ರಾಕೆಟ್‌ ವಿಜ್ಞಾನಿ ಎಸ್‌.ಸೋಮನಾಥ್‌


Team Udayavani, Jan 15, 2022, 5:50 AM IST

ರಾಕೆಟ್‌ ವಿಜ್ಞಾನಿ ಎಸ್‌.ಸೋಮನಾಥ್‌

ಅದೊಂದು ಕೇರಳದ ಅಲಪ್ಪುಳ ಜಿಲ್ಲೆಯ ಪುಟ್ಟ ಗ್ರಾಮ. ಹೆಸರು ತುರವೂರು ಗ್ರಾಪಂ ವ್ಯಾಪ್ತಿಯ ವಾಲಮಂಗಳಂ. ಮುಂದೊಂದು ದಿನ ಈ ಹೆಸರು ದೇಶದ ಭೂಪಟದಲ್ಲಿ ಮಿಂಚಬಹುದು ಎಂಬುದು ಅಲ್ಲಿನ ಯಾರಿಗೂ ಅರಿವಿರಲೇ ಇಲ್ಲ. ಅಂದ ಹಾಗೆ ಇದು ಈಗಷ್ಟೇ ಇಸ್ರೋ ಮುಖ್ಯಸ್ಥರಾಗಿ ನೇಮಕವಾಗಿರುವ ಎಸ್‌.ಸೋಮನಾಥ್‌ ಅವರ ಹುಟ್ಟೂರು. ತಂದೆ ಹಿಂದಿ ಶಿಕ್ಷಕ. ಹೆಸರು ತುರವೂರು ವೇದಂಪರಂಬಿಲ್‌ ಶ್ರೀಧರ ಪಣಿಕ್ಕರ್‌.

ಹಾಗೆಯೇ ತಾಯಿ ಹೆಸರು ತಂಕಮ್ಮ. ಇವರ ಊರು ಆರೂರು. ತಾಯಿಯ ಊರಿನಲ್ಲೇ ಜನಿಸಿದ ಸೋಮನಾಥ್‌ ಅವರು, ಪ್ರಾಥಮಿಕ ಶಿಕ್ಷಣ ಮುಗಿಸಿದ್ದು ಇಲ್ಲಿಯೇ. ಇದಾದ ಮೇಲೆ, ಎರ್ನಾಕುಲಂನ ಮಹಾರಾಜ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಮುಗಿಸಿದರು. ಕೊಲ್ಲಂನಲ್ಲಿರುವ ಟಿಕೆಎಂ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿದ್ಯಾಭ್ಯಾಸ ಮಾಡಿದ ಇವರು ಕಾಲೇಜ್‌ ಟಾಪರ್‌. ಇದಾದ ಬಳಿಕ ಬೆಂಗಳೂರಿನಲ್ಲಿರುವ ಐಐಎಸ್‌ಸಿಯಲ್ಲಿ ಏರೋಸ್ಪೇಸ್‌ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಇಲ್ಲಿ ಅವರು ಚಿನ್ನದ ಪದಕವನ್ನೂ ಗೆದ್ದಿದ್ದರು. ಪತ್ನಿ  ವಲ್ಸಲಾ  ತಿರುವನಂತಪುರದಲ್ಲಿನ ಕೇಂದ್ರ ಸುಂಕ ಮತ್ತು ಅಬಕಾರಿ ಇಲಾಖೆಯಲ್ಲಿ ಸೂಪರಿಂಟೆಂಡ್‌ ಆಗಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದು,  ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

1985ರಲ್ಲಿ ವಿಕ್ರಂ ಸಾರಾಭಾಯಿ ಸ್ಪೇಸ್‌ ಸೆಂಟರ್‌(ವಿಎಸ್‌ಎಸ್‌ಸಿ)ಗೆ ಸೇರಿದ ಸೋಮನಾಥ್‌ ಅವರು, ಪಿಎಸ್‌ಎಲ್‌ವಿ ಪ್ರಾಜೆಕ್ಟ್ನಲ್ಲಿ ಕೆಲಸ ಮಾಡುತ್ತಿದ್ದರು. 2010ರಲ್ಲಿ ವಿಎಸ್‌ಎಸ್‌ಸಿಯ ಸಹಾಯಕ ನಿರ್ದೇಶಕರಾದರು. ಜಿಎಸ್‌ಎಲ್‌ವಿ ಎಂಕೆ-3 ಉಡಾವಣ ವಾಹಕದ ಪ್ರಾಜೆಕ್ಟ್ ನಿರ್ದೇಶಕರಾಗಿಯೂ ಕರ್ತವ್ಯ ನಿರ್ವಹಿಸಿದರು. 2014ರಲ್ಲಿ ಪ್ರೊಪಲ್ಶನ್‌ ಆ್ಯಂಡ್‌ ಸ್ಪೇಸ್‌ ಆರ್ಡಿನೆನ್ಸ್‌ ಎಂಟಿಟಿಯ ಉಪ ನಿರ್ದೇಶಕರಾದರು. 2015ರಲ್ಲಿ ವಲಿಮಾಲದಲ್ಲಿರುವ ಲಿಕ್ವಿಡ್‌ ಪ್ರೊಪೋಲ್ಶನ್‌ ಸಿಸ್ಟಮ್ಸ್‌ ಸೆಂಟರ್‌ನ ನಿರ್ದೇಶಕರಾದರು. 2018ರಲ್ಲಿ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಸ್ಥಾನದ ಹೊಣೆ ಹೊತ್ತರು. ಸದ್ಯ ಇವರ ಮುಂದೆ ಚಂದ್ರಯಾನ-2 ಮತ್ತು ಮಾನವ ಸಹಿತ ಗಗನಯಾನ ಯೋಜನೆಗಳ ಸವಾಲುಗಳಿವೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.