ಪಿಎಂವಿವಿವೈ; ಪ್ರಧಾನ ಮಂತ್ರಿ ವ್ಯಯ ವಂದನ ಯೋಜನೆ

ಮಾರ್ಚ್‌ 31ರ ಒಳಗೆ ಅರ್ಜಿ ಸಲ್ಲಿಸಿ

Team Udayavani, Jan 24, 2020, 6:01 AM IST

kaa-40

ಪ್ರಧಾನ ಮಂತ್ರಿ ವಯ ವಂದನ ಯೋಜನೆಯ (ಪಿಎಂವಿವಿವೈ) ಮೂಲಕ ನಾವು ಭವಿಷ್ಯಕ್ಕಾಗಿ ಹೂಡಿಕೆ ಮಾಡಬಹುದಾಗಿದೆ. ವಯಸ್ಸಾದ ಸಮಯದಲ್ಲಿ ಸಾಮಾಜಿಕ ಭದ್ರತೆಯನ್ನು ಒದಗಿಸಲು 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಪಿಎಂವಿವಿವೈ ಯೋಜನೆಯನ್ನು ಲೈಫ್ ಇನ್ಸುರೆನ್ಸ್‌ ಕಾರ್ಪೋರೇಶನ್‌ ಆಫ್ ಇಂಡಿಯಾ (ಎಲ್‌ಐಸಿ) ಮೂಲಕ ಜಾರಿಗೊಳಿಸಲಾಗಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್‌ 31 ಕಡೆಯ ದಿನವಾಗಿದೆ.

ರೂ. 10 ಸಾವಿರ
ಈ ಯೋಜನೆಯಂತೆ ತಿಂಗಳಿಗೆ ಹಿರಿಯ ನಾಗರಿಕರಿಗೆ 10 ಸಾವಿರ ರೂ. ದೊರೆಯಲಿದೆ. ಈ ಹಿಂದೆ ಇದ್ದ ಹೂಡಿಕೆ ಮಿತಿಯನ್ನು 7.5 ರೂ.ನಿಂದ 15 ಲಕ್ಷ ರೂ.ಗೆ ಏರಿಸಲಾಗಿದೆ.

ಮಾರ್ಚ್‌ 31 ಕಡೆಯ ದಿನ
2017ರಲ್ಲಿ ಜಾರಿಗೆ ಬಂದ ಈ ಯೋಜನೆಯ ಚಂದಾದಾರಿಕೆಯ ಅವಧಿಯನ್ನು ಹೆಚ್ಚಿಸಲಾಗಿತ್ತು. ಈ ಹಿಂದೆ ಪಿಎಂವಿವಿವೈಗೆ ಮೇ 14, 2017ರಿಂದ, ಮೇ 3, 2018ರ ವರೆಗಿನ ಸಮಯ ನಿಗದಿಪಡಿಸಲಾಗಿತ್ತು. ಬಳಿಕ ಅದನ್ನು 2020ರ ಮಾರ್ಚ್‌ 31ರ ವರೆಗೆ ವಿಸ್ತರಿಸಲಾಗಿದೆ.

ಶೇ. 8 ಬಡ್ಡಿದರ
ಈ ಯೋಜನೆಯಡಿ ಶೇ. 8ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಹಿರಿಯ ನಾಗರಿಕರು ಮಾಸಿಕ 10,000 ರೂ. ವರೆಗೂ ಪಿಂಚಣಿ ಪಡೆಯಬಹುದಾಗಿದೆ. ವಾರ್ಷಿಕ, ಅರ್ಧ ವಾರ್ಷಿಕ, ತ್ತೈಮಾಸಿಕ, ಅಥವಾ ಮಾಸಿಕ ಆಧಾರದ ಮೇಲೆ ಪಿಂಚಣಿ ಆಯ್ಕೆ ಮಾಡುವ ಮೂಲಕ ವಾರ್ಷಿಕವಾಗಿ ಶೇ. 8ರಷ್ಟು ಬಡ್ಡಿದರ ನೀಡಲಿದೆ.

ಎಲ್ಲಿ ಖರೀದಿ
ಪಿಎಂವಿವಿವೈ ಅನ್ನು ಆನ್‌ಲೈನ್‌/ ಆಫ್ಲೈನ್‌ ಮತ್ತು ಮತ್ತು ಲೈಫ್ ಇನ್ಸುರೆನ್ಸ್‌ ಕಾರ್ಪೊರೇಷನ್‌ (ಎಲ್‌ಐಸಿ) ಮೂಲಕ ಆನ್‌ಲೈನ್‌ನಲ್ಲಿ ಖರೀದಿಸಬಹುದು.

10 ವರ್ಷಗಳ ಪಾಲಿಸಿ
10 ವರ್ಷಗಳ ಪಾಲಿಸಿ ಅವಧಿಯ ಕೊನೆಯಲ್ಲಿ, ಪಿಂಚಣಿದಾರರು ಅಂತಿಮ ಪಿಂಚಣಿ ಕಂತುಗಳೊಂದಿಗೆ ಖರೀದಿ ದರವನ್ನು (ಪಿಂಚಣಿಗಾಗಿ ಹೂಡಿಕೆ ಮಾಡಲಾದ ಹಣ) ಹಿಂಪಡೆಯಲಿದ್ದಾರೆ. 10 ವರ್ಷಗಳ ಪಾಲಿಸಿಯ ಅವಧಿಯಲ್ಲಿ ಪಿಂಚಣಿದಾರ ಮರಣ ಹೊಂದಿದರೆ ಅವರ ಫ‌ಲಾನುಭವಿಗೆ ಆ ಮೊತ್ತವನ್ನು ಪಾವತಿಸಲಾಗುತ್ತದೆ.

ಯಾರು ಅರ್ಹರು
ಪಿಎಂವಿವಿವೈ ಹಿರಿಯ ನಾಗರಿಕರು (60 ಮತ್ತು ಅದಕ್ಕಿಂತ ಮೇಲ್ಪಟ್ಟ) ಪಿಂಚಣಿ ಸೌಲಭ್ಯ ಒದಗಿಸುವ ಯೋಜನೆಯಾಗಿದೆ. ಈ ಸ್ಕೀಮ್‌ ಎಲ್‌ಐಸಿ ಮುಖಾಂತರ ಖರೀದಿಸಿ ಸೌಲಭ್ಯಗಳನ್ನು ನಿಮ್ಮದಾಗಿಸಬಹುದು.

ಅವಧಿ
10 ವರ್ಷಗಳ ಪಿಂಚಣಿ ಅವಧಿ/ಪಾಲಿಸಿ ಅವಧಿ ಇರುತ್ತದೆ. ಮಾಸಿಕ, ತ್ತೈಮಾಸಿಕ, ಅರ್ಧ-ವಾರ್ಷಿಕ ಅಥವಾ ವಾರ್ಷಿಕ ಹೀಗೆ ನೀವು ಆಯ್ಕೆ ಮಾಡಿದ ಅವಧಿಯ ಕೊನೆಯಲ್ಲಿ ಪಿಂಚಣಿ ಪಡೆಯಬಹುದು.

ಸಾಲ ಸೌಲಭ್ಯವೂ ಇದೆ
ನೀವು ಒಟ್ಟು ಹೂಡಿಕೆ ಮಾಡಿದ ಮೊತ್ತದ ಶೇ. 75ರಷ್ಟು ಸಾಲವನ್ನು 3 ವರ್ಷ ಅವಧಿ ಮೇಲ್ಪಟ್ಟಲ್ಲಿ ನೀವು ಪಡೆಯಬಹುದು. ಉದಾ: ನೀವು 15 ಲಕ್ಷ ರೂ.ನ ಯೋಜನೆಗೆ ಚಂದಾದಾರರಾಗಿದ್ದರೆ ನೀವು 11.25 ಲಕ್ಷ ಸಾಲ ಪಡೆಯಬಹುದಾಗಿದೆ.

ಕನಿಷ್ಠ ಪಿಂಚಣಿ
1 ಸಾವಿರ / ತಿಂಗಳಿಗೆ
3 ಸಾವಿರ / 3 ತಿಂಗಳಿಗೆ
6 ಸಾವಿರ / 6 ತಿಂಗಳಿಗೆ
12 ಸಾವಿರ / ವಾರ್ಷಿಕ

ಗರಿಷ್ಠ ಪಿಂಚಣೆ
10 ಸಾವಿರ / ತಿಂಗಳಿಗೆ
30 ಸಾವಿರ / 3 ತಿಂಗಳಿಗೆ
60 ಸಾವಿರ / 6 ತಿಗಳಿಗೆ
1.20 ಲಕ್ಷ / 1 ವರ್ಷಕ್ಕೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.