 AM IST

mandya

ಮಂಡ್ಯ: ಸಕ್ಕರೆ ನಾಡಲ್ಲಿ ಕುಟುಂಬ ರಾಜಕಾರಣದ ಅಧಿಪತ್ಯ ಸ್ಥಾಪಿಸಲು ಹೊರಟ ಜೆಡಿಎಸ್‌ಗೆ ಜಿಲ್ಲೆಯ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಹೊರಗಿನ ನಾಯಕತ್ವಕ್ಕೆ ಮಣೆ ಹಾಕದ ಜನರು, ಸ್ಥಳೀಯ ನಾಯಕತ್ವಕ್ಕಷ್ಟೇ ಪ್ರಾಧಾನ್ಯತೆ ನೀಡಿದ್ದಾರೆ. ಜೆಡಿಎಸ್‌ ಸೋಲಿಗೆ ಜಿಲ್ಲೆಯ ಜನರ ಬಗ್ಗೆ ಇದ್ದ ಅತಿಯಾದ ಆತ್ಮವಿಶ್ವಾಸವೂ ಕಾರಣ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಜೆಡಿಎಸ್‌ ನಾಯಕರು, ಕಾಂಗ್ರೆಸ್‌ ಪಕ್ಷವನ್ನು ಧೂಳಿಪಟ ಮಾಡಿ ಮಂಡ್ಯ ವನ್ನು ಭದ್ರಕೋಟೆ ಮಾಡಿಕೊಂಡಿದ್ದರು. ಈ ಕೋಟೆಯ ಮೇಲೆ ಹೊರಗಿನಿಂದ ಅಧಿಪತ್ಯ ಸಾಧಿಸಿದ್ದ ದೇವೇಗೌಡ ಹಾಗೂ ಕುಮಾರಸ್ವಾಮಿ ಯುವರಾಜನಾಗಿ ನಿಖಿಲ್‌ಗೆ ಪಟ್ಟಾಭಿಷೇಕ ನಡೆಸಲು ಮುಂದಾದರು.

ವಿರೋಧಿಗಳೇ ಇಲ್ಲದ ಸಕ್ಕರೆ ನಾಡಿನಲ್ಲಿ ಲೋಕಸಭಾ ಚುನಾವಣೆಯ ಗೆಲುವು ಸುಲಭ ತುತ್ತಾಗಬಹುದೆಂದೇ ದಳಪತಿಗಳು ಭಾವಿಸಿದ್ದರು. ನಿಖಿಲ್‌ಗೆ ರಾಜಕೀಯ ಪಟ್ಟಾಭಿಷೇಕ ಮಾಡುವ ಜೆಡಿಎಸ್‌ನ ತಂತ್ರಗಾರಿಕೆ “ಜಾಗ್ವಾರ್‌’ ಸಿನಿಮಾ ಆಡಿಯೋ ಬಿಡುಗಡೆ ಸಮಾರಂಭ ದಿಂದಲೇ ನಡೆದಿತ್ತು ಎನ್ನುವುದು ಜಿಲ್ಲೆಯ ಜನರಿಗೆ ಅರಿವಾಯಿತು. ಅಲ್ಲಿಂದಲೇ ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ಜನಮಾನಸದಲ್ಲಿ ವಿರೋಧಿ ಅಲೆ ಸೃಷ್ಟಿಯಾಗಿತ್ತು.

ಇದೇ ಸಮಯಕ್ಕೆ ದಿವಂಗತ ಅಂಬರೀಶ್‌ ಪತ್ನಿ, ಸುಮಲತಾ ಚುನಾವಣಾ ಅಖಾಡ ಪ್ರವೇಶಕ್ಕೆ ಸನ್ನದ್ಧರಾದರು. ಗೌಡರ ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠ ಕಲಿಸುವುದಕ್ಕೆ ಮತದಾರರಿಗೂ ಒಂದು ಅವಕಾಶ ಸಿಕ್ಕಿತು. ಮತದಾರರ ಒಲವು ಸುಮಲತಾ ಕಡೆಗೆ ತಿರುಗಿತು. ಜಿಲ್ಲೆಯ ಹಿರಿಯ ರಾಜಕೀಯ ಧುರೀಣರಾದ ಎಂ.ಕೆ.ಶಿವನಂಜಪ್ಪ, ಕೆ.ವಿ.ಶಂಕರಗೌಡ, ಎಸ್‌.ಎಂ.ಕೃಷ್ಣ, ಜಿ.ಮಾದೇಗೌಡ, ಅಂಬರೀಶ್‌,

ಕೆ.ಆರ್‌.ಪೇಟೆ ಕೃಷ್ಣ, ಎನ್‌.ಚಲುವರಾಯಸ್ವಾಮಿ, ಸಿ.ಎಸ್‌.ಪುಟ್ಟರಾಜು ಅಂತವರ ಸಾಲಿನಲ್ಲಿ ನಿಖಿಲ್‌ರನ್ನು ನೋಡುವುದಕ್ಕೆ ಜನ ಬಯಸಲಿಲ್ಲ. ನಿಖಿಲ್‌ ಜಿಲ್ಲಾ ರಾಜಕಾರಣ ಪ್ರವೇಶ ಸ್ವತ: ಜೆಡಿಎಸ್‌ ನಾಯಕರಿಗೇ ಇಷ್ಟವಿರಲಿಲ್ಲ. ಜಿಲ್ಲೆಯೊಳಗಿನ ವಾಸ್ತವ ಪರಿಸ್ಥಿತಿಯನ್ನೇ ಅರಿಯದೆ ಜೆಡಿಎಸ್‌ ವರಿಷ್ಠರು, ನಿಖಿಲ್‌ರನ್ನು ಅಭ್ಯರ್ಥಿಯನ್ನಾಗಿಸಿ ಗೆಲ್ಲುವ ಹುಂಬುತನ ಪ್ರದರ್ಶಿಸಿದರು.

ಜತೆಗೆ, ಸುಮಲತಾ ರಾಜಕೀಯ ಪ್ರವೇಶವನ್ನು ಸಹಿಸದೆ ಸಿಎಂ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ “ತೆನೆ’ ನಾಯಕರು ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ಟೀಕಿಸಿ, ಪಕ್ಷದ ಭದ್ರಕೋಟೆಯೊಳಗೆ ಅಭ್ಯರ್ಥಿ ಸೋಲಿಗೆ ತಾವೇ ಕಾರಣರಾದರು.

* ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.