ಪಿಎಂ ಕೌಶಲ ಅಭಿವೃದ್ಧಿ ಯೋಜನೆ


Team Udayavani, Jan 17, 2021, 7:30 AM IST

ಪಿಎಂ ಕೌಶಲ ಅಭಿವೃದ್ಧಿ ಯೋಜನೆ

ಪ್ರಧಾನ ಮಂತ್ರಿ ಕೌಶಲ ವಿಕಾಸ್‌ ಯೋಜನೆ (ಪಿಎಂಕೆವಿವೈ)ಯ ಮೂರನೇ ಹಂತವು ಜನವರಿ 15ರಂದು ಆರಂಭವಾಗಿದೆ. ಕೇಂದ್ರ ಸರಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಪಿಎಂಕೆವಿವೈ ಅನ್ನು ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ನಡೆಸುತ್ತಿದೆ. ಇದಕ್ಕಾಗಿ ಸರಕಾರ 948.90 ಕೋಟಿ ರೂ. ಖರ್ಚು ಮಾಡಲಿದೆ. 2021-22ರ ವೇಳೆಗೆ ಯೋಜನೆಯಡಿ 1.5 ಕೋಟಿ ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.

2015ರಲ್ಲಿ ಆರಂಭ :

ಕೇಂದ್ರ ಸರಕಾರವು 2015ರಲ್ಲಿ ಪಿಎಂಕೆವಿವೈ ಅನ್ನು ಪ್ರಾರಂಭಿ ಸಿತು. ಎರಡನೇ ಹಂತ(ಪಿಎಂಕೆವಿವೈ 2.0)ವನ್ನು 2016ರಲ್ಲಿ ಪ್ರಾರಂಭಿಸಲಾ ಯಿತು. ಪಿಎಂಕೆವಿವೈ ನ ಅಧಿಕೃತ ವೆಬ್‌ಸೈಟ್‌ನ ಮೂಲಕ 2020ರ ಅಕ್ಟೋಬರ್‌ 20ರ ವರೆಗೆ ಒಟ್ಟು 33.20 ಲಕ್ಷ ಜನರಿಗೆ ತರಬೇತಿ ನೀಡಲಾಗಿದೆ. ಸರಕಾರ 2020ರಲ್ಲಿ 1 ಕೋಟಿ ಜನರಿಗೆ ತರಬೇತಿ ನೀಡುವ ಗುರಿ ಇಟ್ಟುಕೊಂಡಿತ್ತು.

ಯೋಜನೆಯ ಉದ್ದೇಶವೇನು? :

ದೇಶದ ಕೈಗಾರಿಕೆಗಳಿಗೆ ಕೌಶಲಯುಕ್ತ ಯುವಕರನ್ನು ಒದಗಿಸುವ ಉದ್ದೇಶದಿಂದ ಪಿಎಂಕೆವಿವೈ ಅನ್ನು ಜಾರಿಗೆ ತರಲಾಗಿದೆ. ಈ ತರಬೇತಿಯ ಲಾಭವನ್ನು ಪಡೆದುಕೊಳ್ಳುವ ಮೂಲಕ ಯುವಜನತೆ ಸ್ವಂತ ಉದ್ಯಮವನ್ನು ಪ್ರಾರಂಭಿಸಬಹುದು ಅಥವಾ ಬೇರೆಲ್ಲಾದರೂ ಉದ್ಯೋಗ ಪಡೆಯಬಹುದು. ಇದಲ್ಲದೆ ಈ ಯೋಜನೆಯಡಿ ತರಬೇತಿ ಪಡೆದ ಯುವಕರಿಗೆ ಸರಕಾರದಿಂದ ಉದ್ಯೋಗ ದೊರಕಿಸಿಕೊಡುವ ಪ್ರಯತ್ನಗಳು ಸಹ ನಡೆಯುತ್ತವೆ. ಜಾಬ್‌ ಫೇರ್‌ನಂಥ ವೇದಿಕೆಗಳು ಇದಕ್ಕೆ ಪರಿಣಾಮಕಾರಿಯಾಗಿದೆ.

1.5 ಲಕ್ಷ ರೂ. ಸಾಲ :

ಈ ಯೋಜನೆಯಡಿ ಸರಕಾರವು 1.5 ಲಕ್ಷ ರೂ.ಗಳ ವರೆಗೆ ಸಾಲವನ್ನು ನೀಡುತ್ತದೆ. ಕಡಿಮೆ ವಿದ್ಯಾವಂತರು ಅಥವಾ 10ನೇ, 12ನೇ ತರಗತಿಯ ಡ್ರಾಪ್‌ಟೌಟ್‌ ಆದವರೂ ಈ ಯೋಜನೆಯ ಫ‌ಲಾನುಭವಿಗಳಾಗಬಹುದು. ಈ ಯೋಜನೆಯಡಿ ತರಬೇತಿ ಪಡೆಯುವವರಿಗೆ ಪ್ರತೀ 6 ತಿಂಗಳುಗಳಿಗೊಮ್ಮೆ ಸರಕಾರವು ಉದ್ಯೋಗ ಮೇಳವನ್ನು ಆಯೋಜಿಸುತ್ತದೆ.

ದೇಶದ  600 ಜಿಲ್ಲೆಗಳಲ್ಲಿ ತರಬೇತಿ :

729 ಪ್ರಧಾನ ಮಂತ್ರಿ ಕೌಶಲ ಕೇಂದ್ರ (ಪಿಎಂಕೆಕೆ)ಗಳು, ಇತರ ತರಬೇತಿ ಕೇಂದ್ರಗಳು ಮತ್ತು  200ಕ್ಕೂ ಹೆಚ್ಚು ಕೈಗಾರಿಕಾ ತರಬೇತಿ ಸಂಸ್ಥೆಗಳ ಮೂಲಕ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. ಪಿಎಂಕೆವಿವೈ 3.0 ಅಡಿಯಲ್ಲಿ ದೇಶಾದ್ಯಂತ 600 ಜಿಲ್ಲೆಗಳಲ್ಲಿ ಮುಂದಿನ ಮೂರು ತಿಂಗಳುಗಳ ಅವಧಿಯಲ್ಲಿ 8 ಲಕ್ಷ ಅಭ್ಯರ್ಥಿಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ.

ನೋಂದಾಯಿಸಿ ಕೊಳ್ಳುವುದು ಹೇಗೆ? :

ಈ ಯೋಜನೆಯಲ್ಲಿ ಹೆಸರು, ವಿಳಾಸ ಮತ್ತು ಇಮೇಲ್‌ ಇತ್ಯಾದಿಗಳನ್ನು ttp://pmkvyofficial.org ನಲ್ಲಿ ಭರ್ತಿ ಮಾಡಬೇಕು. ಅನಂತರ ಅರ್ಜಿದಾರರು ತರಬೇತಿ ನೀಡಲು ಬಯಸುವ ತಾಂತ್ರಿಕ ಕ್ಷೇತ್ರವನ್ನು ಆಯ್ಕೆ ಮಾಡಬೇಕಾಗುತ್ತದೆ. ಇದು ನಿರ್ಮಾಣ, ಎಲೆಕ್ಟ್ರಾನಿಕ್ಸ್‌, ಯಂತ್ರಾಂಶ, ಆಹಾರ ಸಂಸ್ಕರಣೆ, ಪೀಠೊಪಕರಣಗಳು ಮತ್ತು ಫಿಟ್ಟಿಂಗ್‌ಗಳು, ಕರಕುಶಲ ವಸ್ತುಗಳು, ರತ್ನ-ಆಭರಣಗಳು ಮತ್ತು ಚರ್ಮದ ತಂತ್ರಜ್ಞಾನದಂತಹ ಸುಮಾರು 40 ತಾಂತ್ರಿಕ ಕ್ಷೇತ್ರಗಳನ್ನು ಹೊಂದಿದೆ. ಇದರಲ್ಲಿ ಆದ್ಯತೆಯ ತಾಂತ್ರಿಕ ಕ್ಷೇತ್ರದ ಜತೆಗೆ, ಇತರ ತಾಂತ್ರಿಕ ಕ್ಷೇತ್ರವನ್ನೂ ಆಯ್ಕೆ ಮಾಡಬೇಕಾಗುತ್ತದೆ. ಈ ಮಾಹಿತಿಯನ್ನು ಭರ್ತಿ ಮಾಡಿದ ಅನಂತರ ನಿಮ್ಮ ತರಬೇತಿ ಕೇಂದ್ರವನ್ನು ನೀವು ಆರಿಸಬೇಕಾಗುತ್ತದೆ. ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ttps://pmkvyofficial.org/Index. ಈ ಜಾಲತಾಣಕ್ಕೆ ಭೇಟಿ ಕೊಡಿ.

ಜಾಲತಾಣದಲ್ಲಿ ಕಾರ್ಯಕ್ರಮ :

ಸಾಮಾಜಿಕ ಮಾಧ್ಯಮಗಳಲ್ಲಿ ಮಧ್ಯಾಹ್ನ 12.30ರಿಂದ ಇದರ ಕಾರ್ಯಕ್ರಮಗಳು ಪ್ರಸಾರಗೊಳ್ಳುತ್ತವೆ. ಕೌಶಲ ಮತ್ತು ಉದ್ಯಮಶೀಲತೆ ಸಚಿವಾಲಯದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಾರ್ಯಕ್ರಮವನ್ನು ವೀಕ್ಷಿಸಬಹುದು.

PMKVY Facebook: www.facebook.com/PMKVYOfficial

Skill India Facebook: www.facebook.com/SkillIndiaOfficial

Skill India Twitter: www.twitter.com/@MSDESkillindia

Skill India YouTube: https://www.youtube.com/channel/UCzNfVNX5yLEUhIRNZJKniHg

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.