ಶತಮಾನದ‌‌ ಹಿಂದೆ ರೂಪು ಪಡೆದಿತ್ತು ಧ್ವಜ


Team Udayavani, Apr 1, 2021, 6:20 AM IST

ಶತಮಾನದ‌‌ ಹಿಂದೆ ರೂಪು ಪಡೆದಿತ್ತು ಧ್ವಜ

ಇಂದು ಭಾರತೀಯರೆಲ್ಲರೂ ಹೆಮ್ಮೆಯಿಂದ ಸೆಲ್ಯೂಟ್‌ ಮಾಡುವ ತ್ರಿವರ್ಣ ಧ್ವಜವು ಒಂದು ಸ್ಪಷ್ಟ ರೂಪ ಪಡೆಯಲು ಹಲವಾರು ಬದಲಾವಣೆಗಳನ್ನು ಕಂಡಿತ್ತು ಎನ್ನುವುದು ನಮಗೆ ತಿಳಿದೇ ಇದೆ.

ಗಮನಾರ್ಹ ಸಂಗತಿಯೆಂದರೆ ಮಾರ್ಚ್‌ 31ಕ್ಕೆ ಭಾರತೀಯ ಬಾವುಟದ ಮೊದಲ ಕರಡು ವಿನ್ಯಾಸ ರೂಪು ತಳೆದು 100 ವರ್ಷಗಳಾಗಿವೆ. 1921ರ ಮಾರ್ಚ್‌ 31 ಹಾಗೂ ಎಪ್ರಿಲ್‌ 1ರಂದು ಬೆಜವಾಡಾದಲ್ಲಿ(ವಿಜಯವಾಡಾ) ಆಯೋಜನೆ ಯಾಗಿದ್ದ ಆಲ್‌ ಇಂಡಿಯಾ ಕಾಂಗ್ರೆಸ್‌ ಕಮಿಟಿ(ಎಐಸಿಸಿ)ಯ ಸಭೆಯಲ್ಲಿ ಯುವ ಸ್ವಾತಂತ್ರ್ಯ ಹೋರಾಟಗಾರ ಪಿಂಗಳಿ ವೆಂಕಯ್ಯ ಅವರು ಮಹಾತ್ಮಾ ಗಾಂಧೀಜಿಗೆ ಈ ಬಾವುಟದ ಕರಡು ವಿನ್ಯಾಸವನ್ನು ಸಮರ್ಪಿಸಿದ್ದರು. ಗಾಂಧೀಜಿಯವರು ಎಪ್ರಿಲ್‌ ತಿಂಗಳ ತಮ್ಮ “ಯಂಗ್‌ ಇಂಡಿಯಾ’ ಪತ್ರಿಕೆಯಲ್ಲಿ ಈ ಧ್ವಜದ ವಿನ್ಯಾಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಬೆಜವಾಡದ ಕೊಡುಗೆ: ಭಾರತೀಯ ಧ್ವಜದ ಮೊದಲ ಕರಡು ವಿನ್ಯಾಸ ಸಮರ್ಪಿತವಾಯಿತು ಎನ್ನುವ ಕಾರಣಕ್ಕಷ್ಟೇ ಅಲ್ಲ, ಎರಡು ದಿನಗಳವರೆಗೆ ಬೆಜವಾಡಾದಲ್ಲಿ ನಡೆದಿದ್ದ ಆ ಎಐಸಿಸಿ ಸಭೆಯು ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಬೃಹತ್‌ ತಿರುವು ಕೊಟ್ಟಿತ್ತು ಎನ್ನುವ ಕಾರಣಕ್ಕೂ ಮಹತ್ವ ಪಡೆದಿದೆ ಎನ್ನುತ್ತಾರೆ ಇತಿಹಾಸಕಾರರು. ಆ ಸಭೆಯು ಸ್ವಾತಂತ್ರ್ಯ ಹೋರಾಟಕ್ಕೆ ಚಂದಾ ಸಂಗ್ರಹಿಸಲು ಮುನ್ನುಡಿ ಬರೆದಿದ್ದಷ್ಟೇ ಅಲ್ಲದೇ ಬೆಜವಾಡಾವನ್ನು ಸ್ವಾತಂತ್ರ್ಯ ಹೋರಾಟದ ಪ್ರಮುಖ ನೆಲೆಯಾಗಿಸಿತು. ಈ ಕಾರಣಕ್ಕಾಗಿಯೇ  ಸ್ವಾತಂತ್ರ್ಯ ಹೋರಾಟಕ್ಕೆ ಬೆಜವಾಡಾದ ಕೊಡುಗೆಯನ್ನು ಪರಿಗಣಿಸಿ ಮುಂದೆ ಅಲ್ಲಿ ಗಾಂಧಿ ಸ್ಥೂಪವನ್ನೂ ಸ್ಥಾಪಿಸಲಾಯಿತು ಎನ್ನುವುದು ವಿಶೇಷ.

30 ದೇಶಗಳ ಧ್ವಜ ಅಧ್ಯಯನ: ಧ್ವಜದ ವಿಚಾರಕ್ಕೆ ಬಂದರೆ, ಹತ್ತಿಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ವೆಂಕಯ್ಯ ಅವರು ಹತ್ತಿಯಿಂದ ಧ್ವಜ ತಯಾರಿಸಲು ನಿರ್ಧರಿಸಿ, ಇದಕ್ಕಾಗಿ 30ಕ್ಕೂ ಹೆಚ್ಚು ದೇಶಗಳ ಬಾವುಟಗಳನ್ನು ಅಭ್ಯಾಸ ಮಾಡಿದರು. 1921ರಲ್ಲಿ ಸಿದ್ಧವಾದ ಮೊದಲ ವಿನ್ಯಾಸ ಅನಂತರದಲ್ಲಿ ಹಲವು ಬದಲಾವಣೆಗಳನ್ನು ಕಂಡು ಕೊನೆಗೆ ಕೇಸರಿ, ಬಿಳಿ, ಹಸುರು ಪಟ್ಟಿ ಹಾಗೂ ನಡುವೆ ಅಶೋಕ ಚಕ್ರವನ್ನೊಳಗೊಂಡ ತ್ರಿವರ್ಣ ಧ್ವಜವಾಗಿ 1947ರಲ್ಲಿ ಅಂಗೀಕಾರಗೊಂಡಿತು. ಒಟ್ಟಲ್ಲಿ ನೂರು ವರ್ಷಗಳ ಹಿಂದೆ ಬೆಜವಾಡಾದಲ್ಲಿ ನಡೆದ ಸಭೆ ಎಷ್ಟೆಲ್ಲ ಬದಲಾವಣೆಗೆ ಮುನ್ನುಡಿ ಬರೆಯಿತು ಎನ್ನುವುದು ಅಷ್ಟಾಗಿ ಸ್ಮರಣೆಯಾಗುವುದೇ ಇಲ್ಲ.

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.