ಆರ್‌ಬಿಐ ಸ್ವಾಯತ್ತೆ ಗೌರವಿಸಿ


Team Udayavani, Nov 11, 2018, 12:30 AM IST

12.jpg

ಅಭಿವೃದ್ಧಿಗಾಗಿ ಸರ್ಕಾರ ತಕ್ಷಣದ ಫ‌ಲಿತಾಂಶಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆರ್‌ಬಿಐ ದೀರ್ಘ‌ಕಾಲೀನ ಮತ್ತು ಶಾಶ್ವತ ಉಪಶಮನಕ್ಕೆ ಆದ್ಯತೆ ನೀಡುತ್ತದೆ. ಭಿನ್ನಮತದಿಂದ ಏನೂ ಸಾಧಿಸಲಾಗದು. ಸರ್ಕಾರ ಆರ್‌ಬಿಐನ ಸ್ವಾಯತ್ತತೆಯನ್ನು ಗೌರವಿಸಬೇಕು. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು. ಆರ್‌ಬಿಐ ಮತ್ತು ಸರ್ಕಾರಗಳ ನಡುವಿನ ಕಿತ್ತಾಟ ಉತ್ತಮ ಬೆಳವಣಿಗೆಯಲ್ಲ. ಪ್ರತಿಷ್ಠೆಯನ್ನು ಬದಿಗಿಟ್ಟು ದೇಶದ ಜನತೆಯ ಹಿತವನ್ನು ಗಮನದಲ್ಲಿಟ್ಟುಕೊಳ್ಳಬೇಕು.

ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿಬಿಐ ನಲ್ಲಿ ಉಂಟಾಗಿದ್ದ ಬಿಕ್ಕಟ್ಟಿನ ಬೆನ್ನಲ್ಲೇ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮತ್ತು ಕೇಂದ್ರ ಸರ್ಕಾರದ ನಡುವಿನ ಭಿನ್ನಮತ ತೀವ್ರಗೊಂಡಿದೆ. ಕೇಂದ್ರೀಯ ಬ್ಯಾಂಕ್‌ ಆದ ಆರ್‌ಬಿಐ ಒಂದು ಸ್ವಾಯತ್ತ ಮತ್ತು ಸ್ವತಂತ್ರ ಸಂಸ್ಥೆಯಾಗಿದೆ. ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ದೇಶದ ಎಲ್ಲಾ ಬ್ಯಾಂಕ್‌ಗಳ ನಿರ್ವಹಣೆಯ ಮೇಲೆ ಹತೋಟಿ ಹೊಂದಿರುತ್ತದೆ ಮಾತ್ರವಲ್ಲದೇ ಆರ್ಥಿಕ ಪರಿಸ್ಥಿತಿ ಸರಿದೂಗಿಸುವ ದೃಷ್ಟಿಯಿಂದ ರೂಪುರೇಷೆಗಳನ್ನು ನಿರ್ಮಿಸಿ ನಿರ್ದೇಶನ ನೀಡುತ್ತದೆ. 

  ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಅನುತ್ಪಾದಕ ಆಸ್ತಿ (ಎನ್‌ಪಿಎ) ಹೆಚ್ಚಾಗಿರುವುದಕ್ಕೆ ಬ್ಯಾಂಕ್‌ಗಳ ಆರ್‌ಬಿಐ ಮೇಲೆ ಸೂಕ್ತ ನಿಗಾ ವಹಿಸದೇ ಇದ್ದದ್ದೇ ಕಾರಣವೆಂದು ಸರ್ಕಾರ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಸ್ತುತ ಬ್ಯಾಂಕ್‌ಗಳು 9.5 ಲಕ್ಷ ಕೋಟಿ ಭಾರೀ ಮೊತ್ತದ ಎನ್‌ಪಿಎ ಹೊಂದಿವೆ. ಈ ಕುರಿತು ಸರಕಾರ ಆರ್‌ಬಿಐ ಗೆ ಹಲವಾರು ಪತ್ರಗಳನ್ನು ಕೂಡಾ ಬರೆದಿದೆ. ಎನ್‌ಪಿಎ ಹೆಚ್ಚಾಗದಂತೆ ನಿಗ್ರಹಿಸಲು ಮೇಲಿಂದ ಮೇಲೆ ಆರ್‌ಬಿಐ ಕಾನೂನು ಪ್ರಕಾರ ಆದೇಶಗಳನ್ನು ನೀಡುತ್ತದೆ. ನಿರ್ದೇಶನ ಪಾಲಿಸದೇ ಇದ್ದಲ್ಲಿ ದೇಶದ ಆರ್ಥಿಕ ಸ್ವಾಸ್ಥ್ಯದ ಮೇಲೆ ಪ್ರತಿಕೂಲ ಪರಿಣಾಮವುಂಟಾಗುತ್ತದೆ. ಆರ್‌ಬಿಐನ ಮೇಲಾಧಿಕಾರಿಗಳು ಕೇಂದ್ರದೊಂದಿಗೆ ಸಹಕರಿಸುತ್ತಿಲ್ಲ ಮತ್ತು ಕೇಂದ್ರ ಸರ್ಕಾರದ ಸೂಚನೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ನೆಪವೊಡ್ಡಿ ಆರ್‌ಬಿಐ ಆ್ಯಕ್ಟ್‌ನಲ್ಲಿರುವ ಕಾಲಂ 7(1) ಕಾಯಿದೆಯನ್ನು ಪ್ರಯೋಗ ಮಾಡಲು ಮುಂದಾಗಿದೆ. ಇದರಿಂದ ಆರ್‌ಬಿಐ ನ ಸ್ವಾಯತ್ತತೆಗೆ ಧಕ್ಕೆಯಾಗಲಿದೆ. ಹೀಗಾಗಿ ಆರ್‌ಬಿಐ ಅಧಿಕಾರಿಗಳು ಆತಂಕಗೊಂಡಿದ್ದಾರೆ. ಜಾಗತಿಕ ಮಟ್ಟದ ಆರ್ಥಿಕ ಬಿಕ್ಕಟ್ಟಿನ ಸನ್ನಿವೇಶಗಳು ಎದುರಾದಾಗ ಕೂಡ ಕಾಲಂ 7 ಪ್ರಸ್ತಾಪಿಸಿರಲಿಲ್ಲ. ಆರ್‌ಬಿಐನ ಸೆಕ್ಷನ್‌ 7(1) ಕಾಯ್ದೆ ಪ್ರಕಾರ ಆರ್‌ಬಿಐ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಸ್ವತಃ ನಿರ್ಧಾರ ತೆಗೆದುಕೊಳ್ಳಬಹು ದಾಗಿದೆಯಾದರೂ ಕೆಲವು ಸಂದರ್ಭಗಳಲ್ಲಿ ಸರ್ಕಾರ ಹೇಳಿದ್ದನ್ನು ಕೇಳಬೇಕಾಗುತ್ತದೆ. ಇತ್ತೀಚೆಗೆ ಆರ್‌ಬಿಐ ನ ಡೆಪ್ಯೂಟಿ ಗವರ್ನರ್‌ ಆರ್‌ಬಿಐ ಕಾರ್ಯನಿರ್ವಹಣೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿ ಹತೋಟಿ ಸಾಧಿಸಲು ಯತ್ನಿಸುತ್ತಿರುವುದರ ಬಗ್ಗೆ ನೇರವಾಗಿ ತಮ್ಮ ಅಸಹನೆ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್‌ಗಳಲ್ಲಿ ಎನ್‌ಪಿಎ ಹೆಚ್ಚಾಗಲು ಆರ್‌ಬಿಐ ಕಾರಣವಲ್ಲ. ಬದಲಾಗಿ ಕೇಂದ್ರ ಸರ್ಕಾರದ ಮತ ಬ್ಯಾಂಕ್‌ಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ದೋಷಪೂರಿತ ಆರ್ಥಿಕ ನೀತಿಗಳೇ ಕಾರಣವಾಗಿವೆ ಎಂದಿದ್ದಾರೆ. ರಾಜಕೀಯವಾಗಿ ಬಲಾಡ್ಯವಾಗಿರುವ ಕೆಲವು ರಾಜಕಾರಣಿಗಳ ಸಹಕಾರದಿಂದ ಕೆಲವು ಉದ್ಯಮಿಗಳು ಬ್ಯಾಂಕ್‌ಗಳಿಂದ ಸಾವಿರಾರು ಕೋಟಿ ರೂ. ಗಳಷ್ಟು ಸಾಲ ಪಡೆದು ಮರುಪಾವತಿಸದೇ ವಿದೇಶಗಳಿಗೆ ಪರಾರಿಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಎನ್‌ಪಿಎಗಳಲ್ಲಿ ಸಿಂಹಪಾಲು ಬೃಹತ್‌ ಉದ್ದಿಮೆಗಳದ್ದಾಗಿದೆ. ಇದರ ಕುರಿತು ಸರಕಾರ ಚಿಂತಿಸಬೇಕಾಗಿದೆ. ದೇಶದ ಆರ್ಥಿಕ ಸ್ಥಿತಿಯನ್ನು ಹಳಿಯ ಮೇಲೆ ಬರುವಂತೆ ಮಾಡಲು ಆರ್‌ಬಿಐ ತನ್ನದೇ ಆದ ಕಾನೂನು ನೀತಿ ನಿಯಮಗಳನ್ನು ಅನುಸರಿಸುತ್ತದೆ. ಆದರೆ ಸರ್ಕಾರ ತೀವ್ರಗತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ. ಆರ್‌ಬಿಐ ನ ಗವರ್ನರ್‌, ನಿರ್ದೇಶಕರು ಮತ್ತಿತರ ಪ್ರಮುಖ ಹುದ್ದೆಗಳಿಗೆ ಸೂಕ್ತ ವ್ಯಕ್ತಿಗಳನ್ನು ನೇಮಿಸುವ ಹಕ್ಕು ಕೇಂದ್ರ ಸರ್ಕಾರಕ್ಕಿದೆ. ಆದರೆ ಇಲ್ಲಿ ಪ್ರಾಮಾಣಿಕತೆ ಮತ್ತು ಬದ್ಧತೆ ಮುಖ್ಯವಾಗಿರುತ್ತದೆ. ಸಂಘ ಪರಿವಾರದ ಚಿಂತಕರೊಬ್ಬರನ್ನು ಕೇಂದ್ರ ಸರ್ಕಾರ ಆರ್‌ಬಿಐಗೆ ನಾಮನಿರ್ದೇಶನ ಮಾಡಿರುವುದು ಹಸ್ತಕ್ಷೇಪಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಬಹುಶಃ ಈ ವಿಷಯವೇ ಬಿಕ್ಕಟ್ಟಿಗೆ ಮುಖ್ಯ ಕಾರಣವಾಗಿರಬಹುದು.

ಆರ್‌ಬಿಐನ ಹೆಚ್ಚುವರಿ ನಿಧಿಯನ್ನು ವರ್ಗಾಯಿಸುವಂತೆ ಒತ್ತಡ ಹೇರಿದ್ದರೂ ಅದರ‌ ಗವರ್ನರ್‌ ಊರ್ಜಿತ ಪಟೇಲ್‌ ನಿರಾಕರಿಸಿದ್ದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಮತ್ತು ಆರ್‌ಬಿಐ ನಡುವಿನ ಭಿನ್ನಮತ ತಾರಕಕ್ಕೇರಿದೆ. ಊರ್ಜಿತ್‌ ಪಟೇಲ್‌ ಒತ್ತಡ ಹೆಚ್ಚಾದರೆ ರಾಜೀನಾಮೆ ಸಲ್ಲಿಸುವ ನಿರ್ಧಾರ ಮಾಡಲಿದ್ದಾರೆ ಎಂದು ವರದಿಯಾಗಿರುವುದು ಆಘಾತಕಾರಿ. ಅಭಿವೃದ್ಧಿಗಾಗಿ ಸರ್ಕಾರ ತಕ್ಷಣದ ಫ‌ಲಿತಾಂಶಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆರ್‌ಬಿಐ ದೀರ್ಘ‌ಕಾಲೀನ ಮತ್ತು ಶಾಶ್ವತ ಉಪಶಮನಕ್ಕೆ ಆದ್ಯತೆ ನೀಡುತ್ತದೆ. ಭಿನ್ನಮತದಿಂದ ಏನೂ ಸಾಧಿಸಲಾಗದು. ಸರ್ಕಾರ ಆರ್‌ಬಿಐನ ಸ್ವಾಯತ್ತತೆಯನ್ನು ಗೌರವಿಸಬೇಕು. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು. 

ಆರ್‌ಬಿಐ ಮತ್ತು ಸರ್ಕಾರಗಳ ನಡುವಿನ ಕಿತ್ತಾಟ ಉತ್ತಮ ಬೆಳವಣಿಗೆಯಲ್ಲ. ಪ್ರತಿಷ್ಠೆಯನ್ನು ಬದಿಗಿಟ್ಟು ದೇಶದ ಜನತೆಯ ಹಿತವನ್ನು ಗಮನದಲ್ಲಿಟ್ಟು ಕೊಳ್ಳಬೇಕು. ಸರ್ಕಾರ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾದ ಸ್ವಾಯತ್ತತೆಯನ್ನು ಮಾನ್ಯ ಮಾಡಿಯೇ ಭಿನ್ನಮತ ಬಗೆಹರಿಸಬೇಕೆಂಬುದೇ ಎಲ್ಲರ ಆಶಯವಾಗಿದೆ.  
ಲೇಖಕರು, ಸ್ಟೇಟ್‌ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕರು)

ಪಂಪಾಪತಿ ಹಿರೇಮಠ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.