ಪಿಎಂ ಕಿಸಾನ್‌ ರೈತರಿಗೆ ವರದಾನ


Team Udayavani, Dec 16, 2022, 6:30 AM IST

ಪಿಎಂ ಕಿಸಾನ್‌ ರೈತರಿಗೆ ವರದಾನ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಹಲವು ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿಯೇ ಇರುವುದಿಲ್ಲ. ಎಷ್ಟೋ ಯೋಜನೆಗಳು ಮಾಹಿತಿ ಇದ್ದವರ ಅಥವಾ ಪ್ರಭಾವಿಗಳ ಪಾಲಾಗುತ್ತವೆ. ಕೆಲವು ಸಂದರ್ಭಗಳಲ್ಲಿ ಅಗತ್ಯವಿರುವ ಜನರಿಗೆ ಈ ಮಾಹಿತಿಗಳು ತಲುಪುವುದೇ ಇಲ್ಲ. ಅರ್ಹರಿಗೆ ವಿವಿಧ ಯೋಜನೆಗಳ ಪ್ರಯೋಜನ ಸಿಗಬೇಕೆನ್ನುವ ಉದ್ದೇಶದಿಂದ ಈ “ಪ್ರಯೋಜನ’ ಅಂಕಣ.

ರೈತರ ಆರ್ಥಿಕ ಸಶಕ್ತೀಕರಣಕ್ಕೆ ಪಿಎಂ ಕಿಸಾನ್‌ ಯೋಜನೆ ಸಹಕಾರಿಯಾಗಿದೆ.
2019ರಲ್ಲಿ ಆರಂಭವಾದ ಈ ಯೋಜನೆಯಡಿ 2 ಎಕ್ರೆಗಿಂತ ಒಳಗಡೆ ಇರುವ ರೈತರು ದಾಖಲಾತಿ ಸಲ್ಲಿಸಿ ಯೋಜನೆಯ ಫ‌ಲಾನುಭವಿಗಳಾಗಬಹುದು. ಈ ಯೋಜನೆಯಡಿ ವಾರ್ಷಿಕ 3 ಕಂತುಗಳಂತೆ ಕೇಂದ್ರ ಸರಕಾರ 6 ಸಾವಿರ ರೂ., ರಾಜ್ಯ ಸರಕಾರ 2 ಸಾವಿರದಂತೆ ವಾರ್ಷಿಕ ಎರಡು ಕಂತುಗಳಲ್ಲಿ 4 ಸಾವಿರ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಿದೆ. ಈಗಾಗಲೇ ಕೇಂದ್ರ ಸರಕಾರ 53.83 ಲಕ್ಷ, ರಾಜ್ಯ ಸರಕಾರ 34.26 ಲಕ್ಷ ರೈತರಿಗೆ ಆರ್ಥಿಕ ನೆರವು ನೀಡಿದೆ. ವಿವಿಧ ಕಾರಣಗಳಿಂದಾಗಿ ಬಿಟ್ಟು ಹೋಗಿದ್ದ ರೈತರು ಸಮರ್ಪಕ ದಾಖಲಾತಿ ಒದಗಿಸುತ್ತಿದ್ದು ಫ‌ಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ.

ಅರ್ಜಿ ಸಲ್ಲಿಕೆ ಮಾಡುವ ಕೇಂದ್ರಗಳು ಯಾವುವು?
– ಬಾಪೂಜಿ ಸೇವಾ ಕೇಂದ್ರ
– ರೈತ ಸಂಪರ್ಕ ಕೇಂದ್ರ
– ಅಟಲ್‌ ಜೀ ಜನಸ್ನೇಹಿ ಕೇಂದ್ರ
– ಇತರ ಯಾವುದೇ ಸರಕಾರಿ ಸೇವಾ ಕೇಂದ್ರ

ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು?
– http://pmkisan.gov.in ವೆಬ್‌ಸೈಟ್‌ ಅನ್ನು ತೆರೆಯಿರಿ
– ವೆಬ್‌ಸೈಟ್‌ ಮುಖಪುಟದಲ್ಲಿ ರೈತರ ಕಾರ್ನರ್‌ ಎಂಬ ಪ್ರತ್ಯೇಕ ವಿಭಾಗ ಸಿಗಲಿದೆ
– ರೈತರ ಕಾರ್ನರ್‌ ಎಂಬ ವಿಭಾಗದಲ್ಲಿ “ಫ‌ಲಾನು ಭವಿ ಸ್ಥಿತಿ’ ಎಂಬ ಟ್ಯಾಬ್‌ ಇದ್ದು ಕ್ಲಿಕ್‌ ಮಾಡಿ
– ಇದಕ್ಕೆ ಪರ್ಯಾಯವಾಗಿ, ನೀವು ನೇರವಾಗಿ https://pmkisan.gov.in/Beneficiary Status.aspx ಲಿಂಕ್‌ ತೆರೆಯಬಹುದು
– ಅನಂತರ ಆಧಾರ್‌ ಸಂಖ್ಯೆ, ಪಿಎಂ ಕಿಸಾನ್‌ ಖಾತೆ ಸಂಖ್ಯೆ ಅಥವಾ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆ ನಮೂದಿಸಿ
– ವಿವರ ಭರ್ತಿ ಮಾಡಿ, ಗೆಟ್‌ ಡೇಟಾ ಆಯ್ಕೆ ಮೇಲೆ ಕ್ಲಿಕ್‌ ಮಾಡಿದರೆ ಫ‌ಲಾನುಭವಿ ಸ್ಥಿತಿ ನೋಡಲು ಸಾಧ್ಯವಾಗುತ್ತದೆ.

ಅರ್ಹತೆ/ ದಾಖಲೆ ಏನೇನು ಬೇಕು?
– ಸಣ್ಣ ಪ್ರಮಾಣದ ಭೂ ಹಿಡುವಳಿ ಹೊಂದಿರುವ ರೈತರಾಗಿರಬೇಕು
– ಭೂಮಿ ಹೊಂದಿರುವ ಸಂಘ/ ಸಂಸ್ಥೆಗಳು
– ಪಹಣಿ
– ಆಧಾರ್‌ ನಂಬರ್‌ ಲಿಂಕ್‌ ಹೊಂದಿರುವ ಬ್ಯಾಂಕ್‌ ಖಾತೆ ಸಂಖ್ಯೆ

ಹಣ ಬರದಿದ್ದರೆ ದೂರು ನೀಡುವುದು ಹೇಗೆ?
ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ 2,000ರೂ. ಹಣ ನಿಮ್ಮ ಖಾತೆಗೆ ಜಮೆ ಆಗದೆ ಇದ್ದರೆ ಮೊದಲು ನಿಮ್ಮ ಪ್ರದೇಶದ ಲೆಕ್ಕಾಧಿಕಾರಿ ಅಥವಾ ಕೃಷಿ ಅಧಿಕಾರಿಯನ್ನು ಸಂಪರ್ಕಿಸಬೇಕು. ಒಂದು ವೇಳೆ ಇವರಿಂದ ಸೂಕ್ತ ಸ್ಪಂದನೆ ಬಾರದಿದ್ದರೆ, ಇದಕ್ಕೆ ಸಂಬಂಧಿಸಿದಂತೆ ಇರುವ ಸಹಾಯವಾಣಿಗೆ ಕರೆ ಮಾಡಬಹುದು. ಸೋಮವಾರದಿಂದ ಶುಕ್ರವಾರದವರೆಗೆ PM&KISAN Help Desk ಗೆ ಕರೆ ಮಾಡಿ ನಿಮ್ಮ ಖಾತೆಗೆ ಹಣ ಜಮಾವಣೆ ಆಗಿಲ್ಲ ಎಂಬ ಮಾಹಿತಿ ನೀಡಬಹುದು. ಅಲ್ಲದೆ ನಿಮ್ಮ ಸ್ಥಳೀಯ ಕೃಷಿ ಅಧಿಕಾರಿ ನಿಮಗೆ ಸ್ಪಂದನೆ ಮಾಡಿಲ್ಲ ಎಂಬ ದೂರನ್ನೂ ನೀಡಬಹುದು. ಇದನ್ನು ಹೊರತುಪಡಿಸಿದರೆ ನೀವು pmkisan&ictgov.in ಇ-ಮೇಲ್‌ ಮೂಲಕವೂ ಸಂಪರ್ಕಿಸಬಹುದು. ಆಗಲೂ ಕ್ರಮ ಕೈಗೊಳ್ಳದಿದ್ದರೆ 011-23381092 (ನೇರ ಸಹಾಯವಾಣಿ) ಸಂಖ್ಯೆಗೆ ಕರೆ ಮಾಡಿ ನಿಮ್ಮ ಖಾತೆಗೆ ಹಣ ಜಮಾವಣೆ ಆಗದೇ ಇರುವ ವಿಷಯವನ್ನು ತಿಳಿಸಬಹುದು.

– ಹಾಗೆಯೇ ದಿಲ್ಲಿ (Delhi)ಯಲ್ಲಿರುವ ಕಚೇರಿ ನಂ. 011-23382401 ಕ್ಕೆ ಸಂಪರ್ಕಿಸಬಹುದು, ಇ-ಮೇಲ್‌ ಐಡಿ (ಟಞkಜಿsಚn-ಜಟ್ಟಿsಜಟv.ಜಿn) ಮೂಲಕವೂ ದೂರು ಸಲ್ಲಿಸಬಹುದು.

– ಹರೀಶ್‌ ಹಾಡೋನಹಳ್ಳಿ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.