ಆರು ದಶಕಗಳ ಅಕ್ಷರ ಪಯಣ

ನವಕರ್ನಾಟಕ ಪ್ರಕಾಶನ

Team Udayavani, Jul 28, 2019, 5:00 AM IST

q-4

ವೈಚಾರಿಕತೆಯನ್ನು ಧ್ಯೇಯವನ್ನಿರಿಸಿಕೊಂಡ ಪ್ರಕಾಶನ ಸಂಸ್ಥೆಯೊಂದು 60 ವರ್ಷಗಳನ್ನು ಪೂರೈಸಿರುವುದು ಕನ್ನಡ ನಾಡು-ನುಡಿಗಳಿಗೆ ಅಭಿಮಾನದ ಸಂಗತಿಯೇ.

ಪುಸ್ತಕಗಳ ಮೂಲಕ ಮನುಕುಲದ ಸೇವೆ’ ಎಂಬ ಧ್ಯೇಯವಾಕ್ಯದೊಂದಿಗೆ ಆರಂಭವಾದ ನವಕರ್ನಾಟಕ ಪ್ರಕಾಶನಕ್ಕೆ ಈಗ ಅರವತ್ತರ ಸಂಭ್ರಮ. ಏಕೀಕರಣಗೊಂಡ “ಕರ್ನಾಟಕ’ ರಾಜ್ಯದ ಭಾಗವಾ ಗಿ ಯೇ ಬೆಳೆದ ನವಕರ್ನಾಟಕ ಪ್ರಕಾಶನ ರಾಜ್ಯದ ಬಹುತೇಕ ಓದುಗರನ್ನು ತಲುಪಿದ ಏಕೈಕ ಸಂಸ್ಥೆ ಎಂಬುದು ಹೆಮ್ಮೆಯ ಸಂಗತಿ. 1950ರ ದಶಕದಲ್ಲಿ ಬೆಂಗಳೂರಿನ ನ್ಯೂ ಸೆಂಚುರಿ ಬುಕ್‌ಹೌಸ್‌, ಮಂಗಳೂರಿನ ಪ್ರಭಾತ್‌ ಬುಕ್‌ ಹೌಸ್‌, ಜನಶಕ್ತಿ ಪ್ರಿಂಟರ್ಸ್‌ ಮತ್ತು ಬೆಂಗಳೂರಿನ ಜನಶಕ್ತಿ ಪ್ರಕಾಶನ- ಈ ನಾಲ್ಕೂ ಸಂಸ್ಥೆಗಳು ಜನಪರ ಚಿಂತನೆಯ ಪುಸ್ತಕ, ಪತ್ರಿಕೆಗಳ ಮುದ್ರಣ, ಪ್ರಕಟಣೆ ಮತ್ತು ವಿತರಣೆಗೆ ಹೆಸರುವಾಸಿ ಯಾಗಿದ್ದವು. ಈ ನಾಲ್ಕೂ ಸಂಸ್ಥೆಗಳನ್ನು ಒಗ್ಗೂಡಿಸಿ 1960ರಲ್ಲಿ ನವಕರ್ನಾಟಕ ಪಬ್ಲಿಕೇಷನ್ಸ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಸಂಸ್ಥೆಯನ್ನು ಆರಂಭಿಸಲಾಯಿತು. ಬಿ.ವಿ. ಕಕ್ಕಿಲ್ಲಾಯ, ಎಂ. ಎಸ್‌. ಕೃಷ್ಣನ್‌, ಎಸ್‌. ಆರ್‌. ಭಟ್‌, ಎಂ. ಸಿ. ನರಸಿಂಹನ್‌, ಸಿ. ಆರ್‌. ಕೃಷ್ಣರಾವ್‌ ಮುಂತಾದ ಕರ್ನಾಟಕದ ಜನನಾಯಕರೂ, ಚಿಂತಕರೂ ಸೇರಿ ಆರಂಭಿಸಿದ ಈ ಸಂಸ್ಥೆ ಇಂದು ಜನಪರ ಚಿಂತನೆಯ ಪುಸ್ತಕಗಳ ಬೃಹತ್‌ ಪ್ರಕಾಶನ ಸಂಸ್ಥೆಯಾಗಿ ಬೆಳೆದು ನಿಂತಿದೆ.

1970ರ ನಂತರ ನವಕರ್ನಾಟಕ ಪ್ರಕಾಶನ, ಇತ್ತೀಚೆಗೆ ಕರ್ನಾಟಕ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಆರ್‌. ಎಸ್‌. ರಾಜಾರಾಮ್‌ ಅವರ ಕನಸು ಮತ್ತು ಕ್ರಿಯಾಶೀಲತೆಯಿಂದಾಗಿ “ಪುಸ್ತಕಗಳ ಮೂಲಕ ಮನುಕುಲದ ಸೇವೆ’ ಎಂಬ ಧ್ಯೇಯವಾಕ್ಯಕ್ಕೆ ಅರ್ಥ ತಂದುಕೊಟ್ಟಿತು. ಈವರೆಗೆ ಸುಮಾರು 5, 300 ಪ್ರಕಟಣೆಗಳನ್ನು ಹೊರತಂದಿರುವ ನವಕರ್ನಾಟಕ ಈ ಪುಸ್ತಕಗಳನ್ನು ಓದುಗರೆಡೆಗೇ ಕೊಂಡೊಯ್ಯುವ ಸಾಹಸವನ್ನು ರಾಜ್ಯಾದ್ಯಂತ ತಾಲೂಕು-ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಸಮ್ಮೇಳನ, ವಿಚಾರ ಸಂಕಿರಣಗಳಲ್ಲಿ ಪ್ರದರ್ಶನಗಳನ್ನೇರ್ಪಡಿಸುವ ಮೂಲಕ ಮಾಡಿದೆ. ರಾಜಾರಾಮ್‌ ಅವರ ಜೊತೆಗೂಡಿ ದಶಕಗಳ ಕಾಲ ದುಡಿದ ಎ. ರಮೇಶ ಉಡುಪ ಮತ್ತು ನವಕರ್ನಾಟಕದ ನೂರಾರು ವಿಧದ ಹಂತದ ಸಿಬ್ಬಂದಿಯ ಪರಿಶ್ರಮ ಈ ಸಂಸ್ಥೆಯ ವಿಕಾಸದ ಮಾರ್ಗದಲ್ಲಿ ಸ್ಮರಿಸುವಂಥಾದ್ದು.

ಭೂಗರ್ಭದಿಂದ ಆಕಾಶದವರೆಗಿನ ವ್ಯಾಪ್ತಿಯುಳ್ಳ ವಿವಿಧ ವಿಷಯಗಳಾದ ಮಾನವ ವಿಕಾಸ, ವಿಜ್ಞಾನ, ತಂತ್ರಜ್ಞಾನ, ಗಣಿತ, ಮನೋವಿಜ್ಞಾನ, ತತ್ವಶಾಸ್ತ್ರ , ಇತಿಹಾಸ, ಕೃಷಿ, ಸಾಹಿತ್ಯ, ಸಂಸ್ಕೃತಿ, ಭಾಷಾಶಾಸ್ತ್ರ , ಸಮಾಜಶಾಸ್ತ್ರ, ರಾಜಕೀಯ, ಆರ್ಥಿಕತೆ, ಕಾನೂನು, ಆರೋಗ್ಯ, ಪರಿಸರ, ಶಿಕ್ಷಣ, ಜನಪದ, ಕಲೆ, ಮಕ್ಕಳ ಸಾಹಿತ್ಯ, ಜೀವನ ಚರಿತ್ರೆಗಳು, ನಿಘಂಟುಗಳು, ಅನುವಾದಗಳು- ಹೀಗೆ ಎಲ್ಲವನ್ನೂ ಒಳಗೊಂಡು ವೈಚಾರಿಕ, ವೈಜ್ಞಾನಿಕ ಮನೋಭಾವದ ಹಿನ್ನೆಲೆಯಲ್ಲಿ ಅಸಂಖ್ಯ ವಸ್ತು, ವಿಷಯ ವೈವಿಧ್ಯವುಳ್ಳ ಪುಸ್ತಕಗಳನ್ನು ನವಕರ್ನಾಟಕ ಪ್ರಕಾಶನ ಪ್ರಕಟಿಸಿದೆ. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಚಿಂತಕರು, ಬರಹಗಾರರು ಈ ಎಲ್ಲ ವಿಷಯಗಳ ಕುರಿತು ವಿದ್ವತ್‌ಪೂರ್ಣ ಕೃತಿಗಳನ್ನು ರಚಿಸಿ, ಸಂಪಾದಿಸಿ ಕೊಟ್ಟು ನವಕರ್ನಾಟಕ ಪ್ರಕಾಶನದ ಘನತೆ ಹೆಚ್ಚಲು, ಅದರ ಆಶಯ ಈಡೇರಲು, ನಿರಂತರವಾಗಿ ಆರು ದಶಕಗಳ ಕಾಲ ಅರ್ಥಪೂರ್ಣವಾಗಿ ಬೆಳೆದು ಬರಲು ಕಾರಣರಾಗಿದ್ದಾರೆ. ಈ ವೈವಿಧ್ಯಮಯ ಪುಸ್ತಕಗಳು ಓದುಗರ ಅರಿವು ಮತ್ತು ವೈಚಾರಿಕತೆಯನ್ನು ಹೆಚ್ಚಿಸುವುದರ ಜೊತೆಗೆ ಸಂಸ್ಥೆಗೆ ಹಾಗೂ ಲೇಖಕರಿಗೆ ಪ್ರತಿಷ್ಠಿತ ಪ್ರಶಸ್ತಿಗಳನ್ನು , ಬಹುಮಾನಗಳನ್ನು ತಂದುಕೊಟ್ಟಿವೆ. ಹೊಸ ಪೀಳಿಗೆಯ ಲೇಖಕರನ್ನೂ ಓದುಗರನ್ನೂ ಅವರ ಚಿಂತನೆಗಳನ್ನೂ ಒಳಗೊಳ್ಳುತ್ತಲೇ ಬೆಳೆದ ನವಕರ್ನಾಟಕ ಆಧುನಿಕ ತಂತ್ರಜ್ಞಾನವನ್ನೂ ತನ್ನ ವಿಕಾಸದ ಭಾಗವಾಗಿಸಿಕೊಂಡಿದೆ. ನವಕರ್ನಾಟಕ ಆನ್‌ಲೈನ್‌ ಮಳಿಗೆ, ವಿದ್ಯುನ್ಮಾನ ಪುಸ್ತಕಗಳು, ಹೀಗೆ ಕಾಲಕಾಲಕ್ಕೆ ಬೆಳೆಯುವ ವಿಜ್ಞಾನ, ತಂತ್ರಜ್ಞಾನಗಳಿಗೆ ಮೈಯೊಡ್ಡುತ್ತ ಈ ಸಂಸ್ಥೆ ಮುನ್ನಡೆಯುತ್ತಿದೆ.

ಸಿದ್ದನಗೌಡ ಪಾಟೀಲ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.