ನ್ಯಾಯಾಂಗದಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕಾರ್ಯಸಾಧುವೇ?

7 ದಶಕಗಳಲ್ಲಿ ಸು. ಕೋ.ಗೆ ನೇಮಕವಾದ ಮಹಿಳಾ ನ್ಯಾಯಾಧೀಶರು ಕೇವಲ 11 

Team Udayavani, Oct 10, 2021, 6:15 AM IST

ನ್ಯಾಯಾಂಗದಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕಾರ್ಯಸಾಧುವೇ?

ನ್ಯಾಯಾಂಗ ವ್ಯವಸ್ಥೆ ಮತ್ತು ಕಾನೂನು ಕಾಲೇಜುಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕು. ಇದು ಮಹಿಳೆಯರ ಹಕ್ಕಾಗಿದೆಯೇ ಹೊರತು ದಾನವಲ್ಲ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಇತ್ತೀಚೆಗೆ ಪ್ರತಿಪಾದನೆ ಮಾಡಿದ್ದರು. ತಿಂಗಳ ಹಿಂದೆಯಷ್ಟೇ ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡಿದ್ದ 9 ನೂತನ ನ್ಯಾಯಾಧೀಶರ ಪೈಕಿ ಮೂವರು ಮಹಿಳೆ ಯರಾಗಿದ್ದರು. ಇದರ ಬೆನ್ನಲ್ಲೇ ಸಿಜೆಐ ಈ ಹೇಳಿಕೆ ನೀಡಿದ್ದರು. ಆದರೆ ವಾಸ್ತವವಾಗಿ ಸುಪ್ರೀಂ ಕೋರ್ಟ್‌ ಆರಂಭವಾದಾಗಿನಿಂದ ಈವರೆಗೆ ಅಂದರೆ ಏಳು ದಶಕಗಳ ಅವಧಿಯಲ್ಲಿ  ನೇಮಕಗೊಂಡ ಮಹಿಳಾ ನ್ಯಾಯಾಧೀಶರ ಸಂಖ್ಯೆ ಎಷ್ಟು?, ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಪ್ರಾತಿನಿಧ್ಯದ ಸ್ಥಿತಿಗತಿ ಏನು?, ಮಹಿಳೆಯರಿಗೆ ನ್ಯಾಯಾಂಗದಲ್ಲಿ ಶೇ. 50 ಪ್ರಾತಿನಿಧ್ಯ ನೀಡಬೇಕೆಂಬ ಸಿಜೆಐ ಅವರ ಸಲಹೆ ದೇಶದ ಈಗಿನ ಸ್ಥಿತಿಯಲ್ಲಿ ಕಾರ್ಯಸಾಧುವೇ? ಇವೆಲ್ಲದರ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

1950ರ ಜ. 26ರಂದು ಸಂವಿಧಾನ ಜಾರಿಗೆ ಬಂದ ಬಳಿಕ ದೇಶದ ಮೊದಲ ಮುಖ್ಯ ನ್ಯಾಯಮೂರ್ತಿಯಾಗಿ ಹರಿಲಾಲ್‌ ಕಾನಿಯಾ ನೇಮಕಗೊಂಡಿದ್ದರು. ಅವರೊಂದಿಗೆ ಒಟ್ಟು ಐದು ನ್ಯಾಯಾಧೀಶರನ್ನು ನೇಮಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ ಸುಪ್ರೀಂ ಕೋರ್ಟ್‌ಗೆ ಒಟ್ಟಾರೆ 256 ನ್ಯಾಯಾಧೀಶರನ್ನು ನೇಮಿಸಲಾಗಿದೆ. ಅವರಲ್ಲಿ  ಮಹಿಳಾ ನ್ಯಾಯಾಧೀಶರ ಸಂಖ್ಯೆ 11 ಮಾತ್ರ. ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಒಟ್ಟು 33 ಮಂದಿ ನ್ಯಾಯಾಧೀಶರಿದ್ದು ಅವರಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಬಿ.ವಿ. ನಾಗರತ್ನಾ, ಬೇಲಾ ಎಂ. ತ್ರಿವೇದಿ, ಹಿಮಾ ಕೊಹ್ಲಿ  ಹಾಲಿ ಇರುವ ನಾಲ್ವರು ಮಹಿಳಾ ನ್ಯಾಯಾಧೀಶ ರಾಗಿದ್ದಾರೆ. ಇವರಲ್ಲಿ ಇಂದಿರಾ ಬ್ಯಾನರ್ಜಿ ಅವರನ್ನು ಹೊರತುಪಡಿಸಿ ಉಳಿದ ಮೂವರು ಇತ್ತೀಚೆಗಷ್ಟೇ ನೇಮಕಗೊಂಡವರಾಗಿದ್ದಾರೆ. 2021ರ ಮಾರ್ಚ್‌ನಲ್ಲಿ ನ್ಯಾ| ಇಂದು ಮಲ್ಹೋತ್ರಾ ನಿವೃತ್ತಿಯಾದ ಅನಂತರ ನ್ಯಾ| ಇಂದಿರಾ ಬ್ಯಾನರ್ಜಿ ಒಬ್ಬರೇ ಕಾಲ ಸುಪ್ರೀಂ ಕೋರ್ಟ್‌ನಲ್ಲಿ ಮಹಿಳಾ ನ್ಯಾಯಾಧೀಶರಾಗಿದ್ದರು. ಸದ್ಯ ಸುಪ್ರೀಂ ಕೋರ್ಟ್‌ನಲ್ಲಿರುವ ನ್ಯಾಯಾಧೀಶರಲ್ಲಿ ಮಹಿಳಾ ನ್ಯಾಯಾಧೀಶರ ಪ್ರಮಾಣ ಶೇ. 12ರಷ್ಟಾಗಿದೆ. ಸುಪ್ರೀಂ ಕೋರ್ಟ್‌ನ ಇತಿಹಾಸವನ್ನು ಪರಿಗಣಿಸಿದರೆ ಮಹಿಳಾ ನ್ಯಾಯಾಧೀಶರ ಪ್ರಾತಿನಿಧ್ಯ ಕೇವಲ ಶೇ. 0.4. ಇದೇ ಮೊದಲ ಬಾರಿಗೆ ಸುಪ್ರೀಂನಲ್ಲಿ ಏಕಕಾಲದಲ್ಲಿ ನಾಲ್ವರು ಮಹಿಳಾ ನ್ಯಾಯಾಧೀಶರಿದ್ದು ಈವರೆಗೆ ಈ ಸಂಖ್ಯೆ ಎರಡನ್ನು  ಮೀರಿರಲಿಲ್ಲ ಎಂಬುದು ಗಮನಾರ್ಹ.

ಮೊದಲ ಮಹಿಳಾ ನ್ಯಾಯಾಧೀಶರು
ಸುಪ್ರೀಂ ಕೋರ್ಟ್‌
1950ರಲ್ಲಿ ಬಾರ್‌ ಕೌನ್ಸಿಲ್‌ ಆಫ್ ಇಂಡಿಯಾ ಪರೀಕ್ಷೆಯಲ್ಲಿ ಅಗ್ರ ಸ್ಥಾನ ಪಡೆದ ಮೊದಲ ಮಹಿಳೆ ಫಾತಿಮಾ ಬೀಬಿ ಅವರು 1989ರಲ್ಲಿ  ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹೈಕೋರ್ಟ್‌
ಬ್ಯಾರಿಸ್ಟರ್‌ ಆಗಿ ವೃತ್ತಿ ಜೀವನ ಪ್ರಾರಂಭಿಸಿದ್ದ ಅನ್ನಾ ಚಾಂಡಿ ದೇಶದಲ್ಲಿಯೇ ಮೊದಲ ಬಾರಿಗೆ ಹೈಕೋರ್ಟ್‌ ನ್ಯಾಯಾಧೀಶೆಯಾಗಿ ನೇಮಕಗೊಂಡಿದ್ದರು. 1937ರಲ್ಲಿ 1959ರಲ್ಲಿ ಅನ್ನಾ ಚಾಂಡಿ ಕೇರಳ ಹೈಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆಯಾದರು. ಇವರು 1967ರ ವರೆಗೆ ಕೇರಳ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು.

ಪ್ರಾತಿನಿಧ್ಯ ಏಕೆ ಮುಖ್ಯ?
ನ್ಯಾಯಾಂಗದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಾಗುವುದರಿಂದ ಕೇವಲ ಈ ಕ್ಷೇತ್ರದಲ್ಲಿ ಮಾತ್ರ ವಲ್ಲದೆ ಇತರ ಕ್ಷೇತ್ರಗಳಲ್ಲಿನ ಪುರುಷ- ಮಹಿಳೆಯರ ನಡುವಿನ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಾಗಲಿದೆ. ಹೈಕೋರ್ಟ್‌, ಸು.ಕೋ.ನಂತಹ ನ್ಯಾಯಾಂಗ ವ್ಯವಸ್ಥೆಯ ಉನ್ನತ ಸ್ತರದಲ್ಲಿ ಮಹಿಳೆಯರು ನ್ಯಾಯಾಧೀಶರಾಗಿ ನೇಮಕಗೊಂಡಾಗ ನ್ಯಾಯಾಂಗ ವ್ಯವಸ್ಥೆಯ ಮೇಲೆ ಮಹಿಳೆಯರಿಗಿರುವ ಮನೋಭಾವ ಬದಲಾಗಿ ಅವರಲ್ಲಿ ಹೆಚ್ಚಿನ ವಿಶ್ವಾಸ ಮೂಡಲು ಕಾರಣವಾಗುತ್ತದೆ. ಅಲ್ಲದೆ ಸಹಜವಾಗಿ ಕಾರ್ಯಾಂಗ, ಶಾಸಕಾಂಗಗಳಲ್ಲಿಯೂ ಮಹಿಳಾ ಪ್ರಾತಿನಿಧ್ಯ ಹೆಚ್ಚಲು ಇದು ಪ್ರೇರಣೆಯಾಗಲಿದೆ.

ಸು.ಕೋ.ನ  ಹಾಲಿ ಮಹಿಳಾ ನ್ಯಾಯಾಧೀಶರು
ನ್ಯಾ| ಇಂದಿರಾ ಬ್ಯಾನರ್ಜಿ
ಮದ್ರಾಸ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಇವರು, 2018ರ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

ನ್ಯಾ| ಬಿ.ವಿ. ನಾಗರತ್ನಾ
2008ರ ಫೆಬ್ರವರಿಯಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದು, 2010ರ ಫೆಬ್ರ ವರಿಯಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂ ಡರು. ಪ್ರಸ್ತುತ ಸು.ಕೋ.ನ ನ್ಯಾಯಾಧೀಶೆಯಾಗಿದ್ದಾರೆ.

ನ್ಯಾ| ಬೇಲಾ ಎಂ. ತ್ರಿವೇದಿ
ಗುಜರಾತ್‌ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದು, 2021ರ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

 ನ್ಯಾ| ಹಿಮಾ ಕೊಹ್ಲಿ
ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿದ್ದು, 2021ರ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನಿಯುಕ್ತರಾಗಿದ್ದಾರೆ.

ಹೈಕೋರ್ಟ್‌ಗಳಲ್ಲಿ ಮಹಿಳಾ ಪ್ರಾತಿನಿಧ್ಯ

ವರ್ಷದ ಹಿಂದೆ ಹೈಕೋರ್ಟ್‌ಗಳಲ್ಲಿ ಕೇವಲ 78 ಅಂದರೆಸುಮಾರು ಶೇ. 7ರಷ್ಟು ಮಹಿಳಾ ನ್ಯಾಯಾಧೀಶರಿದ್ದಾರೆ. ಪುರುಷ ನ್ಯಾಯಾಧೀಶರ ಸಂಖ್ಯೆ 1,079. ಇದರಲ್ಲಿ 6 ಹೈಕೋರ್ಟ್‌ಗಳಲ್ಲಿ ಕೇವಲ ಒಬ್ಬರು, 5 ಹೈಕೋರ್ಟ್‌ಗಳಲ್ಲಿ ಮಹಿಳಾ ನ್ಯಾಯಾಧೀಶರೇ ಇಲ್ಲ.

ಹೈಕೋರ್ಟ್‌ಗಳಲ್ಲಿ ಮಹಿಳಾ ಪ್ರಾತಿನಿಧ್ಯ
ಸುಪ್ರೀಂ ಕೋರ್ಟ್‌ನಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಹಾಲಿ ನ್ಯಾಯಾಧೀಶರ ವಯೋಮಿತಿಯನ್ನು ಪರಿಗಣಿಸಿದಾಗ 2027ರಲ್ಲಿ ಭಾರತದ ಮೊದಲ ಮಹಿಳಾ ಸಿಜೆಐ ನೇಮಕಗೊಳ್ಳಲಿದ್ದಾರೆ. ತಿಂಗಳ ಹಿಂದೆಯಷ್ಟೇ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿರುವ ಕರ್ನಾಟಕ ಮೂಲದ ನ್ಯಾ| ಬಿ.ವಿ. ನಾಗರತ್ನಾ ಅವರು ಈ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 2027ರಲ್ಲಿ ಅವರು ಸಿಜೆಐ ಆಗಿ ನೇಮಕಗೊಂಡರೂ ಅವರ ಅಧಿಕಾರಾವಧಿ ಕೇವಲ 36 ದಿನಗಳವರೆಗೆ ಇರಲಿದ್ದು ಆ ಬಳಿಕ ಅವರು ಸೇವೆಯಿಂದ ನಿವೃತ್ತರಾಗಲಿದ್ದಾರೆ. ನ್ಯಾ| ಬಿ.ವಿ. ನಾಗರತ್ನಾ ಅವರು 2008ರ ಫೆಬ್ರವರಿಯಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಅನಂತರ 2010ರ ಫೆಬ್ರವರಿಯಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರ ತಂದೆ ಇ.ಎಸ್‌.ವೆಂಕಟರಾಮಯ್ಯ ಅವರು 1989ರಲ್ಲಿ ಸುಪ್ರೀಂ ಕೋರ್ಟ್‌ನ 19ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಶೇ.50 ಮಹಿಳಾ ಪ್ರಾತಿನಿಧ್ಯಕ್ಕೆ  ಇರುವ ಸವಾಲುಗಳು
01. ಸಂವಿಧಾನದ ಕಲಂ 243- ಡಿ ಅಡಿಯಲ್ಲಿ ಪಂಚಾಯತ್‌ಗಳಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿಗೆ ಅವಕಾಶವಿದೆ. ಆದರೆ ನ್ಯಾಯಾಂಗದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಅಥವಾ ನ್ಯಾಯಾಂಗದ ಆದೇಶ ಅನಿವಾರ್ಯವಾಗಿದೆ.

02. ಇತರ ವರ್ಗಗಳ ಮೀಸಲಾತಿ ಬೇಡಿಕೆ ಅಧಿಕವಾಗಿರುವುದರಿಂದ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಕಳೆದ ಹಲವು ದಶಕಗಳಿಂದ ಸ್ಥಗಿತಗೊಂಡಿದೆ. ಹೀಗಾಗಿ ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡುವುದು ಕಷ್ಟಸಾಧ್ಯವೇ.

03. ನ್ಯಾಯಾಧೀಶರಾಗಲು ವಕೀಲರಾಗುವುದು ಆವಶ್ಯಕ. ಪ್ರಸ್ತುತ ಸಿಎಲ್‌ಎಟಿ ಅಡಿಯಲ್ಲಿ ನಡೆಸುವ ಪ್ರವೇಶ ಪರೀಕ್ಷೆ ಬರೆಯಲು ಕಾಲೇಜುಗಳಲ್ಲಿ ಮಹಿಳಾ ಮೀಸಲಾತಿಗೆ ಹಲವು ನಿಬಂಧನೆಗಳಿವೆ. ದೇಶಾದ್ಯಂತ ಇರುವ ಕಾನೂನು ಕಾಲೇಜುಗಳಲ್ಲಿ ಮಹಿಳೆಯರಿಗೆ ಶೇ. 50 ಮೀಸಲಾತಿಯ ನಿಯಮವಿಲ್ಲ.

04. ಜಿಲ್ಲಾ ನ್ಯಾಯಾಲಯಗಳಲ್ಲಿ ಮಹಿಳೆಯರಿಗೆ ಶೇ. 5ರಿಂದ 35ರಷ್ಟು ಮೀಸಲಾತಿ ನಿಯಮವಿದೆ. ಬಿಹಾರದಲ್ಲಿ ಐದು ವರ್ಷಗಳ ಹಿಂದೆ ಶೇ.35 ಮೀಸಲಾತಿಯ ಕಾನೂನು ಮಾಡಲಾಗಿತ್ತು. ಇದನ್ನು ಹೊರತುಪಡಿಸಿ ಕೆಳ ನ್ಯಾಯಾಲಯಗಳಲ್ಲಿ ಮಹಿಳಾ ನ್ಯಾಯಾಧೀಶರ ಸಂಖ್ಯೆ ಕೇವಲ ಶೇ.11.5ರಷ್ಟು ಮಾತ್ರ. ಅಭಿವೃದ್ಧಿ ಹೊಂದಿದ ಗೋವಾ, ಮೇಘಾಲಯದಂತಹ ಸಣ್ಣ ರಾಜ್ಯಗಳಲ್ಲಿ ಯಾವುದೇ ಮೀಸಲಾತಿ ಇಲ್ಲದೇ ಹೋದರೂ ಶೇ. 65ರಿಂದ 73ರಷ್ಟು ಮಹಿಳಾ ನ್ಯಾಯಾಧೀಶರಿದ್ದಾರೆ.

05.ಕೆಳ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಹೈಕೋರ್ಟ್‌, ಅನಂತರ ಸುಪ್ರೀಂ ಕೋರ್ಟ್‌ಗೆ ಭಡ್ತಿ ನೀಡಲಾಗುತ್ತದೆ. ಆದರೆ ಮೀಸಲಾತಿ ನಿಯಮ ಮತ್ತು ನೇರ ನೇಮಕಾತಿಗಾಗಿ ಮಹಿಳೆಯರಿಗಾಗಿ ಯಾವುದೇ ಪ್ರತ್ಯೇಕ ನಿಯಮವಾಗಲೀ ಕಾನೂನು ಆಗಲೀ ಇಲ್ಲ.

ಪುಟ ನಿರ್ವಹಣೆ: ವಿದ್ಯಾ ಇರ್ವತ್ತೂರು

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.