ದಾಖಲೆ ಡೋಸ್‌: ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ


Team Udayavani, Oct 22, 2021, 6:30 AM IST

ದಾಖಲೆ ಡೋಸ್‌:  ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ಕೊರೊನಾ ಲಸಿಕೆ ನೀಡುವ ವಿಚಾರದಲ್ಲಿ ಬುಧವಾರ ಮಹತ್ವದ ಮೈಲಿಗಲ್ಲೊಂದನ್ನು ಸ್ಥಾಪಿಸಿದ್ದು, ನೂರು ಕೋಟಿ  ಲಸಿಕೆ ಡೋಸ್‌ ನೀಡಿದೆ. ನಮ್ಮ ವಿಜ್ಞಾನಿಗಳ ಪರಿಶ್ರಮ, ಆರೋಗ್ಯ ಯೋಧರ ಸಮರ್ಪಣೆ, ಉತ್ಸಾಹಿ ನಾಗರಿಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಉದ್ಯಮಶೀಲ ಸರಕಾರದ ಸಹಕಾರದಿಂದಾಗಿ ಈ ಮೈಲಿಗಲ್ಲು ಸ್ಥಾಪಿಸಲು ಸಾಧ್ಯವಾಯಿತು.

ಅಲ್ಲದೇ ನೂರು ಕೋಟಿ ಡೋಸ್‌ಗಳನ್ನು ದಾಟಿರುವುದೂ ಜಾಗತಿಕವಾಗಿ ಸಾಂಕ್ರಾಮಿಕದ ವಿರುದ್ಧದ ಹೋರಾಟಕ್ಕೆ ಸಿಕ್ಕ ದೊಡ್ಡ ಪ್ರೇರಣೆ.

ಒಂದು ಶತಕೋಟಿ ಡೋಸ್‌ ಲಸಿಕೆ ನೀಡುವುದು ಸಣ್ಣ ವಿಷಯವೇನಲ್ಲ. ಇದಕ್ಕೆ ದೃಢವಾದ ನಾಯಕತ್ವ ಮತ್ತು ಸಂಭಾವ್ಯ ಸವಾಲುಗಳನ್ನು ಎದುರಿಸುವ ಶಕ್ತಿ ಇರುವ ನಾಯಕತ್ವ ಬೇಕಿತ್ತು. 2020ರ ಮಾರ್ಚ್‌ನಲ್ಲೇ ನಡೆದ ಪ್ರಾಥಮಿಕ ಹಂತದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ನೀಡುವ ಕುರಿತಂತೆ ಕಾರ್ಯತಂತ್ರದ ಬಗ್ಗೆ ನಿರ್ದೇಶನ ನೀಡಿದ್ದರು. ಅಲ್ಲದೇ ಲಸಿಕೆ ವಿತರಣೆಯಲ್ಲಿ ಯಾವುದೇ ರೀತಿಯ ಅಡ್ಡಿಯಾಗದಂತೆ ಪ್ರಧಾನಿ ಮೋದಿ ಅವರ ನಾಯಕತ್ವ ನೋಡಿಕೊಂಡಿತು.ಜತೆಗೆ ಲಸಿಕೆ ಕುರಿತ ಸಂಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆಯಲ್ಲಿ ಕೇಂದ್ರ ಸರಕಾರ ಅತ್ಯಂತ ಪ್ರಮುಖ ಪಾತ್ರ ವಹಿಸಿತು. ಪ್ರತೀ ಹಂತದಲ್ಲೂ ಸರಕಾರವು ಲಸಿಕೆ ಅಭಿವೃದ್ಧಿಯ ಪರಿಸರ ಮತ್ತು ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಉತ್ತಮ ಸಹಕಾರವನ್ನು ನೀಡಿತು. ಇದರಿಂದಾಗಿಯೇ ಭಾರತ ಕೇವಲ 275 ದಿನಗಳಲ್ಲಿ 100 ಕೋಟಿ ಲಸಿಕಾ ಡೋಸ್‌ಗಳನ್ನು ನೀಡಲು ಸಾಧ್ಯವಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಅ.6ರಂದು ಚುನಾಯಿತ ಸರಕಾರಗಳ ನೇತೃತ್ವ ವಹಿಸಿ 20 ವರ್ಷಗಳಾದವು. ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ಪ್ರಧಾನಿಯಾಗಿ ಏಳು ವರ್ಷಗಳನ್ನು ಪೂರೈಸಿದ್ದಾರೆ. 20 ವರ್ಷಗಳ ಅವಧಿಗೆ ಚುನಾಯಿತ ಸರಕಾರಗಳ ನೇತೃತ್ವ ವಹಿಸಿರುವುದು ಐತಿಹಾಸಿಕ. ಜನರು ಮೋದಿ ಅವರನ್ನು ಒಪ್ಪಿಕೊಳ್ಳಲು, ಅವರ ಸ್ವೀಕಾರಾರ್ಹತೆ ಮತ್ತು ಅಚಲ ವಿಶ್ವಾಸ, ಸಮಗ್ರ ದೃಷ್ಟಿಕೋನ, ನಿಖರವಾದ ಯೋಜನೆ ಮತ್ತು ನಿಖರ ಕಾರ್ಯಗೊಳಿಸುವಿಕೆಯೇ ಕಾರಣವಾಗಿದೆ. ಇದಕ್ಕೆ ಉದಾಹರಣೆಯಾಗಿ ತೆಗೆದುಕೊಳ್ಳುವುದಾದರೆ, ಭಾರತದ ಆರೋಗ್ಯ ಕ್ಷೇತ್ರದಲ್ಲಿ ಮಾಡಿರುವ ಬದಲಾವಣೆ.

ಕೊರೊನಾದಿಂದಾಗಿ ಭಾರತದ ಆರೋಗ್ಯ ಸೇವೆ ಮೇಲೆ ಬೆಳಕು ಚೆಲ್ಲಲು ಕಾರಣವಾಯಿತು. ಪ್ರಧಾನಿ ಮೋದಿ ಅವರು, 2014ರಿಂದಲೇ ಸಾರ್ವಜನಿಕ ಆರೋಗ್ಯ ಸೇವೆ ಮೇಲೆ ದೃಷ್ಟಿ ನೆಟ್ಟಿದ್ದರು. 2014ರ ಅ.2ರಂದು ಮೋದಿ ಅವರು ಬಯಲು ಶೌಚ ಪದ್ಧತಿಯನ್ನು 2019ರ ಅ.2ರ ಒಳಗೆ ತೆಗೆದುಹಾಕಬೇಕು ಎಂಬ ಗುರಿಯೊಂದಿಗೆ ಸ್ವತ್ಛ ಭಾರತ ಅಭಿಯಾನ(ಎಸ್‌ಬಿಎಂ)ವನ್ನು ಆರಂಭಿಸಿದ್ದರು. 2014ರಲ್ಲಿ ಗ್ರಾಮೀಣ ಪ್ರದೇಶದಲ್ಲಿ 10 ಕೋಟಿ ಮತ್ತು ನಗರ ಪ್ರದೇಶದಲ್ಲಿ 1 ಕೋಟಿ ಕುಟುಂಬಗಳಲ್ಲಿ ಶೌಚಾಲಯ ಸೌಲಭ್ಯವಿರಲಿಲ್ಲ. ದೇಶದ ಅರ್ಧದಷ್ಟು ಜನಸಂಖ್ಯೆ ಅಂದರೆ, 56.4 ಕೋಟಿ ಮಂದಿ ಶೌಚಾಲಯ ಸೌಲಭ್ಯ ಹೊಂದಿರಲಿಲ್ಲ. ಹೀಗಾಗಿ, ಈ ಸ್ವತ್ಛ ಭಾರತ ಅಭಿಯಾನದ ಮೂಲಕ ಮಹತ್ತರವಾದ ಬದಲಾವಣೆ ತಂದು ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ.

ಅಧ್ಯಯನದ ಪ್ರಕಾರ, ಸ್ವತ್ಛ ಭಾರತ ಮಿಶನ್‌ ಮೂಲಕ ಮಕ್ಕಳ ಆರೋಗ್ಯ ಹಾಗೂ ಪೋಷಕಾಂಶ ವಿಚಾರದಲ್ಲಿ ಮಹತ್ತರ ಬದಲಾವಣೆ ಮತ್ತು ಮಹಿಳೆಯರಿಗೆ ಸ್ವಯಂ ಗೌರವ ನೀಡಲಾಗಿದೆ. ಹಾಗೆಯೇ ಜಲಜೀವನ ಯೋಜನೆ ಮೂಲಕ ಪ್ರತೀ ಮನೆಗಳಿಗೂ ಪೈಪ್‌ ಮೂಲಕ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದ್ದು, ಈ ಮೂಲಕ ನೀರಿನ ಕೊರತೆ ಎದುರಿಸುತ್ತಿದ್ದ ಹಾಗೂ ನೀರಿನಿಂದ ಬರುತ್ತಿದ್ದ ರೋಗಗಳನ್ನು ತಡೆಯಲಾಗಿದೆ. 2017ರಲ್ಲಿ ಮೋದಿ ಸರಕಾರವು ರಾಷ್ಟ್ರೀಯ ಆರೋಗ್ಯ ನೀತಿ-2017 ಅನ್ನು ಜಾರಿಗೆ ತಂದಿದ್ದು, ಈ ಮೂಲಕ ಸಾಮಾಜಿಕ-ಆರ್ಥಿಕ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರದ ಭೂದೃಶ್ಯಗಳನ್ನು ಬದಲಾವಣೆ ಮಾಡಲಾಗಿದೆ. ಆರೋಗ್ಯಕ್ಕಾಗಿ 15 ವರ್ಷಗಳ ಹಿಂದೆ, ಅಂದರೆ 2002ರಲ್ಲಿ ನೀತಿಯೊಂದನ್ನು ರೂಪಿಸಲಾಗಿತ್ತು.

2018ರಲ್ಲಿ ಆಯುಷ್ಮಾನ್‌ ಭಾರತ್‌ ಅನ್ನು ಜಾರಿ ಮಾಡಿದ್ದು, ಈ ಮೂಲಕ ದೇಶದ 50 ಕೋಟಿ ಜನಸಂಖ್ಯೆಗೆ ಆರೋಗ್ಯದ ಭರವಸೆ ನೀಡಲಾಗಿದೆ. ಇದರಡಿಯಲ್ಲಿ ಈಗಾಗಲೇ 2 ಕೋಟಿ ಭಾರತೀಯರು ಪ್ರಯೋಜನ ಪಡೆದಿದ್ದಾರೆ.

ಪ್ರಧಾನಿ ಮೋದಿ ಅವರ ಆಳ್ವಿಕೆಯಲ್ಲಿ ತಂತ್ರಜ್ಞಾನವನ್ನು ಉತ್ತಮವಾಗಿ ಬಳಸಿಕೊಳ್ಳಲಾಗಿದೆ. 100 ಕೋಟಿ ಡೋಸ್‌ ಲಸಿಕೆ ನೀಡುವಲ್ಲಿ ಕೋವಿನ್‌ ಆ್ಯಪ್‌ ವಹಿಸಿರುವ ಪಾತ್ರ ಮಹತ್ತರವಾದದ್ದು. ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಟೆಲಿಮೆಡಿಸಿನ್‌ ಅನ್ನು ಅತ್ಯಂತ ಉತ್ತಮವಾಗಿ ಬಳಸಿಕೊಳ್ಳಲಾಗಿದೆ. ಅಲ್ಲದೆ, ಇ-ಸಂಜೀವಿನಿ ಮೂಲಕ 124 ಕೋಟಿ ಮಂದಿ ಸಂಪರ್ಕ ಸಾಧಿಸಿದ್ದಾರೆ. ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ನಡಿ ವಿಶಿಷ್ಟ  ಮೂಲಕ ಈಗ ರೋಗಿಗಳು, ವೈದ್ಯರು ಮತ್ತು ಆಸ್ಪತ್ರೆಗಳ ನಡುವೆ ಸಂಪರ್ಕ ಸಾಧಿಸಲಾಗುತ್ತಿದೆ.

ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬಂದಿ ಆರೋಗ್ಯ ಸೇವೆಯ ವಿತರಣೆಯಲ್ಲಿ ಹೃದಯವಿದ್ದಂತೆ. 2003ರಲ್ಲಿ ದೇಶದಲ್ಲಿ ಒಂದೇ ಒಂದು ಏಮ್ಸ್‌ ಇತ್ತು. ಆದರೆ, ಅಟಲ್‌ ಬಿಹಾರಿ ವಾಜಪೇಯಿ ಅವರ ಸರಕಾರದ ಅವಧಿಯಲ್ಲಿ ಇನ್ನೂ ಐದು ಏಮ್ಸ್‌ಗಳನ್ನು ಸ್ಥಾಪಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. 2014ರಲ್ಲಿ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದು ರಾಜ್ಯದಲ್ಲಿ ತಲಾ ಒಂದು ಏಮ್ಸ್‌ ಇರಬೇಕು ಎಂಬ ನೀತಿ ಜಾರಿ ಮಾಡಿತು. ಸದ್ಯ ದೇಶದಲ್ಲಿ 22 ಏಮ್ಸ್‌ಗಳಿವೆ. ಹಾಗೆಯೇ ದೇಶದ ವಿವಿಧ ಭಾಗದಲ್ಲಿ 157 ಕಾಲೇಜುಗಳು ವಿವಿಧ ಹಂತಗಳ ಜಾರಿಯಲ್ಲಿವೆ. ಜತೆಗೆ, 30 ಸಾವಿರ ಎಂಬಿಬಿಎಸ್‌ ಸೀಟುಗಳು ಮತ್ತು 24 ಸಾವಿರ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಮೋದಿ ಅವರ ಸರಕಾರ ಬಂದ ಮೇಲೆ ಸೇರ್ಪಡೆ ಮಾಡಲಾಗಿದೆ. ಅಂದರೆ, ದೇಶದಲ್ಲಿ ಎಂಬಿಬಿಎಸ್‌ ಸೀಟುಗಳನ್ನು ಶೇ.50 ಮತ್ತು ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಶೇ.80ರಷ್ಟು ಹೆಚ್ಚಳ ಮಾಡಲಾಗಿದೆ.

ವೈದ್ಯಕೀಯ ಸೇವೆಗೆ ಬಳಸುವ ಸಲುವಾಗಿ ಮತ್ತು ದೇಶೀಯ ಉತ್ಪಾದಕರ ನೆರವಿಗಾಗಿ ಪಿಎಲ್‌ಐ ಯೋಜನೆಯೊಂದನ್ನು ಜಾರಿಗೆ ತರಲಾಗಿದೆ. ಕಳೆದ ವರ್ಷ ಕೊರೊನಾ ಬಂದ ಅವಧಿಯಲ್ಲಿ ಭಾರತ ಪಿಪಿಇ ಕಿಟ್‌ಗಳನ್ನು ಉತ್ಪಾದನೆ ಮಾಡುತ್ತಿರಲಿಲ್ಲ, ಇದಕ್ಕೆ ಬದಲಾಗಿ ಬೇರೆ ಕಡೆಯಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆಗ ಪ್ರತೀ ದಿನ 2 ಲಕ್ಷ ಪಿಪಿಇ ಕಿಟ್‌ಗಳ ಉತ್ಪಾದನ ಕೊರತೆ ಮತ್ತು 2 ಲಕ್ಷ ಎನ್‌-95 ಮಾಸ್ಕ್ಗಳ ಕೊರತೆ ಇತ್ತು. ಒಂದು ವರ್ಷದಂಥ ಕಡಿಮೆ ಅವಧಿಯಲ್ಲಿ ಭಾರತ ಆತ್ಮ ನಿರ್ಭರ ದೃಷ್ಟಿಕೋನದಲ್ಲಿ ಪಿಪಿಇ ಕಿಟ್‌ಗಳು ಮತ್ತು ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸಲಾಗುತ್ತಿದೆ.

ಭಾರತ ಇಂದು ದೇಶೀಯವಾಗಿಯೇ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಷ್ಟೇ ಅಲ್ಲ, ಕೊರೊನಾ ವಿರುದ್ಧ ಜಗತ್ತಿನ ಮೊದಲ ಡಿಎನ್‌ಎ ಲಸಿಕೆಯನ್ನು ಕಂಡು ಹಿಡಿದಿದೆ. ಹಾಗೆಯೇ ನಮ್ಮ ನೀತಿಯಾದ ವಸುದೈವ ಕುಟುಂಬಕಂನಂತೆ ಇಡೀ ಜಗತ್ತಿಗೇ ನಾವು ಲಸಿಕೆ ಮೈತ್ರಿ ಮಾಡಿ ಕೊಂಡೆವು. ಈ ಮೂಲಕ ಅವರ ಪಾಲಿಗೆ ಸಂಜೀವಿನಿಗಳಾದೆವು. ಇದನ್ನೇ  ಹೆಮ್ಮೆಯಿಂದ ಹೇಳುವುದಾದರೆ, ಜಗತ್ತಿನ 75 ರಾಷ್ಟ್ರಗಳು  ಕೋವಿನ್‌ ಆ್ಯಪ್‌ ಅನ್ನು ಜಾರಿಗೊಳಿಸಲು ಮುಂದಾಗಿವೆ. ವಿಚಿತ್ರವೆಂದರೆ, ಅಭಿವೃದ್ಧಿ ಹೊಂದಿದ ದೇಶಗಳಾದ ಅಮೆರಿಕ ಮತ್ತು ಯುನೈಟೆಡ್‌  ಕಿಂಗ್‌ಡಮ್‌ನಲ್ಲೂ ಲಸಿಕೆ ಪಡೆದ ಮೇಲೆ ಕೈಯಲ್ಲಿ ಬರೆದ ಚೀಟಿಯನ್ನು ಕೊಡುತ್ತಾರೆ. ಆದರೆ ಭಾರತದಲ್ಲಿ ನಾಗರಿಕರಿಗೆ ಡಿಜಿಟಲ್‌ ಪ್ರಮಾಣ ಪತ್ರ ನೀಡಲಾಗುತ್ತಿದೆ.

ಪ್ರಧಾನಿಯವರ ದೃಷ್ಟಿಕೋನದಿಂದ ಉತ್ತೇಜಿತವಾಗಿರುವ ಕರ್ನಾಟಕವು, 2020-21ನೇ ಸಾಲಿನಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ ಕೇಂದ್ರಗಳನ್ನು ತೆರೆಯುವಲ್ಲಿ ಮುಂಚೂಣಿಯಲ್ಲಿದೆ. ಕೇಂದ್ರ ಸರಕಾರವು 2,263 ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ ಕೇಂದ್ರಗಳನ್ನು ತೆರೆಯಲು ಟಾರ್ಗೆಟ್‌ ಕೊಟ್ಟಿತ್ತು. ಇದಕ್ಕೆ ಪ್ರತಿಯಾಗಿ ರಾಜ್ಯವು ಮಾ.31ರ ಹೊತ್ತಿಗೆ 3,300 ಕೇಂದ್ರಗಳನ್ನು ತೆರೆದಿತ್ತು. ಅಂದರೆ, ನೀಡಿದ ಗುರಿಗಿಂತ ಶೇ.146ರಷ್ಟು ಹೆಚ್ಚು. ಹಾಗೆಯೇ ಕೇಂದ್ರ ಸರಕಾರವು 2,096 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ ಕೇಂದ್ರಗಳಾಗಿ ಮಾಡುವಂತೆ ಗುರಿ ನೀಡಿತ್ತು. ಇದಕ್ಕೆ ಬದಲಾಗಿ ರಾಜ್ಯವು 2,168 ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ ಕೇಂದ್ರಗಳನ್ನು ಮಾಡಿದ್ದು, ಇಲ್ಲೂ ಶೇ.103ರಷ್ಟು ಟಾರ್ಗೆಟ್‌ ತಲುಪಲಾಗಿದೆ.

ಹಾಗೆಯೇ, ನಗರದಲ್ಲಿರುವ 294 ಪಿಎಚ್‌ಸಿಗಳನ್ನು ನವೀಕರಿಸುವಂತೆ ಸೂಚಿಸಿತ್ತು. ಆದರೆ, ರಾಜ್ಯದಲ್ಲಿ ಈಗಾಗಲೇ 364 ಕೇಂದ್ರಗಳನ್ನು ಅಪ್‌ಗ್ರೇಡ್‌ ಮಾಡಲಾಗಿದೆ. ಇಲ್ಲೂ ಶೇ.124ರಷ್ಟು ಗುರಿ ಸಾಧಿಸಲಾಗಿದೆ. ಇನ್ನು ಕೇಂದ್ರ ಸರಕಾರವು 4,653 ಎಚ್‌ಡಬ್ಲ್ಯುಸಿಗಳನ್ನು ರಚಿಸುವಂತೆ ಸೂಚಿಸಿದ್ದು, ರಾಜ್ಯವು ಈಗಾಗಲೇ 5,832 ಕೇಂದ್ರಗಳನ್ನು ತೆರೆದಿದೆ. ಇಲ್ಲೂ ಶೇ.125ರಷ್ಟು ಗುರಿ ಸಾಧನೆ ಮಾಡಲಾಗಿದೆ. ಇದರ ಜತೆಗೆ ಕರ್ನಾಟಕವು ಎಲ್ಲ ಪಿಎಚ್‌ಸಿಗಳನ್ನು ಮೇಲ್ದರ್ಜೆಗೇರಿಸಲು ನಿರ್ಧಾರ ಮಾಡಿಕೊಂಡಿದೆ, 2023ರ ವೇಳೆಗೆ 250 ಮಾದರಿ ಪಿಎಚ್‌ಸಿಗಳನ್ನು ತೆರೆಯಲು ತೀರ್ಮಾನಿಸಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕವು ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ನಾಯಕನ ಸ್ಥಿತಿಯಲ್ಲಿದೆ. ಇಲ್ಲಿ 6.13 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಡಿಸೆಂಬರ್‌ ಒಳಗೆ ಎಲ್ಲ ಅರ್ಹ ಫ‌ಲಾನುಭವಿಗಳಿಗೆ ಲಸಿಕೆ ನೀಡಲು ಗುರಿ ಹಾಕಿಕೊಳ್ಳಲಾಗಿದೆ.

ಮೋದಿ ಸರಕಾರವು ದೇಶದ ವರ್ತಮಾನ ಮತ್ತು ಭವಿಷ್ಯದಲ್ಲಿ ಆರೋಗ್ಯ ಸೇವೆಯಲ್ಲಿ ಸುಧಾರಣೆ ತರುವ ಸಲುವಾಗಿ ದೊಡ್ಡ ಮಟ್ಟದ ಹೂಡಿಕೆ ಮಾಡಲು ನಿರ್ಧರಿಸಿದೆ. ಕ್ಷೇಮಾಭಿವೃದ್ಧಿಯನ್ನು ಪ್ರೋತ್ಸಾಹಿಸುತ್ತಿರುವುದಲ್ಲದೇ, ಕಾಲೇಜುಗಳಲ್ಲಿ ಮೆಡಿಕಲ್‌ ಸೀಟುಗಳ ಹೆಚ್ಚಳ, ವೈದ್ಯಕೀಯ ಸಲಕರಣೆಗಳ ಉತ್ಪಾದನೆ, ಎಲ್ಲರಿಗೂ ಆರೋಗ್ಯ ವಿಮೆ, ಡಿಜಿಟಲ್‌ ಆರೋಗ್ಯ ಮೂಲಸೌಕರ್ಯವನ್ನು ಒದಗಿಸಲು ಪ್ರಯತ್ನಿಸುತ್ತಿದೆ.

ಡಾ| ಕೆ.ಸುಧಾಕರ್‌, ಆರೋಗ್ಯ ಸಚಿವರು ಕರ್ನಾಟಕ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.