ಸಿಂಗಾಪುರ ; ತೇಲುವ ಸೌರ ವಿದ್ಯುತ್‌ ಸ್ಥಾವರ


Team Udayavani, Mar 12, 2021, 6:40 AM IST

ಸಿಂಗಾಪುರ ; ತೇಲುವ ಸೌರ ವಿದ್ಯುತ್‌ ಸ್ಥಾವರ

ಹವಾಮಾನ ಬದಲಾವಣೆ ಜಗತ್ತು ಎದುರಿಸುತ್ತಿ ರುವ ಬಲುದೊಡ್ಡ ಸಮಸ್ಯೆಯಾಗಿದೆ.  ಇದರಿಂದಾಗಿ ನಾನಾ ತೆರನಾದ ಪ್ರಕೃತಿ ವಿಕೋಪಗಳು ಸಂಭವಿ ಸುತ್ತಿವೆ. ಇದನ್ನು ಸಿಂಗಾಪುರ ಗಂಭೀರವಾಗಿ ಪರಿಗಣಿ ಸಿದ್ದು ಹಸುರುಮನೆ ಅನಿಲ ಹೊರಸೂಸುವಿಕೆಯನ್ನು ತಡೆಯಲು ತೇಲುವ ಸೌರ ವಿದ್ಯುತ್‌ ಸ್ಥಾವರಗಳನ್ನು ನಿರ್ಮಿಸಲು ಮುಂದಡಿ ಇಟ್ಟಿದೆ.

ಸಿಂಗಾಪುರ ವಿಶ್ವದ ಅತೀ ಚಿಕ್ಕ ದೇಶಗಳಲ್ಲಿ ಒಂದಾಗಿದ್ದರೂ ಏಷ್ಯಾದ ಅತೀ ದೊಡ್ಡ ಮತ್ತು ಸಮೃದ್ಧ ಆರ್ಥಿಕ ಕೇಂದ್ರವಾಗಿದೆ. ಜಲವಿದ್ಯುತ್‌ , ಪವನ ವಿದ್ಯುತ್‌ ಉತ್ಪಾದನೆಗೆ ಇಲ್ಲಿ ಅವಕಾಶ ಇಲ್ಲ.  ಈ ಹಿನ್ನೆಲೆಯಲ್ಲಿ ಸಿಂಗಾಪುರ ಸೌರಶಕ್ತಿಯತ್ತ ದೃಷ್ಟಿ ನೆಟ್ಟಿದ್ದು, ತನ್ನ ಕರಾವಳಿ ಮತ್ತು ಜಲಾಶಯಗಳಲ್ಲಿ ಸೌರ ವಿದ್ಯುತ್‌ ಸ್ಥಾವರಗಳನ್ನು ಸ್ಥಾಪಿಸಲು ನಿರ್ಧರಿಸಿದೆ.

ಶೂನ್ಯ ಹೊರಸೂಸುವಿಕೆ ಗುರಿ ದೇಶವು 2030ರ ವೇಳೆಗೆ ಹಸುರುಮನೆ ಅನಿಲ ಹೊರಸೂಸುವಿಕೆಯನ್ನು ಅರ್ಧಕ್ಕೆ ಇಳಿಸುವ ಗುರಿ ಇಟ್ಟುಕೊಂಡಿದೆ. 2050ರ ವೇಳೆಗೆ ಇದನ್ನು ಶೂನ್ಯಕ್ಕೆ ಇಳಿಸುವ ಸಂಕಲ್ಪ ತೊಟ್ಟಿದೆ.

ಎಷ್ಟು ಫ‌ಲಕ?:

13,000 ಸೌರ ಫ‌ಲಕಗಳನ್ನು ಸಮುದ್ರದ ಮೇಲ್ಮೆ„ಯಲ್ಲಿ ಅಳವಡಿಸಲಾಗಿದ್ದು, ಇದು 5 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸಲಿದೆ. ಇದರಿಂದ ಇಡೀ ವರ್ಷ 1,400 ವಸತಿ ಸಮುಚ್ಚಯಗಳಿಗೆ ವಿದ್ಯುತ್‌ ಪೂರೈಸಬಹುದಾಗಿದೆ. ಚೀನದಿಂದ ಸೌರ ಫ‌ಲಕಗಳನ್ನು ಆಮದು ಮಾಡಿಕೊಂಡು ಕಾಂಕ್ರೀಟ್‌ ಬ್ಲಾಕ್‌ಗಳೊಂದಿಗೆ ಜಲಾಶಯದ ನೆಲಕ್ಕೆ ಲಂಗರು ಹಾಕಲಾಗುತ್ತದೆ.

ಪರಿಸರಸ್ನೇಹಿ ಸಿಂಗಾಪುರ:

ದೇಶದಲ್ಲಿ ಸೌರ ಶಕ್ತಿಗಾಗಿ ಕಟ್ಟಡಗಳ ಮೇಲ್ಛಾವಣಿಗಳನ್ನು ಮತ್ತು ಲಭ್ಯವಿರುವ ಭೂಮಿಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲಾಗಿದೆ. ಸರಕಾರವು ರೂಪಿಸಿರುವ ಸಮಗ್ರ ಹಸುರು ಯೋಜನೆ ಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವುದು, ತ್ಯಾಜ್ಯಗಳ ಪ್ರಮಾಣವನ್ನು ಕಡಿಮೆ ಮಾಡುವುದು ಮತ್ತು ಎಲೆಕ್ಟ್ರಿಕ್‌ ಕಾರುಗಳ ಬಳಕೆಯನ್ನು ಉತ್ತೇಜಿಸಲು ಹೆಚ್ಚಿನ ಚಾರ್ಜಿಂಗ್‌ ಪಾಯಿಂಟ್‌ಗಳ ನಿರ್ಮಾಣ ಸೇರಿವೆ.

 ಇಂಧನದ ಬದಲು ಸೌರಶಕ್ತಿ ಬಳಕೆ:

ಸೆಂಕಾರ್ಪ್‌ ಮತ್ತು ರಾಷ್ಟ್ರೀಯ ಜಲ ಸಂಸ್ಥೆ ಸಾರ್ವಜನಿಕ ಉಪಯು ಕ್ತತೆಗಳ ಮಂಡಳಿಯು ಅಭಿವೃದ್ಧಿಪಡಿಸಿದ ಈ ಯೋಜ ನೆಯು ಸಿಂಗಾಪುರದ ನೀರಿನ ಸಂಸ್ಕರಣ ಘಟಕಗಳಿಗೆ ವ್ಯಯಿಸುವ ಇಂಧನದ ಬದಲು ಸೌರಶಕ್ತಿಯನ್ನು ಬಳಸಲು ನೆರವಾಗುತ್ತದೆ. ಈ ಘಟಕಗಳು 7,000 ಕಾರು ಗಳಿಗೆ ಬೇಕಾಗುವ ಇಂಧನದ ಆವಶ್ಯಕತೆ ಹೊಂದಿದ್ದವು. ಆದರೆ ಈಗ ಅವುಗಳಿಗೆ ಸೌರ ವಿದ್ಯುತ್‌ ನೀಡಲಾದ ಕಾರಣ 7,000 ಕಾರುಗಳು ಹೊರ ಉಗುಳುವ ಪ್ರಮಾ ಣದ ಇಂಗಾಲಕ್ಕೆ ಕಡಿವಾಣ ಹಾಕಿದಂತಾಗುತ್ತದೆ.

 45 ಫ‌ುಟ್‌ಬಾಲ್‌  ಪಿಚ್‌ಗಳ ಗಾತ್ರ! :

ತೆಂಗೇ ಜಲಾಶಯದಲ್ಲಿಯೂ ಇದಕ್ಕೆ ಪೂರಕ ವಾದ ಯೋಜನೆ ರೂಪಿಸಲಾಗುತ್ತಿದೆ. 1,22,000 ಫ‌ಲಕಗಳ ಸೌರ ಫಾರ್ಮ್ ರಚನೆಯಾಗಲಿದೆ. ಅಂದರೆ ಇದು ಆಗ್ನೇಯ ಏಷ್ಯಾದ 45 ಫ‌ುಟ್‌ಬಾಲ್‌ ಪಿಚ್‌ಗಳ ಗಾತ್ರದಷ್ಟು ಇರಲಿದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.