ಸಂಪೂರ್ಣ ಕೋವಿಡ್‌ ಲಸಿಕೆ ಪಡೆದ ಯಾತ್ರಿಕರು …ಕತಾರ್‌ನಲ್ಲಿ ವಿಶ್ವದ ಮೊದಲ ವಿಮಾನ ಹಾರಾಟ


Team Udayavani, Apr 21, 2021, 6:41 PM IST

Pilgrims who received the full covid vaccine

ಕತಾರ್‌ ಏರ್‌ವೇಸ್‌ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು  ಪ್ರಾರಂಭಿಸಲು ಮುಂದಾಗಿದೆ. ಈ ಪ್ರಯುಕ್ತ ಎ. 6ರಂದು ವಿಶ್ವದ ಮೊದಲ ಸಂಪೂರ್ಣ ಕೋವಿಡ್‌- 19 ಲಸಿಕೆ ಪಡೆದವರಿಗಾಗಿ ವಿಮಾನಯಾನ ಸೌಲಭ್ಯವನ್ನು ಕಲ್ಪಿಸಿತ್ತು.

ಪ್ರಾಯೋಗಿಕವಾಗಿ ಕ್ಕಿ6421 ವಿಮಾನವು ಬೆಳಗ್ಗೆ 11 ಗಂಟೆಗೆ ಹಮದ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿರ್ಗಮಿಸಿದೆ. ಇದರಲ್ಲಿ ಕೇವಲ ಲಸಿಕೆ ಹಾಕಿದ ಸಿಬಂದಿ ಮತ್ತು ಪ್ರಯಾಣಿಕರನ್ನು ಮಾತ್ರ ವಿಮಾನದಲ್ಲಿ ಕರೆದೊಯ್ಯಲಾಯಿತು. ತಪಾಸಣೆ ವೇಳೆಯಲ್ಲೂ ಸಂಪೂರ್ಣ ಲಸಿಕೆ ಹಾಕಿದ ಸಿಬಂದಿಯಷ್ಟೇ ಸೇವೆ ಸಲ್ಲಿಸಿದರು. ಅಪರಾಹ್ನ 2 ಗಂಟೆಗೆ ದೋಹಾಕ್ಕೆ ಈ ವಿಮಾನ ಹಿಂತಿರುಗಿದೆ.

ಈ ವಿಶೇಷ ವಿಮಾನವು ವಿಮಾನಯಾನದಲ್ಲಿ ಸುರಕ್ಷೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಇದರಲ್ಲಿ ಇತ್ತೀಚಿನ ಸಂಶೋಧನೆಯಾದ “ದಿ ವರ್ಲ್ಡ್ ಫ‌ಸ್ಟ್‌ ಜೀರೋ ಟಚ್‌’ ವಿಮಾನದಲ್ಲಿ ಮನರಂಜನ ತಂತ್ರಜಾnನವೂ ಸೇರಿದೆ. ಈ ಏರ್‌ಲೈನ್ಸ್‌ನಲ್ಲಿ ಏರ್‌ಬಸ್‌ ಎ350- 1000ನಲ್ಲಿ ವಿಶೇಷ ಸೌಲಭ್ಯಗಳನ್ನು ನೂತನ ಸುಧಾರಿತ ತಂತ್ರಜಾnನವನ್ನು ಬಳಸಿ ಮಾಡಲಾಗುತ್ತಿದೆ. ಅಲ್ಲದೇ ವಿಮಾನ ನಿಲ್ದಾಣದ ಪರಿಸರವು ಇಂಗಾಲವನ್ನು ಸಂಪೂರ್ಣವಾಗಿ ತೊಡೆದುಹಾಕಿ ಪರಿಸರವನ್ನು ಶುದ್ಧೀಕರಿಸುವ ವ್ಯವಸ್ಥೆಯನ್ನು ಒಳಗೊಂಡಿದೆ.

ಅಂತಾರಾಷ್ಟ್ರೀಯ ವಿಮಾನ ಸಂಚಾರ ಸೌಲಭ್ಯದಲ್ಲಿ ಚೇತರಿಕೆ ಉಂಟು ಮಾಡಲು ವಿಶೇಷ ವಿಮಾನ ಇಂದಿನ ಅಗತ್ಯವಾಗಿದೆ.

ಸಂಪೂರ್ಣ ಲಸಿಕೆ ಹಾಕಿದ ಸಿಬಂದಿ ಮತ್ತು ಪ್ರಯಾಣಿಕರೊಂದಿಗೆ ಮೊದಲ ವಿಮಾನ ಸಂಚಾರವನ್ನು ಆರಂಭಿಸುವ ಮೂಲಕ ಅಂತಾರಾಷ್ಟ್ರೀಯ ವಾಯುಯಾನ ಭವಿಷ್ಯಕ್ಕೆ ಭರವಸೆ ಸಿಕ್ಕಿದಂತಾಗಿದೆ. ಜಾಗತಿಕವಾಗಿ ಮತ್ತು ಕತಾರ್‌ ರಾಜ್ಯದಲ್ಲಿ ವಾಯುಯಾನವು ದೇಶದ ಆರ್ಥಿಕತೆಯಲ್ಲಿ ನಿರ್ಣಾಯಕ ಪಾತ್ರವಹಿಸುವುದರಿಂದ ಸಿಬಂದಿಗೆ ಲಸಿಕೆ ನೀಡಲು ಸರಕಾರ ಮತ್ತು ಸ್ಥಳೀಯ ಆರೋಗ್ಯ ಪ್ರಾಧಿಕಾರಗಳಿಂದ ಸಿಕ್ಕಿದ ಬೆಂಬಲದಿಂದ ಇದು ಸಾಧ್ಯವಾಯಿತು. ದಿನಕ್ಕೆ ಸಾವಿರಕ್ಕೂ ಹೆಚ್ಚು ಕೋವಿಡ್‌ ವಾಕ್ಸೀನ್‌ಗಳನ್ನು ನೀಡಲಾಗುತ್ತಿದೆ ಎಂದು ಕತಾರ್‌ ಏರ್‌ವೇಸ್‌  ಗ್ರೂಪ್‌ನ ಮುಖ್ಯ ಕಾರ್ಯನಿರ್ವಾಹಕ ಅಕºರ್‌ ಅಲ್‌ ಬೇಕರ್‌ ತಿಳಿಸಿದ್ದಾರೆ.

ಸುರಕ್ಷತೆ, ಗ್ರಾಹಕ ಸೇವೆಯ ಗುಣಮಟ್ಟದಲ್ಲಿ  ಕತಾರ್‌ ಏರ್‌ವೇಸ್‌ ಮುಂಚೂಣಿಯಲ್ಲಿದೆ. ಕೋವಿಡ್‌ ಸಾಂಕ್ರಾಮಿಕ ಹರಡುವ ಮೊದಲು ಕತಾರ್‌ ಏರ್‌ವೇಸ್‌ ಐದು ಬಾರಿ ವರ್ಷದ ಸ್ಕೈಟ್ರಾಕ್ಸ್‌ ವಿಮಾನಯಾನವನ್ನು ಪಡೆದ ಮೊದಲ ಮತ್ತು ಏಕೈಕ ವಿಮಾನಯಾನ ಸಂಸ್ಥೆಯಾಗಿದೆ.

ಕಳೆದ ವರ್ಷ ಎಪ್ರಿಲ್‌ ಆರಂಭದಲ್ಲಿ ಸಾಂಕ್ರಾಮಿಕ ರೋಗವು ಹೆಚ್ಚಳವಾದಾಗ ಲಕ್ಷಾಂತರ ಪ್ರಯಾಣಿಕರನ್ನು ವಾಪಸಾಗಿಸಲು ಮತ್ತು ಅಗತ್ಯ ವೈದ್ಯಕೀಯ ಸಾಮಗ್ರಿಗಳನ್ನು ಸಾಗಿಸಲು ವಿಮಾನ ಹಾರಾಟವನ್ನು ಮಾಡಿತ್ತು. ಅಲ್ಲದೇ ಸುರಕ್ಷತೆ ಮತ್ತು ನೈರ್ಮಲ್ಯದ ಇತ್ತೀಚಿನ ಆವಿಷ್ಕಾರಗಳನ್ನೂ ಕಾರ್ಯಗತಗೊಳಿಸಿದೆ. ಲಸಿಕೆ ಹಂಚಿಕೆ ವಿಶ್ವದಾದ್ಯಂತ ವೇಗ ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಕತಾರ್‌ ಏರ್‌ವೇಸ್‌ ಪ್ರಯಾಣಿಕರು, ಪ್ರಯಾಣ ಪಾಲುದಾರರು, ಕುಟುಂಬ ಮತ್ತು ಸ್ನೇಹಿತರನ್ನು ಒಂದುಗೂಡಿಸಿ ಅಗತ್ಯ ಸಂಪರ್ಕ ಒದಗಿಸಲು ಅತಿದೊಡ್ಡ ಜಾಗತಿಕ ನೆಟ್‌ವರ್ಕ್‌ ಆಗಿ ಕಾರ್ಯ ನಿರ್ವಹಿಸುತ್ತಿದೆ.

ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಕತಾರ್‌ ಏರ್‌ವೇಸ್‌ 5 ಲಕ್ಷಕ್ಕಿಂತಲೂ ಹೆಚ್ಚಿನ ವೈದ್ಯಕೀಯ ಸಾಮಗ್ರಿಗಳ ಸರಬರಾಜು, 20 ದೇಶಗಳಿಗೆ 2 ಕೋಟಿ ಡೋಸ್‌ ಕೋವಿಡ್‌- 19 ಲಸಿಕೆಗಳನ್ನು ತಲುಪಿಸಿದೆ ಎಂದರು.

ಸಂಪೂರ್ಣ ಸುರಕ್ಷೆ

ಕತಾರ್‌ ಏರ್‌ವೇಸ್‌ನಿಂದ ಸಂಪೂರ್ಣ ಲಸಿಕೆ ಹಾಕಿದ ಪ್ರಯಾಣಿಕರು ಮತ್ತು ಸಿಬಂದಿ ವಿಶ್ವದ ಮೊದಲ ಹಾರಾಟದ ಭಾಗವಾಗಿರುವುದು ಸಂತೋಷ ಹಾಗೂ ಗೌರವದ ವಿಷಯ. ಅಲ್ಲಿ ಸಂಪೂರ್ಣ ಲಸಿಕೆ ಹಾಕಿದ ಸಿಬಂದಿಯೊಂದಿಗೆ ಚೆಕ್‌ ಇನ್‌ ನಲ್ಲಿ ಸ್ವಾಗತ ದೊರೆಯಿತು. ಕೋವಿಡ್‌ ಪ್ರೋಟೋಕಾಲ್‌ ಅನ್ನು ಸಂಪೂರ್ಣ ಸುರಕ್ಷೆ ಯೊಂದಿಗೆ ಅಂತಾರಾಷ್ಟ್ರೀಯ ವಿಮಾನಯಾನದಲ್ಲಿ ನಿರ್ವಹಿಸಬಹುದು ಎಂಬುದನ್ನು ಕತಾರ್‌ ಏರ್‌ವೇಸ್‌ ಜಗತ್ತಿಗೆ ತೋರಿಸಿಕೊಟ್ಟಿದೆ. ಇದು ಮುಂದಿನ ಪ್ರಯಾಣ ಯಾವ ರೀತಿ ಇರುತ್ತದೆ ಎನ್ನುವುದಕ್ಕೆ ಮಾದರಿಯಾಗಿದೆ.

ಸುಬ್ರಹ್ಮಣ್ಯ ಹೆಬ್ಟಾಗಿಲು, ಉಪಾಧ್ಯಕ್ಷರು, ಐಸಿಸಿ

 

 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.