ಸಣ್ಣಕಥೆಗಳು: ರೂಪ-ವಿರೂಪ


Team Udayavani, Mar 23, 2023, 9:00 AM IST

tdy-17

ಆಕೆ ಸಿನೆಮಾ ತಾರೆ. ಸುಂದರವಾದ ಮುಖ- ಮೈಕಟ್ಟು, ಮೊಗ್ಗು ಬಿರಿದಂಥ ನಗುವಿನ, ಬೊಗಸೆ ಕಂಗಳ ಚೆಲುವೆ. ಅದೆಷ್ಟೋ ಸೂಪರ್‌ ಹಿಟ್‌ ಸಿನೆಮಾಗಳಲ್ಲಿ ಅಭಿನಯಿಸಿ, ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡವಳು. ಆಕೆಯ ಸೌಂದರ್ಯಕ್ಕೆ ಮಾರುಹೋದ ಯುವಕರು ಅವಳನ್ನು “ಕನಸಿನ ರಾಣಿ’ ಎಂದೇ ಕರೆಯುತ್ತಿದ್ದರು. ತನ್ನ ಮನೋಜ್ಞ ಅಭಿನಯಕ್ಕಾಗಿ ಸಾಲು- ಸಾಲಾಗಿ ಪ್ರಶಸ್ತಿಗಳನ್ನು ಪಡೆದಿದ್ದಳು. ದೊಡ್ಡದಾದ ಬಂಗಲೆಯಲ್ಲಿ ವಾಸ. ಮನೆಯಲ್ಲಿನ ಕಣ್ಣು ಕೋರೈಸುವಂಥ ದೀಪಗಳು, ನೆಲಕ್ಕೆ ಹಾಸಿದ ರತ್ನಗಂಬಳಿ, ದೇಶ- ವಿದೇಶಗಳಿಂದ ಸಂಗ್ರಹಿಸಿದ ಬೆಲೆಬಾಳುವ ವಸ್ತುಗಳು ಅವಳ ಶ್ರೀಮಂತಿಕೆಯನ್ನು ಸಾರಿ ಹೇಳುತ್ತಿದ್ದವು. ಕರುಣೆ- ಅನುಕಂಪ, ಸೇವಾ ಮನೋಭಾವವೇ ತನ್ನ ಜೀವಾಳ ಎಂದು ಎಲ್ಲೆಡೆ  ಹೇಳಿಕೊಂಡು ಬರುತ್ತಿದ್ದಳಲ್ಲದೇ, ಸ್ಲಂ ಏರಿಯಾದ ಬಡಮಕ್ಕಳನ್ನು ಎತ್ತಿಕೊಂಡು ನಿಂತು  ವಿಧ-ವಿಧವಾಗಿ ಕ್ಲಿಕ್ಕಿಸಿಕೊಂಡ ಫೋಟೋಗಳು ಬಿಲ್‌ ಬೋರ್ಡಗಳಲ್ಲಿ ರಾರಾಜಿಸುತ್ತಿದ್ದವು.

ಈಕೆ ಮನೆಗೆಲಸದ ಹೆಂಗಸು. ಕಡುಗಪ್ಪು ಮೈಬಣ್ಣದ, ಸಾಧಾರಣ ಮೈಕಟ್ಟು, ಎಣ್ಣೆ ಸುರಿಯುವ ಮುಖ. ಮಾಸಿದ ಸೀರೆಯನ್ನುಟ್ಟು, ಕೈಯಲ್ಲಿ ಚೀಲವೊಂದನ್ನು ಹಿಡಿದುಕೊಂಡು, ಮನೆ-ಮನೆಗೆ ತಿರುಗಿ ಕೆಲಸ ಮಾಡಿಕೊಂಡಿದ್ದವಳು. ಪುಟ್ಟ ವಠಾರವೊಂದರ ಒಂದು ರೂಮ್‌ನಲ್ಲಿ ವಾಸ. ಗುಡಿಸಲೆನ್ನಬಹುದಾದ ಮನೆಯಲ್ಲಿ ಒಂದು ಮಿಣುಕು ದೀಪ, ನೆಲಕ್ಕೆ ಹಾಸಿದ ಹರಕಲು ಚಾಪೆ, ಅವರಿವರಿಂದ ಬೇಡಿ ತಂದ ಹಳೆಯ ಸಾಮಾನುಗಳು ಇವಳ ಬಡತನವನ್ನು ಪರಿಚಯಿಸುತ್ತಿದ್ದವು. ಬದುಕಿನ ಸಂಕಷ್ಟಗಳಿಂದ ರೋಸಿ ಹೋಗಿದ್ದ ಇವಳಲ್ಲಿ ಒರಟುತನ ಮನೆ ಮಾಡಿತ್ತು. ಹಾದಿ-ಬೀದಿಗಳಲ್ಲಿ ಓಡಾಡುವಾಗಲೂ ತನ್ನಷ್ಟಕ್ಕೇ ಬೈದುಕೊಂಡಿರುತ್ತಿದ್ದಳು. ಇವಳನ್ನು ನೋಡಿದರೆ ಅಕ್ಕ-ಪಕ್ಕದ ಮನೆಯ ಮಕ್ಕಳಿಗೆಲ್ಲ ಭಯ ಹುಟ್ಟಿಕೊಳ್ಳುತ್ತಿತ್ತು.

ಆ ದಿನ ಹೈ ಸ್ಪೀಡ್‌ನಿಂದ ಬಂದ ಕಾರೊಂದು ರಸ್ತೆಯ ಪಕ್ಕದಲ್ಲಿ ಆಡಿಕೊಂಡಿದ್ದ ಪುಟ್ಟ- ಪುಟ್ಟ ಮಕ್ಕಳನ್ನು ಲೆಕ್ಕಿಸದೇ ಅವರೆಲ್ಲರನ್ನು ಗುದ್ದಿ, ನಿಲ್ಲಿಸದೇ ಅದೇ ಸ್ಪೀಡಿನಲ್ಲಿ ಮುಂದೆ ಹೋಯಿತು. ಪೆಟ್ಟು ಮಾಡಿಕೊಂಡು ರಕ್ತಸಿಕ್ತವಾಗಿದ್ದ ಮಕ್ಕಳು ರಸ್ತೆಯಲ್ಲಿ ಚೆದುರಿ ಬಿದ್ದರು. ಮನೆಗೆಲಸಕ್ಕೆ ಹೋಗುವುದು ತಡವಾಗಿ ಇನ್ನು ಮಾಲಕರ ಬೈಗುಳ ಕೇಳಬೇಕಲ್ಲ ಎಂದು ಯೋಚಿಸುತ್ತ ಅವಸರದಿಂದ ಹೋಗುತ್ತಿದ್ದ ಈಕೆಯ ಕಣ್ಣ ಮುಂದೆಯೇ ಆದ ಅಪಘಾತ ಕಂಡು ಗಾಬರಿಗೊಂಡರೂ, ಸುತ್ತ-ಮುತ್ತ ನೆರೆದಿದ್ದ ಜನಸಮೂಹವನ್ನು ಬೇಡಿಕೊಂಡು ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಯಶಸ್ವಿಯಾದಳು. ನೋವಿನಿಂದ ಒದ್ದಾಡುತ್ತಿದ್ದ ಮಕ್ಕಳನ್ನು ಎದೆಗೊತ್ತಿಕೊಂಡು ಸಮಾಧಾನಿಸಿದಳು. ಮಕ್ಕಳನ್ನು ಗುದ್ದಿ ಹೋದ ಕಾರಿನಲ್ಲಿ ಕುಳಿತಿದ್ದ ಚೆಲುವೆ, ಕನಸಿನ ರಾಣಿ ತನ್ನ ಗುರುತು ಸಿಗದಂತೆ ಮುಖಮುಚ್ಚಿಕೊಂಡಿದ್ದು ಕಾಣಿಸಿತು. ಅವಳ ಸುಂದರವಾದ ರೂಪ ಮನಸ್ಸಿನ ವಿರೂಪವನ್ನು ಪರಿಚಯಿಸಿತ್ತು!

-ಸರಿತಾ ನವಲಿ,ನ್ಯೂಜೆರ್ಸಿ

 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.